AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ಗೆ ಗಾನ ನಮನ ಸಲ್ಲಿಸಲು ಒಂದಾದ ನಾಲ್ವರು ಗಾಯಕರು; ಮಾ.15ಕ್ಕೆ ‘ಮಹಾನುಭಾವ’ ರಿಲೀಸ್​

ಪುನೀತ್​ ರಾಜ್​ಕುಮಾರ್ ಮೇಲಿನ ಅಭಿಮಾನಕ್ಕಾಗಿ ಸೋನು ನಿಗಮ್, ಶಂಕರ್​ ಮಹದೇವನ್​, ವಿಜಯ್​ ಪ್ರಕಾಶ್​ ಹಾಗೂ ಕೈಲಾಶ್​ ಖೇರ್ ಅವರು ಸಂಭಾವನೆ ಪಡೆಯದೇ ಈ ಹಾಡಿಗೆ ಧ್ವನಿ ನೀಡಿದ್ದಾರೆ. ಹಾಡಿನ ಕುರಿತು ಮಾಹಿತಿ ಇಲ್ಲಿದೆ.

ಪುನೀತ್​ಗೆ ಗಾನ ನಮನ ಸಲ್ಲಿಸಲು ಒಂದಾದ ನಾಲ್ವರು ಗಾಯಕರು; ಮಾ.15ಕ್ಕೆ ‘ಮಹಾನುಭಾವ’ ರಿಲೀಸ್​
ಮಹಾನುಭಾವ ಹಾಡಿಗೆ ಧ್ವನಿ ನೀಡಿದ ವಿಜಯ್ ಪ್ರಕಾಶ್, ಕೈಲಾಶ್ ಖೇರ್, ಸೋನು ನಿಗಮ್, ಶಂಕರ್ ಮಹದೇವನ್
Follow us
TV9 Web
| Updated By: ಮದನ್​ ಕುಮಾರ್​

Updated on:Mar 13, 2022 | 12:51 PM

ಭೌತಿಕವಾಗಿ ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರು ನಮ್ಮನ್ನು ಅಗಲಿರಬಹುದು. ಆದರೆ ಸಿನಿಮಾಗಳ ಮೂಲಕ, ಮೌಲ್ಯಗಳ ಮೂಲಕ ಅವರು ಯಾವಾಗಲೂ ಜೀವಂತವಾಗಿ ಇರುತ್ತಾರೆ. ಅಪ್ಪು ನಿಧನದ ನಂತರ ಅನೇಕರು ಅವರಿಗೆ ಗಾನನಮನ ಸಲ್ಲಿಸಿದ್ದಾರೆ. ಈಗ ನಿರ್ದೇಶಕ ಕಾಂತ ಕನ್ನಲ್ಲಿ ಮತ್ತು ಸಂಗೀತ ನಿರ್ದೇಶಕ ಶ್ರೀಧರ್​ ವಿ. ಸಂಭ್ರಮ್ (Sridhar V Sambhram) ಅವರು ಹೊಸ ಹಾಡು ಸಿದ್ಧಪಡಿಸಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರ ವ್ಯಕ್ತಿತ್ವವನ್ನು ಕೊಂಡಾಡುವ, ಎಲ್ಲರಿಗೂ ಸ್ಫೂರ್ತಿ ಆಗುವಂತಹ​ ರೀತಿಯಲ್ಲಿ ಈ ಹಾಡು ಮೂಡಿಬಂದಿದೆ ಎಂದು ಕಾಂತ ಕನ್ನಲ್ಲಿ ಹೇಳಿದ್ದಾರೆ. ಈ ಗೀತೆಗೆ ‘ಮಹಾನುಭಾವ’ ಎಂದು ಶೀರ್ಷಿಕೆ ಇಡಲಾಗಿದೆ. ವಿಶೇಷ ಏನೆಂದರೆ, ಖ್ಯಾತ ಗಾಯಕರಾದ ವಿಜಯ್​ ಪ್ರಕಾಶ್​, ಸೋನು ನಿಗಮ್​, ಕೈಲಾಶ್​ ಖೇರ್​ ಹಾಗೂ ಶಂಕರ್​ ಮಹದೇವನ್​ ಅವರು ಜೊತೆಯಾಗಿ ಈ ಗೀತೆಗೆ ಧ್ವನಿ ನೀಡಿದ್ದಾರೆ. ಕಾಂತ ಕನ್ನಲ್ಲಿ ಬರೆದ ಸಾಹಿತ್ಯಕ್ಕೆ ಈ ನಾಲ್ವರು ಜೀವ ತುಂಬಿದ್ದಾರೆ. ಮಾ.15ರಂದು ‘ಮಹಾನುಭಾವ’ ಸಾಂಗ್​ (Mahanubhava Song) ಬಿಡುಗಡೆ ಆಗುತ್ತಿದೆ. ಹಾಡಿನ ವಿಶೇಷಗಳ ಕುರಿತು ಕಾಂತ ಕನ್ನಲ್ಲಿ ಅವರು ಕೆಲವು ವಿಚಾರಗಳನ್ನು ‘ಟಿವಿ9 ಡಿಜಿಟಲ್​’ ಜೊತೆ ಹಂಚಿಕೊಂಡಿದ್ದಾರೆ.

ಪುನೀತ್​ ರಾಜ್​ಕುಮಾರ್ ಅವರು ಸದಾ ನಮ್ಮೊಂದಿಗೆ ಇರುತ್ತಾರೆ ಎಂಬ ಭಾವವನ್ನು ‘ಮಹಾನುಭಾವ’ ಹಾಡಿನ ಮೂಲಕ ಇನ್ನಷ್ಟು ಗಟ್ಟಿಗೊಳಿಸಲು ಕಾಂತ ಕನ್ನಲ್ಲಿ ಪ್ರಯತ್ನಿಸಿರುವುದಾಗಿ ಹೇಳಿದ್ದಾರೆ. ಈಗಾಗಲೇ ಕೆಲವರು ಈ ಸಾಂಗ್​ ಕೇಳಿದ್ದು ತುಂಬ ಇಷ್ಟಪಟ್ಟಿದ್ದಾರೆ. ನಟ ಶ್ರೀಮುರಳಿ ಅವರು 5 ನಿಮಿಷ ಭಾವುಕರಾಗಿದ್ದರು ಎಂದಿದ್ದಾರೆ ಕಾಂತ. ವಿಶೇಷ ಏನೆಂದರೆ ಈ ಹಾಡಿಗಾಗಿ ಕೆಲಸ ಮಾಡಿದ ಬಹುತೇಕರು ಸಂಭಾವನೆ ಪಡೆದಿಲ್ಲ.

‘ಪುನೀತ್​ ರಾಜ್​ಕುಮಾರ್ ಅವರ ಮೇಲಿನ ಅಭಿಮಾನಕ್ಕಾಗಿ ಸೋನು ನಿಗಮ್, ಶಂಕರ್​ ಮಹದೇವನ್​, ವಿಜಯ್​ ಪ್ರಕಾಶ್​ ಹಾಗೂ ಕೈಲಾಶ್​ ಖೇರ್ ಅವರು ಸಂಭಾವನೆ ಪಡೆಯದೇ ಈ ಹಾಡಿಗೆ ಧ್ವನಿ ನೀಡಿದ್ದಾರೆ. ಸಾಹಿತ್ಯ ಕೇಳಿ ಎಲ್ಲರೂ ಇಷ್ಟಪಟ್ಟಿದ್ದಾರೆ. ಈ ನಾಲ್ವರು ಗಾಯಕರ ನಡುವಿನ ಜುಗಲ್ಬಂದಿ ಚೆನ್ನಾಗಿದೆ. ಪುನೀತ್​ ನಟನೆಯ ಒಂದು ಹೊಸ ಸಿನಿಮಾ ಬಂದರೆ, ಅದರಲ್ಲಿ ಹೀರೋ ಇಂಟ್ರಡಕ್ಷನ್​ ಸಾಂಗ್​ ಇದ್ದರೆ ಹೇಗೆ ಇರಬಹುದೋ ಅದೇ ರೀತಿಯಲ್ಲಿ ಈ ಗೀತೆ ಮೂಡಿಬಂದಿದೆ’​ ಎಂದು ಕಾಂತ ಕನ್ನಲ್ಲಿ ಹೇಳಿದ್ದಾರೆ.

ಪುನೀತ್​ ರಾಜ್​ಕುಮಾರ್​ ಜೊತೆ ಒಂದು ಸಿನಿಮಾ ಮಾಡಬೇಕು ಎಂಬುದು ಕಾಂತ ಅವರ ಕನಸಾಗಿತ್ತು. ಅದಕ್ಕೆ ‘ಮಹಾನುಭಾವ’ ಅಂತ ಟೈಟಲ್​ ಇಡಲು ನಿರ್ಧರಿಸಲಾಗಿತ್ತು. ಆ ಕುರಿತು ಮಾತುಕತೆ ಆರಂಭ ಆಗಿತ್ತು. ಇನ್ನೇನು ಪುನೀತ್​ ರಾಜ್​ಕುಮಾರ್ ಅವರು ಕಥೆ ಕೇಳಲು ಟೈಮ್​ ಫಿಕ್ಸ್​ ಮಾಡುವುದು ಬಾಕಿ ಇತ್ತು. ಆದರೆ ಅಷ್ಟರಲ್ಲಾಗಲೇ ವಿಧಿ ತನ್ನ ಆಟ ಆಡಿತು. ‘ಮಹಾನುಭಾವ’ ಸಿನಿಮಾ ಮಾಡಲು ಸಾಧ್ಯವಾಗಲಿಲ್ಲ. ಕೊನೇ ಪಕ್ಷ ಅದೇ ಶೀರ್ಷಿಕೆ ಇಟ್ಟುಕೊಂಡು ಹಾಡಿನ ಮೂಲಕ ನಮನ ಸಲ್ಲಿಸಲು ಕಾಂತ ಕನ್ನಲ್ಲಿ ನಿರ್ಧರಿಸಿದರು.

ಕಾಂತ ಬರೆದ ಸಾಲುಗಳನ್ನು ಕೇಳಿ ಸಖತ್​ ಮೆಚ್ಚಿಕೊಂಡ ಸಂಗೀತ ನಿರ್ದೇಶಕ ಶ್ರೀಧರ್​ ವಿ. ಸಂಭ್ರಮ್​ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಪುನೀತ್​ ಅವರ ಅಭಿಮಾನಿಯಾದ ನಿರ್ಮಾಪಕ ಸುನೀಲ್​ ಬಿ.ಎನ್​. ಅವರು ಇದಕ್ಕೆ ಬಂಡವಾಳ ಹಾಕಿದ್ದಾರೆ. ‘ಸಂಭ್ರಮ್​ ಸ್ಟುಡಿಯೋಸ್​’ ಯೂಟ್ಯೂಬ್​ ಚಾನೆಲ್​ನಲ್ಲಿ ಈ ಗೀತೆ ರಿಲೀಸ್​ ಆಗಲಿದೆ. ‘ಮಹಾನುಭಾವ’ ಹಾಡಿಗಾಗಿ ಅಪ್ಪು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದನ್ನೂ ಓದಿ:

‘ಕನ್ನಡದ ಕೋಟ್ಯಧಿಪತಿ’ಯಿಂದ ಪುನೀತ್​ಗೆ ಸಿಕ್ಕ ಸಂಭಾವನೆ ಎಷ್ಟು ಕೋಟಿ? ಆ ದುಡ್ಡಲ್ಲಿ ಆಗ್ತಿದೆ ಪುಣ್ಯದ ಕೆಲಸ

ಸೈನಿಕನ ಗೆಟಪ್​ನಲ್ಲಿ ಆಹಾ ಎಷ್ಟು ಚಂದ ಪುನೀತ್​; ಇಲ್ಲಿವೆ ‘ಜೇಮ್ಸ್​’ ಸಿನಿಮಾದ ಫೋಟೋಗಳು

Published On - 12:14 pm, Sun, 13 March 22

ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: 9 ಅಡಿ ಅಷ್ಟೇ ಬಾಕಿ
ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: 9 ಅಡಿ ಅಷ್ಟೇ ಬಾಕಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ