Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Movie: ತಮಿಳುನಾಡಿನಲ್ಲಿ ‘ಕಬ್ಜ’ ಹಂಚಿಕೆ ಮಾಡಲಿದೆ ಲೈಕಾ ಪ್ರೊಡಕ್ಷನ್ಸ್; ಉಪ್ಪಿ ಚಿತ್ರಕ್ಕೆ ಸಿಕ್ತು ಬಲ

ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ಪರಿಚಯ ತಮಿಳುನಾಡಿನ ಮಂದಿಗೆ ಇದೆ. ಈ ಮೂವರು ಒಂದೇ ಸಿನಿಮಾದಲ್ಲಿ ನಟಿಸಿರುವ ಕಾರಣದಿಂದ ‘ಕಬ್ಜ’ ಚಿತ್ರದ ಬಗ್ಗೆ ಪರ ರಾಜ್ಯದವರೂ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Kabzaa Movie: ತಮಿಳುನಾಡಿನಲ್ಲಿ ‘ಕಬ್ಜ’ ಹಂಚಿಕೆ ಮಾಡಲಿದೆ ಲೈಕಾ ಪ್ರೊಡಕ್ಷನ್ಸ್; ಉಪ್ಪಿ ಚಿತ್ರಕ್ಕೆ ಸಿಕ್ತು ಬಲ
ಉಪೇಂದ್ರ-ಲೈಕಾ
Follow us
ರಾಜೇಶ್ ದುಗ್ಗುಮನೆ
|

Updated on:Mar 08, 2023 | 8:04 AM

‘ಕಬ್ಜ’ ಚಿತ್ರ (Kabzaa Movie) ರಿಲೀಸ್​ಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ದೊಡ್ಡ ಮಟ್ಟದಲ್ಲಿ ಈ ಚಿತ್ರವನ್ನು ರಿಲೀಸ್ ಮಾಡಲು ಭರದ ಸಿದ್ಧತೆ ನಡೆದಿದೆ. ಆರ್​. ಚಂದ್ರು ನಿರ್ದೇಶಿಸಿ, ನಿರ್ಮಾಣ ಮಾಡಿರುವ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಸೃಷ್ಟಿ ಆಗಿದೆ. ಈಗ ಚಿತ್ರತಂಡದಿಂದ ಹೊಸ ಅಪ್​​ಡೇಟ್ ಒಂದು ಸಿಕ್ಕಿದೆ. ತಮಿಳಿನಾಡಿನಲ್ಲಿ ‘ಕಬ್ಜ’ ಹಂಚಿಕೆ ಹಕ್ಕು ಖ್ಯಾತ ನಿರ್ಮಾಣ ಸಂಸ್ಥೆ ‘ಲೈಕಾ ಪ್ರೊಡಕ್ಷನ್ಸ್​’ (Lyca Production) ಪಾಲಾಗಿದೆ. ಇದರಿಂದ ಚಿತ್ರತಂಡಕ್ಕೆ ದೊಡ್ಡ ಬಲ ಸಿಕ್ಕಂತೆ ಆಗಿದೆ. ಈ ಬಗ್ಗೆ ಲೈಕಾ ಪ್ರೊಡಕ್ಷನ್ಸ್ ಹಾಗೂ ಆರ್​. ಚಂದ್ರು ಕಡೆಯಿಂದ ಅಧಿಕೃತ ಘೋಷಣೆ ಆಗಿದೆ.

ಯಾವುದೇ ಸಿನಿಮಾ ಹೆಚ್ಚು ಜನರಿಗೆ ತಲುಪಬೇಕು ಎಂದರೆ ಅದಕ್ಕೆ ಹಂಚಿಕೆದಾರರು ತುಂಬಾನೇ ಮುಖ್ಯವಾಗುತ್ತಾರೆ. ಸಿನಿಮಾ ಜನಪ್ರಿಯ ಹಂಚಿಕೆದಾರರ ಕೈಗೆ ಸೇರಿದರೆ ಹೆಚ್ಚು ಪ್ರೇಕ್ಷಕರನ್ನು ತಲುಪಲು ಸಹಕಾರಿ ಆಗಲಿದೆ. ಈಗ ಲೈಕಾ ಪ್ರೊಡಕ್ಷನ್ಸ್ ಅವರು ‘ಕಬ್ಜ’ ಚಿತ್ರವನ್ನು ತಮಿಳುನಾಡಿನಾದ್ಯಂತ ಹಂಚಿಕೆ ಮಾಡುತ್ತಿದ್ದಾರೆ. ಇದರಿಂದ ಸಹಜವಾಗಿಯೇ ಸಿನಿಮಾಗೆ ಬಲ ಸಿಕ್ಕಂತೆ ಆಗಿದೆ. ಕಾಲಿವುಡ್​ನಲ್ಲಿ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುವ ಸೂಚನೆ ಸಿಕ್ಕಿದೆ.

ಇದನ್ನೂ ಓದಿ
Image
Kabzaa Movie: ‘ಕಬ್ಜ’ ಆಡಿಯೋ ರಿಲೀಸ್​ಗೆ ಶಿಡ್ಲಘಟ್ಟದಲ್ಲಿ ಸಿದ್ಧವಾಗ್ತಿದೆ ಬೃಹತ್​ ವೇದಿಕೆ; ಸರ್ವರಿಗೂ ಆಹ್ವಾನ ನೀಡಿದ ಚಿತ್ರತಂಡ
Image
Kabzaa: ನಾರ್ತ್​ ಅಮೆರಿಕದಲ್ಲಿ ಕನ್ನಡದ ‘ಕಬ್ಜ’ ಚಿತ್ರಕ್ಕೆ ಭಾರಿ ಡಿಮ್ಯಾಂಡ್​; ರಿಲೀಸ್​ಗೆ ಭರ್ಜರಿ ತಯಾರಿ
Image
‘ಒಟಿಟಿಯವರು ಕಣ್ಮುಚ್ಚಿಕೊಂಡು ಕಬ್ಜ ಹಕ್ಕು ಖರೀದಿಸಿಲ್ಲ; ಟೀಕಾಕಾರರಿಗೆ ಚಂದ್ರು ಉತ್ತರ
Image
Kabzaa: ಟ್ವಿಟರ್​ ಟ್ರೆಂಡಿಂಗ್​ನಲ್ಲಿ ‘ಪಠಾಣ್​’ ಚಿತ್ರವನ್ನೇ ಮೀರಿಸಿದ ‘ಕಬ್ಜ’: ಉಪ್ಪಿ-ಆರ್​. ಚಂದ್ರು ಕಮಾಲ್​

ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ಪರಿಚಯ ತಮಿಳುನಾಡಿನ ಮಂದಿಗೆ ಇದೆ. ಈ ಮೂವರು ಒಂದೇ ಸಿನಿಮಾದಲ್ಲಿ ನಟಿಸಿರುವ ಕಾರಣದಿಂದ ‘ಕಬ್ಜ’ ಚಿತ್ರದ ಬಗ್ಗೆ ಪರ ರಾಜ್ಯದವರೂ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಈ ಟ್ರೇಲರ್​ನಿಂದ ಸಿನಿಮಾ ಬಗ್ಗೆ ಇದ್ದ ನಿರೀಕ್ಷೆ ದುಪ್ಪಟ್ಟಾಗಿದೆ. ಆರ್. ಚಂದ್ರು ಅವರು ಸಿನಿಮಾನ ಹೇಗೆ ಕಟ್ಟಿಕೊಟ್ಟಿದ್ದಾರೆ ಎಂಬುದನ್ನು ಕಣ್ತುಂಬಿಕೊಳ್ಳಲು ಪ್ರೇಕ್ಷಕರು ಕಾದು ಕೂತಿದ್ದಾರೆ.

ಇದನ್ನೂ ಓದಿ: Kabzaa: ‘ಕಬ್ಜ’ ಚಿತ್ರದಲ್ಲಿ ಅನೂಪ್​ ರೇವಣ್ಣ ನಟನೆ; ಪಾತ್ರದ ಬಗ್ಗೆ ಬಾಯ್ಬಿಟ್ಟ ‘ಹೈಡ್​ ಆ್ಯಂಡ್​ ಸೀಕ್​’ ಹೀರೋ

ಲೈಕಾ ಪ್ರೊಡಕ್ಷನ್ ಬಗ್ಗೆ

ಸುಭಾಸ್ಕರನ್ ಅವರು ಲೈಕಾ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದವರು. 2014ರಲ್ಲಿ ರಿಲೀಸ್ ಆದ ‘ಕತ್ತಿ’ ಅವರ ನಿರ್ಮಾಣದಲ್ಲಿ ಮೂಡಿ ಬಂದ ಮೊದಲ ಸಿನಿಮಾ. ರಜನಿಕಾಂತ್ ಹಾಗೂ ಸುಭಾಸ್ಕರನ್ ಮಧ್ಯೆ ಒಳ್ಳೆಯ ಒಡನಾಟ ಇದೆ. ರಜನಿ ನಟನೆಯ ‘ದರ್ಬಾರ್​’ ಚಿತ್ರವನ್ನು ಲೈಕಾ ಸಂಸ್ಥೆ ನಿರ್ಮಾಣ ಮಾಡಿತ್ತು. ಇತ್ತೀಚೆಗೆ ಸುಭಾಸ್ಕರನ್ ಹುಟ್ಟುಹಬ್ಬದ ದಿನ ರಜನಿಕಾಂತ್ ಅವರ 170ನೇ ಚಿತ್ರ ಘೋಷಣೆ ಆಯಿತು. ಈ ಚಿತ್ರಕ್ಕೆ ಲೈಕಾ ಬಂಡವಾಳ ಹೂಡುತ್ತಿದೆ. ಕಳೆದ ವರ್ಷ ರಿಲೀಸ್ ಆಗಿ ಹಿಟ್ ಆದ ‘ಪೊನ್ನಿಯಿನ್ ಸೆಲ್ವನ್​’, ಈ ವರ್ಷ ತೆರೆಗೆ ಬರಲಿರುವ ‘ಪೊನ್ನಿಯಿನ್ ಸೆಲ್ವನ್​ 2’, ‘ಇಂಡಿಯನ್ 2’ ‘ಅಜಿತ್ ಕುಮಾರ್ 62’ ಚಿತ್ರಗಳಿಗೆ ಲೈಕಾ ಬಂಡವಾಳ ಹೂಡುತ್ತಿದೆ. ಇದರ ಜೊತೆ ಹಲವು ಚಿತ್ರಗಳನ್ನು ಹಂಚಿಕೆ ಮಾಡುತ್ತಿದೆ.

‘ಕಬ್ಜ’ ಚಿತ್ರದ ಬಗ್ಗೆ

‘ಕಬ್ಜ’ ಚಿತ್ರ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದು. ಪುನೀತ್ ರಾಜ್​ಕುಮಾರ್ ಬರ್ತ್​​ಡೇ ಪ್ರಯುಕ್ತ ಈ ಸಿನಿಮಾ ಮಾ.17ರಂದು ರಿಲೀಸ್ ಆಗುತ್ತಿದೆ. ಆರ್​. ಚಂದ್ರು ನಿರ್ಮಿಸಿ, ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಉಪೇಂದ್ರ, ಶಿವರಾಜ್​ಕುಮಾರ್, ಸುದೀಪ್, ಶ್ರೀಯಾ ಶರಣ್ ಮೊದಲಾದವರು ನಟಿಸಿದ್ದಾರೆ.

ಇದನ್ನೂ ಓದಿ: Kabzaa Movie: ‘ಕಬ್ಜ’ ಚಿತ್ರದಲ್ಲಿ ವಿಂಟೇಜ್​ ಕಾರುಗಳ ಕಾರುಬಾರು; ರೆಟ್ರೋ ಕಥೆಗೆ ಮೆರುಗು ತಂದ ವಾಹನಗಳು

Published On - 7:58 am, Wed, 8 March 23

ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ