AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಜುನ್​ ಗೌಡ’, ‘ಹುಟ್ಟುಹಬ್ಬದ ಶುಭಾಶಯಗಳು’, ‘ಲವ್​ ಯೂ ರಚ್ಚು’ ಬಿಡುಗಡೆ; ಗಲ್ಲಾಪೆಟ್ಟಿಗೆ ಭವಿಷ್ಯ ಏನು?

ಕರ್ನಾಟಕ ಬಂದ್​ ಕ್ಯಾನ್ಸಲ್​ ಆಗಿರುವ ಹಿನ್ನೆಲೆಯಲ್ಲಿ ಕನ್ನಡದ ಮೂರು ಸಿನಿಮಾಗಳ ಬಿಡುಗಡೆಗೆ ದಾರಿ ಸುಗಮ ಆಗಿದೆ. ಬೇರೆ ಬೇರೆ ಕಾರಣದಿಂದ ಈ ಚಿತ್ರಗಳು ನಿರೀಕ್ಷೆ ಮೂಡಿಸಿವೆ.

‘ಅರ್ಜುನ್​ ಗೌಡ’, ‘ಹುಟ್ಟುಹಬ್ಬದ ಶುಭಾಶಯಗಳು’, ‘ಲವ್​ ಯೂ ರಚ್ಚು’ ಬಿಡುಗಡೆ; ಗಲ್ಲಾಪೆಟ್ಟಿಗೆ ಭವಿಷ್ಯ ಏನು?
ಡಿ.31ರಂದು ತೆರೆ ಕಾಣಲಿರುವ ಮೂರು ಸಿನಿಮಾಗಳು
TV9 Web
| Edited By: |

Updated on:Dec 31, 2021 | 9:50 AM

Share

ನೋಡನೋಡುತ್ತಿದ್ದಂತೆಯೇ 2021ರ ವರ್ಷ ಮುಗಿದು ಹೋಗಿದೆ. ವರ್ಷದ ಕೊನೇ ದಿನವಾದ ಇಂದು (ಡಿ.31) ಎಲ್ಲರೂ ಪಾರ್ಟಿ ಮೂಡ್​ನಲ್ಲಿ ಇದ್ದಾರೆ. ಈ ನಡುವೆ ಮನರಂಜನೆಯ ಮುದ ನೀಡಲು ಕನ್ನಡದ ಮೂರು ಸಿನಿಮಾಗಳು ರಿಲೀಸ್​ ಆಗುತ್ತಿವೆ. ಪ್ರಜ್ವಲ್​ ದೇವರಾಜ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಜೋಡಿಯಾಗಿ ನಟಿಸಿರುವ ‘ಅರ್ಜುನ್​ ಗೌಡ’  (Arjun Gowda Movie)ಚಿತ್ರ ಇಂದು ತೆರೆಕಾಣುತ್ತಿದೆ. ಅದೇ ರೀತಿ, ಅಜಯ್​ ರಾವ್​ ಹಾಗೂ ರಚಿತಾ ರಾಮ್​ ಜೋಡಿಯ ‘ಲವ್​ ಯೂ ರಚ್ಚು’  (Love You Rachchu)ಸಿನಿಮಾ ಕೂಡ ಬಿಡುಗಡೆ ಆಗುತ್ತಿದೆ. ದಿಗಂತ್​ ಮತ್ತು ಕವಿತಾ ಗೌಡ ನಟಿಸಿರುವ ‘ಹುಟ್ಟುಹಬ್ಬದ ಶುಭಾಶಯಗಳು’ (Huttu Habbada Shubhashayagalu) ಚಿತ್ರವೂ ಇಂದು ತೆರೆಕಾಣುತ್ತಿದೆ. ಕರ್ನಾಟಕ ಬಂದ್​ (Karnataka Bandh) ಕ್ಯಾನ್ಸಲ್​ ಆಗಿರುವ ಹಿನ್ನೆಲೆಯಲ್ಲಿ ಈ ಚಿತ್ರಗಳ ಬಿಡುಗಡೆಗೆ ದಾರಿ ಸುಗಮ ಆಗಿದೆ. ಯಾವ ಚಿತ್ರಕ್ಕೆ ಪ್ರೇಕ್ಷಕರು ಮನಸೋಲುತ್ತಾರೆ? ಈ ಸಿನಿಮಾಗಳ ಗಲ್ಲಾಪೆಟ್ಟಿಗೆ ಭವಿಷ್ಯ ಏನಾಗಲಿದೆ ಎಂಬ ಕೌತುಕ ಮನೆ ಮಾಡಿದೆ.

ನಿರೀಕ್ಷೆ ಮೂಡಿಸಿರುವ ‘ಲವ್​ ಯೂ ರಚ್ಚು’

ಅಜಯ್​ ರಾವ್​ ಮತ್ತು ರಚಿತಾ ರಾಮ್​ ನಟನೆಯ ‘ಲವ್​ ಯೂ ರಚ್ಚು’ ಚಿತ್ರ ಹಲವು ಕಾರಣದಿಂದ ನಿರೀಕ್ಷೆ ಮೂಡಿಸಿದೆ. ಟ್ರೇಲರ್​ ಮತ್ತು ಹಾಡುಗಳು ಗಮನ ಸೆಳೆದಿವೆ. ಶಂಕರ್​ ರಾಜ್​ ಎಸ್​. ನಿರ್ದೇಶನ ಮಾಡಿದ್ದಾರೆ. ಗುರು ದೇಶಪಾಂಡೆ ಅವರು ನಿರ್ಮಾಣ ಮಾಡುವುದರ ಜತೆಗೆ ಕ್ರಿಯೇಟಿವ್​ ಹೆಡ್​ ಆಗಿ ಕೆಲಸ ಮಾಡಿದ್ದಾರೆ. ಕದ್ರಿ ಮಣಿಕಾಂತ್​ ಅವರ ಸಂಗೀತ ಈ ಚಿತ್ರಕ್ಕಿದೆ.

ಕೋಟಿ ರಾಮು ನಿರ್ಮಾಣದ ‘ಅರ್ಜುನ್​ ಗೌಡ’

ನಿರ್ಮಾಪಕ ಕೋಟಿ ರಾಮು ಅವರು ಈ ವರ್ಷ ಕೊವಿಡ್​ನಿಂದ ನಿಧನರಾಗಿದ್ದು ನೋವಿನ ಸಂಗತಿ. ಅವರು ನಿರ್ಮಿಸಿದ ‘ಅರ್ಜುನ್​ ಗೌಡ’ ಚಿತ್ರವನ್ನು ಅವರ ಪತ್ನಿ ಮಾಲಾಶ್ರೀ ಬಿಡುಗಡೆ ಮಾಡುತ್ತಿದ್ದಾರೆ. ಮುಖ್ಯ ಪಾತ್ರದಲ್ಲಿ ಪ್ರಜ್ವಲ್​ ದೇವರಾಜ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಅಭಿನಯಿಸಿದ್ದಾರೆ. ಶಂಕರ್​ ನಿರ್ದೇಶನ ಮಾಡಿದ್ದು, ಧರ್ಮ ವಿಶ್​ ಸಂಗೀತ ನೀಡಿದ್ದಾರೆ.

ದಿಗಂತ್​ಗೆ ‘ಹುಟ್ಟುಹಬ್ಬದ ಶುಭಾಶಯಗಳು’

ನಟ ದಿಗಂತ್​ ಮತ್ತು ಕಿರುತೆರೆಯ ಖ್ಯಾತ ನಟಿ ಕವಿತಾ ಗೌಡ ಅವರು ಬಣ್ಣ ಹಚ್ಚಿರುವ ‘ಹುಟ್ಟುಹಬ್ಬದ ಶುಭಾಶಯಗಳು’ ಸಿನಿಮಾದ ಟ್ರೇಲರ್​ ಗಮನ ಸೆಳೆದಿದೆ. ಸಸ್ಪೆನ್ಸ್​ ಥ್ರಿಲ್ಲರ್​ ಶೈಲಿಯಲ್ಲಿ ಈ ಚಿತ್ರ ಮೂಡಿಬಂದಿದೆ. ಟಿಆರ್​ ಚಂದ್ರಶೇಖರ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ನಾಗರಾಜ್​ ಬೇತೂರು ನಿರ್ದೇಶನ ಮಾಡಿದ್ದಾರೆ. ಚಿತ್ರದ ಹಾಡುಗಳಿಗೆ ಶ್ರೀಧರ್​ ವಿ. ಸಂಭ್ರಮ್​ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ:

Love You Rachchu: ‘ಲವ್​ ಯೂ ರಚ್ಚು’ನಲ್ಲಿ ಮಿಲನಾ, ಡಾರ್ಲಿಂಗ್ ಕೃಷ್ಣಗೆ ಇಷ್ಟ ಆಗಿದ್ದೇನು? ವಿಡಿಯೋ ಇಲ್ಲಿದೆ

‘ಅರ್ಜುನ್​ ಗೌಡ’ ಚಿತ್ರದಲ್ಲಿ ಆರಂಭದಿಂದ ಕೊನೆಯವರೆಗೂ ನಾನಿರ್ತೀನಿ; ಬಿಗ್​​ ಬಾಸ್ ಪ್ರಿಯಾಂಕಾ ತಿಮ್ಮೇಶ್​

Published On - 8:07 am, Fri, 31 December 21

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!