AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದಲಾಯ್ತು ಮಾಲಾಶ್ರೀ ಮಗಳ ಹೆಸರು; ಇನ್ಮುಂದೆ ಈ ಸುಂದರಿಯನ್ನು ಆರಾಧನಾ ಅಂತ ಕರೆಯಬೇಕು

ಚಿತ್ರರಂಗಕ್ಕೆ ಕಾಲಿಡುವಾಗ ಹೆಸರು ಬದಲಾಯಿಸಿಕೊಳ್ಳುವ ಟ್ರೆಂಡ್​ ಮೊದಲಿನಿಂದಲೂ ಬೆಳೆದುಬಂದಿದೆ. ರಾಜ್​ಕುಮಾರ್, ವಿಷ್ಣುವರ್ಧನ್​, ಯಶ್​ ಸೇರಿದಂತೆ ಬಹುತೇಕ ಎಲ್ಲ ಸ್ಟಾರ್​ ಕಲಾವಿದರು ಕೂಡ ತಮ್ಮ ಹೆಸರನ್ನು ಬದಲಾಯಿಸಿಕೊಂಡು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅದೇ ರೀತಿ ಈಗ ಮಾಲಾಶ್ರೀ ಅವರ ಪುತ್ರಿ ಕೂಡ ತಮ್ಮ ಹೆಸರನ್ನು ಚೇಂಜ್​ ಮಾಡಿಕೊಂಡಿದ್ದಾರೆ.

ಬದಲಾಯ್ತು ಮಾಲಾಶ್ರೀ ಮಗಳ ಹೆಸರು; ಇನ್ಮುಂದೆ ಈ ಸುಂದರಿಯನ್ನು ಆರಾಧನಾ ಅಂತ ಕರೆಯಬೇಕು
ಮಾಲಾಶ್ರೀ ಪುತ್ರಿ ಆರಾಧನಾ
Follow us
ಮದನ್​ ಕುಮಾರ್​
|

Updated on:Aug 20, 2023 | 10:28 AM

ಕನ್ನಡ ಚಿತ್ರರಂಗದಲ್ಲಿ ಸ್ಟಾರ್​ ನಟಿ ಮಾಲಾಶ್ರೀ (Malashree) ಅವರು ಮಾಡಿದ ಮೋಡಿ ಸಣ್ಣದೇನಲ್ಲ. ಕ್ಯೂಟ್​ ಹುಡುಗಿಯಾಗಿ ಮಾತ್ರವಲ್ಲದೇ ಆ್ಯಕ್ಷನ್​ ಕ್ವೀನ್​ ಆಗಿಯೂ ಅವರು ತೆರೆ ಮೇಲೆ ಮಿಂಚಿದ್ದಾರೆ. ಇಂದು ಚಿತ್ರರಂಗಕ್ಕೆ ಕಾಲಿಡುವ ಎಷ್ಟೋ ಯುವತಿಯರಿಗೆ ಮಾಲಾಶ್ರೀ ಅವರೇ ಸ್ಫೂರ್ತಿ. ಈಗ ಅವರ ಪುತ್ರಿ (Malashree Daughter) ಕೂಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಹೊಸ ವಿಷಯ ಏನೆಂದರೆ, ಮಾಲಾಶ್ರೀ ಅವರ ಮಗಳು ಹೆಸರು ಬದಲಾಯಿಸಿಕೊಂಡಿದ್ದಾರೆ. ಇಷ್ಟು ದಿನ ಅವರನ್ನು ಅನನ್ಯಾ ಮತ್ತು ರಾಧನಾ ಎಂಬ ಹೆಸರುಗಳಿಂದ ಕರೆಯಲಾಗುತ್ತಿತ್ತು. ಈಗ ಅವರ ಹೆಸರು ಬದಲಾಗಿದೆ. ಮಗಳಿಗೆ ಆರಾಧನಾ (Aradhanaa) ಎಂದು ಮಾಲಾಶ್ರೀ ಅವರು ಹೊಸ ಹೆಸರು ಇಟ್ಟಿದ್ದಾರೆ. ಈ ಬಗ್ಗೆ ಅವರೇ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ಚಿತ್ರರಂಗಕ್ಕೆ ಕಾಲಿಡುವಾಗ ಹೆಸರು ಬದಲಾಯಿಸಿಕೊಳ್ಳುವ ಟ್ರೆಂಡ್​ ಮೊದಲಿನಿಂದಲೂ ಬೆಳೆದುಬಂದಿದೆ. ರಾಜ್​ಕುಮಾರ್, ವಿಷ್ಣುವರ್ಧನ್​, ಯಶ್​ ಸೇರಿದಂತೆ ಬಹುತೇಕ ಎಲ್ಲ ಸ್ಟಾರ್​ ಕಲಾವಿದರು ಕೂಡ ತಮ್ಮ ಹೆಸರನ್ನು ಬದಲಾಯಿಸಿಕೊಂಡು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅದೇ ರೀತಿಯ ಈಗ ಮಾಲಾಶ್ರೀ ಅವರ ಮಗಳು ಕೂಡ ತಮ್ಮ ಹೆಸರನ್ನು ಚೇಂಜ್​ ಮಾಡಿಕೊಂಡಿದ್ದಾರೆ. ಇನ್ಮುಂದೆ ಅವರನ್ನು ಆರಾಧನಾ ಎಂದು ಕರೆಯಲಾಗುತ್ತದೆ. ಇದು ಕೇವಲ ಒಂದು ಸಿನಿಮಾಗೆ ಮಾತ್ರವಲ್ಲ. ಎಲ್ಲ ಸಿನಿಮಾಗಳಲ್ಲೂ ಅವರು ಇದೇ ಹೆಸರಿನಿಂದ ಗುರುತಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ‘ಪ್ರಾರ್ಥನೆ ಮಾಡಿದ ಬಳಿಕ ಮೂರೇ ತಿಂಗಳಲ್ಲಿ ಕೊರಗಜ್ಜನ ಪವಾಡ ನಡೆಯಿತು’: ನಟಿ ಮಾಲಾಶ್ರೀ

ಹೆಸರು ಬದಲಾವಣೆ ಮಾಡಿಕೊಂಡಿರುವ ಆರಾಧನಾ ಅವರು ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ಈ ವಿಷಯ ತಿಳಿಸಿದ್ದಾರೆ. ‘ಎಲ್ಲರಿಗೂ ನಮಸ್ಕಾರ. ನಾನು ನಿಮ್ಮ ರಾಧನಾ ರಾಮ. ಇಂದಿನಿಂದ ನನ್ನ ಹೆಸರು ಆರಾಧನಾ ಎಂದು ನಿಮಗೆ ಸುದ್ದಿ ನೀಡಲು ನಾನು ಬಯಸುತ್ತೇನೆ. ಈ ಬದಲಾವಣೆಗಾಗಿ ನಿಮ್ಮೆಲ್ಲರ ಆಶೀರ್ವಾದವನ್ನು ನೀಡಬೇಕೆಂದು ನಾನು ಕೇಳುತ್ತೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ತುಂಬಾ ಧನ್ಯವಾದಗಳು ಮತ್ತು ಇದು ಯಾವಾಗಲೂ ನನ್ನೊಂದಿಗೆ ಸದಾ ಇರಲಿ ಎಂದು ಕೇಳಿಕೊಳ್ಳುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

ಆರಾಧನಾ ಇನ್​ಸ್ಟಾಗ್ರಾಮ್​ ಪೋಸ್ಟ್​:

ನಿರ್ಮಾಪಕ ಕೋಟಿ ರಾಮು ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದರು. ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ನಿರ್ಮಾಣ ಮಾಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ರಾಮು-ಮಾಲಾಶ್ರೀ ದಂಪತಿಯ ಮಗಳು ಆರಾಧನಾ ಕೂಡ ಈಗ ಚಿತ್ರರಂಗಕ್ಕೆ ಪ್ರವೇಶ ಪಡೆಯುತ್ತಿದ್ದಾರೆ. ಅವರ ಮೊದಲ ಸಿನಿಮಾಗೆ ತರುಣ್​ ಸುಧೀರ್​ ಅವರು ನಿರ್ದೇಶನ ಮಾಡುತ್ತಿದ್ದು, ರಾಕ್​ಲೈನ್ ವೆಂಕಟೇಶ್​ ಅವರು ಬಂಡವಾಳ ಹೂಡುತ್ತಿದ್ದಾರೆ. ‘ರಾಕ್ ಲೈನ್ ವೆಂಕಟೇಶ್, ತರುಣ್ ಸುಧೀರ್ ಮತ್ತು ನಾನು ಒಟ್ಟಾಗಿ ಚರ್ಚಿಸಿ ಆರಾಧನಾ ಎಂಬ ಹೆಸರನ್ನು ಆಯ್ಕೆ ಮಾಡಿದ್ದೇವೆ’ ಎಂದು ಮಾಲಾಶ್ರೀ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:15 am, Sun, 20 August 23

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್