AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪುನೀತ್ ಸಮಾಧಿ ಬಳಿ ಮದುವೆ ಆಗಲು ಬಂದ ಪ್ರೇಮಿಗಳು; ಶಿವಣ್ಣ, ರಾಘಣ್ಣ ಬರಲಿ ಎಂದು ಮನವಿ

Puneeth Rajkumar Samadhi: ಬಳ್ಳಾರಿ ಮೂಲದ ಗಂಗಾ ಮತ್ತು ಗುರು ಪ್ರಸಾದ್ ಎಂಬ ಪ್ರೇಮಿಗಳು ಪುನೀತ್​ ರಾಜ್​ಕುಮಾರ್​ ಸಮಾಧಿ ಬಳಿ ಬಂದಿದ್ದಾರೆ. ಕಳೆದ 2 ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆ. ಇಬ್ಬರಿಗೂ ಅಪ್ಪು​ ಎಂದರೆ ಅಪಾರ ಅಭಿಮಾನ.

Puneeth Rajkumar: ಪುನೀತ್ ಸಮಾಧಿ ಬಳಿ ಮದುವೆ ಆಗಲು ಬಂದ ಪ್ರೇಮಿಗಳು; ಶಿವಣ್ಣ, ರಾಘಣ್ಣ ಬರಲಿ ಎಂದು ಮನವಿ
ಪುನೀತ್ ಸಮಾಧಿ ಬಳಿ ಮದುವೆ ಆಗಲು ಬಂದ ಗಂಗಾ ಮತ್ತು ಗುರು ಪ್ರಸಾದ್​
TV9 Web
| Edited By: |

Updated on: Nov 06, 2021 | 2:05 PM

Share

ಪುನೀತ್​ ರಾಜ್​ಕುಮಾರ್​ ಅವರು ನಿಧನರಾದ ಬಳಿಕ ಅವರ ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಅಪ್ಪು ಇಲ್ಲ ಎಂಬ ಕಹಿ ಸತ್ಯವನ್ನು ಯಾರಿಂದಲೂ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪುನೀತ್​ ರಾಜ್​ಕುಮಾರ್​ ಸಮಾಧಿ ಬಳಿ ಪ್ರತಿ ದಿನ ಸಾವಿರಾರು ಅಭಿಮಾನಿಗಳು ಬಂದು ನಮನ ಸಲ್ಲಿಸುತ್ತಿದ್ದಾರೆ. ಪ್ರತಿಯೊಬ್ಬರ ಅಭಿಮಾನ ಕೂಡ ಭಿನ್ನವಾಗಿದೆ. ಅಚ್ಚರಿ ಎಂದರೆ ಪ್ರೇಮಿಗಳು ಬಂದು ಅಪ್ಪು ಸಮಾಧಿಯ ಎದುರು ಮದುವೆ ಮಾಡಿಕೊಳ್ಳಲು ಸಜ್ಜಾಗಿದ್ದಾರೆ. ಆ ಮೂಲಕ ಗಮನ ಸೆಳೆಯುತ್ತಿದ್ದಾರೆ. ಅಲ್ಲದೇ, ಈ ಮದುವೆಗೆ ರಾಜ್​ ಕುಟುಂಬದವರು ಬರಬೇಕು ಎಂದು ಕೂಡ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಬಳ್ಳಾರಿ ಮೂಲದ ಗಂಗಾ ಮತ್ತು ಗುರು ಪ್ರಸಾದ್ ಎಂಬ ಪ್ರೇಮಿಗಳು ಪುನೀತ್​ ರಾಜ್​ಕುಮಾರ್​ ಸಮಾಧಿ ಬಳಿ ಬಂದಿದ್ದಾರೆ. ಕಳೆದ 2 ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆ. ಇಬ್ಬರಿಗೂ ಪುನೀತ್​ ರಾಜ್​ಕುಮಾರ್​ ಎಂದರೆ ಅಪಾರ ಅಭಿಮಾನ. ಹಾಗಾಗಿ ಅವರ ಸಮಾಧಿ ಎದುರಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎಂದು ತೀರ್ಮಾನಿಸಿದ್ದಾರೆ. ‘ನಮಗೆ ಪುನೀತ್​ ಎಂದರೆ ತುಂಬ ಇಷ್ಟ. ನಮ್ಮ ಕುಟಂಬಸ್ಥರಿಂದ ಈ ಮದುವೆಗೆ ಯಾವುದೇ ಅಡ್ಡಿಯಿಲ್ಲ. ಇಬ್ಬರ ಕುಟುಂಬದವರ ಒಪ್ಪಿಗೆ ಇದೆ. ಸ್ನೇಹಿತರು ಬಂದ ಬಳಿಕ ಇಬ್ಬರು ವಿವಾಹವಾಗಲಿದ್ದೇವೆ. ಶಿವಣ್ಣ ಹಾಗೂ ರಾಘಣ್ಣ ಮದುವೆಗೆ  ಬರಬೇಕು’ ಎಂದು ಗಂಗಾ ಮತ್ತು ಗುರುಪ್ರಸಾದ್​ ಮನವಿ ಮಾಡಿಕೊಂಡಿದ್ದಾರೆ.

‘ಪುನೀತ್​ ಬದುಕಿದಿದ್ದರೆ ಮದುವೆ ಬಳಿಕ ಅವರ ಮನೆಗೆ ತೆರಳಿ ಆಶೀರ್ವಾದ ಪಡೆದುಕೊಳ್ಳಬೇಕು ಎಂದುಕೊಂಡಿದ್ವಿ. ಆದರೆ ಅದು ಸಾಧ್ಯವಾಗಲಿಲ್ಲ. ಹಾಗಾಗಿ ಅವರ ಸಮಾಧಿ ಎದುರು ಮದುವೆ ಆಗುತ್ತೇವೆ. ರಾಘಣ್ಣ ಮತ್ತು ಶಿವಣ್ಣ ಅವರಿಗೆ ಫೋನ್​ ಮಾಡಿ ಅನುಮತಿ ಪಡೆದಿದ್ದೇವೆ. ಅವರು ಬರಬೇಕು ಎಂದು ಕೇಳಿಕೊಳ್ಳುತ್ತೇನೆ’ ಎಂದು ಗುರು ಪ್ರಸಾದ್​ ಹೇಳಿದ್ದಾರೆ.

‘ಜಾತಕ ತೋರಿಸಿ, ದೇವಸ್ಥಾನದಲ್ಲಿ ಮದುವೆ ಆಗುವುದು ಸಹಜ. ಹಾಗಂತ ದೇವಸ್ಥಾನದಲ್ಲಿ ಮದುವೆ ಆದವರು ಜೀವನ ಪರ್ಯಂತ ಚೆನ್ನಾಗಿ ಇರುತ್ತಾರೆ ಎಂದು ಹೇಳೋಕಾಗಲ್ಲ. ಪುನೀತ್​ ಮಾಡಿದ ಸಮಾಜ ಸೇವೆ ನೋಡಿದರೆ ಅವರಿಗಿಂತ ದೊಡ್ಡ ದೇವರು ಯಾರೂ ಇಲ್ಲ ಎನಿಸುತ್ತದೆ’ ಎಂದು ಗಂಗಾ ಹೇಳಿದ್ದಾರೆ.

ಇದನ್ನೂ ಓದಿ:

ಪುನೀತ್​ ಸಮಾಧಿಗೆ ಪ್ರತಿದಿನ 20 ಸಾವಿರ ಮಂದಿ ಭೇಟಿ; ಕಂಠೀರವ ಸ್ಟುಡಿಯೋದಲ್ಲಿ ಈಗ ಹೇಗಿದೆ ಪರಿಸ್ಥಿತಿ?

Puneeth Rajkumar: ಪುನೀತ್​ ಸಮಾಧಿಗೆ ನಟ ಸೂರ್ಯ ಭೇಟಿ; ಅಪ್ಪು ನೆನೆದು ಕಂಬನಿ ಮಿಡಿದ ಕಾಲಿವುಡ್​ ಸ್ಟಾರ್​ ಹೀರೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?