AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Murali: ‘ಮದಗಜ’ ಫೈಟಿಂಗ್​ ವೇಳೆ ಗಾಯಗೊಂಡ ಶ್ರೀಮುರಳಿ! ರೋರಿಂಗ್​ ಸ್ಟಾರ್​ ಅಭಿಮಾನಿಗಳಿಗೆ ಬ್ಯಾಡ್​ ನ್ಯೂಸ್​

Madhagaja: ಸಾಹಸ ಸನ್ನಿವೇಶದ ಶೂಟಿಂಗ್​ನಲ್ಲಿ ಶ್ರೀಮುರಳಿ ಕಾಲಿಗೆ ಗಾಯವಾಗಿದೆ. ಅವರು 15 ದಿನಗಳ ಕಾಲ ಬೆಡ್​ ರೆಸ್ಟ್​ ತೆಗೆದುಕೊಳ್ಳಬೇಕಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ.

Sri Murali: ‘ಮದಗಜ’ ಫೈಟಿಂಗ್​ ವೇಳೆ ಗಾಯಗೊಂಡ ಶ್ರೀಮುರಳಿ! ರೋರಿಂಗ್​ ಸ್ಟಾರ್​ ಅಭಿಮಾನಿಗಳಿಗೆ ಬ್ಯಾಡ್​ ನ್ಯೂಸ್​
ಶ್ರೀಮುರಳಿ
ಮದನ್​ ಕುಮಾರ್​
| Edited By: |

Updated on: Apr 07, 2021 | 2:03 PM

Share

ನಟ ಶ್ರೀಮುರಳಿ ಅಭಿನಯಿಸುತ್ತಿರುವ ‘ಮದಗಜ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆ ನಿರೀಕ್ಷೆಗೆ ತಕ್ಕಂತೆಯೇ ಸಿನಿಮಾವನ್ನು ಕಟ್ಟಿಕೊಡುತ್ತಿದ್ದಾರೆ ನಿರ್ದೇಶಕ ಮಹೇಶ್​. ಸದ್ಯ ಈ ಚಿತ್ರಕ್ಕೆ ಬಿರುಸಿನ ಶೂಟಿಂಗ್​ ನಡೆಯುತ್ತಿತ್ತು. ಆದರೆ ಒಂದು ಕಹಿ ಘಟನೆ ನಡೆದಿದೆ. ಸಾಹಸ ದೃಶ್ಯದ ಚಿತ್ರೀಕರಣದ ಸಂದರ್ಭದಲ್ಲಿ ನಟ ಶ್ರೀಮುರಳಿ ಅವರಿಗೆ ಗಾಯವಾಗಿದೆ. ಪರಿಣಾಮವಾಗಿ ಶೂಟಿಂಗ್​ ಸ್ಥಗಿತಗೊಳಿಸಬೇಕಾದ ಪರಿಸ್ಥಿತಿ ಎದುರಾಗಿದೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಮದಗಜ’ ಸಿನಿಮಾದ ಫೈಟಿಂಗ್​ ದೃಶ್ಯಗಳನ್ನು ಚಿತ್ರಿಸಲಾಗುತ್ತಿತ್ತು. ಸತತ 5 ದಿನಗಳ ಕಾಲ ಚಿತ್ರೀಕರಣ ನಡೆಸಲು ನಿರ್ದೇಶಕ ಮಹೇಶ್​ ಪ್ಲ್ಯಾನ್​ ಮಾಡಿಕೊಂಡಿದ್ದರು. ಎಲ್ಲವೂ ಸರಾಗವಾಗಿ ನಡೆಯುತ್ತಿತ್ತು. ಆದರೆ ಒಂದು ಸನ್ನಿವೇಶದ ಶೂಟಿಂಗ್​ನಲ್ಲಿ ಶ್ರೀಮುರಳಿ ಕಾಲಿಗೆ ಗಾಯವಾಗಿದೆ. ಎಷ್ಟರಮಟ್ಟಿಗೆಂದರೆ ಅವರು 15 ದಿನಗಳ ಕಾಲ ಬೆಡ್​ ರೆಸ್ಟ್​ ತೆಗೆದುಕೊಳ್ಳಬೇಕಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ.

‘ಭರಾಟೆ’ ಸಿನಿಮಾದ ಬಳಿಕ ಶ್ರೀಮರಳಿ ನಟಿಸುತ್ತಿರುವ ‘ಮದಗಜ’ ಚಿತ್ರ ಕೂಡ ಪಕ್ಕಾ ಮಾಸ್​ ಶೈಲಿಯಲ್ಲಿ ಮೂಡಿಬರುತ್ತಿದೆ. ‘ಅಯೋಗ್ಯ’ ಚಿತ್ರ ನಿರ್ದೇಶಿಸಿ ಯಶಸ್ಸು ಕಂಡ ಮಹೇಶ್​ ಈಗ ‘ಮದಗಜ’ಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್ ಭಾರಿ ನಿರೀಕ್ಷೆ ಮೂಡಿಸಿದೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳು ಈ ಚಿತ್ರದಲ್ಲಿ ಇರಲಿವೆ. ಬಹಳ ದಿನಗಳ ಹಿಂದೆಯೇ ಈ ಸಿನಿಮಾ ಸೆಟ್ಟೇರಿತ್ತು. ಆದರೆ ಕೊರೊನಾ ಲಾಕ್​ಡೌನ್​ ಕಾರಣದಿಂದಾಗಿ ಚಿತ್ರದ ಕೆಲಸಗಳು ತಡವಾಗಿದ್ದವು. ಈಗ ಶ್ರೀಮರಳಿ ಗಾಯ ಮಾಡಿಕೊಂಡಿರುವುದರಿಂದ ಶೂಟಿಂಗ್​ ಇನ್ನಷ್ಟು ವಿಳಂಬ ಆಗಲಿದೆ.

ಈ ಸಿನಿಮಾದಲ್ಲಿ ಶ್ರೀಮರಳಿಗೆ ನಾಯಕಿಯಾಗಿ ಆಶಿಕಾ ರಂಗನಾಥ್​ ಅಭಿನಯಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಟ ಜಗಪತಿ ಬಾಬು ಕೂಡ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಮುಂತಾದ ಭಾಷೆಗಳಲ್ಲೂ ಮದಗಜ ಮೂಡಿಬರುತ್ತಿದೆ. ‘ರಾಬರ್ಟ್​’ ಸಿನಿಮಾ ಮೂಲಕ ಭಾರಿ ಯಶಸ್ಸು ಕಂಡಿರುವ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಅವರು ‘ಮದಗಜ’ಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಇತ್ತೀಚಿಗಷ್ಟೇ ಈ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ‘ರಾಬರ್ಟ್​’ ಚಿತ್ರದ 25ನೇ ದಿನದ ಸಂಭ್ರಮವನ್ನು ಆಚರಿಸಲಾಯಿತು.

ಇದನ್ನೂ ಓದಿ: ‘ಮದಗಜ’ ನಿರ್ದೇಶಕ ಮಹೇಶ್​ಗೆ ರಾಬರ್ಟ್​ ನಿರ್ಮಾಪಕ ಉಮಾಪತಿಯಿಂದ ದುಬಾರಿ ಕಾರ್ ಗಿಫ್ಟ್​!

(Madhagaja actor Sri Murali injured during action sequence shooting)

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ