ಮಾಲಾಶ್ರೀ ಪುತ್ರಿ ಆರಾಧನಾಗೆ ‘ನೆಕ್ಸ್ಟ್ ಲೆವೆಲ್’ ಅವಕಾಶ; ಉಪೇಂದ್ರ ಜೊತೆ ಸಿನಿಮಾ

‘ನೆಕ್ಸ್ಟ್ ಲೆವೆಲ್’ ಸಿನಿಮಾಗೆ ಅರವಿಂದ್ ಕೌಶಿಕ್ ಅವರು ನಿರ್ದೇಶನ ಮಾಡಲಿದ್ದಾರೆ. ತರುಣ್ ಶಿವಪ್ಪ ಅವರು ಈ ಸಿನಿಮಾದ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಉಪೇಂದ್ರ ಮತ್ತು ಆರಾಧನಾ ರಾಮ್ ಅವರು ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ‘ನೆಕ್ಸ್ಟ್ ಲೆವೆಲ್’ ಚಿತ್ರಕ್ಕೆ ಮುಹೂರ್ತ ನಡೆಲಿದೆ.

ಮಾಲಾಶ್ರೀ ಪುತ್ರಿ ಆರಾಧನಾಗೆ ‘ನೆಕ್ಸ್ಟ್ ಲೆವೆಲ್’ ಅವಕಾಶ; ಉಪೇಂದ್ರ ಜೊತೆ ಸಿನಿಮಾ
Upendra, Aradhana Ram

Updated on: Aug 06, 2025 | 9:23 PM

ಮಾಲಾಶ್ರೀ ಪುತ್ರಿ ಆರಾಧನಾ ರಾಮ್ (Aradhana Ram) ಅವರು ‘ಕಾಟೇರ’ ಸಿನಿಮಾ ಮೂಲಕ ಭರ್ಜರಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದರು. ಈಗ ಅವರು ಎರಡನೇ ಸಿನಿಮಾಗೆ ಸಹಿ ಮಾಡಿದ್ದಾರೆ. ‘ತರುಣ್ ಸ್ಟುಡಿಯೋಸ್’ ಬ್ಯಾನರ್ ಮೂಲಕ ತರುಣ್ ಶಿವಪ್ಪ ಅವರು ‘ನೆಕ್ಸ್ಟ್ ಲೆವೆಲ್’ (Next Level) ಸಿನಿಮಾ ನಿರ್ಮಾಣಕ್ಕೆ‌ ಮುಂದಾಗಿದ್ದಾರೆ. ಈ ಸಿನಿಮಾಗೆ ‘ರಿಯಲ್ ಸ್ಟಾರ್’ ಉಪೇಂದ್ರ (Upendra) ಅವರು ಹೀರೋ. ಅರವಿಂದ್ ಕೌಶಿಕ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ಆರಾಧನಾ ರಾಮ್ ಅವರನ್ನು ಆಯ್ಕೆ ಮಾಡಲಾಗಿದೆ.

ಇದು ಪ್ಯಾನ್ ಇಂಡಿಯಾ ಸಿನಿಮಾ ಎಂಬುದು ವಿಶೇಷ. ಆರಾಧನಾ ಅವರು ‘ಕಾಟೇರ’ ಸಿನಿಮಾದಲ್ಲಿ ನಟನೆಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು. ಈಗ ಅವರಿಗೆ ‘ನೆಕ್ಸ್ಟ್ ಲೆವೆಲ್’ ಅವಕಾಶ ಸಿಕ್ಕಿದೆ. ಮೊದಲ ಸಿನಿಮಾದಲ್ಲಿಯೇ ದರ್ಶನ್ ಅವರಂತಹ ಸ್ಟಾರ್ ಹೀರೋಗೆ ಜೋಡಿಯಾಗಿ ನಟಿಸಿದ ಅವರು ಈಗ 2ನೇ ಸಿನಿಮಾದಲ್ಲಿಯೂ ಸ್ಟಾರ್ ಹೀರೋಗೆ ಜೋಡಿ ಆಗುತ್ತಿರುವುದು ವಿಶೇಷ.

‘ನೆಕ್ಸ್ಟ್‌ ಲೆವೆಲ್‌’ ಸಿನಿಮಾ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರಿನಲ್ಲಿಯೇ ಈ ಚಿತ್ರಕ್ಕೆ ಅದ್ದೂರಿಯಾಗಿ ಮುಹೂರ್ತ ನಡೆಯಲಿದೆ. ಬಳಿಕ ಬೆಂಗಳೂರು, ಹೈದರಾಬಾದ್‌ ಮುಂಬೈ ಮುಂತಾದ ಕಡೆಗಳಲ್ಲಿ ಶೂಟಿಂಗ್‌ ನಡೆಯಲಿದೆ. ಸಿನಿಮಾದ ಹೆಚ್ಚಿನ ದೃಶ್ಯಗಳು ವಿಎಫ್‌ಎಕ್ಸ್‌ನಿಂದ ಕೂಡಿರಲಿವೆ. ಇದಕ್ಕಾಗಿ ಕೆನಡಾ ಸೇರಿದಂತೆ ಅನೇಕ ವಿದೇಶಿ ಗ್ರಾಫಿಕ್ಸ್‌ ಸ್ಟುಡಿಯೋಗಳು ಮತ್ತು ಭಾರತದ ಪ್ರತಿಷ್ಠಿತ ಗ್ರಾಫಿಕ್ಸ್‌ ನಿರ್ಮಾಣ ಸಂಸ್ಥೆಗಳು ಕೆಲಸ ಮಾಡಲಿವೆ.

ಇದನ್ನೂ ಓದಿ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಕಾಶಿನಾಥ್​ಗೆ ಆ್ಯಸಿಡ್ ಹಾಕಲು ಬಂದಿದ್ದರು: ಭಯಾನಕ ಘಟನೆ ನೆನೆದ ಉಪೇಂದ್ರ
ಉಪೇಂದ್ರಗೆ ತಮ್ಮ ಈ ಸಿನಿಮಾವನ್ನು ಹಿಂದಿಗೆ ರೀಮೇಕ್ ಮಾಡುವಾಸೆ
ಉಪೇಂದ್ರ ಸಿಎಂ ಆದರೆ ಮೊದಲು ಮಾಡೋ ಕೆಲಸ ಏನು? ಅವರೇ ಹೇಳಿದ್ರು ಕೇಳಿ

ಈ ಸಿನಿಮಾ ಭಿನ್ನವಾಗಿರಲಿದೆ ಎಂದು ಚಿತ್ರತಂಡ ಹೇಳಿದೆ. ‘ಎ’, ‘ಉಪೇಂದ್ರ’, ‘ರಕ್ತ ಕಣ್ಣೀರು’ ಚಿತ್ರಗಳ ಶೈಲಿಯಲ್ಲಿ ‘ನೆಕ್ಸ್ಟ್‌ ಲೆವೆಲ್‌’ ಸಿನಿಮಾ ಮೂಡಿಬರಲಿದೆಯಂತೆ. ‘ಛೂ ಮಂತರ್’ ಸಿನಿಮಾದ ಛಾಯಾಗ್ರಾಹಕ ಅನೂಪ್ ಕಟ್ಟುಕರನ್ ಅವರು ‘ನೆಕ್ಸ್ಟ್‌ ಲೆವೆಲ್‌’ ಸಿನಿಮಾಗೆ ಕ್ಯಾಮೆರಾ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾದ ಶೀರ್ಷಿಕೆಯೇ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ಉಪೇಂದ್ರ ಹೀರೋ ಆಗಲು ಕಾರಣವಾಗಿದ್ದೇ ಬಿ. ಸರೋಜಾದೇವಿ; ಆ ಘಟನೆ ನೆನೆದ ರಿಯಲ್ ಸ್ಟಾರ್

ನಿರ್ಮಾಪಕ ತರುಣ್ ಶಿವಪ್ಪ ಅವರು ಈಗಾಗಲೇ 5 ಸಿನಿಮಾಗಳನ್ನು ಮಾಡಿದ್ದಾರೆ. ‘ರೋಸ್’ ಸಿನಿಮಾದ ಮೂಲಕ ನಿರ್ಮಾಪಕರಾದ ಅವರು ನಂತರ ಶಿವರಾಜ್​​ಕುಮಾರ್ ನಟನೆಯ ‘ಮಾಸ್ ಲೀಡರ್’ ಸಿನಿಮಾಗೆ ಬಂಡವಾಳ ಹೂಡಿದರು. ಬಳಿಕ ‘ವಿಕ್ಟರಿ 2’, ‘ಖಾಕಿ’, ‘ಛೂ ಮಂತರ್’ ಸಿನಿಮಾಗಳನ್ನು ಮಾಡಿದರು. ಈಗ ‘ನೆಕ್ಸ್ಟ್
ಲೆವೆಲ್’ ಸಿನಿಮಾದ ನಿರ್ಮಾಣಕ್ಕೆ ಮುಂತಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us