AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಜುನ್​ ಗೌಡ’, ‘ಹುಟ್ಟುಹಬ್ಬದ ಶುಭಾಶಯಗಳು’, ‘ಲವ್​ ಯೂ ರಚ್ಚು’ ಬಿಡುಗಡೆ; ಗಲ್ಲಾಪೆಟ್ಟಿಗೆ ಭವಿಷ್ಯ ಏನು?

ಕರ್ನಾಟಕ ಬಂದ್​ ಕ್ಯಾನ್ಸಲ್​ ಆಗಿರುವ ಹಿನ್ನೆಲೆಯಲ್ಲಿ ಕನ್ನಡದ ಮೂರು ಸಿನಿಮಾಗಳ ಬಿಡುಗಡೆಗೆ ದಾರಿ ಸುಗಮ ಆಗಿದೆ. ಬೇರೆ ಬೇರೆ ಕಾರಣದಿಂದ ಈ ಚಿತ್ರಗಳು ನಿರೀಕ್ಷೆ ಮೂಡಿಸಿವೆ.

‘ಅರ್ಜುನ್​ ಗೌಡ’, ‘ಹುಟ್ಟುಹಬ್ಬದ ಶುಭಾಶಯಗಳು’, ‘ಲವ್​ ಯೂ ರಚ್ಚು’ ಬಿಡುಗಡೆ; ಗಲ್ಲಾಪೆಟ್ಟಿಗೆ ಭವಿಷ್ಯ ಏನು?
ಡಿ.31ರಂದು ತೆರೆ ಕಾಣಲಿರುವ ಮೂರು ಸಿನಿಮಾಗಳು
TV9 Web
| Edited By: |

Updated on:Dec 31, 2021 | 9:50 AM

Share

ನೋಡನೋಡುತ್ತಿದ್ದಂತೆಯೇ 2021ರ ವರ್ಷ ಮುಗಿದು ಹೋಗಿದೆ. ವರ್ಷದ ಕೊನೇ ದಿನವಾದ ಇಂದು (ಡಿ.31) ಎಲ್ಲರೂ ಪಾರ್ಟಿ ಮೂಡ್​ನಲ್ಲಿ ಇದ್ದಾರೆ. ಈ ನಡುವೆ ಮನರಂಜನೆಯ ಮುದ ನೀಡಲು ಕನ್ನಡದ ಮೂರು ಸಿನಿಮಾಗಳು ರಿಲೀಸ್​ ಆಗುತ್ತಿವೆ. ಪ್ರಜ್ವಲ್​ ದೇವರಾಜ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಜೋಡಿಯಾಗಿ ನಟಿಸಿರುವ ‘ಅರ್ಜುನ್​ ಗೌಡ’  (Arjun Gowda Movie)ಚಿತ್ರ ಇಂದು ತೆರೆಕಾಣುತ್ತಿದೆ. ಅದೇ ರೀತಿ, ಅಜಯ್​ ರಾವ್​ ಹಾಗೂ ರಚಿತಾ ರಾಮ್​ ಜೋಡಿಯ ‘ಲವ್​ ಯೂ ರಚ್ಚು’  (Love You Rachchu)ಸಿನಿಮಾ ಕೂಡ ಬಿಡುಗಡೆ ಆಗುತ್ತಿದೆ. ದಿಗಂತ್​ ಮತ್ತು ಕವಿತಾ ಗೌಡ ನಟಿಸಿರುವ ‘ಹುಟ್ಟುಹಬ್ಬದ ಶುಭಾಶಯಗಳು’ (Huttu Habbada Shubhashayagalu) ಚಿತ್ರವೂ ಇಂದು ತೆರೆಕಾಣುತ್ತಿದೆ. ಕರ್ನಾಟಕ ಬಂದ್​ (Karnataka Bandh) ಕ್ಯಾನ್ಸಲ್​ ಆಗಿರುವ ಹಿನ್ನೆಲೆಯಲ್ಲಿ ಈ ಚಿತ್ರಗಳ ಬಿಡುಗಡೆಗೆ ದಾರಿ ಸುಗಮ ಆಗಿದೆ. ಯಾವ ಚಿತ್ರಕ್ಕೆ ಪ್ರೇಕ್ಷಕರು ಮನಸೋಲುತ್ತಾರೆ? ಈ ಸಿನಿಮಾಗಳ ಗಲ್ಲಾಪೆಟ್ಟಿಗೆ ಭವಿಷ್ಯ ಏನಾಗಲಿದೆ ಎಂಬ ಕೌತುಕ ಮನೆ ಮಾಡಿದೆ.

ನಿರೀಕ್ಷೆ ಮೂಡಿಸಿರುವ ‘ಲವ್​ ಯೂ ರಚ್ಚು’

ಅಜಯ್​ ರಾವ್​ ಮತ್ತು ರಚಿತಾ ರಾಮ್​ ನಟನೆಯ ‘ಲವ್​ ಯೂ ರಚ್ಚು’ ಚಿತ್ರ ಹಲವು ಕಾರಣದಿಂದ ನಿರೀಕ್ಷೆ ಮೂಡಿಸಿದೆ. ಟ್ರೇಲರ್​ ಮತ್ತು ಹಾಡುಗಳು ಗಮನ ಸೆಳೆದಿವೆ. ಶಂಕರ್​ ರಾಜ್​ ಎಸ್​. ನಿರ್ದೇಶನ ಮಾಡಿದ್ದಾರೆ. ಗುರು ದೇಶಪಾಂಡೆ ಅವರು ನಿರ್ಮಾಣ ಮಾಡುವುದರ ಜತೆಗೆ ಕ್ರಿಯೇಟಿವ್​ ಹೆಡ್​ ಆಗಿ ಕೆಲಸ ಮಾಡಿದ್ದಾರೆ. ಕದ್ರಿ ಮಣಿಕಾಂತ್​ ಅವರ ಸಂಗೀತ ಈ ಚಿತ್ರಕ್ಕಿದೆ.

ಕೋಟಿ ರಾಮು ನಿರ್ಮಾಣದ ‘ಅರ್ಜುನ್​ ಗೌಡ’

ನಿರ್ಮಾಪಕ ಕೋಟಿ ರಾಮು ಅವರು ಈ ವರ್ಷ ಕೊವಿಡ್​ನಿಂದ ನಿಧನರಾಗಿದ್ದು ನೋವಿನ ಸಂಗತಿ. ಅವರು ನಿರ್ಮಿಸಿದ ‘ಅರ್ಜುನ್​ ಗೌಡ’ ಚಿತ್ರವನ್ನು ಅವರ ಪತ್ನಿ ಮಾಲಾಶ್ರೀ ಬಿಡುಗಡೆ ಮಾಡುತ್ತಿದ್ದಾರೆ. ಮುಖ್ಯ ಪಾತ್ರದಲ್ಲಿ ಪ್ರಜ್ವಲ್​ ದೇವರಾಜ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಅಭಿನಯಿಸಿದ್ದಾರೆ. ಶಂಕರ್​ ನಿರ್ದೇಶನ ಮಾಡಿದ್ದು, ಧರ್ಮ ವಿಶ್​ ಸಂಗೀತ ನೀಡಿದ್ದಾರೆ.

ದಿಗಂತ್​ಗೆ ‘ಹುಟ್ಟುಹಬ್ಬದ ಶುಭಾಶಯಗಳು’

ನಟ ದಿಗಂತ್​ ಮತ್ತು ಕಿರುತೆರೆಯ ಖ್ಯಾತ ನಟಿ ಕವಿತಾ ಗೌಡ ಅವರು ಬಣ್ಣ ಹಚ್ಚಿರುವ ‘ಹುಟ್ಟುಹಬ್ಬದ ಶುಭಾಶಯಗಳು’ ಸಿನಿಮಾದ ಟ್ರೇಲರ್​ ಗಮನ ಸೆಳೆದಿದೆ. ಸಸ್ಪೆನ್ಸ್​ ಥ್ರಿಲ್ಲರ್​ ಶೈಲಿಯಲ್ಲಿ ಈ ಚಿತ್ರ ಮೂಡಿಬಂದಿದೆ. ಟಿಆರ್​ ಚಂದ್ರಶೇಖರ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ನಾಗರಾಜ್​ ಬೇತೂರು ನಿರ್ದೇಶನ ಮಾಡಿದ್ದಾರೆ. ಚಿತ್ರದ ಹಾಡುಗಳಿಗೆ ಶ್ರೀಧರ್​ ವಿ. ಸಂಭ್ರಮ್​ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ:

Love You Rachchu: ‘ಲವ್​ ಯೂ ರಚ್ಚು’ನಲ್ಲಿ ಮಿಲನಾ, ಡಾರ್ಲಿಂಗ್ ಕೃಷ್ಣಗೆ ಇಷ್ಟ ಆಗಿದ್ದೇನು? ವಿಡಿಯೋ ಇಲ್ಲಿದೆ

‘ಅರ್ಜುನ್​ ಗೌಡ’ ಚಿತ್ರದಲ್ಲಿ ಆರಂಭದಿಂದ ಕೊನೆಯವರೆಗೂ ನಾನಿರ್ತೀನಿ; ಬಿಗ್​​ ಬಾಸ್ ಪ್ರಿಯಾಂಕಾ ತಿಮ್ಮೇಶ್​

Published On - 8:07 am, Fri, 31 December 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ