AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾಫಿಯಾ’ ಚಿತ್ರಕ್ಕಾಗಿ ಗೆಟಪ್​ ಬದಲಿಸಿ ಕ್ಯಾನ್ಸರ್​ ಪೀಡಿತರಿಗೆ ಕೂದಲು ದಾನ ಮಾಡಿದ ಪ್ರಜ್ವಲ್​ ದೇವರಾಜ್​

Prajwal Devaraj: ಪ್ರಜ್ವಲ್​ ದೇವರಾಜ್​ ನಟಿಸುತ್ತಿರುವ 35ನೇ ಚಿತ್ರವಾಗಿ ‘ಮಾಫಿಯಾ’ ಮೂಡಿಬರಲಿದೆ. ಡಿ.2ರಂದು ಈ ಚಿತ್ರಕ್ಕೆ ಮುಹೂರ್ತ ನೆರವೇರಲಿದೆ. ಶೂಟಿಂಗ್​ ಆರಂಭಿಸಲು ನಿರ್ದೇಶಕ ಲೋಹಿತ್​ ಸಕಲ ತಯಾರಿ ಮಾಡಿಕೊಂಡಿದ್ದಾರೆ.

‘ಮಾಫಿಯಾ’ ಚಿತ್ರಕ್ಕಾಗಿ ಗೆಟಪ್​ ಬದಲಿಸಿ ಕ್ಯಾನ್ಸರ್​ ಪೀಡಿತರಿಗೆ ಕೂದಲು ದಾನ ಮಾಡಿದ ಪ್ರಜ್ವಲ್​ ದೇವರಾಜ್​
ಲೋಹಿತ್ ಎಚ್., ಪ್ರಜ್ವಲ್ ದೇವರಾಜ್, ಕುಮಾರ್ ಬಿ.
TV9 Web
| Edited By: |

Updated on: Nov 30, 2021 | 4:10 PM

Share

ನಟ ಪ್ರಜ್ವಲ್​ ದೇವರಾಜ್​ (Prajwal Devaraj) ಅವರು ಡಿಫರೆಂಟ್​ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಜಂಟಲ್​ಮ್ಯಾನ್​, ಇನ್ಸ್​ಪೆಕ್ಟರ್​ ವಿಕ್ರಂ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದ ಅವರ ಕೈಯಲ್ಲಿ ಈಗ ಹಲವು ಚಿತ್ರಗಳಿವೆ. ಅರ್ಜುನ್​ ಗೌಡ, ವೀರಂ, ಅಬ್ಬರ, ಮಾಫಿಯಾ ಮುಂತಾದ ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಅಭಿಮಾನಿಗಳಿಗಾಗಿ ಪ್ರತಿ ಸಿನಿಮಾದಲ್ಲಿಯೂ ಅವರು ಬೇರೆ ಬೇರೆ ಗೆಟಪ್​ಗಳನ್ನು ಪ್ರಯತ್ನಿಸುತ್ತಿದ್ದಾರೆ. ‘ವೀರಂ’ ಚಿತ್ರದ ಪಾತ್ರಕ್ಕಾಗಿ ಉದ್ದ ಕೂದಲು ಬಿಟ್ಟಿದ್ದ ಪ್ರಜ್ವಲ್​ ದೇವರಾಜ್​ ಅವರು ‘ಮಾಫಿಯಾ’ (Mafia Kannada Movie) ಚಿತ್ರಕ್ಕಾಗಿ ಮತ್ತೆ ಗೆಟಪ್​ ಬದಲಿಸಿದ್ದಾರೆ. ‘ಮಮ್ಮಿ’, ‘ದೇವಕಿ’ ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿರುವ ನಿರ್ದೇಶಕ ಲೋಹಿತ್​ ಎಚ್​. (Lohith H) ಅವರು ‘ಮಾಫಿಯಾ’ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​ಗೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ.

ಕಳೆದ ಎರಡು ವರ್ಷಗಳಿಂದಲೂ ಪ್ರಜ್ವಲ್​ ದೇವರಾಜ್​ ಅವರು ಉದ್ದ ಕೂದಲು ಬಿಟ್ಟಿದ್ದರು. ಆದರೆ ಈಗ ‘ಮಾಫಿಯಾ’ ಚಿತ್ರಕ್ಕಾಗಿ ಅವರು ಗೆಟಪ್​ ಚೇಂಜ್​ ಆಗುತ್ತಿದೆ. ಹಾಗಾಗಿ ಹೇರ್​ ಕಟ್​ ಮಾಡಿಸಿದ್ದಾರೆ. ವಿಶೇಷ ಎಂದರೆ, ತಮ್ಮ ಕೂದಲನ್ನು ಅವರು ಕ್ಯಾನ್ಸರ್​ ರೋಗಿಗಳಿಗಾಗಿ ದಾನ ಮಾಡಿದ್ದಾರೆ. ಆ ಮೂಲಕ ಇತರರಿಗೂ ಮಾದರಿ ಆಗಿದ್ದಾರೆ.  ಕ್ಯಾನ್ಸರ್​ ರೋಗಕ್ಕೆ ಚಿಕಿತ್ಸೆ ಪಡೆಯುವವರಿಗೆ ಕೂದಲು ಉದುರುತ್ತದೆ. ಅಂತವರಿಗೆ ಸಹಾಯ ಆಗಲಿ ಎಂದು ಅನೇಕರು ಕೂದಲು ದಾನ ಮಾಡುತ್ತಾರೆ. ‘ಪೊಗರು’ ಶೂಟಿಂಗ್​ ಮುಗಿದ ಬಳಿಕ ನಟ ಧ್ರುವ ಸರ್ಜಾ ಕೂಡ ಕೂದಲು ದಾನ ಮಾಡಿದ್ದರು. ಅನೇಕ ನಟಿಯರು ಕೂದಲು ದಾನ ಮಾಡಿದ ಉದಾಹರಣೆ ಕೂಡ ಇದೆ.

ಪ್ರಜ್ವಲ್​ ದೇವರಾಜ್​ ನಟಿಸುತ್ತಿರುವ 35ನೇ ಚಿತ್ರವಾಗಿ ‘ಮಾಫಿಯಾ’ ಮೂಡಿಬರಲಿದೆ. ಡಿ.2ರಂದು ಈ ಚಿತ್ರಕ್ಕೆ ಮುಹೂರ್ತ ನೆರವೇರಲಿದೆ. ಶೂಟಿಂಗ್​ ಆರಂಭಿಸಲು ನಿರ್ದೇಶಕ ಲೋಹಿತ್​ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಡಿ.6ರಿಂದ ಚಿತ್ರೀಕರಣ ಶುರು ಆಗಲಿದೆ. ಪ್ರಜ್ವಲ್​ ದೇವರಾಜ್​ ಅವರಿಗೆ ಜೋಡಿಯಾಗಿ ಕನ್ನಡದ ಬಹುಬೇಡಿಕೆಯ ನಟಿ ಅದಿತಿ ಪ್ರಭುದೇವ ಅವರು ನಟಿಸಲಿದ್ದಾರೆ.

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ‘ಟಗರು’, ‘ಸಲಗ’ ಮುಂತಾದ ಚಿತ್ರಗಳಿಗೆ ಸಂಭಾಷಣೆ ಬರೆದು ಗಮನ ಸೆಳೆದಿರುವ ಮಾಸ್ತಿ ಅವರು ‘ಮಾಫಿಯಾ’ ಚಿತ್ರಕ್ಕೂ ಡೈಲಾಗ್​ ಬರೆಯುತ್ತಿದ್ದಾರೆ. ತರುಣ್ ಅವರು ಕ್ಯಾಮರಾ ಕೆಲಸ ನಿಭಾಯಿಸಲಿದ್ದಾರೆ. ಮುಹೂರ್ತದ ಬಳಿಕ ಈ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲಿದೆ.

ಇದನ್ನೂ ಓದಿ:

ಡಿಸೆಂಬರ್​ ಪೂರ್ತಿ ಮನರಂಜನೆಯ​ ಸುಗ್ಗಿ; ಪ್ರತಿ ವಾರವೂ ಬಿಗ್​ ರಿಲೀಸ್​: ಇಲ್ಲಿದೆ ಪೂರ್ತಿ ಲಿಸ್ಟ್​

ಓಟಿಟಿಯಲ್ಲಿ ಡಿಸೆಂಬರ್ ಧಮಾಕಾ; ಮನರಂಜನೆ ನೀಡಲು ಬರುತ್ತಿವೆ ಬಹುನಿರೀಕ್ಷಿತ ಸಿನಿಮಾ, ವೆಬ್​ ಸಿರೀಸ್

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!