AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದಗಜ’ ಫಸ್ಟ್​ ಡೇ ಕಲೆಕ್ಷನ್​ ಎಷ್ಟು ಕೋಟಿ? ಶ್ರೀಮುರಳಿ ಚಿತ್ರದ ಬಾಕ್ಸ್​ ಆಫೀಸ್​ ಲೆಕ್ಕ ಇಲ್ಲಿದೆ

Madhagaja Box Office Collection: ‘ಮದಗಜ’ ಚಿತ್ರಕ್ಕೆ ಗ್ರ್ಯಾಂಡ್​ ಓಪನಿಂಗ್​ ಸಿಕ್ಕಿದ್ದು, 900ಕ್ಕೂ ಹೆಚ್ಚು ಸ್ಕ್ರೀನ್​ಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಶ್ರೀಮುರಳಿ ನಟನೆಯ ಈ ಚಿತ್ರಕ್ಕೆ ಮೊದಲ ದಿನವೇ ಭರ್ಜರಿ ಕಲೆಕ್ಷನ್​ ಆಗಿದೆ.

‘ಮದಗಜ’ ಫಸ್ಟ್​ ಡೇ ಕಲೆಕ್ಷನ್​ ಎಷ್ಟು ಕೋಟಿ? ಶ್ರೀಮುರಳಿ ಚಿತ್ರದ ಬಾಕ್ಸ್​ ಆಫೀಸ್​ ಲೆಕ್ಕ ಇಲ್ಲಿದೆ
‘ಮದಗಜ’ ಚಿತ್ರದಲ್ಲಿ ಶ್ರೀಮುರಳಿ
TV9 Web
| Edited By: |

Updated on:Dec 04, 2021 | 11:18 AM

Share

ಶ್ರೀಮುರಳಿ (Sri Murali) , ಆಶಿಕಾ ರಂಗನಾಥ್​, ಗರುಡ ರಾಮ್, ಜಗಪತಿ ಬಾಬು ಮುಖ್ಯಭೂಮಿಕೆ ನಿಭಾಯಿಸಿರುವ ‘ಮದಗಜ’ ಚಿತ್ರ (Madhagaja Movie) ಭರ್ಜರಿ ಓಪನಿಂಗ್​ ಪಡೆದುಕೊಂಡಿದೆ. ಡಿ.3ರಂದು ಈ ಸಿನಿಮಾ ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಕಂಡಿತು. ಬಹುತೇಕ ಕಡೆಗಳಲ್ಲಿ ಹೌಸ್​ ಫುಲ್ ಪ್ರದರ್ಶನ ಕಂಡಿದೆ. ಆ ಕಾರಣದಿಂದ ಚಿತ್ರಕ್ಕೆ ಮೊದಲ ದಿನ ಒಳ್ಳೆಯ ಕಲೆಕ್ಷನ್​ ಆಗಿದೆ. ಹಾಗಾದರೆ ಫಸ್ಟ್​ ಡೇ ‘ಮದಗಜ’ ಗಳಿಸಿದ್ದು ಎಷ್ಟು? ಆ ಪ್ರಶ್ನೆಗೆ ಚಿತ್ರತಂಡದಿಂದಲೇ ಅಧಿಕೃತ ಉತ್ತರ ಸಿಕ್ಕಿದೆ. ಮೊದಲ ದಿನ ಬರೋಬ್ಬರಿ 7.86 ಕೋಟಿ ರೂಪಾಯಿ (Madhagaja first day Collection) ಕಲೆಕ್ಷನ್​ ಆಗಿದೆ. ನಿರ್ದೇಶಕ ಮಹೇಶ್​ ಕುಮಾರ್​ ಮತ್ತು ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಅವರ ಮೊಗದಲ್ಲಿ ಈ ಗೆಲುವಿನಿಂದಾಗಿ ನಗು ಮೂಡಿದೆ.

‘ಮದಗಜ’ ಚಿತ್ರಕ್ಕೆ ಗ್ರ್ಯಾಂಡ್​ ಓಪನಿಂಗ್​ ಸಿಕ್ಕಿದ್ದು, 900ಕ್ಕೂ ಹೆಚ್ಚು ಸ್ಕ್ರೀನ್​ಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಶಿವರಾಜ್​ ಕೆ.ಆರ್​.ಪೇಟೆ, ಚಿಕ್ಕಣ್ಣ, ಧರ್ಮಣ್ಣ ಮುಂತಾದ ಹಾಸ್ಯ ಕಲಾವಿದರು ಕೂಡ ಭರ್ಜರಿ ಮನರಂಜನೆ ನೀಡುತ್ತಿದ್ದಾರೆ. ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದಾರೆ. ಹಿನ್ನೆಲೆ ಸಂಗೀತ ಮತ್ತು ಹಾಡುಗಳು ಗಮನ ಸೆಳೆಯುತ್ತಿವೆ. ಈ ಎಲ್ಲ ಕಾರಣಗಳಿಗಾಗಿ ಚಿತ್ರವನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

ಉಮಾಪತಿ ಶ್ರೀನಿವಾಸ್​ ಗೌಡ ಅವರು ಗಾಂಧಿನಗರದಲ್ಲಿ ಅದ್ದೂರಿ ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದಾರೆ. ‘ರಾಬರ್ಟ್​’ ಸಿನಿಮಾ ನಿರ್ಮಿಸಿ ಭರ್ಜರಿ ಯಶಸ್ಸು ಕಂಡ ಅವರು ಈಗ ‘ಮದಗಜ’ ಚಿತ್ರವನ್ನೂ ಶ್ರೀಮಂತವಾಗಿ ನಿರ್ಮಿಸಿದ್ದಾರೆ. ಬೃಹತ್​ ಸೆಟ್​ಗಳಲ್ಲಿ ಈ ಸಿನಿಮಾ ಚಿತ್ರೀಕರಣಗೊಂಡಿದೆ. ತಾಂತ್ರಿಕ ಗುಣಮಟ್ಟಕ್ಕೆ ಹೆಚ್ಚು ಒತ್ತು ನೀಡಿದ್ದಾರೆ.

ಈ ಹಿಂದೆ ನಿರ್ದೇಶಕ ಮಹೇಶ್​ ಕುಮಾರ್ ಅವರು ‘ಅಯೋಗ್ಯ’ ಸಿನಿಮಾ ಮಾಡಿದ್ದರು. ಕಾಮಿಡಿ ಪ್ರಕಾರದಲ್ಲಿ ಆ ಚಿತ್ರವನ್ನು ತೆರೆಗೆ ತಂದಿದ್ದ ಅವರು ಇಂದು ‘ಮದಗಜ’ ಸಿನಿಮಾವನ್ನು ಪಕ್ಕಾ ಆ್ಯಕ್ಷನ್​ ಶೈಲಿಯಲ್ಲಿ ಕಟ್ಟಿಕೊಟ್ಟಿದ್ದಾರೆ. ಈ ಮೂಲಕ ತಮ್ಮ ಸಾಮರ್ಥ್ಯ ಏನು ಎಂಬುದನ್ನು ತೋರಿಸುವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ:

ಮಾಸ್​ ಮದಗಜ: ವಿಶೇಷ ಸಂದರ್ಶನದಲ್ಲಿ ಶ್ರೀಮುರಳಿ, ಆಶಿಕಾ, ಗರುಡ ರಾಮ್​ ಮಸ್ತ್ ಮಾತುಕತೆ

Madhagaja Movie Review: ವಾರಾಣಸಿಯಿಂದ ಕರುನಾಡಿನವರೆಗೆ ನಿರೀಕ್ಷಿತ ಹಾದಿಯಲ್ಲಿ ‘ಮದಗಜ’ ಮಾಸ್ ಪಯಣ

Published On - 9:41 am, Sat, 4 December 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು