AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ‘ಚುಟುಚುಟು’ ಬೆಡಗಿ ಆಶಿಕಾಗೆ ಈಗ ತೋಟದಲ್ಲಿ ಕೆಲಸ; ಲಾಕ್​ಡೌನ್​ನಲ್ಲಿ ಹೊಸ ಕಸುಬು

ಲಾಕ್​ಡೌನ್​ ಜಾರಿಯಲ್ಲಿರುವ ಕಾರಣ ಸಿನಿಮಾ ಶೂಟಿಂಗ್​ಗೆ ಬ್ರೇಕ್​ ಹಾಕಲಾಗಿದೆ. ಈ ನಡುವೆ ಆಶಿಕಾ ರಂಗನಾಥ್ ಮಾವಿನ ತೋಟದಲ್ಲಿ ಕೆಲಸ ಮಾಡುತ್ತಾ, ಸಾವಯವ ಕೃಷಿ ಬಗ್ಗೆ ತಿಳಿದುಕೊಳ್ಳುತ್ತಿದ್ದಾರೆ.

Ashika Ranganath: ‘ಚುಟುಚುಟು’ ಬೆಡಗಿ ಆಶಿಕಾಗೆ ಈಗ ತೋಟದಲ್ಲಿ ಕೆಲಸ; ಲಾಕ್​ಡೌನ್​ನಲ್ಲಿ ಹೊಸ ಕಸುಬು
ಆಶಿಕಾ ರಂಗನಾಥ್​
Follow us
ಮದನ್​ ಕುಮಾರ್​
|

Updated on: May 27, 2021 | 11:18 AM

ಕೊರೊನಾ ವೈರಸ್​ ಎರಡನೇ ಅಲೆ ದೇಶಾದ್ಯಂತ ಜೋರಾಗಿರುವ ಕಾರಣ ಬಹುತೇಕ ಕಡೆ ಲಾಕ್​ಡೌನ್ ಜಾರಿ​ ಮಾಡಲಾಗಿದೆ. ಸಿನಿಮಾ, ಧಾರಾವಾಹಿ ಶೂಟಿಂಗ್​ಗಳು ಸ್ಥಗಿತಗೊಂಡಿರುವುದರಿಂದ ಸೆಲೆಬ್ರಿಟಿಗಳು ಮನೆಯಲ್ಲೇ ಇರಬೇಕಾದ ಪರಿಸ್ಥಿತಿ ಬಂದಿದೆ. ಸದಾ ಕಾಲ ಶೂಟಿಂಗ್​ನಲ್ಲಿ ಬ್ಯುಸಿ ಆಗಿರುತ್ತಿದ್ದ ನಟ-ನಟಿಯರು ಇಷ್ಟು ದಿನ ಫ್ಯಾಮಿಲಿಯನ್ನು ಮಿಸ್​ ಮಾಡಿಕೊಳ್ಳುತ್ತಿದ್ದರು. ಈಗ ಅವರಿಗೆ ಕುಟುಂಬದವರ ಜೊತೆ ಕಾಲ ಕಳೆಯಲು ಸಮಯ ಸಿಕ್ಕಿದೆ. ಕೆಲವರು ತಮ್ಮ ತೋಟದ ಮನೆಗೆ ತೆರಳಿ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. ನಟಿ ಆಶಿಕಾ ರಂಗನಾಥ್​ ಕೂಡ ಹಳ್ಳಿ ಪರಿಸರದಲ್ಲಿ ಕಾಲ ಕಳೆಯುತ್ತಿದ್ದಾರೆ.

ಕನ್ನಡದ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿರುವ ಆಶಿಕಾ ರಂಗನಾಥ್​ ಅವರ ಕೈಯಲ್ಲಿ ‘ಅವತಾರ​ ಪುರುಷ’, ‘ರೇಮೋ’, ‘ಮದಗಜ’ ಮುಂತಾದ ಸಿನಿಮಾಗಳಿವೆ. ಆದರೆ ಲಾಕ್​ಡೌನ್​ ಜಾರಿಯಲ್ಲಿರುವ ಕಾರಣ ಈ ಎಲ್ಲ ಸಿನಿಮಾಗಳ ಕೆಲಸಗಳಿಗೆ ಬ್ರೇಕ್​ ಹಾಕಲಾಗಿದೆ. ಈ ನಡುವೆ ಆಶಿಕಾ ಮಾವಿನ ತೋಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಸಂಬಂಧಿಕರ ತೋಟಕ್ಕೆ ತೆರಳಿ, ಸಾವಯವ ಕೃಷಿ ಬಗ್ಗೆ ತಿಳಿದುಕೊಳ್ಳುತ್ತಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಆಶಿಕಾ ಹೆಚ್ಚು ಆ್ಯಕ್ಟೀವ್​ ಆಗಿರುತ್ತಾರೆ. ಇನ್​​ಸ್ಟಾಗ್ರಾಮ್​ನಲ್ಲಿ 13 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್​ ಹೊಂದಿರುವ ಅವರು, ತಮ್ಮ ಅಭಿಮಾನಿಗಳಿಗಾಗಿ ಏನಾದರೂ ಪೋಸ್ಟ್​ ಮಾಡುತ್ತಲೇ ಇರುತ್ತಾರೆ. ಇತ್ತೀಚೆಗೆ ತಮ್ಮ ಲಾಕ್​ಡೌನ್​ ದಿನಚರಿಯ ಬಗ್ಗೆ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದರು. ಸಂಬಂಧಿಕರ ತೋಟದಲ್ಲಿ ಅವರು ಎಲ್ಲರ ಜೊತೆ ಖುಷಿಖುಷಿಯಾಗಿ ಕಾಲ ಕಳೆಯುತ್ತಿದ್ದಾರೆ. ಅಜ್ಜ, ಅಜ್ಜಿ ಮತ್ತು ಕಸಿನ್ಸ್​ ಜೊತೆ ಇರಲು ಸಮಯ ಸಿಕ್ಕಿರುವುದಕ್ಕೆ ಆಶಿಕಾ ಸಂತಸಪಡುತ್ತಿದ್ದಾರೆ.

ಅವರ ತೋಟದಲ್ಲಿ ಮಾವು, ಮೆಣಸಿನ ಕಾಯಿ ಹಾಗೂ ಹಲವು ಬಗೆಯ ತರಕಾರಿಗಳನ್ನು ಬೆಳೆಯಲಾಗುತ್ತಿದೆ. ಸಾವಯವ ವಿಧಾನದಲ್ಲಿ ಬೆಳೆದ ಮಾವಿನಿಂದ ವಿವಿಧ ಖಾದ್ಯಗಳನ್ನು ತಯಾರಿಸಿ ಆಶಿಕಾ ಸವಿಯುತ್ತಿದ್ದಾರೆ. ಅಲ್ಲಿಗೆ ತೆರಳಿದ ಬಳಿಕ ಅವರಿಗೆ ಸಾವಯವ ಕೃಷಿ ಬಗ್ಗೆ ಅನೇಕ ವಿಚಾರಗಳು ಗೊತ್ತಾಗಿದೆ. ಮೊಬೈಲ್​ ಬಳಕೆ ಕಡಿಮೆ ಮಾಡಿದ್ದು, ಹಳ್ಳಿ ಸೊಗಡಿನ ಆಟಗಳನ್ನು ಆಡುತ್ತಿದ್ದಾರೆ. ಒಟ್ಟಿನಲ್ಲಿ ಅವರು ಈ ಲಾಕ್​ಡೌನ್​ ಸಮಯವನ್ನು ಹಾಯಾಗಿ ಕಳೆಯುತ್ತಿದ್ದಾರೆ.

ಲಾಕ್​ಡೌನ್​ ಮುಗಿಯುತ್ತಿದ್ದಂತೆಯೇ ಸಿನಿಮಾ ಕೆಲಸಗಳಲ್ಲಿ ಆಶಿಕಾ ಬ್ಯುಸಿ ಆಗಲಿದ್ದಾರೆ. ‘ರೇಮೋ’, ‘ಅವತಾರ ಪುರುಷ’ ಹಾಗೂ ‘ಮದಗಜ’ ಸಿನಿಮಾಗಳ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಸುದೀಪ್​ ಜೊತೆ ‘ಪಟಾಕಿ ಪೋರಿಯೋ..’ ಹಾಡಿನಲ್ಲಿ ಆಶಿಕಾ ರಂಗನಾಥ್​ ಹೆಜ್ಜೆ ಹಾಕಿದ್ದು, ಆ ಸಿನಿಮಾದ ಬಿಡುಗಡೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

ಇದನ್ನೂ ಓದಿ:

ಲಾಕ್‌ಡೌನ್‌ ಬ್ರೇಕ್​ನಲ್ಲಿ ನಟ ಉಪ್ಪಿ ತಮ್ಮ ಪ್ರೀತಿಯ ತೋಟದಲ್ಲಿ ಬದನೆಕಾಯಿ ಬೆಳೆದರು!

ಉಪೇಂದ್ರ ರೆಸಾರ್ಟ್​ ಕಟ್ಟಿದ್ದು ರೈತರ ಭೂಮಿಯಲ್ಲಾ? ಆರೋಪಕ್ಕೆ ರಿಯಲ್ ಸ್ಟಾರ್​ ಖಡಕ್​ ಉತ್ತರ

ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!