AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈಟರ್ ಸಾವು ಕೇಸ್: ಬಂಧನ ಭೀತಿಯಿಂದ ‌ನಿರೀಕ್ಷಣಾ ಜಾಮೀನಿಗೆ ಅಜಯ್ ರಾವ್​ ಅರ್ಜಿ

ಫೈಟರ್​ ವಿವೇಕ್​ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ಅಜಯ್​ ರಾವ್​ ಅವರಿಗೆ ಸೂಚನೆ ನೀಡಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗದೇ ಜಾಮೀನಿನ ಮೊರೆ ಹೋಗಿದ್ದಾರೆ.

ಫೈಟರ್ ಸಾವು ಕೇಸ್: ಬಂಧನ ಭೀತಿಯಿಂದ ‌ನಿರೀಕ್ಷಣಾ ಜಾಮೀನಿಗೆ ಅಜಯ್ ರಾವ್​ ಅರ್ಜಿ
ಅಜಯ್​ ರಾವ್​, ರಚಿತಾ ರಾಮ್​
TV9 Web
| Edited By: |

Updated on: Aug 25, 2021 | 7:57 AM

Share

‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ವಿದ್ಯುತ್ ತಗುಲಿ ಫೈಟರ್​ ವಿವೇಕ್​ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ. ಈ ಪ್ರಕರಣದಲ್ಲಿ ಚಿತ್ರದ ಹೀರೋ ಅಜಯ್​ ರಾವ್​ ಅವರಿಗೆ ಬಂಧನ ಭೀತಿ ಎದುರಾಗಿದೆ. ಹಾಗಾಗಿ ಅವರು ‌ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ರಾಮನಗರದ 3ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ಗೆ ಅವರು ಅರ್ಜಿ ಸಲ್ಲಿಸಿದ್ದಾರೆ. ಆ.26ರಂದು ಅಜಯ್ ರಾವ್​ ಅವರ ಜಾಮೀನು ಅರ್ಜಿ‌ ವಿಚಾರಣೆ ನಡೆಯಲಿದೆ.

ಆ.9ರಂದು ಶೂಟಿಂಗ್ ವೇಳೆ ಫೈಟರ್ ವಿವೇಕ್ ಮೃತಪಟ್ಟಿದ್ದರು. ರಾಮನಗರ ತಾಲೂಕಿನ ಜೋಗನಪಾಳ್ಯ ಬಳಿ ಈ ದುರ್ಘಟನೆ ನಡೆದಾಗ ನಟ ಅಜಯ್​ ರಾವ್​ ಕೂಡ ಸ್ಥಳದಲ್ಲೇ ಇದ್ದರು. ಈಗಾಗಲೇ ಐವರ ವಿರುದ್ಧ ಬಿಡದಿ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ವಿಚಾರಣೆ ನಡೆಯಿತ್ತಿದೆ. ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಮಧ್ಯೆ ವಿಚಾರಣೆಗೆ ಹಾಜರಾಗುವಂತೆ ಅಜಯ್​ ರಾವ್​ ಅವರಿಗೆ ಸೂಚನೆ ನೀಡಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗದೇ ಜಾಮೀನು‌ ಮೊರೆ ಹೋಗಿದ್ದಾರೆ.

ವಿಚಾರಣೆಗೆ ಹಾಜರಾದ ರಚಿತಾ ರಾಮ್:

ಘಟನೆಗೆ ಸಂಬಂಧಿಸಿದಂತೆ ಚಿತ್ರದ ನಾಯಕಿ ರಚಿತಾ ರಾಮ್​ ಅವರು ಪೊಲೀಸರಿಂದ ವಿಚಾರಣೆ ಎದುರಿಸಿದ್ದಾರೆ. ಮಂಗಳವಾರ (ಆ.24) ಬಿಡದಿ ಪೊಲೀಸ್​​ ಠಾಣೆಗೆ ರಚಿತಾ ರಾಮ್​ ಹಾಜರಾದರು. ಡಿವೈಎಸ್​ಪಿ ಮೋಹನ್ ಕುಮಾರ್ ಅವರು ರಚಿತಾ ಅವರನ್ನು 45 ನಿಮಿಷಗಳ ಕಾಲ ವಿಚಾರಣೆ ನಡೆಸಿದರು. ಪೊಲೀಸರು ಕೇಳಿದ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ. ಪೊಲೀಸರ ವಿಚಾರಣೆ ಬಳಿಕ ಮಾತನಾಡಿದ ರಚಿತಾ, ‘ನನಗೆ ವಿಷಯ ಗೊತ್ತಾಗಿರಲಿಲ್ಲ. ಮಾಧ್ಯಮಗಳಿಂದ ಈ ವಿಚಾರ ಗೊತ್ತಾಯ್ತು. ಫೈಟರ್​​ ಮೃತಪಟ್ಟಿರುವುದು ಅಷ್ಟೇ ನನಗೆ ಗೊತ್ತು. ಘಟನೆ ನಡೆದಾಗ ನಾನು ಅಲ್ಲಿ ಇರಲಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ. ಏನಾಗುತ್ತದೆ ನೋಡೋಣ. ಇದು ಉದ್ದೇಶಪೂರ್ವಕವಾಗಿ ನಡೆದ ಘಟನೆ ಅಲ್ಲ. ಇಂತಹ ದುರಂತ ನಡೆದಿರುವುದಕ್ಕೆ ನನಗೂ ನೋವು ಇದೆ’ ಎಂದಿದ್ದರು.

ನ್ಯಾಯಾಂಗ ಬಂಧನ ವಿಸ್ತರಣೆ:

ದುರ್ಘಟನೆಗೆ ಚಿತ್ರತಂಡದ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ನಿರ್ದೇಶಕ ಶಂಕರಯ್ಯ, ಸಾಹಸ ನಿರ್ದೇಶಕ ವಿನೋದ್ ಕುಮಾರ್, ಕ್ರೇನ್ ಚಾಲಕ ಮಹದೇವ್ ಅವರನ್ನು ಬಂಧಿಸಲಾಗಿತ್ತು. ಆಗಸ್ಟ್​ 10ರಂದು ಇವರನ್ನು ರಾಮನಗರ ಹೆಚ್ಚುವರಿ ಸಿವಿಲ್ ಕೋರ್ಟ್ ಮುಂದೆ ಹಾಜರು ಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶೆ ಅನುಪಮಾ ಲಕ್ಷ್ಮೀ ಅವರು 14 ದಿನ ನ್ಯಾಯಾಂಗ ಬಂಧನ ವಿಧಿಸಿದ್ದರು. ಮಂಗಳವಾರ (ಆ.24) ಮತ್ತೆ ಈ ಮೂವರನ್ನು ರಾಮನಗರ ಹೆಚ್ಚುವರಿ ಸಿವಿಲ್ ಕೋರ್ಟ್ ಮುಂದೆ ವಿಡಿಯೋ ಕಾಲ್​​ ಮೂಲಕ ಹಾಜರು ಪಡಿಸಲಾಯಿತು. ಈ ವೇಳೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ.

ಇದನ್ನೂ ಓದಿ:

‘ವಿವೇಕ್​ ಮೂಗಲ್ಲಿ ರಕ್ತ ಬಂದಾಗ ನಮಗೆ ಗಾಬರಿ ಆಯ್ತು; ಅಜಯ್​ ರಾವ್​ ಅಲ್ಲೇ ಇದ್ದರು’: ರಂಜಿತ್​ ನೇರ ಮಾತು

ಫೈಟರ್​ ಸಾವು: ರಚಿತಾ ರಾಮ್​, ಅಜಯ್​ ರಾವ್​ ಬಂಧನಕ್ಕೆ ಎಐಸಿಸಿ ಹ್ಯುಮನ್ ರೈಟ್ಸ್ ಸಂಘಟನೆ ಒತ್ತಾಯ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್