AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪುನೀತ್ ಸಮಾಧಿ ಬಳಿ ಮದುವೆ ಆಗಲು ಬಂದ ಪ್ರೇಮಿಗಳು; ಶಿವಣ್ಣ, ರಾಘಣ್ಣ ಬರಲಿ ಎಂದು ಮನವಿ

Puneeth Rajkumar Samadhi: ಬಳ್ಳಾರಿ ಮೂಲದ ಗಂಗಾ ಮತ್ತು ಗುರು ಪ್ರಸಾದ್ ಎಂಬ ಪ್ರೇಮಿಗಳು ಪುನೀತ್​ ರಾಜ್​ಕುಮಾರ್​ ಸಮಾಧಿ ಬಳಿ ಬಂದಿದ್ದಾರೆ. ಕಳೆದ 2 ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆ. ಇಬ್ಬರಿಗೂ ಅಪ್ಪು​ ಎಂದರೆ ಅಪಾರ ಅಭಿಮಾನ.

Puneeth Rajkumar: ಪುನೀತ್ ಸಮಾಧಿ ಬಳಿ ಮದುವೆ ಆಗಲು ಬಂದ ಪ್ರೇಮಿಗಳು; ಶಿವಣ್ಣ, ರಾಘಣ್ಣ ಬರಲಿ ಎಂದು ಮನವಿ
ಪುನೀತ್ ಸಮಾಧಿ ಬಳಿ ಮದುವೆ ಆಗಲು ಬಂದ ಗಂಗಾ ಮತ್ತು ಗುರು ಪ್ರಸಾದ್​
TV9 Web
| Edited By: |

Updated on: Nov 06, 2021 | 2:05 PM

Share

ಪುನೀತ್​ ರಾಜ್​ಕುಮಾರ್​ ಅವರು ನಿಧನರಾದ ಬಳಿಕ ಅವರ ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಅಪ್ಪು ಇಲ್ಲ ಎಂಬ ಕಹಿ ಸತ್ಯವನ್ನು ಯಾರಿಂದಲೂ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪುನೀತ್​ ರಾಜ್​ಕುಮಾರ್​ ಸಮಾಧಿ ಬಳಿ ಪ್ರತಿ ದಿನ ಸಾವಿರಾರು ಅಭಿಮಾನಿಗಳು ಬಂದು ನಮನ ಸಲ್ಲಿಸುತ್ತಿದ್ದಾರೆ. ಪ್ರತಿಯೊಬ್ಬರ ಅಭಿಮಾನ ಕೂಡ ಭಿನ್ನವಾಗಿದೆ. ಅಚ್ಚರಿ ಎಂದರೆ ಪ್ರೇಮಿಗಳು ಬಂದು ಅಪ್ಪು ಸಮಾಧಿಯ ಎದುರು ಮದುವೆ ಮಾಡಿಕೊಳ್ಳಲು ಸಜ್ಜಾಗಿದ್ದಾರೆ. ಆ ಮೂಲಕ ಗಮನ ಸೆಳೆಯುತ್ತಿದ್ದಾರೆ. ಅಲ್ಲದೇ, ಈ ಮದುವೆಗೆ ರಾಜ್​ ಕುಟುಂಬದವರು ಬರಬೇಕು ಎಂದು ಕೂಡ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಬಳ್ಳಾರಿ ಮೂಲದ ಗಂಗಾ ಮತ್ತು ಗುರು ಪ್ರಸಾದ್ ಎಂಬ ಪ್ರೇಮಿಗಳು ಪುನೀತ್​ ರಾಜ್​ಕುಮಾರ್​ ಸಮಾಧಿ ಬಳಿ ಬಂದಿದ್ದಾರೆ. ಕಳೆದ 2 ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆ. ಇಬ್ಬರಿಗೂ ಪುನೀತ್​ ರಾಜ್​ಕುಮಾರ್​ ಎಂದರೆ ಅಪಾರ ಅಭಿಮಾನ. ಹಾಗಾಗಿ ಅವರ ಸಮಾಧಿ ಎದುರಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎಂದು ತೀರ್ಮಾನಿಸಿದ್ದಾರೆ. ‘ನಮಗೆ ಪುನೀತ್​ ಎಂದರೆ ತುಂಬ ಇಷ್ಟ. ನಮ್ಮ ಕುಟಂಬಸ್ಥರಿಂದ ಈ ಮದುವೆಗೆ ಯಾವುದೇ ಅಡ್ಡಿಯಿಲ್ಲ. ಇಬ್ಬರ ಕುಟುಂಬದವರ ಒಪ್ಪಿಗೆ ಇದೆ. ಸ್ನೇಹಿತರು ಬಂದ ಬಳಿಕ ಇಬ್ಬರು ವಿವಾಹವಾಗಲಿದ್ದೇವೆ. ಶಿವಣ್ಣ ಹಾಗೂ ರಾಘಣ್ಣ ಮದುವೆಗೆ  ಬರಬೇಕು’ ಎಂದು ಗಂಗಾ ಮತ್ತು ಗುರುಪ್ರಸಾದ್​ ಮನವಿ ಮಾಡಿಕೊಂಡಿದ್ದಾರೆ.

‘ಪುನೀತ್​ ಬದುಕಿದಿದ್ದರೆ ಮದುವೆ ಬಳಿಕ ಅವರ ಮನೆಗೆ ತೆರಳಿ ಆಶೀರ್ವಾದ ಪಡೆದುಕೊಳ್ಳಬೇಕು ಎಂದುಕೊಂಡಿದ್ವಿ. ಆದರೆ ಅದು ಸಾಧ್ಯವಾಗಲಿಲ್ಲ. ಹಾಗಾಗಿ ಅವರ ಸಮಾಧಿ ಎದುರು ಮದುವೆ ಆಗುತ್ತೇವೆ. ರಾಘಣ್ಣ ಮತ್ತು ಶಿವಣ್ಣ ಅವರಿಗೆ ಫೋನ್​ ಮಾಡಿ ಅನುಮತಿ ಪಡೆದಿದ್ದೇವೆ. ಅವರು ಬರಬೇಕು ಎಂದು ಕೇಳಿಕೊಳ್ಳುತ್ತೇನೆ’ ಎಂದು ಗುರು ಪ್ರಸಾದ್​ ಹೇಳಿದ್ದಾರೆ.

‘ಜಾತಕ ತೋರಿಸಿ, ದೇವಸ್ಥಾನದಲ್ಲಿ ಮದುವೆ ಆಗುವುದು ಸಹಜ. ಹಾಗಂತ ದೇವಸ್ಥಾನದಲ್ಲಿ ಮದುವೆ ಆದವರು ಜೀವನ ಪರ್ಯಂತ ಚೆನ್ನಾಗಿ ಇರುತ್ತಾರೆ ಎಂದು ಹೇಳೋಕಾಗಲ್ಲ. ಪುನೀತ್​ ಮಾಡಿದ ಸಮಾಜ ಸೇವೆ ನೋಡಿದರೆ ಅವರಿಗಿಂತ ದೊಡ್ಡ ದೇವರು ಯಾರೂ ಇಲ್ಲ ಎನಿಸುತ್ತದೆ’ ಎಂದು ಗಂಗಾ ಹೇಳಿದ್ದಾರೆ.

ಇದನ್ನೂ ಓದಿ:

ಪುನೀತ್​ ಸಮಾಧಿಗೆ ಪ್ರತಿದಿನ 20 ಸಾವಿರ ಮಂದಿ ಭೇಟಿ; ಕಂಠೀರವ ಸ್ಟುಡಿಯೋದಲ್ಲಿ ಈಗ ಹೇಗಿದೆ ಪರಿಸ್ಥಿತಿ?

Puneeth Rajkumar: ಪುನೀತ್​ ಸಮಾಧಿಗೆ ನಟ ಸೂರ್ಯ ಭೇಟಿ; ಅಪ್ಪು ನೆನೆದು ಕಂಬನಿ ಮಿಡಿದ ಕಾಲಿವುಡ್​ ಸ್ಟಾರ್​ ಹೀರೋ

Follow Us
Web contact
Web contact

TV9 Kannada

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​