AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಜನ್ಮದಿನ ಆಚರಿಸಿಕೊಳ್ಳುವುದಿಲ್ಲ, ಕಾರಣ ನಿಮಗೂ ತಿಳಿದಿದೆ’; ಅಭಿಮಾನಿಗಳಿಗೆ ಶ್ರೀಮುರಳಿ ಪತ್ರ

ಡಿಸೆಂಬರ್​ 3ರಂದು ಶ್ರೀಮುರಳಿ ಅಭಿನಯದ ‘ಮದಗಜ’ ಸಿನಿಮಾ ರಿಲೀಸ್​ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ಸಾಕಷ್ಟು ಆ್ಯಕ್ಷನ್ ದೃಶ್ಯಗಳನ್ನು ಹೊಂದಿರುವ ಈ ಚಿತ್ರ ಕೋಟ್ಯಂತರ ರೂಪಾಯಿ ಕಮಾಯಿ ಮಾಡಿದೆ. ಈ ಕಾರಣಕ್ಕೆ ಅವರಿಗೆ ಈ ಬಾರಿಯ ಬರ್ತ್​ಡೇ ವಿಶೇಷವಾಗಬೇಕಿತ್ತು.

‘ನಾನು ಜನ್ಮದಿನ ಆಚರಿಸಿಕೊಳ್ಳುವುದಿಲ್ಲ, ಕಾರಣ ನಿಮಗೂ ತಿಳಿದಿದೆ’; ಅಭಿಮಾನಿಗಳಿಗೆ ಶ್ರೀಮುರಳಿ ಪತ್ರ
ಶ್ರೀಮುರಳಿ
TV9 Web
| Edited By: |

Updated on: Dec 16, 2021 | 5:11 PM

Share

ಪುನೀತ್​ ರಾಜ್​ಕುಮಾರ್​ ಅವರು ಅಕಾಲಿಕ ಮರಣ ಹೊಂದುತ್ತಾರೆ ಎಂದು ಯಾರೆಂದರೆ ಯಾರೂ ಭಾವಿಸಿರಲಿಲ್ಲ. ಅವರ ಆಪ್ತ ವರ್ಗದವರಿಗೆ, ಅಭಿಮಾನಿಗಳಿಗೆ ಈ ಸುದ್ದಿಯನ್ನು ಇನ್ನೂ ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಸಾಕಷ್ಟು ಅಭಿಮಾನಿಗಳು ಪುನೀತ್​ ಸಮಾಧಿಗೆ ತೆರಳಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ.  ಸ್ಯಾಂಡಲ್​ವುಡ್​ನ ಸ್ಟಾರ್​ ನಟ ಶ್ರೀಮುರಳಿ ಹಾಗೂ ಪುನೀತ್​ ಆಪ್ತರಾಗಿದ್ದರು. ಅಪ್ಪು ನಿಧನ ಹೊಂದಿದ ವಿಚಾರ ಶ್ರೀಮುರಳಿಗೆ ಬೇಸರಮೂಡಿಸಿದೆ. ಡಿಸೆಂಬರ್​ 17 ಅವರ ಬರ್ತ್​ಡೇ. ಪುನೀತ್​ ಇಲ್ಲ ಎಂಬ ಕಾರಣಕ್ಕೆ ಶ್ರೀಮುರಳಿ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಡಿಸೆಂಬರ್​ 3ರಂದು ಶ್ರೀಮುರಳಿ ಅಭಿನಯದ ‘ಮದಗಜ’ ಸಿನಿಮಾ ರಿಲೀಸ್​ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ಸಾಕಷ್ಟು ಆ್ಯಕ್ಷನ್ ದೃಶ್ಯಗಳನ್ನು ಹೊಂದಿರುವ ಈ ಚಿತ್ರ ಕೋಟ್ಯಂತರ ರೂಪಾಯಿ ಕಮಾಯಿ ಮಾಡಿದೆ. ಈ ಕಾರಣಕ್ಕೆ ಅವರಿಗೆ ಈ ಬಾರಿಯ ಬರ್ತ್​ಡೇ ವಿಶೇಷವಾಗಬೇಕಿತ್ತು. ಆದರೆ, ಆ ರೀತಿ ಆಗಿಲ್ಲ. ಪುನೀತ್​ ನಿಧನದ ನೋವು ಅವರನ್ನು ಇನ್ನೂ ಕಾಡುತ್ತಿದೆ. ಹೀಗಾಗಿ, ಬರ್ತ್​ಡೇ ಆಚರಣೆ ಮಾಡಿಕೊಳ್ಳದಿರಲು ನಿರ್ಧರಿಸಿದ್ದಾರೆ.

ಶ್ರೀಮುರಳಿ ಬರ್ತ್​ಡೇ ದಿನ ಅವರ ಅಭಿಮಾನಿಗಳು ಮನೆಯ ಮುಂದೆ ಜಮಾಯಿಸುತ್ತಿದ್ದರು. ಕೇಕ್ ಕತ್ತರಿಸಿ ಸಂಭ್ರಮಿಸುತ್ತಿದ್ದರು. ಅವರು ಕೂಡ ಅಭಿಮಾನಿಗಳ ಜತೆಗೂಡಿ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗುತ್ತಿದ್ದರು. ಆದರೆ, ಪುನೀತ್​ ಸಾವಿನಿಂದ ಇಡೀ ಕರ್ನಾಟಕಕ್ಕೆ ಸೂತಕದ ಛಾಯೆ ಆವರಿಸಿದೆ.

‘ನನ್ನ ಪ್ರೀತಿಯ ಅಭಿಮಾನಿಗಳೇ. ಈ ಬಾರಿ ನಿಮ್ಮೊಂದಿಗೆ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಲಾಗುವುದಿಲ್ಲ. ಕಾರಣವೇನೆಂದು ನಿಮಗೆ ಗೊತ್ತಿರುವುದೆಂದು ಭಾವಿಸುವೆ. ನಾನು ಬೆಂಗಳೂರಿನಲ್ಲೂ ಇರುವುದಿಲ್ಲ. ಸದಾ ನಿಮ್ಮ ಪ್ರೀತಿ ಹಾಗು ಆಶೀರ್ವಾದವನ್ನು ಬಯಸುವ ನಿಮ್ಮ, ಶ್ರೀಮುರಳಿ (ಅಭಿಮಾನಿಗಳ ಅಭಿಮಾನಿ)’ ಎಂದು ಶ್ರೀಮುರಳಿ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಮದಗಜ’ ಫಸ್ಟ್​ ಡೇ ಕಲೆಕ್ಷನ್​ ಎಷ್ಟು ಕೋಟಿ? ಶ್ರೀಮುರಳಿ ಚಿತ್ರದ ಬಾಕ್ಸ್​ ಆಫೀಸ್​ ಲೆಕ್ಕ ಇಲ್ಲಿದೆ

ಮುಂದುವರಿದ ‘ಮದಗಜ’ ಆರ್ಭಟ; 2ನೇ ದಿನಕ್ಕೆ ಶ್ರೀಮುರಳಿ ಚಿತ್ರದ ಕಲೆಕ್ಷನ್​ ಎಷ್ಟು?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?