AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರುಕ್ಮಿಣಿ ವಸಂತ್ ಎಷ್ಟು ಚೆನ್ನಾಗಿ ಹಾಡು ಹೇಳ್ತಾರೆ ನೋಡಿ; ನೀವು ಫಿದಾ ಆಗೋದು ಪಕ್ಕಾ

Rukmini Vasanth Singing Video: ರುಕ್ಮಿಣಿ ವಸಂತ್ ಅವರು ಕನ್ನಡ ಚಲನಚಿತ್ರರಂಗದಲ್ಲಿ ಯಶಸ್ವಿ ನಟಿಯಾಗಿದ್ದಾರೆ. ‘ಮದರಾಸಿ’ ಚಿತ್ರದಲ್ಲಿ ಅವರು ನಟಿಸುತ್ತಾ ಇದ್ದಾರೆ. ಅವರು ಓರ್ವ ಗಾಯಕಿಯೂ ಹೌದು. ಇತ್ತೀಚೆಗೆ ಅವರ ಹಾಡುಗಳು ವೈರಲ್ ಆಗುತ್ತಿವೆ, ಅವರ ಗಾಯನ ಪ್ರತಿಭೆಯನ್ನು ಬಹಿರಂಗಪಡಿಸುತ್ತಿವೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ರುಕ್ಮಿಣಿ ವಸಂತ್ ಎಷ್ಟು ಚೆನ್ನಾಗಿ ಹಾಡು ಹೇಳ್ತಾರೆ ನೋಡಿ; ನೀವು ಫಿದಾ ಆಗೋದು ಪಕ್ಕಾ
ರುಕ್ಮಿಣಿ
ರಾಜೇಶ್ ದುಗ್ಗುಮನೆ
|

Updated on: Aug 30, 2025 | 12:02 PM

Share

ನಟಿ ರುಕ್ಮಿಣಿ ವಸಂತ್ (Rukmini Vasanth) ಒಳ್ಳೆಯ ನಟಿ ಅನ್ನೋದು ಎಲ್ಲರಿಗೂ ಗೊತ್ತು. ಅವರು ನಟನೆಯ ಮೂಲಕ ತಮ್ಮನ್ನು ತಾವು ಸಾಬೀತು ಮಾಡಿಕೊಂಡಿದ್ದಾರೆ. ಆದರೆ, ಅವರು ಒಳ್ಳೆಯ ಸಿಂಗರ್ ಅನ್ನೋ ವಿಚಾರ ನಿಮಗೆ ಗೊತ್ತೇ? ಈ ವಿಷಯ ಅನೇಕರಿಗೆ ತಿಳಿದೇ ಇಲ್ಲ. ಇದಕ್ಕೆ ಸಂಬಂಧಿಸಿದಂತೆ ಹೊಸ ಪೋಸ್ಟ್ ಒಂದು ವೈರಲ್ ಆಗಿದೆ. ಇದರಲ್ಲಿ ರುಕ್ಮಿಣಿ ಅವರು ಸುಮಧುರವಾಗಿ ಹಾಡಿದ್ದಾರೆ. ಅವರ ಹಾಡು ಎಲ್ಲರ ಗಮನ ಸೆಳೆದಿದೆ.

ರುಕ್ಮಿಣಿ ವಸಂತ್ ಅವರು ‘ಮದರಾಸಿ’ ಹೆಸರಿನ ಹೊಸ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರದ್ದು ಮಾಲತಿ ಹೆಸರಿನ ಪಾತ್ರ. ಈ ಚಿತ್ರಕ್ಕೆ ಶಿವಕಾರ್ತಿಕೇಯ ಹೀರೋ. ಶಿವಕಾರ್ತಿಕೇಯ ಅವರು ಈಗಾಗಲೇ ಕಾಲಿವುಡ್​ನಲ್ಲಿ ಸಾಕಷ್ಟು ಗುರುತಿಸಿಕೊಳ್ಳುತ್ತಿದ್ದಾರೆ. ಅವರ ಜೊತೆ ನಟಿಸೋ ಅವಕಾಶ ರುಕ್ಮಿಣಿಗೆ ಸಿಕ್ಕಿದೆ. ಇದಕ್ಕಾಗಿ ರುಕ್ಮಿಣಿ ವಿವಿಧ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು ಹಾಡುಗಳನ್ನು ಕೂಡ ಹಾಡುತ್ತಿದ್ದಾರೆ.

ಇದನ್ನೂ ಓದಿ
Image
ಗರ್ಲ್​ಫ್ರೆಂಡ್​ಗೆ ಮನೆ ಕೊಟ್ಟು ಬಾಡಿಗೆ ಪಡೆದ ಹೃತಿಕ್ ರೋಷನ್
Image
ಸೋಶಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ ರಾಜ್ ಬಿ. ಶೆಟ್ಟಿ; ಕಾರಣ ಏನು?
Image
ಧೂಳೆಬ್ಬಿಸಿದ ರಾಜ್ ಹಂಚಿಕೆ ಮಾಡ್ತಿರೋ ‘ಲೋಕಃ’ ಸಿನಿಮಾ; 9.5 ರೇಟಿಂಗ್
Image
Bigg Boss ಟೈಟಲ್​ನಲ್ಲಿ ಹೆಚ್ಚುವರಿ G ಏಕೆ? ಸಂಖ್ಯಾಶಾಸ್ತ್ರದ ಲೆಕ್ಕಾಚಾರ

ರುಕ್ಮಿಣಿ ವಸಂತ್ ಹಾಡು

ರುಕ್ಮಿಣಿ ವಸಂತ್ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ‘ಕಡಲನು..’ ಹಾಡು ಸಾಕಷ್ಟು ಗಮನ ಸೆಳೆದಿತ್ತು. ಈ ಹಾಡನ್ನು ರುಕ್ಮಿಣಿ ಹಾಡಿದ್ದಾರೆ. ಈ ಹಾಡು ಎಲ್ಲರ ಗಮನ ಸೆಳೆದಿದೆ. ‘ರುಕ್ಮಿಣಿ ಧ್ವನಿ ಇಷ್ಟು ಮಧರುವಾಗಿದೆ ಎಂದು ನನಗೆ ಗೊತ್ತೇ ಇರಲಿಲ್ಲ’ ಎಂದು ಅನೇಕರು ಹೇಳಿದ್ದಾರೆ. ಅವರು ಇಂಗ್ಲಿಷ್ ಹಾಡನ್ನು ಕೂಡ ಹಾಡಿದ್ದು ಅದು ಗಮನ ಸೆಳೆದಿದೆ.

ಇದನ್ನೂ ಓದಿ: ಚೆನ್ನೈನಲ್ಲಿ ಮಿಂಚು ಹರಿಸಿದ ನಟಿ ರುಕ್ಮಿಣಿ ವಸಂತ್, ಅಂದಕ್ಕೆ ಸಾಟಿಯಾರು?

ರುಕ್ಮಿಣಿ ವಸಂತ್ ಅವರು ‘ಬೀರ್ಬಲ್’ ಹೆಸರಿನ ಕನ್ನಡ ಸಿನಿಮಾದಲ್ಲಿ ಮೊದಲ ಬಾರಿಗೆ ನಟಿಸಿದರು. ಈ ಚಿತ್ರ 2019ರಲ್ಲಿ ರಿಲೀಸ್ ಆಯಿತು. 2023ರಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದಲ್ಲಿ ಪ್ರಿಯಾ ಹೆಸರಿನ ಪಾತ್ರ ಮಾಡಿದರು. ಅಲ್ಲಿಂದ ಅವರ ಲಕ್ ಬದಲಾಯಿತು. ಸದ್ಯ ಅವರಿಗೆ ಪರಭಾಷೆಯಿಂದ ಹೆಚ್ಚು ಆಫರ್​ಗಳು ಬರುತ್ತಿವೆ. ರಿಷಬ್ ನಟನೆಯ ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಅವರು ನಾಯಕಿ. ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದಲ್ಲೂ ರುಕ್ಮಿಣಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ