AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲಾಶ್ರೀ ಪುತ್ರಿ ಆರಾಧನಾಗೆ ‘ನೆಕ್ಸ್ಟ್ ಲೆವೆಲ್’ ಅವಕಾಶ; ಉಪೇಂದ್ರ ಜೊತೆ ಸಿನಿಮಾ

‘ನೆಕ್ಸ್ಟ್ ಲೆವೆಲ್’ ಸಿನಿಮಾಗೆ ಅರವಿಂದ್ ಕೌಶಿಕ್ ಅವರು ನಿರ್ದೇಶನ ಮಾಡಲಿದ್ದಾರೆ. ತರುಣ್ ಶಿವಪ್ಪ ಅವರು ಈ ಸಿನಿಮಾದ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಉಪೇಂದ್ರ ಮತ್ತು ಆರಾಧನಾ ರಾಮ್ ಅವರು ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ‘ನೆಕ್ಸ್ಟ್ ಲೆವೆಲ್’ ಚಿತ್ರಕ್ಕೆ ಮುಹೂರ್ತ ನಡೆಲಿದೆ.

ಮಾಲಾಶ್ರೀ ಪುತ್ರಿ ಆರಾಧನಾಗೆ ‘ನೆಕ್ಸ್ಟ್ ಲೆವೆಲ್’ ಅವಕಾಶ; ಉಪೇಂದ್ರ ಜೊತೆ ಸಿನಿಮಾ
Upendra, Aradhana Ram
ಮದನ್​ ಕುಮಾರ್​
|

Updated on: Aug 06, 2025 | 9:23 PM

Share

ಮಾಲಾಶ್ರೀ ಪುತ್ರಿ ಆರಾಧನಾ ರಾಮ್ (Aradhana Ram) ಅವರು ‘ಕಾಟೇರ’ ಸಿನಿಮಾ ಮೂಲಕ ಭರ್ಜರಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದರು. ಈಗ ಅವರು ಎರಡನೇ ಸಿನಿಮಾಗೆ ಸಹಿ ಮಾಡಿದ್ದಾರೆ. ‘ತರುಣ್ ಸ್ಟುಡಿಯೋಸ್’ ಬ್ಯಾನರ್ ಮೂಲಕ ತರುಣ್ ಶಿವಪ್ಪ ಅವರು ‘ನೆಕ್ಸ್ಟ್ ಲೆವೆಲ್’ (Next Level) ಸಿನಿಮಾ ನಿರ್ಮಾಣಕ್ಕೆ‌ ಮುಂದಾಗಿದ್ದಾರೆ. ಈ ಸಿನಿಮಾಗೆ ‘ರಿಯಲ್ ಸ್ಟಾರ್’ ಉಪೇಂದ್ರ (Upendra) ಅವರು ಹೀರೋ. ಅರವಿಂದ್ ಕೌಶಿಕ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ಆರಾಧನಾ ರಾಮ್ ಅವರನ್ನು ಆಯ್ಕೆ ಮಾಡಲಾಗಿದೆ.

ಇದು ಪ್ಯಾನ್ ಇಂಡಿಯಾ ಸಿನಿಮಾ ಎಂಬುದು ವಿಶೇಷ. ಆರಾಧನಾ ಅವರು ‘ಕಾಟೇರ’ ಸಿನಿಮಾದಲ್ಲಿ ನಟನೆಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು. ಈಗ ಅವರಿಗೆ ‘ನೆಕ್ಸ್ಟ್ ಲೆವೆಲ್’ ಅವಕಾಶ ಸಿಕ್ಕಿದೆ. ಮೊದಲ ಸಿನಿಮಾದಲ್ಲಿಯೇ ದರ್ಶನ್ ಅವರಂತಹ ಸ್ಟಾರ್ ಹೀರೋಗೆ ಜೋಡಿಯಾಗಿ ನಟಿಸಿದ ಅವರು ಈಗ 2ನೇ ಸಿನಿಮಾದಲ್ಲಿಯೂ ಸ್ಟಾರ್ ಹೀರೋಗೆ ಜೋಡಿ ಆಗುತ್ತಿರುವುದು ವಿಶೇಷ.

‘ನೆಕ್ಸ್ಟ್‌ ಲೆವೆಲ್‌’ ಸಿನಿಮಾ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರಿನಲ್ಲಿಯೇ ಈ ಚಿತ್ರಕ್ಕೆ ಅದ್ದೂರಿಯಾಗಿ ಮುಹೂರ್ತ ನಡೆಯಲಿದೆ. ಬಳಿಕ ಬೆಂಗಳೂರು, ಹೈದರಾಬಾದ್‌ ಮುಂಬೈ ಮುಂತಾದ ಕಡೆಗಳಲ್ಲಿ ಶೂಟಿಂಗ್‌ ನಡೆಯಲಿದೆ. ಸಿನಿಮಾದ ಹೆಚ್ಚಿನ ದೃಶ್ಯಗಳು ವಿಎಫ್‌ಎಕ್ಸ್‌ನಿಂದ ಕೂಡಿರಲಿವೆ. ಇದಕ್ಕಾಗಿ ಕೆನಡಾ ಸೇರಿದಂತೆ ಅನೇಕ ವಿದೇಶಿ ಗ್ರಾಫಿಕ್ಸ್‌ ಸ್ಟುಡಿಯೋಗಳು ಮತ್ತು ಭಾರತದ ಪ್ರತಿಷ್ಠಿತ ಗ್ರಾಫಿಕ್ಸ್‌ ನಿರ್ಮಾಣ ಸಂಸ್ಥೆಗಳು ಕೆಲಸ ಮಾಡಲಿವೆ.

ಇದನ್ನೂ ಓದಿ
Image
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
Image
ಕಾಶಿನಾಥ್​ಗೆ ಆ್ಯಸಿಡ್ ಹಾಕಲು ಬಂದಿದ್ದರು: ಭಯಾನಕ ಘಟನೆ ನೆನೆದ ಉಪೇಂದ್ರ
Image
ಉಪೇಂದ್ರಗೆ ತಮ್ಮ ಈ ಸಿನಿಮಾವನ್ನು ಹಿಂದಿಗೆ ರೀಮೇಕ್ ಮಾಡುವಾಸೆ
Image
ಉಪೇಂದ್ರ ಸಿಎಂ ಆದರೆ ಮೊದಲು ಮಾಡೋ ಕೆಲಸ ಏನು? ಅವರೇ ಹೇಳಿದ್ರು ಕೇಳಿ

ಈ ಸಿನಿಮಾ ಭಿನ್ನವಾಗಿರಲಿದೆ ಎಂದು ಚಿತ್ರತಂಡ ಹೇಳಿದೆ. ‘ಎ’, ‘ಉಪೇಂದ್ರ’, ‘ರಕ್ತ ಕಣ್ಣೀರು’ ಚಿತ್ರಗಳ ಶೈಲಿಯಲ್ಲಿ ‘ನೆಕ್ಸ್ಟ್‌ ಲೆವೆಲ್‌’ ಸಿನಿಮಾ ಮೂಡಿಬರಲಿದೆಯಂತೆ. ‘ಛೂ ಮಂತರ್’ ಸಿನಿಮಾದ ಛಾಯಾಗ್ರಾಹಕ ಅನೂಪ್ ಕಟ್ಟುಕರನ್ ಅವರು ‘ನೆಕ್ಸ್ಟ್‌ ಲೆವೆಲ್‌’ ಸಿನಿಮಾಗೆ ಕ್ಯಾಮೆರಾ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾದ ಶೀರ್ಷಿಕೆಯೇ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ಉಪೇಂದ್ರ ಹೀರೋ ಆಗಲು ಕಾರಣವಾಗಿದ್ದೇ ಬಿ. ಸರೋಜಾದೇವಿ; ಆ ಘಟನೆ ನೆನೆದ ರಿಯಲ್ ಸ್ಟಾರ್

ನಿರ್ಮಾಪಕ ತರುಣ್ ಶಿವಪ್ಪ ಅವರು ಈಗಾಗಲೇ 5 ಸಿನಿಮಾಗಳನ್ನು ಮಾಡಿದ್ದಾರೆ. ‘ರೋಸ್’ ಸಿನಿಮಾದ ಮೂಲಕ ನಿರ್ಮಾಪಕರಾದ ಅವರು ನಂತರ ಶಿವರಾಜ್​​ಕುಮಾರ್ ನಟನೆಯ ‘ಮಾಸ್ ಲೀಡರ್’ ಸಿನಿಮಾಗೆ ಬಂಡವಾಳ ಹೂಡಿದರು. ಬಳಿಕ ‘ವಿಕ್ಟರಿ 2’, ‘ಖಾಕಿ’, ‘ಛೂ ಮಂತರ್’ ಸಿನಿಮಾಗಳನ್ನು ಮಾಡಿದರು. ಈಗ ‘ನೆಕ್ಸ್ಟ್ ಲೆವೆಲ್’ ಸಿನಿಮಾದ ನಿರ್ಮಾಣಕ್ಕೆ ಮುಂತಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ