AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲಾಶ್ರೀ ಪುತ್ರಿ ಆರಾಧನಾಗೆ ‘ನೆಕ್ಸ್ಟ್ ಲೆವೆಲ್’ ಅವಕಾಶ; ಉಪೇಂದ್ರ ಜೊತೆ ಸಿನಿಮಾ

‘ನೆಕ್ಸ್ಟ್ ಲೆವೆಲ್’ ಸಿನಿಮಾಗೆ ಅರವಿಂದ್ ಕೌಶಿಕ್ ಅವರು ನಿರ್ದೇಶನ ಮಾಡಲಿದ್ದಾರೆ. ತರುಣ್ ಶಿವಪ್ಪ ಅವರು ಈ ಸಿನಿಮಾದ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಉಪೇಂದ್ರ ಮತ್ತು ಆರಾಧನಾ ರಾಮ್ ಅವರು ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ‘ನೆಕ್ಸ್ಟ್ ಲೆವೆಲ್’ ಚಿತ್ರಕ್ಕೆ ಮುಹೂರ್ತ ನಡೆಲಿದೆ.

ಮಾಲಾಶ್ರೀ ಪುತ್ರಿ ಆರಾಧನಾಗೆ ‘ನೆಕ್ಸ್ಟ್ ಲೆವೆಲ್’ ಅವಕಾಶ; ಉಪೇಂದ್ರ ಜೊತೆ ಸಿನಿಮಾ
Upendra, Aradhana Ram
ಮದನ್​ ಕುಮಾರ್​
|

Updated on: Aug 06, 2025 | 9:23 PM

Share

ಮಾಲಾಶ್ರೀ ಪುತ್ರಿ ಆರಾಧನಾ ರಾಮ್ (Aradhana Ram) ಅವರು ‘ಕಾಟೇರ’ ಸಿನಿಮಾ ಮೂಲಕ ಭರ್ಜರಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದರು. ಈಗ ಅವರು ಎರಡನೇ ಸಿನಿಮಾಗೆ ಸಹಿ ಮಾಡಿದ್ದಾರೆ. ‘ತರುಣ್ ಸ್ಟುಡಿಯೋಸ್’ ಬ್ಯಾನರ್ ಮೂಲಕ ತರುಣ್ ಶಿವಪ್ಪ ಅವರು ‘ನೆಕ್ಸ್ಟ್ ಲೆವೆಲ್’ (Next Level) ಸಿನಿಮಾ ನಿರ್ಮಾಣಕ್ಕೆ‌ ಮುಂದಾಗಿದ್ದಾರೆ. ಈ ಸಿನಿಮಾಗೆ ‘ರಿಯಲ್ ಸ್ಟಾರ್’ ಉಪೇಂದ್ರ (Upendra) ಅವರು ಹೀರೋ. ಅರವಿಂದ್ ಕೌಶಿಕ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ಆರಾಧನಾ ರಾಮ್ ಅವರನ್ನು ಆಯ್ಕೆ ಮಾಡಲಾಗಿದೆ.

ಇದು ಪ್ಯಾನ್ ಇಂಡಿಯಾ ಸಿನಿಮಾ ಎಂಬುದು ವಿಶೇಷ. ಆರಾಧನಾ ಅವರು ‘ಕಾಟೇರ’ ಸಿನಿಮಾದಲ್ಲಿ ನಟನೆಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು. ಈಗ ಅವರಿಗೆ ‘ನೆಕ್ಸ್ಟ್ ಲೆವೆಲ್’ ಅವಕಾಶ ಸಿಕ್ಕಿದೆ. ಮೊದಲ ಸಿನಿಮಾದಲ್ಲಿಯೇ ದರ್ಶನ್ ಅವರಂತಹ ಸ್ಟಾರ್ ಹೀರೋಗೆ ಜೋಡಿಯಾಗಿ ನಟಿಸಿದ ಅವರು ಈಗ 2ನೇ ಸಿನಿಮಾದಲ್ಲಿಯೂ ಸ್ಟಾರ್ ಹೀರೋಗೆ ಜೋಡಿ ಆಗುತ್ತಿರುವುದು ವಿಶೇಷ.

‘ನೆಕ್ಸ್ಟ್‌ ಲೆವೆಲ್‌’ ಸಿನಿಮಾ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರಿನಲ್ಲಿಯೇ ಈ ಚಿತ್ರಕ್ಕೆ ಅದ್ದೂರಿಯಾಗಿ ಮುಹೂರ್ತ ನಡೆಯಲಿದೆ. ಬಳಿಕ ಬೆಂಗಳೂರು, ಹೈದರಾಬಾದ್‌ ಮುಂಬೈ ಮುಂತಾದ ಕಡೆಗಳಲ್ಲಿ ಶೂಟಿಂಗ್‌ ನಡೆಯಲಿದೆ. ಸಿನಿಮಾದ ಹೆಚ್ಚಿನ ದೃಶ್ಯಗಳು ವಿಎಫ್‌ಎಕ್ಸ್‌ನಿಂದ ಕೂಡಿರಲಿವೆ. ಇದಕ್ಕಾಗಿ ಕೆನಡಾ ಸೇರಿದಂತೆ ಅನೇಕ ವಿದೇಶಿ ಗ್ರಾಫಿಕ್ಸ್‌ ಸ್ಟುಡಿಯೋಗಳು ಮತ್ತು ಭಾರತದ ಪ್ರತಿಷ್ಠಿತ ಗ್ರಾಫಿಕ್ಸ್‌ ನಿರ್ಮಾಣ ಸಂಸ್ಥೆಗಳು ಕೆಲಸ ಮಾಡಲಿವೆ.

ಇದನ್ನೂ ಓದಿ
Image
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
Image
ಕಾಶಿನಾಥ್​ಗೆ ಆ್ಯಸಿಡ್ ಹಾಕಲು ಬಂದಿದ್ದರು: ಭಯಾನಕ ಘಟನೆ ನೆನೆದ ಉಪೇಂದ್ರ
Image
ಉಪೇಂದ್ರಗೆ ತಮ್ಮ ಈ ಸಿನಿಮಾವನ್ನು ಹಿಂದಿಗೆ ರೀಮೇಕ್ ಮಾಡುವಾಸೆ
Image
ಉಪೇಂದ್ರ ಸಿಎಂ ಆದರೆ ಮೊದಲು ಮಾಡೋ ಕೆಲಸ ಏನು? ಅವರೇ ಹೇಳಿದ್ರು ಕೇಳಿ

ಈ ಸಿನಿಮಾ ಭಿನ್ನವಾಗಿರಲಿದೆ ಎಂದು ಚಿತ್ರತಂಡ ಹೇಳಿದೆ. ‘ಎ’, ‘ಉಪೇಂದ್ರ’, ‘ರಕ್ತ ಕಣ್ಣೀರು’ ಚಿತ್ರಗಳ ಶೈಲಿಯಲ್ಲಿ ‘ನೆಕ್ಸ್ಟ್‌ ಲೆವೆಲ್‌’ ಸಿನಿಮಾ ಮೂಡಿಬರಲಿದೆಯಂತೆ. ‘ಛೂ ಮಂತರ್’ ಸಿನಿಮಾದ ಛಾಯಾಗ್ರಾಹಕ ಅನೂಪ್ ಕಟ್ಟುಕರನ್ ಅವರು ‘ನೆಕ್ಸ್ಟ್‌ ಲೆವೆಲ್‌’ ಸಿನಿಮಾಗೆ ಕ್ಯಾಮೆರಾ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾದ ಶೀರ್ಷಿಕೆಯೇ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ಉಪೇಂದ್ರ ಹೀರೋ ಆಗಲು ಕಾರಣವಾಗಿದ್ದೇ ಬಿ. ಸರೋಜಾದೇವಿ; ಆ ಘಟನೆ ನೆನೆದ ರಿಯಲ್ ಸ್ಟಾರ್

ನಿರ್ಮಾಪಕ ತರುಣ್ ಶಿವಪ್ಪ ಅವರು ಈಗಾಗಲೇ 5 ಸಿನಿಮಾಗಳನ್ನು ಮಾಡಿದ್ದಾರೆ. ‘ರೋಸ್’ ಸಿನಿಮಾದ ಮೂಲಕ ನಿರ್ಮಾಪಕರಾದ ಅವರು ನಂತರ ಶಿವರಾಜ್​​ಕುಮಾರ್ ನಟನೆಯ ‘ಮಾಸ್ ಲೀಡರ್’ ಸಿನಿಮಾಗೆ ಬಂಡವಾಳ ಹೂಡಿದರು. ಬಳಿಕ ‘ವಿಕ್ಟರಿ 2’, ‘ಖಾಕಿ’, ‘ಛೂ ಮಂತರ್’ ಸಿನಿಮಾಗಳನ್ನು ಮಾಡಿದರು. ಈಗ ‘ನೆಕ್ಸ್ಟ್ ಲೆವೆಲ್’ ಸಿನಿಮಾದ ನಿರ್ಮಾಣಕ್ಕೆ ಮುಂತಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ