AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿದಾಗುತ್ತಿದೆ ಮೇಘನಾ ರಾಜ್ ನಟನೆಯ ‘ತತ್ಸಮ ತದ್ಭವ’ ಟೀಂ; ಮಹತಿ ವೈಷ್ಣವಿ ಭಟ್, ಅರವಿಂದ್ ಅಯ್ಯರ್ ಸೇರ್ಪಡೆ

Meghana Raj: ದಿನ ಕಳೆದಂತೆ ಸಿನಿಮಾ ತಂಡ ಹಿರಿದಾಗುತ್ತಿದೆ. ಅನೇಕ ಕಲಾವಿದರು ತಂಡವನ್ನು ಸೇರಿಕೊಳ್ಳುತ್ತಿದ್ದಾರೆ. ಅರವಿಂದ್ ಅಯ್ಯರ್ ಹಾಗೂ ಮಹತಿ ವೈಷ್ಣವಿ ಭಟ್ ಅವರು ಈ ಚಿತ್ರದಲ್ಲಿ ನಟಿಸುತ್ತಿರುವ ವಿಚಾರ ರಿವೀಲ್ ಆಗಿದೆ.

ಹಿರಿದಾಗುತ್ತಿದೆ ಮೇಘನಾ ರಾಜ್ ನಟನೆಯ ‘ತತ್ಸಮ ತದ್ಭವ’ ಟೀಂ; ಮಹತಿ ವೈಷ್ಣವಿ ಭಟ್, ಅರವಿಂದ್ ಅಯ್ಯರ್ ಸೇರ್ಪಡೆ
ಅರವಿಂದ್​-ಮೇಘನಾ-ಮಹತಿ
ರಾಜೇಶ್ ದುಗ್ಗುಮನೆ
|

Updated on:Mar 02, 2023 | 3:27 PM

Share

ನಟಿ ಮೇಘನಾ ರಾಜ್ (Meghana Raj) ಅವರು ‘ತತ್ಸಮ ತದ್ಭವ’ ಚಿತ್ರದ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಹಾಗೂ ಸೆಲೆಬ್ರಿಟಿ ವಲಯದಲ್ಲಿ ಸಾಕಷ್ಟು ನಿರೀಕ್ಷೆ ಇದೆ. ಇತ್ತೀಚೆಗೆ ಈ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಆಗಿ ಸಾಕಷ್ಟು ಸದ್ದು ಮಾಡಿತ್ತು. ಅನೇಕ ಸೆಲೆಬ್ರಿಟಿಗಳು ಮೇಘನಾಗೆ ಶುಭಕೋರಿದ್ದರು. ದಿನ ಕಳೆದಂತೆ ಸಿನಿಮಾ ತಂಡ ಹಿರಿದಾಗುತ್ತಿದೆ. ಅನೇಕ ಕಲಾವಿದರು ತಂಡವನ್ನು ಸೇರಿಕೊಳ್ಳುತ್ತಿದ್ದಾರೆ. ಅರವಿಂದ್ ಅಯ್ಯರ್ ಹಾಗೂ ಮಹತಿ ವೈಷ್ಣವಿ ಭಟ್ (Mahati Vaishnavi Bhat) ಅವರು ಈ ಚಿತ್ರದಲ್ಲಿ ನಟಿಸುತ್ತಿರುವ ವಿಚಾರ ರಿವೀಲ್ ಆಗಿದೆ.

ಅರವಿಂದ್ ಅಯ್ಯರ್

ಅರವಿಂದ್ ಅಯ್ಯರ್ ಅವರು ಸ್ಯಾಂಡಲ್​ವುಡ್​ನಲ್ಲಿ ಒಳ್ಳೊಳ್ಳೆಯ ಪಾತ್ರಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ರಕ್ಷಿತ್ ಶೆಟ್ಟಿ ನಟನೆಯ, ರಿಷಬ್ ಶೆಟ್ಟಿ ನಿರ್ದೇಶನದ ‘ಕಿರಿಕ್ ಪಾರ್ಟಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ಅರವಿಂದ್ ಅಯ್ಯರ್ ಮಾಡಿದ್ದ ಪಾತ್ರ ಗಮನ ಸೆಳೆದಿತ್ತು. ‘ಭೀಮಸೇನ ನಳಮಹಾರಾಜ’ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿ ಗಮನ ಸೆಳೆದರು. ಈಗ ಅವರು ‘ತತ್ಸಮ ತದ್ಭವ’ ತಂಡ ಸೇರಿಕೊಂಡಿದ್ದಾರೆ. ಮ್ಯಾಥ್ಯೂ ಹೆಸರಿನ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಅವರ ಮೊದಲ ಲುಕ್ ಪೋಸ್ಟರ್ ರಿಲೀಸ್ ಆಗಿದ್ದು ಗಮನ ಸೆಳೆದಿದೆ.

ಮಹತಿ ವೈಷ್ಣವಿ ಭಟ್

ನಟಿ ಮಹತಿ ವೈಷ್ಣವಿ ಭಟ್ ಕೂಡ ‘ತತ್ಸಮ ತದ್ಭವ’ ತಂಡ ಸೇರಿಕೊಂಡಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ 2016ರಲ್ಲಿ ಪ್ರಸಾರವಾದ ‘ಡ್ರಾಮಾ ಜ್ಯೂನಿಯರ್ಸ್’ ಮೊದಲ ಸೀಸನ್‌ನಲ್ಲಿ ಮಹತಿ ವೈಷ್ಣವಿ ಭಟ್ ಸ್ಪರ್ಧಿಸಿದ್ದರು. ಇದರಿಂದ ಅವರ ಜನಪ್ರಿಯತೆ ಹೆಚ್ಚಿತು. ‘ಗಟ್ಟಿಮೇಳ’ ಧಾರಾವಾಹಿಯಲ್ಲಿ ಪ್ರಮುಖ ಪಾತ್ರಧಾರಿ ಅಮೂಲ್ಯಳ ಕಿರಿಯ ಸಹೋದರಿ ಅಂಜಲಿ ಪಾತ್ರದಲ್ಲಿ ಮಹತಿ ನಟಿಸುತ್ತಿದ್ದಾರೆ. ಇದರ ಜೊತೆ ‘ಗುರು ಶಿಷ್ಯರು’ ಸಿನಿಮಾದಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಈಗ ಅವರು ಮೇಘನಾ ರಾಜ್ ಸಿನಿಮಾದಲ್ಲಿ ನಿಧಿ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ನನ್ನದು ಪ್ರತಿ ಹದಿಹರೆಯದವರಿಗೂ ಅನ್ವಯಿಸುವ ಪಾತ್ರ. ಮುಗ್ಧತೆ ಮತ್ತು ಭಾವನೆಗಳ ಮಿಶ್ರಣವನ್ನು ಈ ಪಾತ್ರ ಹೊಂದಿದೆ. ಈ ಪಾತ್ರ ನಿರ್ವಹಿಸಿದ ಸವಾಲು ತುಂಬಾ ಇಷ್ಟವಾಯಿತು’ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ
Image
Meghana Raj: ಮೇಘನಾ ರಾಜ್​ ಕೈ ಮೇಲೆ ಶಾಶ್ವತವಾಗಿ ಅಚ್ಚಾಯಿತು ಚಿರು, ರಾಯನ್​ ಹೆಸರು; ಹೇಗಿದೆ ನೋಡಿ ಟ್ಯಾಟೂ
Image
ಎರಡನೇ ಮದುವೆ ಆಗಬೇಕೇ ಎಂಬ ಪ್ರಶ್ನೆಯನ್ನು ನನಗೆ ನಾನು ಕೇಳಿಕೊಂಡಿಲ್ಲ ಎಂದ ಮೇಘನಾ ರಾಜ್
Image
Meghana Raj: ಅಮ್ಮ ಅಂತ ಹೇಳಿಕೊಟ್ರೂ ಅಪ್ಪ ಎನ್ನುತ್ತಾನೆ ರಾಯನ್​ ರಾಜ್​ ಸರ್ಜಾ; ಇಲ್ಲಿದೆ ಮೇಘನಾ ರಾಜ್​ ಮಗನ ಕ್ಯೂಟ್​ ವಿಡಿಯೋ
Image
‘ಡಾನ್ಸಿಂಗ್​ ಚಾಂಪಿಯನ್​’ ಶೋ​ ನಡುವೆ ಮೇಘನಾ ರಾಜ್​ ಫೋಟೋಶೂಟ್​; ಇಲ್ಲಿವೆ ಚೆಂದದ ಫೋಟೋಗಳು

 ‘ತತ್ಸಮ ತದ್ಭವ’ ಚಿತ್ರದ ಬಗ್ಗೆ

ಮೇಘನಾ ರಾಜ್ ಅವರು ಸಾಕಷ್ಟು ಏಳುಬೀಳುಗಳನ್ನು ಕಂಡರು. ಪತಿ ಚಿರಂಜೀವಿ ನಿಧನದ ನಂತರದಲ್ಲಿ ಕಣ್ಣೀರಲ್ಲಿ ಕೈತೊಳೆಯುವಂತಾಯಿತು. ನಂತರ ರಾಯನ್ ಜನಿಸಿದೆ. ಆ ಬಳಿಕ ಮಗನ ಆರೈಕೆಯಲ್ಲಿ ಅವರು ಬ್ಯುಸಿ ಆದರು. ಈಗ ‘ತತ್ಸಮ ತದ್ಭವ’ ಸಿನಿಮಾ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಪನ್ನಗ ಭರಣ ಬಂಡವಾಳ ಹೂಡುತ್ತಿದ್ದಾರೆ. ವಿಶಾಲ್​ ಆತ್ರೇಯಾ ಅವರು ನಿರ್ದೇಶನ ಮಾಡಲಿದ್ದಾರೆ. ಪ್ರಜ್ವಲ್ ದೇವರಾಜ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:25 pm, Thu, 2 March 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?