AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಭಾಷೆಯಲ್ಲಿ ಜುಲೈ 25ಕ್ಕೆ ತೆರೆಕಾಣಲಿದೆ ‘ಮಹಾವತಾರ ನರಸಿಂಹ’ ಆನಿಮೇಷನ್‌ ಸಿನಿಮಾ

‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯು ಕರ್ನಾಟಕದಲ್ಲಿ ‘ಮಹಾವತಾರ ನರಸಿಂಹ' ಸಿನಿಮಾವನ್ನು ಬಿಡುಗಡೆ ಮಾಡುತ್ತಿದೆ. ಈ ಸಿನಿಮಾಗೆ ಅಶ್ವಿನ್ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಶಿಲ್ಪಾ ಧವನ್ ಅವರು ನಿರ್ಮಾಣ ಮಾಡಿದ್ದಾರೆ. ಇದು ಆನಿಮೇಷನ್ ಚಿತ್ರವಾಗಿದ್ದು, ಕನ್ನಡದ ಜೊತೆ ತಮಿಳು, ತೆಲುಗು ಮುಂತಾದ ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ.

ಬಹುಭಾಷೆಯಲ್ಲಿ ಜುಲೈ 25ಕ್ಕೆ ತೆರೆಕಾಣಲಿದೆ ‘ಮಹಾವತಾರ ನರಸಿಂಹ' ಆನಿಮೇಷನ್‌ ಸಿನಿಮಾ
Mahavatar Narsimha Movie Team
ಮದನ್​ ಕುಮಾರ್​
|

Updated on: Jul 22, 2025 | 10:42 PM

Share

ಸಿನಿಪ್ರಿಯರ ಫೇವರಿಟ್ ಲಿಸ್ಟ್​ನಲ್ಲಿ ‘ಭಕ್ತ ಪ್ರಹ್ಲಾದ’ ಸಿನಿಮಾ ಇಂದಿಗೂ ಸ್ಥಾನ ಪಡೆದುಕೊಂಡಿದೆ. ಆ ಸಿನಿಮಾದಲ್ಲಿ ಡಾ. ರಾಜ್​ಕುಮಾರ್ ಮತ್ತು ಪುನೀತ್ ರಾಜ್​ಕುಮಾರ್ ಅವರು ನಟಿಸಿದ್ದರು. ಈಗ ಭಕ್ತ ಪ್ರಹ್ಲಾದ ಹಾಗೂ ನರಸಿಂಹಾವತಾರದ ಕಥೆಯನ್ನು ಮುಂದಿನ ತಲೆಮಾರಿನ ಪ್ರೇಕ್ಷಕರಿಗೆ ತಿಳಿಸಲು ಒಂದು ಆನಿಮೇಷನ್‍ ಸಿನಿಮಾ ಸಿದ್ಧವಾಗಿದೆ. ‘ಮಹಾವತಾರ ನರಸಿಂಹ’ (Mahavatar Narsimha) ಎಂದು ಈ ಚಿತ್ರಕ್ಕೆ ಹೆಸರು ಇಡಲಾಗಿದೆ. ಈಗಾಗಲೇ ಈ ಸಿನಿಮಾದ ಟ್ರೇಲರ್ ಗಮನ ಸೆಳೆದಿದೆ. ಜುಲೈ 25ಕ್ಕೆ ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ‘ಹೊಂಬಾಳೆ ಫಿಲ್ಮ್ಸ್’ (Hombale Films) ಮೂಲಕ ಕರ್ನಾಟಕದಲ್ಲಿ ‘ಮಹಾವತಾರ ನರಸಿಂಹ’ ಸಿನಿಮಾವನ್ನು ಬಿಡುಗಡೆ ಮಾಡಲಾಗುತ್ತಿದೆ.

‘ಮಹಾವತಾರ ನರಸಿಂಹ’ ಸಿನಿಮಾ ದೇಶಾದ್ಯಂತ ಬಿಡುಗಡೆ ಆಗಲಿರುವುದು ವಿಶೇಷ. ಜುಲೈ 22ರಂದು ಬೆಂಗಳೂರಿನಲ್ಲಿ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಚಿತ್ರದ ನಿರ್ದೇಶಕ ಅಶ್ವಿನ್ ಕುಮಾರ್ ಮಾತನಾಡಿದರು. ‘2018ರಲ್ಲಿ ಗೆಳೆಯರೆಲ್ಲ ಸೇರಿ ಭಕ್ತ ಪ್ರಹ್ಲಾದ ಬಗ್ಗೆ ಚರ್ಚೆ ಮಾಡಿದೆವು. ಆ ನಂತರ ನರಸಿಂಹ ಸ್ವಾಮಿ ಕುರಿತು ಸಿನಿಮಾ ಮಾಡಲು ಕನ್ನಡದ ಭಕ್ತ ಪ್ರಹ್ಲಾದ ಸೇರಿದಂತೆ ಹಲವು ಸಿನಿಮಾಗಳು ಮತ್ತು ಪುರಾಣಗಳನ್ನು ಓದಿ ಚಿತ್ರಕಥೆ ಮಾಡಲಾಗಿದೆ’ ಎಂದು ಅವರು ಹೇಳಿದರು.

‘ನಮ್ಮ ತಂಡ ಈ ಚಿತ್ರಕ್ಕಾಗಿ 5 ವರ್ಷ ಶ್ರಮ ಹಾಕಿದೆ. ಮುಖ್ಯವಾಗಿ ನಾವು ಈ ಸಿನಿಮಾವನ್ನು ‘ಭಕ್ತ ಪ್ರಹ್ಲಾದ’ ಚಿತ್ರವನ್ನು ಮೂಲವಾಗಿಟ್ಟುಕೊಂಡು ಮಾಡಿದ್ದೇವೆ. ಸಂಪೂರ್ಣ ಆ್ಯನಿಮೇಷನ್‍ ಸಿನಿಮಾ ಮಾಡುವುದು ಸುಲಭವಲ್ಲ. ಸಾಕಷ್ಟು ತಾಂತ್ರಿಕ ಸಮಸ್ಯೆಗಳಿವೆ. ಅದನ್ನೆಲ್ಲ ಮೀರಿ ನಾಲ್ಕೂವರೆ ವರ್ಷಗಳಲ್ಲಿ ಈ ಸಿನಿಮಾ ರೂಪಿಸಿದ್ದೇವೆ. ಈ ಸರಣಿಯ ಮುಂದುವರಿದ ಭಾಗವಾಗಿ ‘ಮಹಾವತಾರ ಪರಶುರಾಮ’ ಸಿನಿಮಾ ಮಾಡಲು ಯೋಜನೆ ಹಾಕಿಕೊಂಡಿದ್ದೇವೆ’ ಎಂದು ನಿರ್ದೇಶಕ ಅಶ್ವಿನ್ ಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯ ಪರವಾಗಿ ಆದರ್ಶ ಅವರು ಮಾತನಾಡಿದರು. ‘ನಮ್ಮ ತಂಡ ಸಿನಿಮಾ ನೋಡಿದೆ. ಈ ಚಿತ್ರವನ್ನು ನಾವು ಅರ್ಪಿಸುತ್ತಿದ್ದೇವೆ. ರಾಜ್ಯಾದ್ಯಂತ 100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾವನ್ನು ಬಿಡುಗಡೆ ಮಾಡುವ ಯೋಚನೆ ಇದೆ’ ಎಂದು ಅವರು ಹೇಳಿದರು. ‘ಮಹಾವತಾರ ನರಸಿಂಹ’ ಸಿನಿಮಾವನ್ನು ಅಶ್ವಿನ್‍ ಕುಮಾರ್ ಪತ್ನಿ ಶಿಲ್ಪಾ ಧವನ್ ಅವರು ನಿರ್ಮಿಸಿದ್ದಾರೆ.

ಇದನ್ನೂ ಓದಿ: ಹೊಂಬಾಳೆ ಜೊತೆಗೆ 3 ಸಿನಿಮಾಕ್ಕೆ ಒಪ್ಪಂದ: ಕಾರಣ ತಿಳಿಸಿದ ಪ್ರಭಾಸ್

ಶಿಲ್ಪಾ ಧವನ್ ಮಾತನಾಡಿ, ‘ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ ಆಶೀರ್ವಾದದಿಂದ ಸಿನಿಮಾ ರಿಲೀಸ್ ಮಾಡುತ್ತಿದ್ದೇವೆ. ಹೊಂಬಾಳೆ ಸಂಸ್ಥೆ ಜೊತೆ ಕೈ ಜೋಡಿಸಿದ್ದು ಬಹಳ ಖುಷಿ ಆಗಿದೆ. ನಮ್ಮ ನಿರ್ಮಾಣದ ಮೊದಲ ಸಿನಿಮಾ ಇದು. ನಮ್ಮ ಕ್ಲೀಂ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಇನ್ನಷ್ಟು ಸಿನಿಮಾಗಳನ್ನು ನಾವು ಮಾಡುತ್ತೇವೆ. ಈ ಸಿನಿಮಾವನ್ನು ಅತ್ಯುತ್ತಮ ಆ್ಯನಿಮೇಷನ್‌ ತಂತ್ರಜ್ಞಾನದ ಮೂಲಕ ಮಾಡಲಾಗಿದೆ. ಇದು ಡಬ್ಬಿಂಗ್ ಸಿನಿಮಾ ಅಲ್ಲ, ಕನ್ನಡ ಸಿನಿಮಾ’ ಎಂದು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ