ಪುನೀತ್​ಗೆ ಗಾನ ನಮನ ಸಲ್ಲಿಸಲು ಒಂದಾದ ನಾಲ್ವರು ಗಾಯಕರು; ಮಾ.15ಕ್ಕೆ ‘ಮಹಾನುಭಾವ’ ರಿಲೀಸ್​

ಪುನೀತ್​ ರಾಜ್​ಕುಮಾರ್ ಮೇಲಿನ ಅಭಿಮಾನಕ್ಕಾಗಿ ಸೋನು ನಿಗಮ್, ಶಂಕರ್​ ಮಹದೇವನ್​, ವಿಜಯ್​ ಪ್ರಕಾಶ್​ ಹಾಗೂ ಕೈಲಾಶ್​ ಖೇರ್ ಅವರು ಸಂಭಾವನೆ ಪಡೆಯದೇ ಈ ಹಾಡಿಗೆ ಧ್ವನಿ ನೀಡಿದ್ದಾರೆ. ಹಾಡಿನ ಕುರಿತು ಮಾಹಿತಿ ಇಲ್ಲಿದೆ.

ಪುನೀತ್​ಗೆ ಗಾನ ನಮನ ಸಲ್ಲಿಸಲು ಒಂದಾದ ನಾಲ್ವರು ಗಾಯಕರು; ಮಾ.15ಕ್ಕೆ ‘ಮಹಾನುಭಾವ’ ರಿಲೀಸ್​
ಮಹಾನುಭಾವ ಹಾಡಿಗೆ ಧ್ವನಿ ನೀಡಿದ ವಿಜಯ್ ಪ್ರಕಾಶ್, ಕೈಲಾಶ್ ಖೇರ್, ಸೋನು ನಿಗಮ್, ಶಂಕರ್ ಮಹದೇವನ್
Follow us
| Updated By: ಮದನ್​ ಕುಮಾರ್​

Updated on:Mar 13, 2022 | 12:51 PM

ಭೌತಿಕವಾಗಿ ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರು ನಮ್ಮನ್ನು ಅಗಲಿರಬಹುದು. ಆದರೆ ಸಿನಿಮಾಗಳ ಮೂಲಕ, ಮೌಲ್ಯಗಳ ಮೂಲಕ ಅವರು ಯಾವಾಗಲೂ ಜೀವಂತವಾಗಿ ಇರುತ್ತಾರೆ. ಅಪ್ಪು ನಿಧನದ ನಂತರ ಅನೇಕರು ಅವರಿಗೆ ಗಾನನಮನ ಸಲ್ಲಿಸಿದ್ದಾರೆ. ಈಗ ನಿರ್ದೇಶಕ ಕಾಂತ ಕನ್ನಲ್ಲಿ ಮತ್ತು ಸಂಗೀತ ನಿರ್ದೇಶಕ ಶ್ರೀಧರ್​ ವಿ. ಸಂಭ್ರಮ್ (Sridhar V Sambhram) ಅವರು ಹೊಸ ಹಾಡು ಸಿದ್ಧಪಡಿಸಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರ ವ್ಯಕ್ತಿತ್ವವನ್ನು ಕೊಂಡಾಡುವ, ಎಲ್ಲರಿಗೂ ಸ್ಫೂರ್ತಿ ಆಗುವಂತಹ​ ರೀತಿಯಲ್ಲಿ ಈ ಹಾಡು ಮೂಡಿಬಂದಿದೆ ಎಂದು ಕಾಂತ ಕನ್ನಲ್ಲಿ ಹೇಳಿದ್ದಾರೆ. ಈ ಗೀತೆಗೆ ‘ಮಹಾನುಭಾವ’ ಎಂದು ಶೀರ್ಷಿಕೆ ಇಡಲಾಗಿದೆ. ವಿಶೇಷ ಏನೆಂದರೆ, ಖ್ಯಾತ ಗಾಯಕರಾದ ವಿಜಯ್​ ಪ್ರಕಾಶ್​, ಸೋನು ನಿಗಮ್​, ಕೈಲಾಶ್​ ಖೇರ್​ ಹಾಗೂ ಶಂಕರ್​ ಮಹದೇವನ್​ ಅವರು ಜೊತೆಯಾಗಿ ಈ ಗೀತೆಗೆ ಧ್ವನಿ ನೀಡಿದ್ದಾರೆ. ಕಾಂತ ಕನ್ನಲ್ಲಿ ಬರೆದ ಸಾಹಿತ್ಯಕ್ಕೆ ಈ ನಾಲ್ವರು ಜೀವ ತುಂಬಿದ್ದಾರೆ. ಮಾ.15ರಂದು ‘ಮಹಾನುಭಾವ’ ಸಾಂಗ್​ (Mahanubhava Song) ಬಿಡುಗಡೆ ಆಗುತ್ತಿದೆ. ಹಾಡಿನ ವಿಶೇಷಗಳ ಕುರಿತು ಕಾಂತ ಕನ್ನಲ್ಲಿ ಅವರು ಕೆಲವು ವಿಚಾರಗಳನ್ನು ‘ಟಿವಿ9 ಡಿಜಿಟಲ್​’ ಜೊತೆ ಹಂಚಿಕೊಂಡಿದ್ದಾರೆ.

ಪುನೀತ್​ ರಾಜ್​ಕುಮಾರ್ ಅವರು ಸದಾ ನಮ್ಮೊಂದಿಗೆ ಇರುತ್ತಾರೆ ಎಂಬ ಭಾವವನ್ನು ‘ಮಹಾನುಭಾವ’ ಹಾಡಿನ ಮೂಲಕ ಇನ್ನಷ್ಟು ಗಟ್ಟಿಗೊಳಿಸಲು ಕಾಂತ ಕನ್ನಲ್ಲಿ ಪ್ರಯತ್ನಿಸಿರುವುದಾಗಿ ಹೇಳಿದ್ದಾರೆ. ಈಗಾಗಲೇ ಕೆಲವರು ಈ ಸಾಂಗ್​ ಕೇಳಿದ್ದು ತುಂಬ ಇಷ್ಟಪಟ್ಟಿದ್ದಾರೆ. ನಟ ಶ್ರೀಮುರಳಿ ಅವರು 5 ನಿಮಿಷ ಭಾವುಕರಾಗಿದ್ದರು ಎಂದಿದ್ದಾರೆ ಕಾಂತ. ವಿಶೇಷ ಏನೆಂದರೆ ಈ ಹಾಡಿಗಾಗಿ ಕೆಲಸ ಮಾಡಿದ ಬಹುತೇಕರು ಸಂಭಾವನೆ ಪಡೆದಿಲ್ಲ.

‘ಪುನೀತ್​ ರಾಜ್​ಕುಮಾರ್ ಅವರ ಮೇಲಿನ ಅಭಿಮಾನಕ್ಕಾಗಿ ಸೋನು ನಿಗಮ್, ಶಂಕರ್​ ಮಹದೇವನ್​, ವಿಜಯ್​ ಪ್ರಕಾಶ್​ ಹಾಗೂ ಕೈಲಾಶ್​ ಖೇರ್ ಅವರು ಸಂಭಾವನೆ ಪಡೆಯದೇ ಈ ಹಾಡಿಗೆ ಧ್ವನಿ ನೀಡಿದ್ದಾರೆ. ಸಾಹಿತ್ಯ ಕೇಳಿ ಎಲ್ಲರೂ ಇಷ್ಟಪಟ್ಟಿದ್ದಾರೆ. ಈ ನಾಲ್ವರು ಗಾಯಕರ ನಡುವಿನ ಜುಗಲ್ಬಂದಿ ಚೆನ್ನಾಗಿದೆ. ಪುನೀತ್​ ನಟನೆಯ ಒಂದು ಹೊಸ ಸಿನಿಮಾ ಬಂದರೆ, ಅದರಲ್ಲಿ ಹೀರೋ ಇಂಟ್ರಡಕ್ಷನ್​ ಸಾಂಗ್​ ಇದ್ದರೆ ಹೇಗೆ ಇರಬಹುದೋ ಅದೇ ರೀತಿಯಲ್ಲಿ ಈ ಗೀತೆ ಮೂಡಿಬಂದಿದೆ’​ ಎಂದು ಕಾಂತ ಕನ್ನಲ್ಲಿ ಹೇಳಿದ್ದಾರೆ.

ಪುನೀತ್​ ರಾಜ್​ಕುಮಾರ್​ ಜೊತೆ ಒಂದು ಸಿನಿಮಾ ಮಾಡಬೇಕು ಎಂಬುದು ಕಾಂತ ಅವರ ಕನಸಾಗಿತ್ತು. ಅದಕ್ಕೆ ‘ಮಹಾನುಭಾವ’ ಅಂತ ಟೈಟಲ್​ ಇಡಲು ನಿರ್ಧರಿಸಲಾಗಿತ್ತು. ಆ ಕುರಿತು ಮಾತುಕತೆ ಆರಂಭ ಆಗಿತ್ತು. ಇನ್ನೇನು ಪುನೀತ್​ ರಾಜ್​ಕುಮಾರ್ ಅವರು ಕಥೆ ಕೇಳಲು ಟೈಮ್​ ಫಿಕ್ಸ್​ ಮಾಡುವುದು ಬಾಕಿ ಇತ್ತು. ಆದರೆ ಅಷ್ಟರಲ್ಲಾಗಲೇ ವಿಧಿ ತನ್ನ ಆಟ ಆಡಿತು. ‘ಮಹಾನುಭಾವ’ ಸಿನಿಮಾ ಮಾಡಲು ಸಾಧ್ಯವಾಗಲಿಲ್ಲ. ಕೊನೇ ಪಕ್ಷ ಅದೇ ಶೀರ್ಷಿಕೆ ಇಟ್ಟುಕೊಂಡು ಹಾಡಿನ ಮೂಲಕ ನಮನ ಸಲ್ಲಿಸಲು ಕಾಂತ ಕನ್ನಲ್ಲಿ ನಿರ್ಧರಿಸಿದರು.

ಕಾಂತ ಬರೆದ ಸಾಲುಗಳನ್ನು ಕೇಳಿ ಸಖತ್​ ಮೆಚ್ಚಿಕೊಂಡ ಸಂಗೀತ ನಿರ್ದೇಶಕ ಶ್ರೀಧರ್​ ವಿ. ಸಂಭ್ರಮ್​ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಪುನೀತ್​ ಅವರ ಅಭಿಮಾನಿಯಾದ ನಿರ್ಮಾಪಕ ಸುನೀಲ್​ ಬಿ.ಎನ್​. ಅವರು ಇದಕ್ಕೆ ಬಂಡವಾಳ ಹಾಕಿದ್ದಾರೆ. ‘ಸಂಭ್ರಮ್​ ಸ್ಟುಡಿಯೋಸ್​’ ಯೂಟ್ಯೂಬ್​ ಚಾನೆಲ್​ನಲ್ಲಿ ಈ ಗೀತೆ ರಿಲೀಸ್​ ಆಗಲಿದೆ. ‘ಮಹಾನುಭಾವ’ ಹಾಡಿಗಾಗಿ ಅಪ್ಪು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದನ್ನೂ ಓದಿ:

‘ಕನ್ನಡದ ಕೋಟ್ಯಧಿಪತಿ’ಯಿಂದ ಪುನೀತ್​ಗೆ ಸಿಕ್ಕ ಸಂಭಾವನೆ ಎಷ್ಟು ಕೋಟಿ? ಆ ದುಡ್ಡಲ್ಲಿ ಆಗ್ತಿದೆ ಪುಣ್ಯದ ಕೆಲಸ

ಸೈನಿಕನ ಗೆಟಪ್​ನಲ್ಲಿ ಆಹಾ ಎಷ್ಟು ಚಂದ ಪುನೀತ್​; ಇಲ್ಲಿವೆ ‘ಜೇಮ್ಸ್​’ ಸಿನಿಮಾದ ಫೋಟೋಗಳು

Published On - 12:14 pm, Sun, 13 March 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ