AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈಟರ್ ವಿವೇಕ್ ಸಾವು ಪ್ರಕರಣ; ಎಲ್ಲದಕ್ಕೂ ಸ್ಪಷ್ಟನೆ ನೀಡಲು ಮುಂದಾದ ನಿರ್ಮಾಪಕ ಗುರು ದೇಶಪಾಂಡೆ

‘ಲವ್ ಯೂ ರಚ್ಚು’ ಚಿತ್ರದ ಚಿತ್ರೀಕರಣದ ವೇಳೆ ಫೈಟರ್ ವಿವೇಕ್ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಫೇಸ್​ಬುಕ್ ಲೈವ್ ಬಂದು ಕೆಲವು ವಿಚಾರಗಳನ್ನು ಸ್ಪಷ್ಟಪಡಿಸಲಿದ್ದೇನೆ ಎಂದು ನಿರ್ಮಾಪಕ ಗುರು ದೇಶಪಾಂಡೆ ತಿಳಿಸಿದ್ದಾರೆ. ವಿವೇಕ್ ಕುಟುಂಬದವರನ್ನು ಭೇಟಿಯಾಗಿ ಸಾಂತ್ವಾನ ತಿಳಿಸುತ್ತೇನೆ ಎಂದು ಅವರು ಫೇಸ್ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

ಫೈಟರ್ ವಿವೇಕ್ ಸಾವು ಪ್ರಕರಣ; ಎಲ್ಲದಕ್ಕೂ ಸ್ಪಷ್ಟನೆ ನೀಡಲು ಮುಂದಾದ ನಿರ್ಮಾಪಕ ಗುರು ದೇಶಪಾಂಡೆ
ನಿರ್ಮಾಪಕ ಗುರು ದೇಶಪಾಂಡೆ, ಮೃತ ಫೈಟರ್​ ವಿವೇಕ್​
TV9 Web
| Edited By: |

Updated on: Sep 01, 2021 | 11:49 AM

Share

‘ಲವ್ ಯೂ ರಚ್ಚು’ ಚಿತ್ರದ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಫೇಸ್​ಬುಕ್ ಲೈವ್ ಮುಖಾಂತರ ಸ್ಪಷ್ಟನೆ ನೀಡುವುದಾಗಿ ನಿರ್ಮಾಪಕ ಗುರು ದೇಶಪಾಂಡೆ ತಿಳಿಸಿದ್ದಾರೆ. ಪ್ರಕರಣದ ನಂತರ ನಾಪತ್ತೆಯಾಗಿದ್ದ ಗುರು ದೇಶಪಾಂಡೆ, ಇದೇ ಮೊದಲ ಬಾರಿಗೆ ಘಟನೆಯ ಕುರಿತಂತೆ ಪ್ರತಿಕ್ರಿಯಿಸಿದ್ದಾರೆ. ಫೇಸ್​ಬುಕ್​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಅವರು, ‘‘ಈ 20 ದಿನ ಬಹಳ ಕಷ್ಟ ದಿನಗಳಾಗಿದ್ದವು. ವಿವೇಕ್ ಕುಟುಂಬಕ್ಕೆ ಆದ ನಷ್ಟಕ್ಕೆ ನಾನು ಕ್ಷಮೆ ಕೇಳುವೆ’’ ಎಂದು ಬರೆದುಕೊಂಡಿದ್ದಾರೆ. 

ವಿವೇಕ್ ಕುಟುಂಬವನ್ನು ಭೇಟಿಯಾಗಿ ಸಾಂತ್ವಾನ ಹೇಳುವುದಾಗಿ ತಿಳಿಸಿರುವ ಗುರು ದೇಶಪಾಂಡೆ, ಅವರ ಕುಟುಂಬಕ್ಕೆ ಅಗತ್ಯವಿರುವ ಸಹಾಯವನ್ನು ಮಾಡುವುದಾಗಿ ಬರೆದುಕೊಂಡಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಫೇಸ್​ಬುಕ್​ನಲ್ಲಿ ಲೈವ್ ಬಂದು, ಕೆಲವು ವಿಚಾರಗಳನ್ನು ಸ್ಪಷ್ಟಪಡಿಸುವುದಾಗಿ ತಿಳಿಸಿದ್ಧಾರೆ.

ಗುರು ದೇಶಪಾಂಡೆ ಹಂಚಿಕೊಂಡಿರುವ ಪೋಸ್ಟ್:

ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ ‘ಲವ್​​ ಯೂ ರಚ್ಚು’ ಚಿತ್ರದ ಶೂಟಿಂಗ್​ ನಡೆಯುತ್ತಿತ್ತು. ಈ ವೇಳೆ ರೋಪ್​ ಎಳೆಯುವಾಗ ಫೈಟರ್​ ವಿವೇಕ್​ ಮೃತಪಟ್ಟಿದ್ದರು.​ ವಿದ್ಯುತ್​ ತಂತಿಗೆ ರೋಪ್ ಸ್ಪರ್ಶಿಸಿದ್ದು ಇದಕ್ಕೆ ಕಾರಣವಾಗಿತ್ತು. ಇದರಲ್ಲಿ ಚಿತ್ರತಂಡದ ನಿರ್ಲಕ್ಷ್ಯ ಎದ್ದು ಕಂಡಿದೆ. ಹೀಗಾಗಿ, ನಿರ್ದೇಶಕ ಶಂಕರಯ್ಯ, ಸಾಹಸ ನಿರ್ದೇಶಕ ವಿನೋದ್ ಕುಮಾರ್, ಕ್ರೇನ್ ಚಾಲಕ ಮಹದೇವ್ ಅವರನ್ನು ಬಂಧಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಚಿತ್ರದ ನಾಯಕ ನಟ ಅಜೇಯ್ ರಾವ್ ಮತ್ತು ನಾಯಕಿ ರಚಿತಾ ರಾಮ್ ಬಿಡದಿ ಸ್ಟೇಷನ್ ನಲ್ಲಿ ಹೇಳಿಕೆ ದಾಖಲಿಸಿದ್ದಾರೆ.

‘ಲವ್​ ಯೂ ರಚ್ಚು’ ಸಿನಿಮಾದಲ್ಲಿ ಅಜಯ್​ ರಾವ್​ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದು, ರಚಿತಾ ರಾಮ್ ಚಿತ್ರದ ನಾಯಕಿಯಾಗಿದ್ದಾರೆ. ಶಂಕರ್​ ರಾಜ್​ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಗುರು ದೇಶಪಾಂಡೆ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ:

ಬೆಂಗಳೂರಿನಲ್ಲಿ ರಾಜ್ ಕುಮಾರ್, ಶಂಕರ್ ನಾಗ್, ವಿಷ್ಣುವರ್ಧನ್ ಸೇರಿದಂತೆ ಮಹಾನ್ ನಾಯಕರ ಪುತ್ಥಳಿಗಳು ಶೀಘ್ರದಲ್ಲೇ ತೆರವು

ಸುದೀಪ್ ಹುಟ್ಟು ಹಬ್ಬಕ್ಕೆ ವಿಶೇಷ ಗಿಫ್ಟ್; ಇ-ಬುಕ್ ಹಾಗೂ ಆಡಿಯೋ ರೂಪದಲ್ಲಿ ಬಿಡುಗಡೆಯಾಗಲಿದೆ ಕಿಚ್ಚನ ಬದುಕಿನ ಕತೆ

(Love You Rachchu film producer Guru Deshpande writes in fb that he will clarify and he will meet Vivek family)

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ