AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾಫಿಯಾ’ ಚಿತ್ರಕ್ಕಾಗಿ ಗೆಟಪ್​ ಬದಲಿಸಿ ಕ್ಯಾನ್ಸರ್​ ಪೀಡಿತರಿಗೆ ಕೂದಲು ದಾನ ಮಾಡಿದ ಪ್ರಜ್ವಲ್​ ದೇವರಾಜ್​

Prajwal Devaraj: ಪ್ರಜ್ವಲ್​ ದೇವರಾಜ್​ ನಟಿಸುತ್ತಿರುವ 35ನೇ ಚಿತ್ರವಾಗಿ ‘ಮಾಫಿಯಾ’ ಮೂಡಿಬರಲಿದೆ. ಡಿ.2ರಂದು ಈ ಚಿತ್ರಕ್ಕೆ ಮುಹೂರ್ತ ನೆರವೇರಲಿದೆ. ಶೂಟಿಂಗ್​ ಆರಂಭಿಸಲು ನಿರ್ದೇಶಕ ಲೋಹಿತ್​ ಸಕಲ ತಯಾರಿ ಮಾಡಿಕೊಂಡಿದ್ದಾರೆ.

‘ಮಾಫಿಯಾ’ ಚಿತ್ರಕ್ಕಾಗಿ ಗೆಟಪ್​ ಬದಲಿಸಿ ಕ್ಯಾನ್ಸರ್​ ಪೀಡಿತರಿಗೆ ಕೂದಲು ದಾನ ಮಾಡಿದ ಪ್ರಜ್ವಲ್​ ದೇವರಾಜ್​
ಲೋಹಿತ್ ಎಚ್., ಪ್ರಜ್ವಲ್ ದೇವರಾಜ್, ಕುಮಾರ್ ಬಿ.
Follow us
TV9 Web
| Updated By: ಮದನ್​ ಕುಮಾರ್​

Updated on: Nov 30, 2021 | 4:10 PM

ನಟ ಪ್ರಜ್ವಲ್​ ದೇವರಾಜ್​ (Prajwal Devaraj) ಅವರು ಡಿಫರೆಂಟ್​ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಜಂಟಲ್​ಮ್ಯಾನ್​, ಇನ್ಸ್​ಪೆಕ್ಟರ್​ ವಿಕ್ರಂ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದ ಅವರ ಕೈಯಲ್ಲಿ ಈಗ ಹಲವು ಚಿತ್ರಗಳಿವೆ. ಅರ್ಜುನ್​ ಗೌಡ, ವೀರಂ, ಅಬ್ಬರ, ಮಾಫಿಯಾ ಮುಂತಾದ ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಅಭಿಮಾನಿಗಳಿಗಾಗಿ ಪ್ರತಿ ಸಿನಿಮಾದಲ್ಲಿಯೂ ಅವರು ಬೇರೆ ಬೇರೆ ಗೆಟಪ್​ಗಳನ್ನು ಪ್ರಯತ್ನಿಸುತ್ತಿದ್ದಾರೆ. ‘ವೀರಂ’ ಚಿತ್ರದ ಪಾತ್ರಕ್ಕಾಗಿ ಉದ್ದ ಕೂದಲು ಬಿಟ್ಟಿದ್ದ ಪ್ರಜ್ವಲ್​ ದೇವರಾಜ್​ ಅವರು ‘ಮಾಫಿಯಾ’ (Mafia Kannada Movie) ಚಿತ್ರಕ್ಕಾಗಿ ಮತ್ತೆ ಗೆಟಪ್​ ಬದಲಿಸಿದ್ದಾರೆ. ‘ಮಮ್ಮಿ’, ‘ದೇವಕಿ’ ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿರುವ ನಿರ್ದೇಶಕ ಲೋಹಿತ್​ ಎಚ್​. (Lohith H) ಅವರು ‘ಮಾಫಿಯಾ’ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​ಗೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ.

ಕಳೆದ ಎರಡು ವರ್ಷಗಳಿಂದಲೂ ಪ್ರಜ್ವಲ್​ ದೇವರಾಜ್​ ಅವರು ಉದ್ದ ಕೂದಲು ಬಿಟ್ಟಿದ್ದರು. ಆದರೆ ಈಗ ‘ಮಾಫಿಯಾ’ ಚಿತ್ರಕ್ಕಾಗಿ ಅವರು ಗೆಟಪ್​ ಚೇಂಜ್​ ಆಗುತ್ತಿದೆ. ಹಾಗಾಗಿ ಹೇರ್​ ಕಟ್​ ಮಾಡಿಸಿದ್ದಾರೆ. ವಿಶೇಷ ಎಂದರೆ, ತಮ್ಮ ಕೂದಲನ್ನು ಅವರು ಕ್ಯಾನ್ಸರ್​ ರೋಗಿಗಳಿಗಾಗಿ ದಾನ ಮಾಡಿದ್ದಾರೆ. ಆ ಮೂಲಕ ಇತರರಿಗೂ ಮಾದರಿ ಆಗಿದ್ದಾರೆ.  ಕ್ಯಾನ್ಸರ್​ ರೋಗಕ್ಕೆ ಚಿಕಿತ್ಸೆ ಪಡೆಯುವವರಿಗೆ ಕೂದಲು ಉದುರುತ್ತದೆ. ಅಂತವರಿಗೆ ಸಹಾಯ ಆಗಲಿ ಎಂದು ಅನೇಕರು ಕೂದಲು ದಾನ ಮಾಡುತ್ತಾರೆ. ‘ಪೊಗರು’ ಶೂಟಿಂಗ್​ ಮುಗಿದ ಬಳಿಕ ನಟ ಧ್ರುವ ಸರ್ಜಾ ಕೂಡ ಕೂದಲು ದಾನ ಮಾಡಿದ್ದರು. ಅನೇಕ ನಟಿಯರು ಕೂದಲು ದಾನ ಮಾಡಿದ ಉದಾಹರಣೆ ಕೂಡ ಇದೆ.

ಪ್ರಜ್ವಲ್​ ದೇವರಾಜ್​ ನಟಿಸುತ್ತಿರುವ 35ನೇ ಚಿತ್ರವಾಗಿ ‘ಮಾಫಿಯಾ’ ಮೂಡಿಬರಲಿದೆ. ಡಿ.2ರಂದು ಈ ಚಿತ್ರಕ್ಕೆ ಮುಹೂರ್ತ ನೆರವೇರಲಿದೆ. ಶೂಟಿಂಗ್​ ಆರಂಭಿಸಲು ನಿರ್ದೇಶಕ ಲೋಹಿತ್​ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಡಿ.6ರಿಂದ ಚಿತ್ರೀಕರಣ ಶುರು ಆಗಲಿದೆ. ಪ್ರಜ್ವಲ್​ ದೇವರಾಜ್​ ಅವರಿಗೆ ಜೋಡಿಯಾಗಿ ಕನ್ನಡದ ಬಹುಬೇಡಿಕೆಯ ನಟಿ ಅದಿತಿ ಪ್ರಭುದೇವ ಅವರು ನಟಿಸಲಿದ್ದಾರೆ.

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ‘ಟಗರು’, ‘ಸಲಗ’ ಮುಂತಾದ ಚಿತ್ರಗಳಿಗೆ ಸಂಭಾಷಣೆ ಬರೆದು ಗಮನ ಸೆಳೆದಿರುವ ಮಾಸ್ತಿ ಅವರು ‘ಮಾಫಿಯಾ’ ಚಿತ್ರಕ್ಕೂ ಡೈಲಾಗ್​ ಬರೆಯುತ್ತಿದ್ದಾರೆ. ತರುಣ್ ಅವರು ಕ್ಯಾಮರಾ ಕೆಲಸ ನಿಭಾಯಿಸಲಿದ್ದಾರೆ. ಮುಹೂರ್ತದ ಬಳಿಕ ಈ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲಿದೆ.

ಇದನ್ನೂ ಓದಿ:

ಡಿಸೆಂಬರ್​ ಪೂರ್ತಿ ಮನರಂಜನೆಯ​ ಸುಗ್ಗಿ; ಪ್ರತಿ ವಾರವೂ ಬಿಗ್​ ರಿಲೀಸ್​: ಇಲ್ಲಿದೆ ಪೂರ್ತಿ ಲಿಸ್ಟ್​

ಓಟಿಟಿಯಲ್ಲಿ ಡಿಸೆಂಬರ್ ಧಮಾಕಾ; ಮನರಂಜನೆ ನೀಡಲು ಬರುತ್ತಿವೆ ಬಹುನಿರೀಕ್ಷಿತ ಸಿನಿಮಾ, ವೆಬ್​ ಸಿರೀಸ್

ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್