AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿ ನಗರಕ್ಕೆ ಎಂಟ್ರಿ ಕೊಟ್ಟ ಮಹೇಶ್ ಬಾಬು: ಏನಿದು ಕತೆ?

Mahesh Babu: ಟಾಲಿವುಡ್​ನ ಸ್ಟಾರ್ ನಟ ಮಹೇಶ್ ಬಾಬು ತೆಲುಗು ಸಿನಿಮಾಗಳ ಹೊರತಾಗಿ ಇನ್ಯಾವುದೇ ಭಾಷೆಯ ಸಿನಿಮಾಗಳಲ್ಲಿ ನಟಿಸಿಲ್ಲ. ಅವರೇ ಹೇಳಿರುವಂತೆ ಬಾಲಿವುಡ್​ನಿಂದ ಹಲವು ಅವಕಾಶಗಳು ಬಂದಿವೆಯಾದರೂ ಈವರೆಗೆ ಅವರು ಬೇರೆ ಚಿತ್ರರಂಗಕ್ಕೆ ಹೋಗಿಲ್ಲ. ಆದರೆ ಈಗ ಮಹೇಶ್ ಬಾಬು ಗಾಂಧಿನಗರಕ್ಕೆ ಎಂಟ್ರಿ ಕೊಟ್ಟಿದ್ದಾರೆ!

ಗಾಂಧಿ ನಗರಕ್ಕೆ ಎಂಟ್ರಿ ಕೊಟ್ಟ ಮಹೇಶ್ ಬಾಬು: ಏನಿದು ಕತೆ?
ಮಹೇಶ್ ಬಾಬು
ಮಂಜುನಾಥ ಸಿ.
|

Updated on: Sep 16, 2023 | 5:44 PM

Share

ಮಹೇಶ್ ಬಾಬು (Mahesh Babu) ಟಾಲಿವುಡ್​ನ (Tollywood) ದೊಡ್ಡ ಸ್ಟಾರ್​ ನಟರಲ್ಲಿ ಒಬ್ಬರು. ಬಾಲಿವುಡ್​ನಿಂದ ಹಲವು ಆಫರ್​ಗಳು ಮಹೇಶ್ ಬಾಬುಗೆ ಬಂದಿದ್ದವು, ಆದರೆ ಅವರು ಮಾತ್ರ ತೆಲುಗು ಚಿತ್ರರಂಗದಲ್ಲಿಯೇ ಉಳಿದಿದ್ದಾರೆ. ಇದೀಗ ರಾಜಮೌಳಿ ನಿರ್ದೇಶನದ ಸಿನಿಮಾಕ್ಕಾಗಿ ರೆಡಿಯಾಗುತ್ತಿರುವ ಮಹೇಶ್ ಬಾಬು ಹಠಾತ್ತನೆ ಗಾಂಧಿ ನಗರಕ್ಕೆ ಎಂಟ್ರಿ ನೀಡಿದ್ದಾರೆ. ಸುದ್ದಿ ತುಸು ಆಶ್ಚರ್ಯಕ್ಕೆ ಕಾರಣವಾಗಬಹುದು ಆದರೆ ಮಹೇಶ್ ಬಾಬು ಗಾಂಧಿ ನಗರಕ್ಕೆ ಎಂಟ್ರಿ ಕೊಡುತ್ತಿರುವುದಂತೂ ಸತ್ಯ. ಆದರೆ ಸಿನಿಮಾ ನಟನಾಗಿಯೋ, ನಿರ್ಮಾಪಕನಾಗಿಯೋ ಅಲ್ಲ. ಬದಲಿಗೆ ಪ್ರದರ್ಶಕರಾಗಿ.

ಬೆಂಗಳೂರಿನ ಗಾಂಧಿ ನಗರ ಏರಿಯಾದಲ್ಲಿ ಮಹೇಶ್ ಬಾಬು ದೊಡ್ಡ ಮಲ್ಟಿಪ್ಲೆಕ್ಸ್ ಒಂದನ್ನು ನಿರ್ಮಾಣ ಮಾಡುತ್ತಿದ್ದಾರೆ. ವಿಶೇಷವೆಂದರೆ ಈ ಹಿಂದೆ ಕಪಾಲಿ ಚಿತ್ರಮಂದಿರ ಇದ್ದ ಜಾಗದಲ್ಲಿಯೇ ದೊಡ್ಡದಾಗಿ ತಮ್ಮ ಮಲ್ಟಿಪ್ಲೆಕ್ಸ್ ಅನ್ನು ಮಹೇಶ್ ಬಾಬು ಪ್ರಾರಂಭ ಮಾಡುತ್ತಿದ್ದಾರೆ. ಈಗಾಗಲೇ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಕೆಲವೇ ತಿಂಗಳಲ್ಲಿ ಕಾರ್ಯಾರಂಭ ಮಾಡಲಿದೆ.

ಮಹೇಶ್ ಬಾಬು ಎಎಂಬಿ ಹೆಸರಿನ ಮಲ್ಟಿಪ್ಲೆಕ್ಸ್ ಚೈನ್​ನ ಮಾಲೀಕರಾಗಿದ್ದಾರೆ. ಹೈದರಾಬಾದ್ ಸೇರಿದಂತೆ ಇನ್ನೂ ಕೆಲವು ಕಡೆಗಳಲ್ಲಿ ಮಹೇಶ್ ಬಾಬು ಒಡೆತನದ ಎಎಂಬಿ ಮಲ್ಟಿಪ್ಲೆಕ್ಸ್ ಚೈನ್ ಸಿನಿ ಪ್ರಿಯರಿಗೆ ಸೇವೆ ಸಲ್ಲಿಸುತ್ತಿದೆ. ಹೈದರಾಬಾದ್, ಚೆನ್ನೈ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಹೆಚ್ಚು ಭಿನ್ನ ಅಭಿರುಚಿಯ ಸಿನಿಮಾ ಪ್ರಿಯರಿದ್ದು, ಇದೀಗ ಅಂಥಹವರನ್ನೇ ದೃಷ್ಟಿಯಲ್ಲಿಟ್ಟುಕೊಂಡು ಬೆಂಗಳೂರಿನಲ್ಲಿ ಮಲ್ಟಿಪ್ಲೆಕ್ಸ್ ತೆರೆಯಲು ಮುಂದಾಗಿದ್ದಾರೆ.

ಇದನ್ನೂ ಓದಿ:ಜವಾನ್ ಸಿನಿಮಾ ನೋಡಿದ ಮಹೇಶ್ ಬಾಬು-ರಾಜಮೌಳಿ ಹೇಳಿದ್ದು ಹೀಗೆ

ಬೆಂಗಳೂರಿನ ಹೆಮ್ಮೆಯ ಚಿತ್ರಮಂದಿರವಾಗಿದ್ದ ಕಪಾಲಿ ಇದ್ದ ಜಾಗದಲ್ಲಿಯೇ ಎಎಂಬಿ ಮಲ್ಟಿಪ್ಲೆಕ್ಸ್ ಆರಂಭವಾಗುತ್ತಿದೆ. 49 ವರ್ಷಗಳ ಕಾಲ ಸಿನಿಪ್ರಿಯರಿಗೆ ಮನರಂಜನೆ ಒದಗಿಸಿದ್ದ ಕಪಾಲಿ ಚಿತ್ರಮಂದಿರ ಕೆಲ ವರ್ಷಗಳ ಹಿಂದೆ ಕಾರ್ಯ ನಿಲ್ಲಿಸಿದೆ. ಡಾ ರಾಜ್​ಕುಮಾರ್ ಅವರ ಹಲವಾರು ಸಿನಿಮಾಗಳು ಸೇರಿದಂತೆ ಇಂಗ್ಲೀಷ್, ತಮಿಳು, ತೆಲುಗು ಸಿನಿಮಾಗಳು ಸಹ ಈ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಸೂಪರ್-ಡೂಪರ್ ಹಿಟ್ ಆಗಿವೆ. ಶಿವರಾಜ್ ಕುಮಾರ್ ನಟಿಸಿ, ಉಪೇಂದ್ರ ನಿರ್ದೇಶನ ಮಾಡಿರುವ ‘ಓಂ’ ಸಿನಿಮಾ ಈ ಚಿತ್ರಮಂದಿರದಲ್ಲಿ 30 ಬಾರಿ ಮರುಬಿಡುಗಡೆ ಆಗಿ ಸೂಪರ್ ಹಿಟ್ ಆಗಿರುವುದು ದಾಖಲೆ.

ಇದೇ ಜಾಗದಲ್ಲಿ ಈಗ ಎಎಂಬಿ ಮಲ್ಟಿಪ್ಲೆಕ್ಸ್ ತಲೆ ಎತ್ತುತ್ತಿದೆ. ಸುಮಾರು 5-6 ಸ್ಕ್ರೀನ್​ಗಳು ಮಲ್ಟಿಪ್ಲೆಕ್ಸ್​ನ ಒಳಗೆ ಇರಲಿವೆ. ಒಂದು ಗೋಲ್ಡ್ ಕ್ಲಾಸ್ ಸಹ ಮಲ್ಟಿಪ್ಲೆಕ್ಸ್​ನಲ್ಲಿ ಇರಲಿದೆ ಎನ್ನಲಾಗುತ್ತಿದೆ. ಕಟ್ಟಡದ ನಿರ್ಮಾಣ ಚಾಲ್ತಿಯಲ್ಲಿದ್ದು ಮುಂದಿನ ವರ್ಷಾರಂಭದಲ್ಲಿ ಲೋಕಾರ್ಪಣೆಗೊಳ್ಳುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​