AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಪಾಧ್ಯಕ್ಷ’ನ ಚೆಲುವೆ ಈಗ ‘ವಿದ್ಯಾಪತಿ’ಗೆ ನಾಯಕಿ

Malaika: ‘ಉಪಾಧ್ಯಕ್ಷ’ ಸಿನಿಮಾನಲ್ಲಿ ನಾಯಕಿಯಾಗಿ ಮೊದಲ ಸಿನಿಮಾದಲ್ಲಿಯೇ ಯಶಸ್ಸು ಗಳಿಸಿದ ಮಲೈಕಾ ಈಗ ‘ವಿದ್ಯಾಪತಿ’ಗೆ ನಾಯಕಿ.

‘ಉಪಾಧ್ಯಕ್ಷ’ನ ಚೆಲುವೆ ಈಗ ‘ವಿದ್ಯಾಪತಿ’ಗೆ ನಾಯಕಿ
ಮಂಜುನಾಥ ಸಿ.
|

Updated on: Feb 28, 2024 | 11:00 PM

Share

ಧಾರಾವಾಹಿಯಲ್ಲಿ ಮಿಂಚಿ ಬಳಿಕ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಸೂಪರ್ ಹಿಟ್ ಆದ ‘ಉಪಾಧ್ಯಕ್ಷ’ (Upadyaksha) ಸಿನಿಮಾದಲ್ಲಿ ನಾಯಕಿಯಾಗಿಯೂ ಯಶಸ್ಸು ಗಳಿಸಿದ ನಟಿ ಮಲೈಕಾ ವಸೂಪಾಲ್, ಡಾಲಿ ಪಿಕ್ಚರ್ಸ್ ನಿರ್ಮಿಸುತ್ತಿರುವ ಹೊಸ ಸಿನಿಮಾಕ್ಕೆ ನಾಯಕಿ. ‘ಟಗರು ಪಲ್ಯ’ ಸಿನಿಮಾದ ಯಶಸ್ಸಿನ ಬಳಿಕ ಡಾಲಿ ಧನಂಜಯ್ ಹೊಸ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಮತ್ತೊಮ್ಮೆ ಧನು ಹಾಗೂ ನಾಗಭೂಷಣ್ ಕೈ ಜೋಡಿಸಿದ್ದು, ಈ ಚಿತ್ರಕ್ಕೆ ವಿದ್ಯಾಪತಿ ಎಂಬ ಹೆಸರು ಇಡಲಾಗಿದೆ. ಸಂಕ್ರಾಂತಿ ಹಬ್ಬಕ್ಕೆ ಫಸ್ಟ್ ಲುಕ್ ರಿಲೀಸ್ ಮಾಡಿದ್ದ ಚಿತ್ರತಂಡ ಇದೀಗ ನಾಯಕಿಯನ್ನು ಪ್ರೇಕ್ಷಕರಿಗೆ ಪರಿಚಯಿಸಿದೆ.

ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ಚಿಕ್ಕಣ್ಣನಿಗೆ ಉಪಾಧ್ಯಕ್ಷ ಸಿನಿಮಾದಲ್ಲಿ ನಾಯಕಿ ಮಿಂಚಿದ್ದ ಮಲೈಕಾ ವಸೂಪಾಲ್ ಈಗ ವಿದ್ಯಾಪತಿಗೆ ಜೋಡಿಯಾಗಿದ್ದಾರೆ. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ಮಲೈಕಾ ‘ಉಪಾಧ್ಯಕ್ಷ’ ಸಿನಿಮಾ ಮೂಲಕ ಬೆಳ್ಳಿಪರದೆಗೆ ಪ್ರವೇಶ ಮಾಡಿದ್ದರು. ಮೊದಲ ಸಿನಿಮಾದಲ್ಲಿಯೇ ಮಲೈಕಾಗೆ ದೊಡ್ಡ ಯಶಸ್ಸು ತಂದುಕೊಟ್ಟಿದೆ. ‘ಉಪಾಧ್ಯಕ್ಷ’ ಸಿನಿಮಾದಲ್ಲಿ ಇವರ ನಟನೆ ನೋಡಿ ಮೆಚ್ಚಿಕೊಂಡಿರುವ ‘ವಿದ್ಯಾಪತಿ’ ಚಿತ್ರತಂಡ ತಮ್ಮ ಸಿನಿಮಾಕ್ಕೆ ನಾಯಕಿಯನ್ನಾಗಿ ಆಯ್ಕೆ ಮಾಡಿದೆ.

ಇದನ್ನೂ ಓದಿ:Malaika Vasupal: ಬೋಲ್ಡ್​​​ ಲುಕ್​​ನಲ್ಲಿ ಹಿಟ್ಲರ್ ಕಲ್ಯಾಣ ಬೆಡಗಿ

‘ವಿದ್ಯಾಪತಿ’ ಸಿನಿಮಾದಲ್ಲಿ ಮಲೈಕಾ, ವಿದ್ಯಾ ಹೆಸರಿನ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಸರಳ, ಪಕ್ಕದ ಮನೆ ಹುಡುಗಿಯಾಗಿ ಮಲೈಕಾ ಈ ಸಿನಿಮಾನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ‘ಇಕ್ಕಟ್’ ಸಿನಿಮಾ ಮೂಲಕ ಭರವಸೆ ಹುಟ್ಟಿಸಿದ್ದ ಇಶಾಂ ಮತ್ತು ಹಸೀಂ ಖಾನ್ ‘ವಿದ್ಯಾಪತಿ’ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಜೊತೆಗೆ ಸಿನಿಮಾವನ್ನು ಇವರೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ.

ಆಕ್ಷನ್ ಕಾಮಿಡಿ ಕಥಾಹಂದರ ಹೊಂದಿರುವ ‘ವಿದ್ಯಾಪತಿ’ ಸಿನಿಮಾದಲ್ಲಿ ನಾಗಭೂಷಣ್ ವಿಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ, ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಅರ್ಜುನ್ ಮಾಸ್ಟರ್ ಆಕ್ಷನ್ ವಿದ್ಯಾಪತಿ ಸಿನಿಮಾಕ್ಕಿದೆ. ಮಾರ್ಚ್ ತಿಂಗಳಿನಿಂದ ‘ವಿದ್ಯಾಪತಿ’ ನಾಯಕಿ ಮಲೈಕಾ ವಸೂಪಾಲ್ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ