AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಕೋಟಿ ರಾಮು ನಿರ್ಮಾಣದ ಕೊನೇ ಚಿತ್ರ ರಿಲೀಸ್​ ಮಾಡಲಿರುವ ಮಾಲಾಶ್ರೀ; ಡಿ.31ಕ್ಕೆ ‘ಅರ್ಜುನ್​ ಗೌಡ’

Arjun Gowda Movie: ಪ್ರಜ್ವಲ್​ ದೇವರಾಜ್​ ನಟನೆಯ ‘ಅರ್ಜನ್​ ಗೌಡ’ ಒಂದು ಆ್ಯಕ್ಷನ್​ ಪ್ರಧಾನ ಸಿನಿಮಾ. ಕೋಟಿ ರಾಮು ನಿರ್ಮಾಣದ ಈ ಚಿತ್ರವನ್ನು ಡಿ.31ರಂದು ತೆರೆಕಾಣಿಸಲು ಮಾಲಾಶ್ರೀ ನಿರ್ಧರಿಸಿದ್ದಾರೆ.

ಪತಿ ಕೋಟಿ ರಾಮು ನಿರ್ಮಾಣದ ಕೊನೇ ಚಿತ್ರ ರಿಲೀಸ್​ ಮಾಡಲಿರುವ ಮಾಲಾಶ್ರೀ; ಡಿ.31ಕ್ಕೆ ‘ಅರ್ಜುನ್​ ಗೌಡ’
ಪ್ರಜ್ವಲ್​ ದೇವರಾಜ್​, ಮಾಲಾಶ್ರೀ, ಕೋಟಿ ರಾಮು
TV9 Web
| Edited By: |

Updated on: Dec 05, 2021 | 9:20 AM

Share

ಕನ್ನಡ ಚಿತ್ರರಂಗದಲ್ಲಿ ಅದ್ದೂರಿ ಸಿನಿಮಾಗಳನ್ನು ನಿರ್ಮಾಣ ಮಾಡಿದ ರಾಮು (Koti Ramu) ಅವರ ಹೆಸರಿನ ಜತೆ ‘ಕೋಟಿ’ ಎಂಬ ವಿಶೇಷಣ ಕೂಡ ಸೇರಿಕೊಂಡಿತ್ತು. ಸಿನಿಮಾ ಮೇಲೆ ಅವರಿಗೆ ಅಷ್ಟರಮಟ್ಟಿಗೆ ಪ್ರೀತಿ ಇತ್ತು. ಅನೇಕ ಸೂಪರ್​ ಹಿಟ್​ ಚಿತ್ರಗಳನ್ನು ನಿರ್ಮಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ರಾಮು ನಿರ್ಮಿಸಿದ ಸಾಹಸ ಪ್ರಧಾನ ಚಿತ್ರಗಳು ಜನಮನ ಗೆದ್ದಿದ್ದು ಈಗ ಇತಿಹಾಸ. ಕೊರೊನಾದಿಂದ ಈ ವರ್ಷ ಅವರು ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ರಾಮು ನಿಧನದಿಂದ ಅವರ ಪತ್ನಿ ಮಾಲಾಶ್ರೀ (Malashree) ಕಂಗೆಟ್ಟಿದ್ದರು. ಈಗ ಪತಿಯ ಕನಸನ್ನು ನನಸು ಮಾಡಲು ಅವರು ಮುಂದೆ ಬಂದಿದ್ದಾರೆ. ರಾಮು ನಿರ್ಮಾಣ ಮಾಡಿದ ಕೊನೇ ಸಿನಿಮಾ ‘ಅರ್ಜುನ್​ ಗೌಡ’ (Arjun Gowda Movie) ತೆರೆಕಾಣಿಸಲು ಮಾಲಾಶ್ರೀ ನಿರ್ಧರಿಸಿದ್ದಾರೆ. ಈ ಚಿತ್ರಕ್ಕೆ ಪ್ರಜ್ವಲ್​ ದೇವರಾಜ್​ (Prajwal Devaraj) ನಾಯಕ.

ಪ್ರಜ್ವಲ್​ ದೇವರಾಜ್​ ನಟನೆಯ ‘ಅರ್ಜನ್​ ಗೌಡ’ ಒಂದು ಆ್ಯಕ್ಷನ್​ ಪ್ರಧಾನ ಸಿನಿಮಾ. ಅದರ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಈಗಾಗಲೇ ಟ್ರೇಲರ್​ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ಈ ಚಿತ್ರಕ್ಕೆ ಈಗ ರಿಲೀಸ್​ ದಿನಾಂಕ ನಿಗದಿ ಆಗಿದೆ. ಡಿ.31ರಂದು ‘ಅರ್ಜುನ್​ ಗೌಡ’ ಸಿನಿಮಾವನ್ನು ತೆರೆಕಾಣಿಸಲು ಮಾಲಾಶ್ರೀ ನಿರ್ಧರಿಸಿದ್ದಾರೆ.

ಈ ಚಿತ್ರಕ್ಕೆ ಲಕ್ಕಿ ಶಂಕರ್​ ನಿರ್ದೇಶನ ಮಾಡಿದ್ದಾರೆ. ಧರ್ಮ ವಿಶ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಅರ್ಜುನ್​ ಕಿಟ್ಟು ಸಂಕಲನ, ಜೈ ಆನಂದ್​ ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದಾರೆ. ಮಾಸ್​ ಮಾದ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಪ್ರಜ್ವಲ್​ ದೇವರಾಜ್​ ಅವರಿಗೆ ಜೋಡಿಯಾಗಿ ಪ್ರಿಯಾಂಕಾ ತಿಮ್ಮೇಶ್​ ಅಭಿನಯಿಸಿದ್ದಾರೆ. ಈಗಾಗಲೇ ಹಲವು ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಪಡೆದಿರುವ ಪ್ರಿಯಾಂಕಾ ಅವರು ಬಿಗ್​ ಬಾಸ್​ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ಬಳಿಕ ಇನ್ನಷ್ಟು ಫೇಮಸ್​ ಆಗಿದ್ದಾರೆ. ಅವರ ಸಿನಿಮಾ ಬಿಡುಗಡೆ ಆಗುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಮಾಲಾಶ್ರೀ ಅವರು ಈಗಾಗಲೇ ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ‘ಅರ್ಜುನ್ ಗೌಡ’ ಚಿತ್ರದ ಪೋಸ್ಟರ್​ಗಳನ್ನು ಹಂಚಿಕೊಂಡು ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ‘ಸ್ಪರ್ಶ’ ರೇಖಾ, ದಿನೇಶ್ ಮಂಗಳೂರು, ಸಾಧು ಕೋಕಿಲ, ರಾಜ್​ ದೀಪಕ್​ ಶೆಟ್ಟಿ, ರಾಹುಲ್​ ದೇವ್​, ಕಡ್ಡಿಪುಡಿ ಚಂದ್ರು ಸೇರಿದಂತೆ ಅನೇಕ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಡಿಸೆಂಬರ್​ನಲ್ಲಿ ಹಲವು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಅವುಗಳ ಜತೆ ‘ಅರ್ಜುನ್ ಗೌಡ’ ಸಹ ಪೈಪೋಟಿಗೆ ಇಳಿಯಲಿದೆ.

ಇದನ್ನೂ ಓದಿ:

‘ಮಾಫಿಯಾ’ ಚಿತ್ರಕ್ಕಾಗಿ ಗೆಟಪ್​ ಬದಲಿಸಿ ಕ್ಯಾನ್ಸರ್​ ಪೀಡಿತರಿಗೆ ಕೂದಲು ದಾನ ಮಾಡಿದ ಪ್ರಜ್ವಲ್​ ದೇವರಾಜ್​

ಕೋಟಿ ರಾಮು ಹುಟ್ಟುಹಬ್ಬ; ಕಣ್ಣೀರು ತುಂಬಿಕೊಂಡು ಭಾವುಕ ಪತ್ರ ಬರೆದ ನಟಿ ಮಾಲಾಶ್ರೀ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ