AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಪ್ಪತ್ತೈದು ನಿಮಿಷಗಳಲ್ಲೊಂದು ಪ್ರೇಮ ಕತೆ ‘ಲವ್ ರೀಸೆಟ್’

Love Reset: ಹಿರಿತೆರೆಗೆ ಹೋಲಿಸಿದರೆ ಸಾಕಷ್ಟು ಭಿನ್ನ ಪ್ರಯತ್ನಗಳು ಕಿರುಚಿತ್ರಗಳ ಮೂಲಕ ಮಾಡಲಾಗುತ್ತಿದೆ. ಅಂಥಹುದೇ ಒಂದು ಪ್ರಯತ್ನ ‘ಲವ್ ರೀಸೆಟ್’ ಇದೀಗ ಬಿಡುಗಡೆ ಆಗಿದೆ.

ಇಪ್ಪತ್ತೈದು ನಿಮಿಷಗಳಲ್ಲೊಂದು ಪ್ರೇಮ ಕತೆ ‘ಲವ್ ರೀಸೆಟ್’
ಮಂಜುನಾಥ ಸಿ.
|

Updated on: Jan 24, 2024 | 9:22 PM

Share

ಸ್ಯಾಂಡಲ್​ವುಡ್​ನಲ್ಲಿ (Sandalwood) ಈಗ ಸಖತ್ ಸದ್ದು ಮಾಡುತ್ತಿರುವ ಸಿನಿಮಾ ನಿರ್ದೇಶಕರು ಮೊದಲು ಕಿರುಚಿತ್ರ ಮಾಡಿದವರೇ. ಕೆಲವು ಅದ್ಭುತ ಕಿರುಚಿತ್ರಗಳು ಕನ್ನಡದಲ್ಲಿ ಈಗಾಗಲೇ ನಿರ್ಮಾಣವಾಗಿವೆ. ಕೆಲವಂತೂ ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಗಮನ ಸೆಳೆದಿವೆ. ಹಿರಿತೆರೆಯ ಭವಿಷ್ಯದ ಅತ್ಯುತ್ತಮ ನಿರ್ದೇಶಕರು ತಯಾರಾಗುತ್ತಿರುವುದು ಕಿರುಚಿತ್ರಗಳ ಕಾರ್ಯಾಗಾರದಲ್ಲಿಯೇ. ಹಿರಿತೆರೆಗೆ ಹೋಲಿಸಿದರೆ ಸಾಕಷ್ಟು ಭಿನ್ನ ಪ್ರಯತ್ನಗಳು ಕಿರುಚಿತ್ರಗಳ ಮೂಲಕ ಮಾಡಲಾಗುತ್ತಿದೆ. ಅಂಥಹುದೇ ಒಂದು ಪ್ರಯತ್ನ ‘ಲವ್ ರೀಸೆಟ್’.

‘ಲವ್ ರೀಸೆಟ್’ ಕಿರುಚಿತ್ರ ಇತ್ತೀಚೆಗೆ ಬಿಡುಗಡೆಯಾಗಿದೆ. ಶ್ರೀಗಣೇಶ್ ನಿರ್ದೇಶಿಸಿ, ‘ಪುಟ್ಟಕ್ಕನ ಮಕ್ಕಳು’ ಖ್ಯಾತಿಯ ಪವನ್ ಕುಮಾರ್ ಹಾಗೂ ಸಂಜನಾ ಬುರ್ಲಿ ಪ್ರಧಾನ ಪಾತ್ರಗಳಲ್ಲಿ ನಟಿಸಿರುವ ಈ ಕಿರುಚಿತ್ರದ ಪ್ರೀಮಿಯರ್ ಇತ್ತೀಚಿಗೆ ನಡೆಯಿತು. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ತಂಡದವರು, ಬಿಗ್ ಬಾಸ್ ಖ್ಯಾತಿಯ ಸ್ನೇಹಿತ್, ಭೂಮಿ ಶೆಟ್ಟಿ, ರಮೇಶ್ ಪಂಡಿತ್, ಕಲಾಗಂಗೋತ್ರಿ ಮಂಜು, ಪದ್ಮಕಲಾ ಸೇರಿದಂತೆ ಅನೇಕ ಗಣ್ಯರು ಪ್ರೀಮಿಯರ್​ಗೆ ಆಗಮಿಸಿ ತಂಡಕ್ಕೆ ಶುಭ ಕೋರಿದರು.

ಪ್ರದರ್ಶನದ ನಂತರ ಮಾತನಾಡಿದ ನಿರ್ದೇಶಕ ಶ್ರೀಗಣೇಶ್, ‘ನಾನು ಮೂಲತಃ ಐಟಿ ಉದ್ಯೋಗಿ. ಸಿನಿಮಾ ಮಾಡಬೇಕೆಂಬ ಆಸೆಯಿದೆ. ಅದರ ಪೂರ್ವಭಾವಿಯಾಗಿ ಈ ಕಿರುಚಿತ್ರ ಮಾಡಿದ್ದೇನೆ. ಇದೊಂದು ಪ್ರೇಮ ಕಥಾನಕ. ಈಗಿನ ಪ್ರೇಮಿಗಳ ಮನಸ್ಥಿತಿಯನ್ನು 25 ನಿಮಿಷಗಳಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇನೆ. ಈ ಕಿರುಚಿತ್ರದಲ್ಲಿ ವಿ. ನಾಗೇಂದ್ರ ಪ್ರಸಾದ್ ಬರೆದಿರುವ “ಅನುರಾಗದ ನೆನಪೀಗ ಕೊನೆಯಾಗಲಿ’ ಎಂಬ ಸುಂದರವಾದ ಹಾಡೊಂದಿದೆ. ಸರಿಗಮಪ ಖ್ಯಾತಿಯ ಸುನೀಲ್, ಅನನ್ಯ ಪ್ರಕಾಶ್ ದನಿಯಾಗಿರುವ ಈ ಹಾಡಿಗೆ ಜೋಯಲ್ ಹಾಗೂ ಅಭಿಲಾಶ್ ಸಂಗೀತ ನೀಡಿದ್ದಾರೆ. ಈ ಹಾಡನ್ನು A2 music ಮೂಲಕ ಮೊದಲೆ ಬಿಡುಗಡೆಯಾಗಿತ್ತು. 7 ಶೇಡ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಕಿರುಚಿತ್ರ ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ:‘ಪಿಆರ್​ಕೆ ಆಡಿಯೋ’ದಲ್ಲಿ ‘ನೀನೊಂದು ಶಾಯರಿ’; ಕಾಡುವ ಕಿರುಚಿತ್ರಕ್ಕೆ ಸಿಕ್ತು ಮೆಚ್ಚುಗೆ

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮುರಳಿ ಪಾತ್ರವನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಸಿನಿಮಾದಲ್ಲೂ ನಟಿಸುವ ಆಸಯಿದೆ. ಈ ಕಿರುಚಿತ್ರದಲ್ಲಿ ‘ಅಮರ್’ ನನ್ನ ಪಾತ್ರದ ಹೆಸರು. ಪ್ರೀತಿ ಹಾಗೂ ಕೆರಿಯರ್ ವಿಷಯ ಬಂದಾಗ ಹುಡುಗ ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತಾನೆ ಎಂಬುದನ್ನು ನಿರ್ದೇಶಕರು ಇದರಲ್ಲಿ ತೋರಿಸಿದ್ದಾರೆ ಎಂದು ನಾಯಕ ಪವನ್ ಕುಮಾರ್ ತಿಳಿಸಿದರು.

ಕಥೆ ಬಹಳ ಡಿಫರೆಂಟ್ ಆಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ನೋಡಿ ಹಾರೈಸಿ ಎಂದರು ನಾಯಕಿ ಸಂಜನ ಬುರ್ಲಿ. ಛಾಯಾಗ್ರಾಹಕ ಪ್ರಜ್ವಲ್ ಭಾರದ್ವಾಜ್ ಸೇರಿದಂತೆ ಅನೇಕ ತಂತ್ರಜ್ಞರು ಕಿರುಚಿತ್ರದ ಬಗ್ಗೆ ಮಾತನಾಡಿದರು. ರಂಜಿತ್ ಶಂಕರೇಗೌಡ ಸಹ ನಿರ್ದೇಶಕರ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​