AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿದಾಗುತ್ತಿದೆ ಮೇಘನಾ ರಾಜ್ ನಟನೆಯ ‘ತತ್ಸಮ ತದ್ಭವ’ ಟೀಂ; ಮಹತಿ ವೈಷ್ಣವಿ ಭಟ್, ಅರವಿಂದ್ ಅಯ್ಯರ್ ಸೇರ್ಪಡೆ

Meghana Raj: ದಿನ ಕಳೆದಂತೆ ಸಿನಿಮಾ ತಂಡ ಹಿರಿದಾಗುತ್ತಿದೆ. ಅನೇಕ ಕಲಾವಿದರು ತಂಡವನ್ನು ಸೇರಿಕೊಳ್ಳುತ್ತಿದ್ದಾರೆ. ಅರವಿಂದ್ ಅಯ್ಯರ್ ಹಾಗೂ ಮಹತಿ ವೈಷ್ಣವಿ ಭಟ್ ಅವರು ಈ ಚಿತ್ರದಲ್ಲಿ ನಟಿಸುತ್ತಿರುವ ವಿಚಾರ ರಿವೀಲ್ ಆಗಿದೆ.

ಹಿರಿದಾಗುತ್ತಿದೆ ಮೇಘನಾ ರಾಜ್ ನಟನೆಯ ‘ತತ್ಸಮ ತದ್ಭವ’ ಟೀಂ; ಮಹತಿ ವೈಷ್ಣವಿ ಭಟ್, ಅರವಿಂದ್ ಅಯ್ಯರ್ ಸೇರ್ಪಡೆ
ಅರವಿಂದ್​-ಮೇಘನಾ-ಮಹತಿ
ರಾಜೇಶ್ ದುಗ್ಗುಮನೆ
|

Updated on:Mar 02, 2023 | 3:27 PM

Share

ನಟಿ ಮೇಘನಾ ರಾಜ್ (Meghana Raj) ಅವರು ‘ತತ್ಸಮ ತದ್ಭವ’ ಚಿತ್ರದ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಹಾಗೂ ಸೆಲೆಬ್ರಿಟಿ ವಲಯದಲ್ಲಿ ಸಾಕಷ್ಟು ನಿರೀಕ್ಷೆ ಇದೆ. ಇತ್ತೀಚೆಗೆ ಈ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಆಗಿ ಸಾಕಷ್ಟು ಸದ್ದು ಮಾಡಿತ್ತು. ಅನೇಕ ಸೆಲೆಬ್ರಿಟಿಗಳು ಮೇಘನಾಗೆ ಶುಭಕೋರಿದ್ದರು. ದಿನ ಕಳೆದಂತೆ ಸಿನಿಮಾ ತಂಡ ಹಿರಿದಾಗುತ್ತಿದೆ. ಅನೇಕ ಕಲಾವಿದರು ತಂಡವನ್ನು ಸೇರಿಕೊಳ್ಳುತ್ತಿದ್ದಾರೆ. ಅರವಿಂದ್ ಅಯ್ಯರ್ ಹಾಗೂ ಮಹತಿ ವೈಷ್ಣವಿ ಭಟ್ (Mahati Vaishnavi Bhat) ಅವರು ಈ ಚಿತ್ರದಲ್ಲಿ ನಟಿಸುತ್ತಿರುವ ವಿಚಾರ ರಿವೀಲ್ ಆಗಿದೆ.

ಅರವಿಂದ್ ಅಯ್ಯರ್

ಅರವಿಂದ್ ಅಯ್ಯರ್ ಅವರು ಸ್ಯಾಂಡಲ್​ವುಡ್​ನಲ್ಲಿ ಒಳ್ಳೊಳ್ಳೆಯ ಪಾತ್ರಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ರಕ್ಷಿತ್ ಶೆಟ್ಟಿ ನಟನೆಯ, ರಿಷಬ್ ಶೆಟ್ಟಿ ನಿರ್ದೇಶನದ ‘ಕಿರಿಕ್ ಪಾರ್ಟಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ಅರವಿಂದ್ ಅಯ್ಯರ್ ಮಾಡಿದ್ದ ಪಾತ್ರ ಗಮನ ಸೆಳೆದಿತ್ತು. ‘ಭೀಮಸೇನ ನಳಮಹಾರಾಜ’ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿ ಗಮನ ಸೆಳೆದರು. ಈಗ ಅವರು ‘ತತ್ಸಮ ತದ್ಭವ’ ತಂಡ ಸೇರಿಕೊಂಡಿದ್ದಾರೆ. ಮ್ಯಾಥ್ಯೂ ಹೆಸರಿನ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಅವರ ಮೊದಲ ಲುಕ್ ಪೋಸ್ಟರ್ ರಿಲೀಸ್ ಆಗಿದ್ದು ಗಮನ ಸೆಳೆದಿದೆ.

ಮಹತಿ ವೈಷ್ಣವಿ ಭಟ್

ನಟಿ ಮಹತಿ ವೈಷ್ಣವಿ ಭಟ್ ಕೂಡ ‘ತತ್ಸಮ ತದ್ಭವ’ ತಂಡ ಸೇರಿಕೊಂಡಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ 2016ರಲ್ಲಿ ಪ್ರಸಾರವಾದ ‘ಡ್ರಾಮಾ ಜ್ಯೂನಿಯರ್ಸ್’ ಮೊದಲ ಸೀಸನ್‌ನಲ್ಲಿ ಮಹತಿ ವೈಷ್ಣವಿ ಭಟ್ ಸ್ಪರ್ಧಿಸಿದ್ದರು. ಇದರಿಂದ ಅವರ ಜನಪ್ರಿಯತೆ ಹೆಚ್ಚಿತು. ‘ಗಟ್ಟಿಮೇಳ’ ಧಾರಾವಾಹಿಯಲ್ಲಿ ಪ್ರಮುಖ ಪಾತ್ರಧಾರಿ ಅಮೂಲ್ಯಳ ಕಿರಿಯ ಸಹೋದರಿ ಅಂಜಲಿ ಪಾತ್ರದಲ್ಲಿ ಮಹತಿ ನಟಿಸುತ್ತಿದ್ದಾರೆ. ಇದರ ಜೊತೆ ‘ಗುರು ಶಿಷ್ಯರು’ ಸಿನಿಮಾದಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಈಗ ಅವರು ಮೇಘನಾ ರಾಜ್ ಸಿನಿಮಾದಲ್ಲಿ ನಿಧಿ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ನನ್ನದು ಪ್ರತಿ ಹದಿಹರೆಯದವರಿಗೂ ಅನ್ವಯಿಸುವ ಪಾತ್ರ. ಮುಗ್ಧತೆ ಮತ್ತು ಭಾವನೆಗಳ ಮಿಶ್ರಣವನ್ನು ಈ ಪಾತ್ರ ಹೊಂದಿದೆ. ಈ ಪಾತ್ರ ನಿರ್ವಹಿಸಿದ ಸವಾಲು ತುಂಬಾ ಇಷ್ಟವಾಯಿತು’ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ
Image
Meghana Raj: ಮೇಘನಾ ರಾಜ್​ ಕೈ ಮೇಲೆ ಶಾಶ್ವತವಾಗಿ ಅಚ್ಚಾಯಿತು ಚಿರು, ರಾಯನ್​ ಹೆಸರು; ಹೇಗಿದೆ ನೋಡಿ ಟ್ಯಾಟೂ
Image
ಎರಡನೇ ಮದುವೆ ಆಗಬೇಕೇ ಎಂಬ ಪ್ರಶ್ನೆಯನ್ನು ನನಗೆ ನಾನು ಕೇಳಿಕೊಂಡಿಲ್ಲ ಎಂದ ಮೇಘನಾ ರಾಜ್
Image
Meghana Raj: ಅಮ್ಮ ಅಂತ ಹೇಳಿಕೊಟ್ರೂ ಅಪ್ಪ ಎನ್ನುತ್ತಾನೆ ರಾಯನ್​ ರಾಜ್​ ಸರ್ಜಾ; ಇಲ್ಲಿದೆ ಮೇಘನಾ ರಾಜ್​ ಮಗನ ಕ್ಯೂಟ್​ ವಿಡಿಯೋ
Image
‘ಡಾನ್ಸಿಂಗ್​ ಚಾಂಪಿಯನ್​’ ಶೋ​ ನಡುವೆ ಮೇಘನಾ ರಾಜ್​ ಫೋಟೋಶೂಟ್​; ಇಲ್ಲಿವೆ ಚೆಂದದ ಫೋಟೋಗಳು

 ‘ತತ್ಸಮ ತದ್ಭವ’ ಚಿತ್ರದ ಬಗ್ಗೆ

ಮೇಘನಾ ರಾಜ್ ಅವರು ಸಾಕಷ್ಟು ಏಳುಬೀಳುಗಳನ್ನು ಕಂಡರು. ಪತಿ ಚಿರಂಜೀವಿ ನಿಧನದ ನಂತರದಲ್ಲಿ ಕಣ್ಣೀರಲ್ಲಿ ಕೈತೊಳೆಯುವಂತಾಯಿತು. ನಂತರ ರಾಯನ್ ಜನಿಸಿದೆ. ಆ ಬಳಿಕ ಮಗನ ಆರೈಕೆಯಲ್ಲಿ ಅವರು ಬ್ಯುಸಿ ಆದರು. ಈಗ ‘ತತ್ಸಮ ತದ್ಭವ’ ಸಿನಿಮಾ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಪನ್ನಗ ಭರಣ ಬಂಡವಾಳ ಹೂಡುತ್ತಿದ್ದಾರೆ. ವಿಶಾಲ್​ ಆತ್ರೇಯಾ ಅವರು ನಿರ್ದೇಶನ ಮಾಡಲಿದ್ದಾರೆ. ಪ್ರಜ್ವಲ್ ದೇವರಾಜ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:25 pm, Thu, 2 March 23

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ