AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Murali: ‘ಮದಗಜ’ ಫೈಟಿಂಗ್​ ವೇಳೆ ಗಾಯಗೊಂಡ ಶ್ರೀಮುರಳಿ! ರೋರಿಂಗ್​ ಸ್ಟಾರ್​ ಅಭಿಮಾನಿಗಳಿಗೆ ಬ್ಯಾಡ್​ ನ್ಯೂಸ್​

Madhagaja: ಸಾಹಸ ಸನ್ನಿವೇಶದ ಶೂಟಿಂಗ್​ನಲ್ಲಿ ಶ್ರೀಮುರಳಿ ಕಾಲಿಗೆ ಗಾಯವಾಗಿದೆ. ಅವರು 15 ದಿನಗಳ ಕಾಲ ಬೆಡ್​ ರೆಸ್ಟ್​ ತೆಗೆದುಕೊಳ್ಳಬೇಕಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ.

Sri Murali: ‘ಮದಗಜ’ ಫೈಟಿಂಗ್​ ವೇಳೆ ಗಾಯಗೊಂಡ ಶ್ರೀಮುರಳಿ! ರೋರಿಂಗ್​ ಸ್ಟಾರ್​ ಅಭಿಮಾನಿಗಳಿಗೆ ಬ್ಯಾಡ್​ ನ್ಯೂಸ್​
ಶ್ರೀಮುರಳಿ
ಮದನ್​ ಕುಮಾರ್​
| Edited By: |

Updated on: Apr 07, 2021 | 2:03 PM

Share

ನಟ ಶ್ರೀಮುರಳಿ ಅಭಿನಯಿಸುತ್ತಿರುವ ‘ಮದಗಜ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆ ನಿರೀಕ್ಷೆಗೆ ತಕ್ಕಂತೆಯೇ ಸಿನಿಮಾವನ್ನು ಕಟ್ಟಿಕೊಡುತ್ತಿದ್ದಾರೆ ನಿರ್ದೇಶಕ ಮಹೇಶ್​. ಸದ್ಯ ಈ ಚಿತ್ರಕ್ಕೆ ಬಿರುಸಿನ ಶೂಟಿಂಗ್​ ನಡೆಯುತ್ತಿತ್ತು. ಆದರೆ ಒಂದು ಕಹಿ ಘಟನೆ ನಡೆದಿದೆ. ಸಾಹಸ ದೃಶ್ಯದ ಚಿತ್ರೀಕರಣದ ಸಂದರ್ಭದಲ್ಲಿ ನಟ ಶ್ರೀಮುರಳಿ ಅವರಿಗೆ ಗಾಯವಾಗಿದೆ. ಪರಿಣಾಮವಾಗಿ ಶೂಟಿಂಗ್​ ಸ್ಥಗಿತಗೊಳಿಸಬೇಕಾದ ಪರಿಸ್ಥಿತಿ ಎದುರಾಗಿದೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಮದಗಜ’ ಸಿನಿಮಾದ ಫೈಟಿಂಗ್​ ದೃಶ್ಯಗಳನ್ನು ಚಿತ್ರಿಸಲಾಗುತ್ತಿತ್ತು. ಸತತ 5 ದಿನಗಳ ಕಾಲ ಚಿತ್ರೀಕರಣ ನಡೆಸಲು ನಿರ್ದೇಶಕ ಮಹೇಶ್​ ಪ್ಲ್ಯಾನ್​ ಮಾಡಿಕೊಂಡಿದ್ದರು. ಎಲ್ಲವೂ ಸರಾಗವಾಗಿ ನಡೆಯುತ್ತಿತ್ತು. ಆದರೆ ಒಂದು ಸನ್ನಿವೇಶದ ಶೂಟಿಂಗ್​ನಲ್ಲಿ ಶ್ರೀಮುರಳಿ ಕಾಲಿಗೆ ಗಾಯವಾಗಿದೆ. ಎಷ್ಟರಮಟ್ಟಿಗೆಂದರೆ ಅವರು 15 ದಿನಗಳ ಕಾಲ ಬೆಡ್​ ರೆಸ್ಟ್​ ತೆಗೆದುಕೊಳ್ಳಬೇಕಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ.

‘ಭರಾಟೆ’ ಸಿನಿಮಾದ ಬಳಿಕ ಶ್ರೀಮರಳಿ ನಟಿಸುತ್ತಿರುವ ‘ಮದಗಜ’ ಚಿತ್ರ ಕೂಡ ಪಕ್ಕಾ ಮಾಸ್​ ಶೈಲಿಯಲ್ಲಿ ಮೂಡಿಬರುತ್ತಿದೆ. ‘ಅಯೋಗ್ಯ’ ಚಿತ್ರ ನಿರ್ದೇಶಿಸಿ ಯಶಸ್ಸು ಕಂಡ ಮಹೇಶ್​ ಈಗ ‘ಮದಗಜ’ಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್ ಭಾರಿ ನಿರೀಕ್ಷೆ ಮೂಡಿಸಿದೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳು ಈ ಚಿತ್ರದಲ್ಲಿ ಇರಲಿವೆ. ಬಹಳ ದಿನಗಳ ಹಿಂದೆಯೇ ಈ ಸಿನಿಮಾ ಸೆಟ್ಟೇರಿತ್ತು. ಆದರೆ ಕೊರೊನಾ ಲಾಕ್​ಡೌನ್​ ಕಾರಣದಿಂದಾಗಿ ಚಿತ್ರದ ಕೆಲಸಗಳು ತಡವಾಗಿದ್ದವು. ಈಗ ಶ್ರೀಮರಳಿ ಗಾಯ ಮಾಡಿಕೊಂಡಿರುವುದರಿಂದ ಶೂಟಿಂಗ್​ ಇನ್ನಷ್ಟು ವಿಳಂಬ ಆಗಲಿದೆ.

ಈ ಸಿನಿಮಾದಲ್ಲಿ ಶ್ರೀಮರಳಿಗೆ ನಾಯಕಿಯಾಗಿ ಆಶಿಕಾ ರಂಗನಾಥ್​ ಅಭಿನಯಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಟ ಜಗಪತಿ ಬಾಬು ಕೂಡ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಮುಂತಾದ ಭಾಷೆಗಳಲ್ಲೂ ಮದಗಜ ಮೂಡಿಬರುತ್ತಿದೆ. ‘ರಾಬರ್ಟ್​’ ಸಿನಿಮಾ ಮೂಲಕ ಭಾರಿ ಯಶಸ್ಸು ಕಂಡಿರುವ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಅವರು ‘ಮದಗಜ’ಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಇತ್ತೀಚಿಗಷ್ಟೇ ಈ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ‘ರಾಬರ್ಟ್​’ ಚಿತ್ರದ 25ನೇ ದಿನದ ಸಂಭ್ರಮವನ್ನು ಆಚರಿಸಲಾಯಿತು.

ಇದನ್ನೂ ಓದಿ: ‘ಮದಗಜ’ ನಿರ್ದೇಶಕ ಮಹೇಶ್​ಗೆ ರಾಬರ್ಟ್​ ನಿರ್ಮಾಪಕ ಉಮಾಪತಿಯಿಂದ ದುಬಾರಿ ಕಾರ್ ಗಿಫ್ಟ್​!

(Madhagaja actor Sri Murali injured during action sequence shooting)

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್