AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರದ ಆರೋಪದಲ್ಲಿ ನಟ ಮಡೆನೂರು ಮನು 2 ದಿನ ಪೊಲೀಸ್ ಕಸ್ಟಡಿಗೆ

ಸಹ-ನಟಿ ಮಾಡಿದ ಆರೋಪದಿಂದ ನಟ ಮಡೆನೂರು ಮನು ಅವರಿಗೆ ಸಂಕಷ್ಟ ಹೆಚ್ಚಾಗಿದೆ. ಅತ್ಯಾಚಾರದ ಕೇಸ್​ನಲ್ಲಿ ಹೆಚ್ಚಿನ ವಿಚಾರಣೆಗಾಗಿ ಮನು ಅವರನ್ನು 2 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ಬಿಡುಗಡೆ ದಿನವೇ ಮನು ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸುವಂತಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಅತ್ಯಾಚಾರದ ಆರೋಪದಲ್ಲಿ ನಟ ಮಡೆನೂರು ಮನು 2 ದಿನ ಪೊಲೀಸ್ ಕಸ್ಟಡಿಗೆ
Madenur Manu
ಮದನ್​ ಕುಮಾರ್​
|

Updated on:May 23, 2025 | 5:29 PM

Share

‘ಕಾಮಿಡಿ ಕಿಲಾಡಿಗಳು’ (Comedy Khiladigalu) ಖ್ಯಾತಿಯ ನಟ ಮಡೆನೂರು ಮನು ಅವರು ಪೊಲೀಸರ ಅತಿಥಿ ಆಗಿದ್ದಾರೆ. ಸಹ ನಟಿಯೊಬ್ಬರು ಅತ್ಯಾಚಾರ ಆರೋಪ ಹೊರಿಸಿದ ಹಿನ್ನೆಲೆಯಲ್ಲಿ ಮನುಗೆ ಸಂಕಷ್ಟ ಎದುರಾಗಿದೆ. ಮೇ 22ರಂದು ಮನು (Madenur Manu) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇಂದು (ಮೇ 23) ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಮಡೆನೂರು ಮನು ಅವರನ್ನು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ (Police Custody) ನೀಡಲಾಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.

‘ನನ್ನ ಮೇಲೆ ಅತ್ಯಾಚಾರ ಆಗಿದೆ. ಮದುವೆ ಆಗುವುದಾಗಿ ನಂಬಿಸಿ ಮನು ಮೋಸ ಮಾಡಿದ್ದಾನೆ. 2 ಬಾರಿ ಗರ್ಭಪಾತ ಆಗಿದೆ. ಬಲವಂತವಾಗಿ ಕುಡಿಸಿ, ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ನನ್ನ ಖಾಸಗಿ ವಿಡಿಯೋ ಮಾಡಿಕೊಂಡಿದ್ದಾನೆ’ ಎಂದು ಸಹ-ನಟಿಯೊಬ್ಬರು ಮಡೆನೂರು ಮನು ಮೇಲೆ ಆರೋಪಗಳ ಮಳೆ ಸುರಿಸಿದ್ದಾರೆ. ಈ ಕೇಸ್​ನಲ್ಲಿ ಮನು ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

ಇದನ್ನೂ ಓದಿ: ‘ನನ್ನ ಗಂಡನ ಪರ ನಿಲ್ಲುತ್ತೇನೆ, ನ್ಯಾಯ ಸಿಗುವವರೆಗೆ ಹೋರಾಡುತ್ತೇನೆ’; ಆರೋಪಿ ಮಡೆನೂರು ಮನು ಪತ್ನಿಯ ದೃಢ ನಿಲುವು

ಇದನ್ನೂ ಓದಿ
Image
ಎರಡು ಬಾರಿ ಪ್ರೆಗ್ನೆಂಟ್ ಆಗಿದ್ದೆ; ‘ಕಾಮಿಡಿ ಕಿಲಾಡಿ’ ಕಲಾವಿದರ ಜಗಳ ಬೀದಿಗೆ
Image
ಕನ್ನಡ ಕಿರುತೆರೆ ನಟಿಯ ಮೇಲೆ ಅತ್ಯಾಚಾರ; ನಟ ಮಡೆನೂರು ಮನು ವಿರುದ್ಧ FIR
Image
ಮೇ 23ಕ್ಕೆ ಕುಲದಲ್ಲಿ ಕೀಳ್ಯಾವುದೋ ರಿಲೀಸ್; ಕಾಮಿಡಿ ಕಿಲಾಡಿ ನಟನ ಹೊಸ ಜರ್ನಿ
Image
‘ಕುಲದಲ್ಲಿ ಕೀಳ್ಯಾವುದೋ’ ಟೈಟಲ್ ಸಿಕ್ಕಿದ್ದು ಅಣ್ಣಾವ್ರ ಆಶೀರ್ವಾದ: ಮಡೆನೂರು

ಮಡೆನೂರು ಮನು ಅವರು ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಇಂದು (ಮೇ 23) ಆ ಸಿನಿಮಾ ಬಿಡುಗಡೆ ಆಗಿದೆ. ಆದರೆ ಅತ್ಯಾಚಾರದ ಕೇಸ್​ನಲ್ಲಿ ಮನು ಪೊಲೀಸ್ ಠಾಣೆಯಲ್ಲಿ ಕಾಲ ಕಳೆಯುವಂತಾಗಿದೆ. ಈ ಕೇಸ್​ನಲ್ಲಿ ಹಲವರ ಹೆಸರುಗಳು ಪ್ರಸ್ತಾಪ ಆಗುತ್ತಿವೆ. ಸಿನಿಮಾ ಬಿಡುಗಡೆಗೆ ಒಂದು ದಿನ ಇರುವಾಗ ನಟಿ ಆರೋಪ ಮಾಡಿದ್ದರಿಂದ ಕೆಲವು ಅನುಮಾನಗಳು ಮೂಡಿವೆ.

ಮನು ಪರವಾಗಿ ಅವರ ಪತ್ನಿ ಬೆಂಬಲಕ್ಕೆ ನಿಂತಿದ್ದಾರೆ. ‘ಕುಲದಲ್ಲಿ ಕೀಳ್ಯಾವುದೋ ಸಿನಿಮಾಗಾಗಿ ನನ್ನ ಗಂಡ ತುಂಬ ಕಷ್ಟಪಟ್ಟಿದ್ದಾರೆ. ಈಗ ಸಿನಿಮಾ ಬಿಡುಗಡೆ ದಿನವೇ ಕೇಸ್ ಮಾಡಿರುವುದು ಷಡ್ಯಂತ್ರ. ನನ್ನ ಗಂಡ ತಪ್ಪು ಮಾಡಿಲ್ಲ. ಅದನ್ನು ನಾನು ಸಾಕ್ಷಿ ಸಮೇತ ಸಾಬೀತು ಮಾಡುತ್ತೇವೆ. ನನ್ನ ಗಂಡನನ್ನು ನಾನು ಬಿಟ್ಟುಕೊಡಲ್ಲ. ನನ್ನ ಗಂಡನನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ’ ಎಂದು ಮನು ಪತ್ನಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:23 pm, Fri, 23 May 25

Follow Us
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು