AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಜನ್ಮದಿನ ಆಚರಿಸಿಕೊಳ್ಳುವುದಿಲ್ಲ, ಕಾರಣ ನಿಮಗೂ ತಿಳಿದಿದೆ’; ಅಭಿಮಾನಿಗಳಿಗೆ ಶ್ರೀಮುರಳಿ ಪತ್ರ

ಡಿಸೆಂಬರ್​ 3ರಂದು ಶ್ರೀಮುರಳಿ ಅಭಿನಯದ ‘ಮದಗಜ’ ಸಿನಿಮಾ ರಿಲೀಸ್​ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ಸಾಕಷ್ಟು ಆ್ಯಕ್ಷನ್ ದೃಶ್ಯಗಳನ್ನು ಹೊಂದಿರುವ ಈ ಚಿತ್ರ ಕೋಟ್ಯಂತರ ರೂಪಾಯಿ ಕಮಾಯಿ ಮಾಡಿದೆ. ಈ ಕಾರಣಕ್ಕೆ ಅವರಿಗೆ ಈ ಬಾರಿಯ ಬರ್ತ್​ಡೇ ವಿಶೇಷವಾಗಬೇಕಿತ್ತು.

‘ನಾನು ಜನ್ಮದಿನ ಆಚರಿಸಿಕೊಳ್ಳುವುದಿಲ್ಲ, ಕಾರಣ ನಿಮಗೂ ತಿಳಿದಿದೆ’; ಅಭಿಮಾನಿಗಳಿಗೆ ಶ್ರೀಮುರಳಿ ಪತ್ರ
ಶ್ರೀಮುರಳಿ
TV9 Web
| Edited By: |

Updated on: Dec 16, 2021 | 5:11 PM

Share

ಪುನೀತ್​ ರಾಜ್​ಕುಮಾರ್​ ಅವರು ಅಕಾಲಿಕ ಮರಣ ಹೊಂದುತ್ತಾರೆ ಎಂದು ಯಾರೆಂದರೆ ಯಾರೂ ಭಾವಿಸಿರಲಿಲ್ಲ. ಅವರ ಆಪ್ತ ವರ್ಗದವರಿಗೆ, ಅಭಿಮಾನಿಗಳಿಗೆ ಈ ಸುದ್ದಿಯನ್ನು ಇನ್ನೂ ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಸಾಕಷ್ಟು ಅಭಿಮಾನಿಗಳು ಪುನೀತ್​ ಸಮಾಧಿಗೆ ತೆರಳಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ.  ಸ್ಯಾಂಡಲ್​ವುಡ್​ನ ಸ್ಟಾರ್​ ನಟ ಶ್ರೀಮುರಳಿ ಹಾಗೂ ಪುನೀತ್​ ಆಪ್ತರಾಗಿದ್ದರು. ಅಪ್ಪು ನಿಧನ ಹೊಂದಿದ ವಿಚಾರ ಶ್ರೀಮುರಳಿಗೆ ಬೇಸರಮೂಡಿಸಿದೆ. ಡಿಸೆಂಬರ್​ 17 ಅವರ ಬರ್ತ್​ಡೇ. ಪುನೀತ್​ ಇಲ್ಲ ಎಂಬ ಕಾರಣಕ್ಕೆ ಶ್ರೀಮುರಳಿ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಡಿಸೆಂಬರ್​ 3ರಂದು ಶ್ರೀಮುರಳಿ ಅಭಿನಯದ ‘ಮದಗಜ’ ಸಿನಿಮಾ ರಿಲೀಸ್​ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ಸಾಕಷ್ಟು ಆ್ಯಕ್ಷನ್ ದೃಶ್ಯಗಳನ್ನು ಹೊಂದಿರುವ ಈ ಚಿತ್ರ ಕೋಟ್ಯಂತರ ರೂಪಾಯಿ ಕಮಾಯಿ ಮಾಡಿದೆ. ಈ ಕಾರಣಕ್ಕೆ ಅವರಿಗೆ ಈ ಬಾರಿಯ ಬರ್ತ್​ಡೇ ವಿಶೇಷವಾಗಬೇಕಿತ್ತು. ಆದರೆ, ಆ ರೀತಿ ಆಗಿಲ್ಲ. ಪುನೀತ್​ ನಿಧನದ ನೋವು ಅವರನ್ನು ಇನ್ನೂ ಕಾಡುತ್ತಿದೆ. ಹೀಗಾಗಿ, ಬರ್ತ್​ಡೇ ಆಚರಣೆ ಮಾಡಿಕೊಳ್ಳದಿರಲು ನಿರ್ಧರಿಸಿದ್ದಾರೆ.

ಶ್ರೀಮುರಳಿ ಬರ್ತ್​ಡೇ ದಿನ ಅವರ ಅಭಿಮಾನಿಗಳು ಮನೆಯ ಮುಂದೆ ಜಮಾಯಿಸುತ್ತಿದ್ದರು. ಕೇಕ್ ಕತ್ತರಿಸಿ ಸಂಭ್ರಮಿಸುತ್ತಿದ್ದರು. ಅವರು ಕೂಡ ಅಭಿಮಾನಿಗಳ ಜತೆಗೂಡಿ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗುತ್ತಿದ್ದರು. ಆದರೆ, ಪುನೀತ್​ ಸಾವಿನಿಂದ ಇಡೀ ಕರ್ನಾಟಕಕ್ಕೆ ಸೂತಕದ ಛಾಯೆ ಆವರಿಸಿದೆ.

‘ನನ್ನ ಪ್ರೀತಿಯ ಅಭಿಮಾನಿಗಳೇ. ಈ ಬಾರಿ ನಿಮ್ಮೊಂದಿಗೆ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಲಾಗುವುದಿಲ್ಲ. ಕಾರಣವೇನೆಂದು ನಿಮಗೆ ಗೊತ್ತಿರುವುದೆಂದು ಭಾವಿಸುವೆ. ನಾನು ಬೆಂಗಳೂರಿನಲ್ಲೂ ಇರುವುದಿಲ್ಲ. ಸದಾ ನಿಮ್ಮ ಪ್ರೀತಿ ಹಾಗು ಆಶೀರ್ವಾದವನ್ನು ಬಯಸುವ ನಿಮ್ಮ, ಶ್ರೀಮುರಳಿ (ಅಭಿಮಾನಿಗಳ ಅಭಿಮಾನಿ)’ ಎಂದು ಶ್ರೀಮುರಳಿ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಮದಗಜ’ ಫಸ್ಟ್​ ಡೇ ಕಲೆಕ್ಷನ್​ ಎಷ್ಟು ಕೋಟಿ? ಶ್ರೀಮುರಳಿ ಚಿತ್ರದ ಬಾಕ್ಸ್​ ಆಫೀಸ್​ ಲೆಕ್ಕ ಇಲ್ಲಿದೆ

ಮುಂದುವರಿದ ‘ಮದಗಜ’ ಆರ್ಭಟ; 2ನೇ ದಿನಕ್ಕೆ ಶ್ರೀಮುರಳಿ ಚಿತ್ರದ ಕಲೆಕ್ಷನ್​ ಎಷ್ಟು?

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು