AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಿವಣ್ಣ-ದರ್ಶನ್​ ಸರ್​ಗೆ ಕ್ಷಮೆ ಕೇಳು’; ಸಾರಿ ಕೇಳಿದ ಮಡೆನೂರು ಮನುಗೆ ಧ್ರುವ ಸರ್ಜ ಕಿವಿಮಾತು  

Madenuru Manu: ಮಡೆನೂರು ಮನು ಅವರನ್ನು ಅತ್ಯಾಚಾರದ ಆರೋಪದ ಅಡಿ ಬಂಧಿಸಲಾಯಿತು. ಸ್ಟಾರ್ ನಟರ ವಿರುದ್ಧ ಮಾಡಿದ ಅವರ ವಿವಾದಾತ್ಮಕ ಹೇಳಿಕೆಗಳ ಆಡಿಯೋ ವೈರಲ್ ಆಗಿತ್ತು. ಪರಿಣಾಮವಾಗಿ ಚಿತ್ರರಂಗದಿಂದ ಅವರನ್ನು ನಿಷೇಧಿಸಲಾಯಿತು. ಆದರೆ, ಧ್ರುವ ಸರ್ಜಾ ಅವರಿಗೆ ಕ್ಷಮೆಯಾಚಿಸಿ, ಅವಕಾಶ ಕೋರಿದ್ದಾರೆ.

‘ಶಿವಣ್ಣ-ದರ್ಶನ್​ ಸರ್​ಗೆ ಕ್ಷಮೆ ಕೇಳು’; ಸಾರಿ ಕೇಳಿದ ಮಡೆನೂರು ಮನುಗೆ ಧ್ರುವ ಸರ್ಜ ಕಿವಿಮಾತು  
ಧ್ರುವ-ಮನು-ದರ್ಶನ್
ರಾಜೇಶ್ ದುಗ್ಗುಮನೆ
|

Updated on:Jun 14, 2025 | 1:17 PM

Share

ಮಡೆನೂರು ಮನು (Madenuru Manu) ಅವರು ಇತ್ತೀಚೆಗೆ ಬೇಡದ ಕಾರಣಗಳಿಂದ ಸುದ್ದಿ ಆಗುತ್ತಿದ್ದಾರೆ. ಅವರ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂತು. ಹೀಗಾಗಿ ಅವರನ್ನು ಬಂಧಿಸಿ ಜೈಲಿಗೆ ಹಾಕಲಾಯಿತು. ಈ ಮೊದಲು ಅವರು ಸ್ಟಾರ್ ಹೀರೋಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ಆಡಿಯೋನ ಈ ಸಂದರ್ಭದಲ್ಲಿ ವೈರಲ್ ಮಾಡಲಾಯಿತು. ಈ ಬೆನ್ನಲ್ಲೇ ಸಾಕಷ್ಟು ವಿರೋಧ ಕೇಳಿ ಬಂದಿತ್ತು. ಅಲ್ಲದೆ ಅವರ ವಿರುದ್ಧ ಅಸಹಕಾರ ತೋರಿಸುವ ನಿರ್ಧಾರವನ್ನು ಫಿಲ್ಮ್​ ಚೇಂಬರ್​ನಲ್ಲಿ ತೆಗೆದುಕೊಳ್ಳಲಾಯಿತು. ಈಗ ಮನು ಅದು ತಮ್ಮದೇ ಆಡಿಯೋ ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಧ್ರುವ ಸರ್ಜಾಗೆ ಕ್ಷಮೆ ಕೇಳಿದ್ದಾರೆ.

ಧ್ರುವ ಸರ್ಜಾ ಜೊತೆ ವಾಟ್ಸಾಪ್​​ನಲ್ಲಿ ಮಡೆನೂರು ಮನು ಚಾಟ್ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ಧ್ರುವ ಅವರಿಗೆ ಆಡಿಯೋ ಸಂದೇಶ ಕಳುಹಿಸಿದ್ದಾರೆ. ‘ನನ್ನ ಕರಿಯರ್ ಮೇಲೆ ಆಣೆ ಮಾಡಿ ಹೇಳುತ್ತೇನೆ. ಉದ್ದೇಶ ಪೂರ್ವಕವಾಗಿ ನಾನು ಹಾಗೆ ಮಾತನಾಡಿಲ್ಲ. ನನ್ನಿಂದ ತಪ್ಪು ಮಾಡಿಸಿದ್ದಾರೆ. ಒಳ್ಳೆಯ ಸಿನಿಮಾನ ಕೊಂದುಬಿಟ್ಟರು. ಕಲೆ ನಂಬಿ ಬಂದಿದ್ದೇನೆ. ಇಂಡಸ್ಟ್ರಿಯಿಂದ ಬ್ಯಾನ್ ಎಂದು ಹೇಳುತ್ತಿದ್ದಾರೆ. ಒಂದು ಅವಕಾಶ ಕೊಡಿ ಧ್ರುವ ಅಣ್ಣ’ ಎಂದು ಮಡೆನೂರು ಮನು ಕೋರಿದ್ದಾರೆ.

‘ನಾನು ಬದಲಾಗ್ತೀನಿ. ಬದಲಾಗಲು ಅವಕಾಶ ಮಾಡಿಕೊಡಿ. ಜೈಲಿನಿಂದ ಹೊರ ಬಂದ ಬಳಿಕ ಖಿನ್ನೆತೆಗೆ ಒಳಗಾಗಿದ್ದೆ. ನೀವು ಎಲ್ಲಿ ಸಿಕ್ಕರೂ ಬಂದು ಕ್ಷಮೆ ಕೇಳುತ್ತೇನೆ. ಆಶೀರ್ವಾದ ಪಡೆದುಕೊಳ್ಳುತ್ತೇನೆ’ ಎಂದು ಕೂಡ ಮಡೆನೂರು ಮನು ಹೇಳಿದ್ದಾರೆ.

ಇದನ್ನೂ ಓದಿ
Image
ಸಲ್ಮಾನ್ ಖಾನ್​ ವೃತ್ತಿ ಜೀವನದ ಅತಿ ಕೆಟ್ಟ ಚಿತ್ರಗಳಿವು..
Image
ದಾಖಲೆ ಬೆಲೆಗೆ ‘ಘಾಟಿ’ ಚಿತ್ರದ ಹಕ್ಕು ಮಾರಾಟ
Image
‘ಸರಿಗಮಪ’ ಗೆಲುವಿನ ಬಳಿಕೆ ಮರೆಯದೇ ಪುನೀತ್ ಸಮಾಧಿಗೆ ಭೇಟಿ ನೀಡಿದ ಶಿವಾನಿ
Image
ನಿಶಾ ರವಿಕೃಷ್ಣನ್​ಗೆ ತೆಲುಗು ಕಿರುತೆರೆಯಲ್ಲಿ ಎದುರಾದ ಕಷ್ಟಗಳು ಒಂದೆರಡಲ್ಲ

ಮನು ಕ್ಷಮೆಗೆ ಸ್ಪಂದಿಸಿದ ಧ್ರುವ ಸರ್ಜಾ

ಧ್ರುವ ಸರ್ಜಾ ಅವರು ಹೃದಯವಂತರು. ಯಾರಾದರೂ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದರೂ ಅವರಿಗೆ ಒಳ್ಳೆಯದನ್ನೇ ಬಯಸುತ್ತಾರೆ. ಇದಕ್ಕೆ ಮಡೆನೂರು ಮನು ಪ್ರಕರಣ ಹೊಸ ಸಾಕ್ಷಿ. ‘ನನ್ನ ಬಗ್ಗೆ ಯೋಚಿಸಬೇಡ. ಕುಟುಂಬ, ಮಕ್ಕಳ ಬಗ್ಗೆ ಕಾಳಜಿವಹಿಸು. ಶಿವಣ್ಣ ಹಾಗು ದರ್ಶನ್ ಸರ್​ಗೆ ಕರೆ ಮಾಡಿ ಮಾತನಾಡು. ಅವರುಗಳು ನಮ್ಮ ಸೀನಿಯರ್ಸ್’ ಎಂದು ಕಿವಿಮಾತು ಹೇಳಿದ್ದಾರೆ. ಈ ಮೂಲಕ ಧ್ರುವ ಕೂಡ ಅವರನ್ನು ಕ್ಷಮಿಸಿದ್ದಾಗಿ ಪರೋಕ್ಷವಾಗಿ ಹೇಳಿದ್ದಾರೆ.

ಇದನ್ನೂ ಓದಿ: ‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮಡೆನೂರು ಮನು ಮೊದಲ ರಿಯಾಕ್ಷನ್

ಸದ್ಯ ಧ್ರುವ ಅವರ ನಡೆಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ತಮಗೆ ಕೆಟ್ಟದನ್ನು ಬಯಸಿದರೂ ಧ್ರುವ ಅವರು ಒಳ್ಳೆಯದನ್ನೇ ಮಾಡುತ್ತಾರಲ್ಲ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:16 pm, Sat, 14 June 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!