AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Murali: ಕೊವಿಡ್​ ಸಂಕಷ್ಟದಲ್ಲಿ 5 ಸರ್ಕಾರಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗೆ ಊಟ ನೀಡುತ್ತಿರುವ ನಟ ಶ್ರೀಮುರಳಿ

Sriimurali: ದಿನವಿಡೀ ಪಿಪಿಇ ಕಿಟ್​ ಧರಿಸಿ ಕೆಲಸ ಮಾಡುತ್ತಿರುವ ವೈದ್ಯಕೀಯ ಸಿಬ್ಬಂದಿಗಳು ಊಟ ಮಾಡಲು ಕೂಡ ಕಷ್ಟಪಡುತ್ತಿದ್ದಾರೆ ಎಂಬುದು ಶ್ರೀಮುರಳಿ ಅವರ ಗಮನಕ್ಕೆ ಬಂದಿದೆ. ಹಾಗಾಗಿ ಅಂಥವರ ನೆರವಿಗೆ ಶ್ರೀಮುರಳಿ ಧಾವಿಸಿದ್ದಾರೆ.

Sri Murali: ಕೊವಿಡ್​ ಸಂಕಷ್ಟದಲ್ಲಿ 5 ಸರ್ಕಾರಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗೆ ಊಟ ನೀಡುತ್ತಿರುವ ನಟ ಶ್ರೀಮುರಳಿ
ನಟ ಶ್ರೀಮುರಳಿ
ಮದನ್​ ಕುಮಾರ್​
|

Updated on: May 09, 2021 | 9:49 AM

Share

ಕೊರೊನಾ ವೈರಸ್​ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದಕ್ಕೆ ತಕ್ಕಂತೆಯೇ ವೈದ್ಯರು, ನರ್ಸ್​ಗಳು ಮತ್ತು ಆಸ್ಪತ್ರೆಯ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅಂಥ ಕೊರೊನಾ ವಾರಿಯರ್​ಗಳ ಕಾಳಜಿ ವಹಿಸಬೇಕಾಗಿರುವುದು ಕೂಡ ಈ ಹೊತ್ತಿನ ಅಗತ್ಯತೆ. ಅವರು ಚೆನ್ನಾಗಿದ್ದರೆ ಮಾತ್ರ ಈ ಭೀಕರ ಪರಿಸ್ಥಿತಿಯನ್ನು ಎದುರಿಸಬಹುದು. ಆ ಕಾರಣಕ್ಕಾಗಿ ನಟ ಶ್ರೀಮುರಳಿ ಅವರು ತಮ್ಮ ನೆರವಿನ ಹಸ್ತ ಚಾಚಿದ್ದಾರೆ. ಬೆಂಗಳೂರಿನ 5 ಸರ್ಕಾರಿ ಆಸ್ಪತ್ರೆಯ ವೈದ್ಯರು, ನರ್ಸ್​ಗಳು ಹಾಗೂ ಸಿಬ್ಬಂದಿಗೆ ಊಟ ನೀಡುವ ಕಾಯಕಕ್ಕೆ ರೋರಿಂಗ್​ ಸ್ಟಾರ್​ ಮುಂದಾಗಿದ್ದಾರೆ.

ದಿನವಿಡೀ ಪಿಪಿಇ ಕಿಟ್​ ಧರಿಸಿ ಕೆಲಸ ಮಾಡುತ್ತಿರುವ ವೈದ್ಯಕೀಯ ಸಿಬ್ಬಂದಿಗಳು ಊಟ ಮಾಡಲು ಕೂಡ ಕಷ್ಟಪಡುತ್ತಿದ್ದಾರೆ ಎಂಬುದು ಶ್ರೀಮುರಳಿ ಅವರ ಗಮನಕ್ಕೆ ಬಂದಿದೆ. ಹಾಗಾಗಿ ಇಂದಿನಿಂದ (ಮೇ 9) ಉಚಿತವಾಗಿ ಊಟದ ವ್ಯವಸ್ಥೆ ಮಾಡಲು ಅವರು ನಿರ್ಧರಿಸಿದ್ದಾರೆ. ಕೆಸಿ ಜನರಲ್​ ಆಸ್ಪತ್ರೆ, ರಾಜಾಜಿನಗರದ ಇಎಸ್​ಐ ಆಸ್ಪತ್ರೆ, ಸಿವಿ ರಾಮನ್​ ಜನರಲ್​ ಆಸ್ಪತ್ರೆ, ಜಯನಗರ ಜನರಲ್​ ಆಸ್ಪತ್ರೆ ಹಾಗೂ ಬೌರಿಂಗ್​ ಆಸ್ಪತ್ರೆಯ ಸಿಬ್ಬಂದಿ, ವೈದ್ಯರು ಮತ್ತು ನರ್ಸ್​ಗಳಿಗೆ ಶ್ರೀಮುರಳಿ ಊಟದ ವ್ಯವಸ್ಥೆ ಮಾಡಲು ಪಣತೊಟ್ಟಿದ್ದಾರೆ.

ಪ್ರಸ್ತುತ ಬೆಂಗಳೂರಿನಲ್ಲಿ ಪರಿಸ್ಥಿತಿ ಕೈ ಮೀರಿದೆ. ಸೂಕ್ತ ಚಿಕಿತ್ಸೆ ಇಲ್ಲದೆ ಜನ ಸಾಮಾನ್ಯರು ಕಷ್ಟಪಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಪ್ರತಿಯೊಬ್ಬರು ಮಾಡುವ ಸಣ್ಣ ಸಣ್ಣ ಸಹಾಯ ಕೂಡ ದೊಡ್ಡ ಪರಿಣಾಮ ಬೀರಲಿದೆ. ಅದರಲ್ಲೂ ಸ್ಟಾರ್​ ನಟರು ಇಂಥ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡರೆ ಅದರಿಂದ ಇನ್ನೂ ಅನೇಕರಿಗೆ ಮಾದರಿ ಆಗಲಿದೆ. ಲಾಕ್​ಡೌನ್​ ಆರಂಭ ಆಗುವುದಕ್ಕೂ ಮುನ್ನ ಮದಗಜ ಸಿನಿಮಾದ ಶೂಟಿಂಗ್​ ಕೆಲಸಗಳಲ್ಲಿ ಶ್ರೀಮುರಳಿ ಬ್ಯುಸಿ ಆಗಿದ್ದರು. ಆ ಚಿತ್ರಕ್ಕೆ ‘ಅಯೋಗ್ಯ’ ಖ್ಯಾತಿಯ ಮಹೇಶ್​ ನಿರ್ದೇಶನ ಮಾಡುತ್ತಿದ್ದಾರೆ.

ಕನ್ನಡದ ಚಿತ್ರರಂಗದ ಹಲವು ಕಲಾವಿದರು ಈಗ ಕೊವಿಡ್​ ವಾರಿಯರ್​ಗಳಾಗಿ ಕೆಲಸ ಮಾಡುತ್ತಿದ್ದಾರೆ. ನಟ ಅರ್ಜುನ್​ ಗೌಡ ಅವರು ಈ ಕಷ್ಟದ ಸಂದರ್ಭದಲ್ಲಿ ಆ್ಯಂಬುಲೆನ್ಸ್​ ಚಾಲಕನಾಗಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್​ ಗೌಡ ಅವರು ತಮ್ಮದೇ ಹೆಲ್ಪ್​ಲೈನ್​ ಆರಂಭಿಸಿ, ಆ ಮೂಲಕ ಜನರ ಸಹಾಯಕ್ಕೆ ನಿಂತಿದ್ದಾರೆ. ನಟ ಜಗ್ಗೇಶ್​ ಅವರು ಅಗತ್ಯ ಇರುವವರರಿಗೆ ಆಕ್ಸಿಜನ್​ ಸಿಲಿಂಡರ್​ ಒದಗಿಸಿದ್ದಾರೆ. ಬಹುಭಾಷಾ ನಟ ಸೋನು ಸೂದ್​ ಅವರು ಸಮರೋಪಾದಿಯಲ್ಲಿ ಜನರಿಗೆ ಸಹಾಯ ಮಾಡುತ್ತಿದ್ದಾರೆ. ಈ ಸಾಲಿಗೆ ಈಗ ಶ್ರೀಮುರಳಿ ಕೂಡ ಸೇರಿಕೊಂಡಿದ್ದಾರೆ.

ಇದನ್ನೂ ಓದಿ:

Actor Arjun Gowda: ಜನರ ಕಷ್ಟ ನೋಡಲಾಗದೇ ಆ್ಯಂಬುಲೆನ್ಸ್​ ಚಾಲಕನಾದ ಕನ್ನಡ ಸಿನಿಮಾ ನಟ ಅರ್ಜುನ್​​ ಗೌಡ

ರಿಯಲ್​ ಹೀರೋ ಆದ ಜಗ್ಗೇಶ್​; 20 ದಿನಗಳಿಂದ ಕೊರೊನಾ ರೋಗಿಗಳ ಸೇವೆಯಲ್ಲಿ ನಟ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?