AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾರುತ’ ಚಿತ್ರದಿಂದ ನವರಾತ್ರಿ ಪ್ರಯುಕ್ತ ‘ನಮ್ಮಮ್ಮ ಸವದತ್ತಿ ಎಲ್ಲಮ್ಮ’ ಹಾಡು ರಿಲೀಸ್

ಅಕ್ಟೋಬರ್ 31ಕ್ಕೆ ‘ಮಾರುತ’ ಸಿನಿಮಾ ಬಿಡುಗಡೆ ಆಗಲಿದೆ. ಈಗ ಹೊಸ ಹಾಡು ರಿಲೀಸ್ ಆಗಿದೆ. ‘ನಮ್ಮಮ್ಮ ಸವದತ್ತಿ ಎಲ್ಲಮ್ಮ’ ಎಂಬ ಈ ಹಾಡು ನವರಾತ್ರಿ ಹಬ್ಬದ ಪ್ರಯುಕ್ತ ಬಿಡುಗಡೆ ಆಗಿದೆ. ಅನನ್ಯಾ ಭಟ್ ಅವರ ಕಂಠದಲ್ಲಿ ಈ ಗೀತೆ ಮೂಡಿಬಂದಿದೆ. ಇತ್ತೀಚೆಗೆ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿತು.

‘ಮಾರುತ’ ಚಿತ್ರದಿಂದ ನವರಾತ್ರಿ ಪ್ರಯುಕ್ತ ‘ನಮ್ಮಮ್ಮ ಸವದತ್ತಿ ಎಲ್ಲಮ್ಮ’ ಹಾಡು ರಿಲೀಸ್
Maarutha Movie Team
ಮದನ್​ ಕುಮಾರ್​
|

Updated on: Sep 25, 2025 | 10:07 PM

Share

ನವರಾತ್ರಿಯನ್ನು ಭಕ್ತಿ ಭಾವದಿಂದ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ‘ಮಾರುತ’ (Maarutha) ಸಿನಿಮಾದಿಂದ ನವರಾತ್ರಿ ಪ್ರಯುಕ್ತ ‘ನಮ್ಮಮ್ಮ ಸವದತ್ತಿ ಎಲ್ಲಮ್ಮ’ (Nammamma Savadatti Yellamma) ಹಾಡು ಬಿಡುಗಡೆ ಆಗಿದೆ. ಇದು ಎಸ್​. ನಾರಾಯಣ್ ನಿರ್ದೇಶನದ ಸಿನಿಮಾ. ಈ ಚಿತ್ರದಲ್ಲಿ ದುನಿಯಾ ವಿಜಯ್, ಶ್ರೇಯಸ್ ಮಂಜು, ಬೃಂದಾ ಆಚಾರ್ಯ ಮುಂತಾದವರು ನಟಿಸಿದ್ದಾರೆ. ‘ಈಶಾ ಪ್ರೊಡಕ್ಷನ್ಸ್’ ಮೂಲಕ ರಮೇಶ್ ಯಾದವ್ ಮತ್ತು ಕೆ. ಮಂಜು ಅವರು ‘ಮಾರುತ’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ‘ಜಂಕಾರ್ ಮ್ಯೂಸಿಕ್’ ಮೂಲಕ ‘ನಮ್ಮಮ್ಮ ಸವದತ್ತಿ ಎಲ್ಲಮ್ಮ’ ಹಾಡು ರಿಲೀಸ್ ಆಗಿದೆ. ಈ ಗೀತೆಗೆ ಅನನ್ಯಾ ಭಟ್ ಅವರು ಧ್ವನಿ ನೀಡಿದ್ದಾರೆ. ಹಾಡಿನಲ್ಲಿ ಬೃಂದಾ ಆಚಾರ್ಯ (Brinda Acharya) ಅವರು ನಟಿಸಿದ್ದಾರೆ.

‘ನಮ್ಮಮ್ಮ ಸವದತ್ತಿ ಎಲ್ಲಮ್ಮ’ ಹಾಡಿನ ಬಿಡುಗಡೆಗಾಗಿ ‘ಮಾರುತ’ ಚಿತ್ರತಂಡದವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಸಿನಿಮಾ ಬಗ್ಗೆ ಮತ್ತು ಹಾಡಿನ ಬಗ್ಗೆ ಮಾಹಿತಿ ಹಂಚಿಕೊಂಡರು. ‘ಇಂದು ಬಿಡುಗಡೆ ಆಗಿರುವ ಹಾಡು ಬಹಳ ಚೆನ್ನಾಗಿದೆ. ನವರಾತ್ರಿ ಸಂದರ್ಭದಲ್ಲಿ ಈ ಗೀತೆ ಅನಾವರಣ ಆಗಿದೆ. ಅಕ್ಟೋಬರ್ 31ಕ್ಕೆ ಸಿನಿಮಾ ತೆರೆಗೆ ಬರಲಿದೆ’ ಎಂದು ನಿರ್ದೇಶಕ ಎಸ್. ನಾರಾಯಣ್ ತಿಳಿಸಿದರು.

‘ದುನಿಯಾ ವಿಜಯ್ ಅವರು ಉತ್ತಮವಾಗಿ ನಟಿಸಿದ್ದಾರೆ. ಶ್ರೇಯಸ್ ಮಂಜು, ಬೃಂದಾ ಆಚಾರ್ಯ ಅವರ ಅಭಿನಯ ಸಹ ಚೆನ್ನಾಗಿದೆ. ತಾರಾ, ಸಾಧುಕೋಕಿಲ, ರಂಗಾಯಣ ರಘು, ಶರತ್ ಲೋಹಿತಾಶ್ವ, ಕಲ್ಯಾಣಿ, ಪ್ರಮೋದ್ ಶೆಟ್ಟಿ, ಸುಜಯ್ ಶಾಸ್ತ್ರಿ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ. ರವಿಚಂದ್ರನ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮಾರುತ ಒಂದು ಕೌಟುಂಬಿಕ ಸಿನಿಮಾ’ ಎಂದಿದ್ದಾರೆ ಎಸ್​. ನಾರಾಯಣ್.

‘ನಮ್ಮಮ್ಮ ಸವದತ್ತಿ ಎಲ್ಲಮ್ಮ’ ಹಾಡು:

‘ಈ ಸಿನಿಮಾದಲ್ಲಿ ಯುವಜನತೆಯನ್ನು ಎಚ್ಚರಿಸುವ ಉತ್ತಮವಾದ ಸಂದೇಶ ಕೂಡ ಇದೆ. ಸಾಮಾಜಿಕ ಜಾಲತಾಣಗಳಿಂದ ಎಷ್ಟು ಉಪಯೋಗ ಇದೆಯೋ ಅಷ್ಟೇ ಅಪಾಯ ಕೂಡ ಇದೆ. ಈ ಬಗ್ಗೆ ಪೋಷಕರು ಹೆಚ್ಚು ಗಮನ ನೀಡಬೇಕು ಎಂಬ ಸಂದೇಶವನ್ನು ಈ ಸಿನಿಮಾ ಮೂಲಕ ನೀಡುತ್ತಿದ್ದೇವೆ’ ಎಂದು ಎಸ್. ನಾರಾಯಣ್ ಹೇಳಿದ್ದಾರೆ. ಶ್ರೇಯಸ್ ಮಂಜು ಮಾತನಾಡಿ, ‘ನವರಾತ್ರಿಯ ಸಂದರ್ಭದಲ್ಲಿ ನಾಡಿನ ಜನತೆಗೆ ಒಂದೊಳ್ಳೆ ಭಕ್ತಿಗೀತೆಯನ್ನು ನಿರ್ದೇಶಕರು ನೀಡಿದ್ದಾರೆ‌’ ಎಂದರು.

ಇದನ್ನೂ ಓದಿ: ‘ಸಾವಿರ ಗುಂಗಲ್ಲಿ’ ಆಲ್ಬಂ ಹಾಡಿನಲ್ಲಿ ಮಿಂಚಿದ ನಟಿ ಬೃಂದಾ ಆಚಾರ್ಯ

ಸುಮಾರು 65 ಲಕ್ಷ ರೂಪಾಯಿ ರೂಪಾಯಿ ಬಜೆಟ್​​ನಲ್ಲಿ ‘ನಮ್ಮಮ್ಮ ಸವದತ್ತಿ ಎಲ್ಲಮ್ಮ’ ಹಾಡಿನ ಚಿತ್ರೀಕರಣ ಮಾಡಲಾಗಿದೆ ಎಂದು ಕೆ. ಮಂಜು ತಿಳಿಸಿದ್ದಾರೆ. ಉತ್ತಮ ಸಂದೇಶ ನೀಡುವಂತಹ ಸಿನಿಮಾ ಮಾಡಿದ ಖುಷಿಯಲ್ಲಿದ್ದಾರೆ ನಿರ್ಮಾಪಕ ರಮೇಶ್ ಯಾದವ್. ಅಕ್ಟೋಬರ್ 31ರಂದು ‘ಮಾರುತ’ ಸಿನಿಮಾ ನೋಡಲು ತಾವು ಕೂಡ ಕಾತರದಿಂದ ಕಾದಿರುವುದಾಗಿ ಬೃಂದಾ ಆಚಾರ್ಯ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ