Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಪ್ಪತ್ತೈದು ನಿಮಿಷಗಳಲ್ಲೊಂದು ಪ್ರೇಮ ಕತೆ ‘ಲವ್ ರೀಸೆಟ್’

Love Reset: ಹಿರಿತೆರೆಗೆ ಹೋಲಿಸಿದರೆ ಸಾಕಷ್ಟು ಭಿನ್ನ ಪ್ರಯತ್ನಗಳು ಕಿರುಚಿತ್ರಗಳ ಮೂಲಕ ಮಾಡಲಾಗುತ್ತಿದೆ. ಅಂಥಹುದೇ ಒಂದು ಪ್ರಯತ್ನ ‘ಲವ್ ರೀಸೆಟ್’ ಇದೀಗ ಬಿಡುಗಡೆ ಆಗಿದೆ.

ಇಪ್ಪತ್ತೈದು ನಿಮಿಷಗಳಲ್ಲೊಂದು ಪ್ರೇಮ ಕತೆ ‘ಲವ್ ರೀಸೆಟ್’
Follow us
ಮಂಜುನಾಥ ಸಿ.
|

Updated on: Jan 24, 2024 | 9:22 PM

ಸ್ಯಾಂಡಲ್​ವುಡ್​ನಲ್ಲಿ (Sandalwood) ಈಗ ಸಖತ್ ಸದ್ದು ಮಾಡುತ್ತಿರುವ ಸಿನಿಮಾ ನಿರ್ದೇಶಕರು ಮೊದಲು ಕಿರುಚಿತ್ರ ಮಾಡಿದವರೇ. ಕೆಲವು ಅದ್ಭುತ ಕಿರುಚಿತ್ರಗಳು ಕನ್ನಡದಲ್ಲಿ ಈಗಾಗಲೇ ನಿರ್ಮಾಣವಾಗಿವೆ. ಕೆಲವಂತೂ ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಗಮನ ಸೆಳೆದಿವೆ. ಹಿರಿತೆರೆಯ ಭವಿಷ್ಯದ ಅತ್ಯುತ್ತಮ ನಿರ್ದೇಶಕರು ತಯಾರಾಗುತ್ತಿರುವುದು ಕಿರುಚಿತ್ರಗಳ ಕಾರ್ಯಾಗಾರದಲ್ಲಿಯೇ. ಹಿರಿತೆರೆಗೆ ಹೋಲಿಸಿದರೆ ಸಾಕಷ್ಟು ಭಿನ್ನ ಪ್ರಯತ್ನಗಳು ಕಿರುಚಿತ್ರಗಳ ಮೂಲಕ ಮಾಡಲಾಗುತ್ತಿದೆ. ಅಂಥಹುದೇ ಒಂದು ಪ್ರಯತ್ನ ‘ಲವ್ ರೀಸೆಟ್’.

‘ಲವ್ ರೀಸೆಟ್’ ಕಿರುಚಿತ್ರ ಇತ್ತೀಚೆಗೆ ಬಿಡುಗಡೆಯಾಗಿದೆ. ಶ್ರೀಗಣೇಶ್ ನಿರ್ದೇಶಿಸಿ, ‘ಪುಟ್ಟಕ್ಕನ ಮಕ್ಕಳು’ ಖ್ಯಾತಿಯ ಪವನ್ ಕುಮಾರ್ ಹಾಗೂ ಸಂಜನಾ ಬುರ್ಲಿ ಪ್ರಧಾನ ಪಾತ್ರಗಳಲ್ಲಿ ನಟಿಸಿರುವ ಈ ಕಿರುಚಿತ್ರದ ಪ್ರೀಮಿಯರ್ ಇತ್ತೀಚಿಗೆ ನಡೆಯಿತು. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ತಂಡದವರು, ಬಿಗ್ ಬಾಸ್ ಖ್ಯಾತಿಯ ಸ್ನೇಹಿತ್, ಭೂಮಿ ಶೆಟ್ಟಿ, ರಮೇಶ್ ಪಂಡಿತ್, ಕಲಾಗಂಗೋತ್ರಿ ಮಂಜು, ಪದ್ಮಕಲಾ ಸೇರಿದಂತೆ ಅನೇಕ ಗಣ್ಯರು ಪ್ರೀಮಿಯರ್​ಗೆ ಆಗಮಿಸಿ ತಂಡಕ್ಕೆ ಶುಭ ಕೋರಿದರು.

ಪ್ರದರ್ಶನದ ನಂತರ ಮಾತನಾಡಿದ ನಿರ್ದೇಶಕ ಶ್ರೀಗಣೇಶ್, ‘ನಾನು ಮೂಲತಃ ಐಟಿ ಉದ್ಯೋಗಿ. ಸಿನಿಮಾ ಮಾಡಬೇಕೆಂಬ ಆಸೆಯಿದೆ. ಅದರ ಪೂರ್ವಭಾವಿಯಾಗಿ ಈ ಕಿರುಚಿತ್ರ ಮಾಡಿದ್ದೇನೆ. ಇದೊಂದು ಪ್ರೇಮ ಕಥಾನಕ. ಈಗಿನ ಪ್ರೇಮಿಗಳ ಮನಸ್ಥಿತಿಯನ್ನು 25 ನಿಮಿಷಗಳಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇನೆ. ಈ ಕಿರುಚಿತ್ರದಲ್ಲಿ ವಿ. ನಾಗೇಂದ್ರ ಪ್ರಸಾದ್ ಬರೆದಿರುವ “ಅನುರಾಗದ ನೆನಪೀಗ ಕೊನೆಯಾಗಲಿ’ ಎಂಬ ಸುಂದರವಾದ ಹಾಡೊಂದಿದೆ. ಸರಿಗಮಪ ಖ್ಯಾತಿಯ ಸುನೀಲ್, ಅನನ್ಯ ಪ್ರಕಾಶ್ ದನಿಯಾಗಿರುವ ಈ ಹಾಡಿಗೆ ಜೋಯಲ್ ಹಾಗೂ ಅಭಿಲಾಶ್ ಸಂಗೀತ ನೀಡಿದ್ದಾರೆ. ಈ ಹಾಡನ್ನು A2 music ಮೂಲಕ ಮೊದಲೆ ಬಿಡುಗಡೆಯಾಗಿತ್ತು. 7 ಶೇಡ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಕಿರುಚಿತ್ರ ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ:‘ಪಿಆರ್​ಕೆ ಆಡಿಯೋ’ದಲ್ಲಿ ‘ನೀನೊಂದು ಶಾಯರಿ’; ಕಾಡುವ ಕಿರುಚಿತ್ರಕ್ಕೆ ಸಿಕ್ತು ಮೆಚ್ಚುಗೆ

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮುರಳಿ ಪಾತ್ರವನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಸಿನಿಮಾದಲ್ಲೂ ನಟಿಸುವ ಆಸಯಿದೆ. ಈ ಕಿರುಚಿತ್ರದಲ್ಲಿ ‘ಅಮರ್’ ನನ್ನ ಪಾತ್ರದ ಹೆಸರು. ಪ್ರೀತಿ ಹಾಗೂ ಕೆರಿಯರ್ ವಿಷಯ ಬಂದಾಗ ಹುಡುಗ ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತಾನೆ ಎಂಬುದನ್ನು ನಿರ್ದೇಶಕರು ಇದರಲ್ಲಿ ತೋರಿಸಿದ್ದಾರೆ ಎಂದು ನಾಯಕ ಪವನ್ ಕುಮಾರ್ ತಿಳಿಸಿದರು.

ಕಥೆ ಬಹಳ ಡಿಫರೆಂಟ್ ಆಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ನೋಡಿ ಹಾರೈಸಿ ಎಂದರು ನಾಯಕಿ ಸಂಜನ ಬುರ್ಲಿ. ಛಾಯಾಗ್ರಾಹಕ ಪ್ರಜ್ವಲ್ ಭಾರದ್ವಾಜ್ ಸೇರಿದಂತೆ ಅನೇಕ ತಂತ್ರಜ್ಞರು ಕಿರುಚಿತ್ರದ ಬಗ್ಗೆ ಮಾತನಾಡಿದರು. ರಂಜಿತ್ ಶಂಕರೇಗೌಡ ಸಹ ನಿರ್ದೇಶಕರ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ