AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೌರ್ಯದಲ್ಲಿ ಶಾಂತಿ ಇಷ್ಟಪಡುವ ‘ಮದಗಜ’: ಭರ್ಜರಿ ಸೌಂಡ್​ ಮಾಡುತ್ತಿದೆ ಶ್ರೀಮುರಳಿ ಸಿನಿಮಾ ಟ್ರೇಲರ್​

Madagaja Trailer: ‘ಮದಗಜನಿಗೆ ಕ್ರೌರ್ಯದಲ್ಲಿ ಶಾಂತಿ ಇಷ್ಟ, ದ್ವೇಷದಲ್ಲಿ ತಾಳ್ಮೆ ಇಷ್ಟ’ ಎನ್ನುವ ಡೈಲಾಗ್ ಟ್ರೇಲರ್​ನ ಆರಂಭದಲ್ಲೇ ಬರುತ್ತದೆ. ಇದು ಸಾಕಷ್ಟು ಗಮನ ಸೆಳೆಯುತ್ತದೆ.

ಕ್ರೌರ್ಯದಲ್ಲಿ ಶಾಂತಿ ಇಷ್ಟಪಡುವ ‘ಮದಗಜ’: ಭರ್ಜರಿ ಸೌಂಡ್​ ಮಾಡುತ್ತಿದೆ ಶ್ರೀಮುರಳಿ ಸಿನಿಮಾ ಟ್ರೇಲರ್​
ಶ್ರೀಮುರಳಿ
TV9 Web
| Edited By: |

Updated on:Nov 21, 2021 | 1:08 PM

Share

ಇತ್ತೀಚಿನ ವರ್ಷಗಳಲ್ಲಿ ಶ್ರೀಮುರಳಿ (Sri Murali) ಆಯ್ಕೆ ಮಾಡಿಕೊಳ್ಳುವ ಸಿನಿಮಾ ಪ್ಯಾಟರ್ನ್​ ಬದಲಾಗಿದೆ. ಅವರ ಸಿನಿಮಾ ಎಂದರೆ ಆ್ಯಕ್ಷನ್​ಗೆ ಕೊರತೆ ಇರುವುದಿಲ್ಲ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈಗ ಅವರು ನಟಿಸುತ್ತಿರುವ ‘ಮದಗಜ’ (Madagaja) ಸಿನಿಮಾ ಬೆಟ್ಟದಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಇಂದು (ನವೆಂಬರ್​ 19) ರಿಲೀಸ್​ ಆದ ‘ಮದಗಜ’ ಟ್ರೇಲರ್​ (Madagaja Trailer)ಸಿನಿಮಾದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಸಿನಿಮಾದಲ್ಲಿ ಆ್ಯಕ್ಷನ್​ಗೆ ಯಾವುದೇ ಕೊರತೆ ಇಲ್ಲ ಎಂಬುದಕ್ಕೆ 2.53 ನಿಮಿಷದ ಟ್ರೇಲರ್​ ಸಾಕ್ಷ್ಯ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ರೇಲರ್​ ಅನಾವರಣ ಮಾಡಿದರು. 

‘ಮದಗಜನಿಗೆ ಕ್ರೌರ್ಯದಲ್ಲಿ ಶಾಂತಿ ಇಷ್ಟ, ದ್ವೇಷದಲ್ಲಿ ತಾಳ್ಮೆ ಇಷ್ಟ’ ಎನ್ನುವ ಡೈಲಾಗ್ ಟ್ರೇಲರ್​ನ ಆರಂಭದಲ್ಲೇ ಬರುತ್ತದೆ. ಇದು ಸಾಕಷ್ಟು ಗಮನ ಸೆಳೆಯುತ್ತದೆ. ಜಗಪತಿ ಬಾಬು ಟಾಲಿವುಡ್​ನ ಖ್ಯಾತ ಖಳನಟ. ಅವರು ಕೂಡ ಈ ಸಿನಿಮಾದಲ್ಲಿ ಮುಖ್ಯ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ತುಂಬಾನೇ ರಾ ಆಗಿದೆ. ಕೆಲ ದೃಶ್ಯಗಳು ಮೈ ಜುಮ್​ ಎನಿಸುತ್ತವೆ. ಇನ್ನು, ಮಚ್ಚುಗಳು ಕೂಡ ಟ್ರೇಲರ್​ನಲ್ಲಿ ಝಳಪಿಸಿವೆ.

‘ಕೆಜಿಎಫ್’ ಸಿನಿಮಾದಲ್ಲಿ ಗರುಡನಾಗಿ ಕಾಣಿಸಿಕೊಂಡಿದ್ದ ರಾಮಚಂದ್ರ ರಾಜು ಅವರು ‘ಮದಗಜ’ದಲ್ಲಿ ನಟಿಸಿದ್ದಾರೆ. ಅವರ ಪಾತ್ರ ಕೂಡ ತುಂಬಾನೇ ಮಹತ್ವ ಪಡೆದುಕೊಳ್ಳಲಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಅಕ್ಟೋಬರ್​ 29ರಂದು ಪುನೀತ್​ ರಾಜ್​ಕುಮಾರ್​ ನಿಧನ ಹೊಂದಿದ್ದರು. ಅವರನ್ನು ಕಳೆದುಕೊಂಡಿರುವ ನೋವು ಇನ್ನೂ ಮರೆಯಾಗಿಲ್ಲ. ಟ್ರೇಲರ್​ನಲ್ಲಿ ಪುನೀತ್​ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ಕೂಡ ನಡೆದಿದೆ.

‘ಅಯೋಗ್ಯ’ ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು ನಿರ್ದೇಶಕ ಮಹೇಶ್​ ಕುಮಾರ್​. ಅವರು ‘ಮದಗಜ’ ಸಾಕಷ್ಟು ಶ್ರಮ ವಹಿಸಿರೋದು ಕಂಡು ಬರುತ್ತದೆ. ಪ್ರತಿ ದೃಶ್ಯಗಳನ್ನೂ ಅದ್ದೂರಿಯಾಗಿ ಕಟ್ಟಿ ಕೊಡಲಾಗಿದೆ. ಆಶಿಕಾ ರಂಗನಾಥ್​ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಸಿನಿಮಾಗಳ ಆಯ್ಕೆಯಲ್ಲಿ ಶ್ರೀಮುರಳಿ ಸಖತ್​ ಚ್ಯೂಸಿ ಆಗಿದ್ದಾರೆ. ‘ಭರಾಟೆ’ ಬಳಿಕ ಅವರು ಒಪ್ಪಿಕೊಂಡ ‘ಮದಗಜ’ ಚಿತ್ರ ಸೆಟ್ಟೇರಿದ ದಿನದಿಂದಲೂ ಭಾರಿ ಕ್ರೇಜ್​ ಹುಟ್ಟುಹಾಕಿದೆ. ಈ ಸಿನಿಮಾಗೆ ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದಾರೆ.  ಇತ್ತೀಚೆಗೆ ರಿಲೀಸ್​ ಆದ ಸಿನಿಮಾದ ಹಾಡುಗಳು ಭಾರೀ ಸೌಂಡ್​ ಮಾಡಿತ್ತು.

ಇದನ್ನೂ ಓದಿ: ‘ಅಪ್ಪು ಮಾಮನ ನೆನಪಲ್ಲಿ ‘ಮದಗಜ’ ಸಾಂಗ್​ ರಿಲೀಸ್​ ಮಾಡಿದೀವಿ’; ಸುದ್ದಿಗೋಷ್ಠಿಯಲ್ಲಿ ಶ್ರೀಮುರಳಿ ಮಾತು

Published On - 8:09 pm, Fri, 19 November 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್