AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾಫಿಯಾ’ ಚಿತ್ರಕ್ಕಾಗಿ ಗೆಟಪ್​ ಬದಲಿಸಿ ಕ್ಯಾನ್ಸರ್​ ಪೀಡಿತರಿಗೆ ಕೂದಲು ದಾನ ಮಾಡಿದ ಪ್ರಜ್ವಲ್​ ದೇವರಾಜ್​

Prajwal Devaraj: ಪ್ರಜ್ವಲ್​ ದೇವರಾಜ್​ ನಟಿಸುತ್ತಿರುವ 35ನೇ ಚಿತ್ರವಾಗಿ ‘ಮಾಫಿಯಾ’ ಮೂಡಿಬರಲಿದೆ. ಡಿ.2ರಂದು ಈ ಚಿತ್ರಕ್ಕೆ ಮುಹೂರ್ತ ನೆರವೇರಲಿದೆ. ಶೂಟಿಂಗ್​ ಆರಂಭಿಸಲು ನಿರ್ದೇಶಕ ಲೋಹಿತ್​ ಸಕಲ ತಯಾರಿ ಮಾಡಿಕೊಂಡಿದ್ದಾರೆ.

‘ಮಾಫಿಯಾ’ ಚಿತ್ರಕ್ಕಾಗಿ ಗೆಟಪ್​ ಬದಲಿಸಿ ಕ್ಯಾನ್ಸರ್​ ಪೀಡಿತರಿಗೆ ಕೂದಲು ದಾನ ಮಾಡಿದ ಪ್ರಜ್ವಲ್​ ದೇವರಾಜ್​
ಲೋಹಿತ್ ಎಚ್., ಪ್ರಜ್ವಲ್ ದೇವರಾಜ್, ಕುಮಾರ್ ಬಿ.
TV9 Web
| Edited By: |

Updated on: Nov 30, 2021 | 4:10 PM

Share

ನಟ ಪ್ರಜ್ವಲ್​ ದೇವರಾಜ್​ (Prajwal Devaraj) ಅವರು ಡಿಫರೆಂಟ್​ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಜಂಟಲ್​ಮ್ಯಾನ್​, ಇನ್ಸ್​ಪೆಕ್ಟರ್​ ವಿಕ್ರಂ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದ ಅವರ ಕೈಯಲ್ಲಿ ಈಗ ಹಲವು ಚಿತ್ರಗಳಿವೆ. ಅರ್ಜುನ್​ ಗೌಡ, ವೀರಂ, ಅಬ್ಬರ, ಮಾಫಿಯಾ ಮುಂತಾದ ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಅಭಿಮಾನಿಗಳಿಗಾಗಿ ಪ್ರತಿ ಸಿನಿಮಾದಲ್ಲಿಯೂ ಅವರು ಬೇರೆ ಬೇರೆ ಗೆಟಪ್​ಗಳನ್ನು ಪ್ರಯತ್ನಿಸುತ್ತಿದ್ದಾರೆ. ‘ವೀರಂ’ ಚಿತ್ರದ ಪಾತ್ರಕ್ಕಾಗಿ ಉದ್ದ ಕೂದಲು ಬಿಟ್ಟಿದ್ದ ಪ್ರಜ್ವಲ್​ ದೇವರಾಜ್​ ಅವರು ‘ಮಾಫಿಯಾ’ (Mafia Kannada Movie) ಚಿತ್ರಕ್ಕಾಗಿ ಮತ್ತೆ ಗೆಟಪ್​ ಬದಲಿಸಿದ್ದಾರೆ. ‘ಮಮ್ಮಿ’, ‘ದೇವಕಿ’ ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿರುವ ನಿರ್ದೇಶಕ ಲೋಹಿತ್​ ಎಚ್​. (Lohith H) ಅವರು ‘ಮಾಫಿಯಾ’ ಸಿನಿಮಾದಲ್ಲಿ ಪ್ರಜ್ವಲ್​ ದೇವರಾಜ್​ಗೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ.

ಕಳೆದ ಎರಡು ವರ್ಷಗಳಿಂದಲೂ ಪ್ರಜ್ವಲ್​ ದೇವರಾಜ್​ ಅವರು ಉದ್ದ ಕೂದಲು ಬಿಟ್ಟಿದ್ದರು. ಆದರೆ ಈಗ ‘ಮಾಫಿಯಾ’ ಚಿತ್ರಕ್ಕಾಗಿ ಅವರು ಗೆಟಪ್​ ಚೇಂಜ್​ ಆಗುತ್ತಿದೆ. ಹಾಗಾಗಿ ಹೇರ್​ ಕಟ್​ ಮಾಡಿಸಿದ್ದಾರೆ. ವಿಶೇಷ ಎಂದರೆ, ತಮ್ಮ ಕೂದಲನ್ನು ಅವರು ಕ್ಯಾನ್ಸರ್​ ರೋಗಿಗಳಿಗಾಗಿ ದಾನ ಮಾಡಿದ್ದಾರೆ. ಆ ಮೂಲಕ ಇತರರಿಗೂ ಮಾದರಿ ಆಗಿದ್ದಾರೆ.  ಕ್ಯಾನ್ಸರ್​ ರೋಗಕ್ಕೆ ಚಿಕಿತ್ಸೆ ಪಡೆಯುವವರಿಗೆ ಕೂದಲು ಉದುರುತ್ತದೆ. ಅಂತವರಿಗೆ ಸಹಾಯ ಆಗಲಿ ಎಂದು ಅನೇಕರು ಕೂದಲು ದಾನ ಮಾಡುತ್ತಾರೆ. ‘ಪೊಗರು’ ಶೂಟಿಂಗ್​ ಮುಗಿದ ಬಳಿಕ ನಟ ಧ್ರುವ ಸರ್ಜಾ ಕೂಡ ಕೂದಲು ದಾನ ಮಾಡಿದ್ದರು. ಅನೇಕ ನಟಿಯರು ಕೂದಲು ದಾನ ಮಾಡಿದ ಉದಾಹರಣೆ ಕೂಡ ಇದೆ.

ಪ್ರಜ್ವಲ್​ ದೇವರಾಜ್​ ನಟಿಸುತ್ತಿರುವ 35ನೇ ಚಿತ್ರವಾಗಿ ‘ಮಾಫಿಯಾ’ ಮೂಡಿಬರಲಿದೆ. ಡಿ.2ರಂದು ಈ ಚಿತ್ರಕ್ಕೆ ಮುಹೂರ್ತ ನೆರವೇರಲಿದೆ. ಶೂಟಿಂಗ್​ ಆರಂಭಿಸಲು ನಿರ್ದೇಶಕ ಲೋಹಿತ್​ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಡಿ.6ರಿಂದ ಚಿತ್ರೀಕರಣ ಶುರು ಆಗಲಿದೆ. ಪ್ರಜ್ವಲ್​ ದೇವರಾಜ್​ ಅವರಿಗೆ ಜೋಡಿಯಾಗಿ ಕನ್ನಡದ ಬಹುಬೇಡಿಕೆಯ ನಟಿ ಅದಿತಿ ಪ್ರಭುದೇವ ಅವರು ನಟಿಸಲಿದ್ದಾರೆ.

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ‘ಟಗರು’, ‘ಸಲಗ’ ಮುಂತಾದ ಚಿತ್ರಗಳಿಗೆ ಸಂಭಾಷಣೆ ಬರೆದು ಗಮನ ಸೆಳೆದಿರುವ ಮಾಸ್ತಿ ಅವರು ‘ಮಾಫಿಯಾ’ ಚಿತ್ರಕ್ಕೂ ಡೈಲಾಗ್​ ಬರೆಯುತ್ತಿದ್ದಾರೆ. ತರುಣ್ ಅವರು ಕ್ಯಾಮರಾ ಕೆಲಸ ನಿಭಾಯಿಸಲಿದ್ದಾರೆ. ಮುಹೂರ್ತದ ಬಳಿಕ ಈ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲಿದೆ.

ಇದನ್ನೂ ಓದಿ:

ಡಿಸೆಂಬರ್​ ಪೂರ್ತಿ ಮನರಂಜನೆಯ​ ಸುಗ್ಗಿ; ಪ್ರತಿ ವಾರವೂ ಬಿಗ್​ ರಿಲೀಸ್​: ಇಲ್ಲಿದೆ ಪೂರ್ತಿ ಲಿಸ್ಟ್​

ಓಟಿಟಿಯಲ್ಲಿ ಡಿಸೆಂಬರ್ ಧಮಾಕಾ; ಮನರಂಜನೆ ನೀಡಲು ಬರುತ್ತಿವೆ ಬಹುನಿರೀಕ್ಷಿತ ಸಿನಿಮಾ, ವೆಬ್​ ಸಿರೀಸ್

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ