AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಭಾಷೆಯಲ್ಲಿ ಜುಲೈ 25ಕ್ಕೆ ತೆರೆಕಾಣಲಿದೆ ‘ಮಹಾವತಾರ ನರಸಿಂಹ’ ಆನಿಮೇಷನ್‌ ಸಿನಿಮಾ

‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯು ಕರ್ನಾಟಕದಲ್ಲಿ ‘ಮಹಾವತಾರ ನರಸಿಂಹ' ಸಿನಿಮಾವನ್ನು ಬಿಡುಗಡೆ ಮಾಡುತ್ತಿದೆ. ಈ ಸಿನಿಮಾಗೆ ಅಶ್ವಿನ್ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಶಿಲ್ಪಾ ಧವನ್ ಅವರು ನಿರ್ಮಾಣ ಮಾಡಿದ್ದಾರೆ. ಇದು ಆನಿಮೇಷನ್ ಚಿತ್ರವಾಗಿದ್ದು, ಕನ್ನಡದ ಜೊತೆ ತಮಿಳು, ತೆಲುಗು ಮುಂತಾದ ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ.

ಬಹುಭಾಷೆಯಲ್ಲಿ ಜುಲೈ 25ಕ್ಕೆ ತೆರೆಕಾಣಲಿದೆ ‘ಮಹಾವತಾರ ನರಸಿಂಹ' ಆನಿಮೇಷನ್‌ ಸಿನಿಮಾ
Mahavatar Narsimha Movie Team
ಮದನ್​ ಕುಮಾರ್​
|

Updated on: Jul 22, 2025 | 10:42 PM

Share

ಸಿನಿಪ್ರಿಯರ ಫೇವರಿಟ್ ಲಿಸ್ಟ್​ನಲ್ಲಿ ‘ಭಕ್ತ ಪ್ರಹ್ಲಾದ’ ಸಿನಿಮಾ ಇಂದಿಗೂ ಸ್ಥಾನ ಪಡೆದುಕೊಂಡಿದೆ. ಆ ಸಿನಿಮಾದಲ್ಲಿ ಡಾ. ರಾಜ್​ಕುಮಾರ್ ಮತ್ತು ಪುನೀತ್ ರಾಜ್​ಕುಮಾರ್ ಅವರು ನಟಿಸಿದ್ದರು. ಈಗ ಭಕ್ತ ಪ್ರಹ್ಲಾದ ಹಾಗೂ ನರಸಿಂಹಾವತಾರದ ಕಥೆಯನ್ನು ಮುಂದಿನ ತಲೆಮಾರಿನ ಪ್ರೇಕ್ಷಕರಿಗೆ ತಿಳಿಸಲು ಒಂದು ಆನಿಮೇಷನ್‍ ಸಿನಿಮಾ ಸಿದ್ಧವಾಗಿದೆ. ‘ಮಹಾವತಾರ ನರಸಿಂಹ’ (Mahavatar Narsimha) ಎಂದು ಈ ಚಿತ್ರಕ್ಕೆ ಹೆಸರು ಇಡಲಾಗಿದೆ. ಈಗಾಗಲೇ ಈ ಸಿನಿಮಾದ ಟ್ರೇಲರ್ ಗಮನ ಸೆಳೆದಿದೆ. ಜುಲೈ 25ಕ್ಕೆ ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ‘ಹೊಂಬಾಳೆ ಫಿಲ್ಮ್ಸ್’ (Hombale Films) ಮೂಲಕ ಕರ್ನಾಟಕದಲ್ಲಿ ‘ಮಹಾವತಾರ ನರಸಿಂಹ’ ಸಿನಿಮಾವನ್ನು ಬಿಡುಗಡೆ ಮಾಡಲಾಗುತ್ತಿದೆ.

‘ಮಹಾವತಾರ ನರಸಿಂಹ’ ಸಿನಿಮಾ ದೇಶಾದ್ಯಂತ ಬಿಡುಗಡೆ ಆಗಲಿರುವುದು ವಿಶೇಷ. ಜುಲೈ 22ರಂದು ಬೆಂಗಳೂರಿನಲ್ಲಿ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಚಿತ್ರದ ನಿರ್ದೇಶಕ ಅಶ್ವಿನ್ ಕುಮಾರ್ ಮಾತನಾಡಿದರು. ‘2018ರಲ್ಲಿ ಗೆಳೆಯರೆಲ್ಲ ಸೇರಿ ಭಕ್ತ ಪ್ರಹ್ಲಾದ ಬಗ್ಗೆ ಚರ್ಚೆ ಮಾಡಿದೆವು. ಆ ನಂತರ ನರಸಿಂಹ ಸ್ವಾಮಿ ಕುರಿತು ಸಿನಿಮಾ ಮಾಡಲು ಕನ್ನಡದ ಭಕ್ತ ಪ್ರಹ್ಲಾದ ಸೇರಿದಂತೆ ಹಲವು ಸಿನಿಮಾಗಳು ಮತ್ತು ಪುರಾಣಗಳನ್ನು ಓದಿ ಚಿತ್ರಕಥೆ ಮಾಡಲಾಗಿದೆ’ ಎಂದು ಅವರು ಹೇಳಿದರು.

‘ನಮ್ಮ ತಂಡ ಈ ಚಿತ್ರಕ್ಕಾಗಿ 5 ವರ್ಷ ಶ್ರಮ ಹಾಕಿದೆ. ಮುಖ್ಯವಾಗಿ ನಾವು ಈ ಸಿನಿಮಾವನ್ನು ‘ಭಕ್ತ ಪ್ರಹ್ಲಾದ’ ಚಿತ್ರವನ್ನು ಮೂಲವಾಗಿಟ್ಟುಕೊಂಡು ಮಾಡಿದ್ದೇವೆ. ಸಂಪೂರ್ಣ ಆ್ಯನಿಮೇಷನ್‍ ಸಿನಿಮಾ ಮಾಡುವುದು ಸುಲಭವಲ್ಲ. ಸಾಕಷ್ಟು ತಾಂತ್ರಿಕ ಸಮಸ್ಯೆಗಳಿವೆ. ಅದನ್ನೆಲ್ಲ ಮೀರಿ ನಾಲ್ಕೂವರೆ ವರ್ಷಗಳಲ್ಲಿ ಈ ಸಿನಿಮಾ ರೂಪಿಸಿದ್ದೇವೆ. ಈ ಸರಣಿಯ ಮುಂದುವರಿದ ಭಾಗವಾಗಿ ‘ಮಹಾವತಾರ ಪರಶುರಾಮ’ ಸಿನಿಮಾ ಮಾಡಲು ಯೋಜನೆ ಹಾಕಿಕೊಂಡಿದ್ದೇವೆ’ ಎಂದು ನಿರ್ದೇಶಕ ಅಶ್ವಿನ್ ಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯ ಪರವಾಗಿ ಆದರ್ಶ ಅವರು ಮಾತನಾಡಿದರು. ‘ನಮ್ಮ ತಂಡ ಸಿನಿಮಾ ನೋಡಿದೆ. ಈ ಚಿತ್ರವನ್ನು ನಾವು ಅರ್ಪಿಸುತ್ತಿದ್ದೇವೆ. ರಾಜ್ಯಾದ್ಯಂತ 100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾವನ್ನು ಬಿಡುಗಡೆ ಮಾಡುವ ಯೋಚನೆ ಇದೆ’ ಎಂದು ಅವರು ಹೇಳಿದರು. ‘ಮಹಾವತಾರ ನರಸಿಂಹ’ ಸಿನಿಮಾವನ್ನು ಅಶ್ವಿನ್‍ ಕುಮಾರ್ ಪತ್ನಿ ಶಿಲ್ಪಾ ಧವನ್ ಅವರು ನಿರ್ಮಿಸಿದ್ದಾರೆ.

ಇದನ್ನೂ ಓದಿ: ಹೊಂಬಾಳೆ ಜೊತೆಗೆ 3 ಸಿನಿಮಾಕ್ಕೆ ಒಪ್ಪಂದ: ಕಾರಣ ತಿಳಿಸಿದ ಪ್ರಭಾಸ್

ಶಿಲ್ಪಾ ಧವನ್ ಮಾತನಾಡಿ, ‘ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ ಆಶೀರ್ವಾದದಿಂದ ಸಿನಿಮಾ ರಿಲೀಸ್ ಮಾಡುತ್ತಿದ್ದೇವೆ. ಹೊಂಬಾಳೆ ಸಂಸ್ಥೆ ಜೊತೆ ಕೈ ಜೋಡಿಸಿದ್ದು ಬಹಳ ಖುಷಿ ಆಗಿದೆ. ನಮ್ಮ ನಿರ್ಮಾಣದ ಮೊದಲ ಸಿನಿಮಾ ಇದು. ನಮ್ಮ ಕ್ಲೀಂ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಇನ್ನಷ್ಟು ಸಿನಿಮಾಗಳನ್ನು ನಾವು ಮಾಡುತ್ತೇವೆ. ಈ ಸಿನಿಮಾವನ್ನು ಅತ್ಯುತ್ತಮ ಆ್ಯನಿಮೇಷನ್‌ ತಂತ್ರಜ್ಞಾನದ ಮೂಲಕ ಮಾಡಲಾಗಿದೆ. ಇದು ಡಬ್ಬಿಂಗ್ ಸಿನಿಮಾ ಅಲ್ಲ, ಕನ್ನಡ ಸಿನಿಮಾ’ ಎಂದು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು