AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಕೋಟಿ ರಾಮು ನಿರ್ಮಾಣದ ಕೊನೇ ಚಿತ್ರ ರಿಲೀಸ್​ ಮಾಡಲಿರುವ ಮಾಲಾಶ್ರೀ; ಡಿ.31ಕ್ಕೆ ‘ಅರ್ಜುನ್​ ಗೌಡ’

Arjun Gowda Movie: ಪ್ರಜ್ವಲ್​ ದೇವರಾಜ್​ ನಟನೆಯ ‘ಅರ್ಜನ್​ ಗೌಡ’ ಒಂದು ಆ್ಯಕ್ಷನ್​ ಪ್ರಧಾನ ಸಿನಿಮಾ. ಕೋಟಿ ರಾಮು ನಿರ್ಮಾಣದ ಈ ಚಿತ್ರವನ್ನು ಡಿ.31ರಂದು ತೆರೆಕಾಣಿಸಲು ಮಾಲಾಶ್ರೀ ನಿರ್ಧರಿಸಿದ್ದಾರೆ.

ಪತಿ ಕೋಟಿ ರಾಮು ನಿರ್ಮಾಣದ ಕೊನೇ ಚಿತ್ರ ರಿಲೀಸ್​ ಮಾಡಲಿರುವ ಮಾಲಾಶ್ರೀ; ಡಿ.31ಕ್ಕೆ ‘ಅರ್ಜುನ್​ ಗೌಡ’
ಪ್ರಜ್ವಲ್​ ದೇವರಾಜ್​, ಮಾಲಾಶ್ರೀ, ಕೋಟಿ ರಾಮು
TV9 Web
| Updated By: ಮದನ್​ ಕುಮಾರ್​|

Updated on: Dec 05, 2021 | 9:20 AM

Share

ಕನ್ನಡ ಚಿತ್ರರಂಗದಲ್ಲಿ ಅದ್ದೂರಿ ಸಿನಿಮಾಗಳನ್ನು ನಿರ್ಮಾಣ ಮಾಡಿದ ರಾಮು (Koti Ramu) ಅವರ ಹೆಸರಿನ ಜತೆ ‘ಕೋಟಿ’ ಎಂಬ ವಿಶೇಷಣ ಕೂಡ ಸೇರಿಕೊಂಡಿತ್ತು. ಸಿನಿಮಾ ಮೇಲೆ ಅವರಿಗೆ ಅಷ್ಟರಮಟ್ಟಿಗೆ ಪ್ರೀತಿ ಇತ್ತು. ಅನೇಕ ಸೂಪರ್​ ಹಿಟ್​ ಚಿತ್ರಗಳನ್ನು ನಿರ್ಮಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ರಾಮು ನಿರ್ಮಿಸಿದ ಸಾಹಸ ಪ್ರಧಾನ ಚಿತ್ರಗಳು ಜನಮನ ಗೆದ್ದಿದ್ದು ಈಗ ಇತಿಹಾಸ. ಕೊರೊನಾದಿಂದ ಈ ವರ್ಷ ಅವರು ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ರಾಮು ನಿಧನದಿಂದ ಅವರ ಪತ್ನಿ ಮಾಲಾಶ್ರೀ (Malashree) ಕಂಗೆಟ್ಟಿದ್ದರು. ಈಗ ಪತಿಯ ಕನಸನ್ನು ನನಸು ಮಾಡಲು ಅವರು ಮುಂದೆ ಬಂದಿದ್ದಾರೆ. ರಾಮು ನಿರ್ಮಾಣ ಮಾಡಿದ ಕೊನೇ ಸಿನಿಮಾ ‘ಅರ್ಜುನ್​ ಗೌಡ’ (Arjun Gowda Movie) ತೆರೆಕಾಣಿಸಲು ಮಾಲಾಶ್ರೀ ನಿರ್ಧರಿಸಿದ್ದಾರೆ. ಈ ಚಿತ್ರಕ್ಕೆ ಪ್ರಜ್ವಲ್​ ದೇವರಾಜ್​ (Prajwal Devaraj) ನಾಯಕ.

ಪ್ರಜ್ವಲ್​ ದೇವರಾಜ್​ ನಟನೆಯ ‘ಅರ್ಜನ್​ ಗೌಡ’ ಒಂದು ಆ್ಯಕ್ಷನ್​ ಪ್ರಧಾನ ಸಿನಿಮಾ. ಅದರ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಈಗಾಗಲೇ ಟ್ರೇಲರ್​ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ಈ ಚಿತ್ರಕ್ಕೆ ಈಗ ರಿಲೀಸ್​ ದಿನಾಂಕ ನಿಗದಿ ಆಗಿದೆ. ಡಿ.31ರಂದು ‘ಅರ್ಜುನ್​ ಗೌಡ’ ಸಿನಿಮಾವನ್ನು ತೆರೆಕಾಣಿಸಲು ಮಾಲಾಶ್ರೀ ನಿರ್ಧರಿಸಿದ್ದಾರೆ.

ಈ ಚಿತ್ರಕ್ಕೆ ಲಕ್ಕಿ ಶಂಕರ್​ ನಿರ್ದೇಶನ ಮಾಡಿದ್ದಾರೆ. ಧರ್ಮ ವಿಶ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಅರ್ಜುನ್​ ಕಿಟ್ಟು ಸಂಕಲನ, ಜೈ ಆನಂದ್​ ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದಾರೆ. ಮಾಸ್​ ಮಾದ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಪ್ರಜ್ವಲ್​ ದೇವರಾಜ್​ ಅವರಿಗೆ ಜೋಡಿಯಾಗಿ ಪ್ರಿಯಾಂಕಾ ತಿಮ್ಮೇಶ್​ ಅಭಿನಯಿಸಿದ್ದಾರೆ. ಈಗಾಗಲೇ ಹಲವು ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಪಡೆದಿರುವ ಪ್ರಿಯಾಂಕಾ ಅವರು ಬಿಗ್​ ಬಾಸ್​ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ಬಳಿಕ ಇನ್ನಷ್ಟು ಫೇಮಸ್​ ಆಗಿದ್ದಾರೆ. ಅವರ ಸಿನಿಮಾ ಬಿಡುಗಡೆ ಆಗುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಮಾಲಾಶ್ರೀ ಅವರು ಈಗಾಗಲೇ ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ‘ಅರ್ಜುನ್ ಗೌಡ’ ಚಿತ್ರದ ಪೋಸ್ಟರ್​ಗಳನ್ನು ಹಂಚಿಕೊಂಡು ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ‘ಸ್ಪರ್ಶ’ ರೇಖಾ, ದಿನೇಶ್ ಮಂಗಳೂರು, ಸಾಧು ಕೋಕಿಲ, ರಾಜ್​ ದೀಪಕ್​ ಶೆಟ್ಟಿ, ರಾಹುಲ್​ ದೇವ್​, ಕಡ್ಡಿಪುಡಿ ಚಂದ್ರು ಸೇರಿದಂತೆ ಅನೇಕ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಡಿಸೆಂಬರ್​ನಲ್ಲಿ ಹಲವು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಅವುಗಳ ಜತೆ ‘ಅರ್ಜುನ್ ಗೌಡ’ ಸಹ ಪೈಪೋಟಿಗೆ ಇಳಿಯಲಿದೆ.

ಇದನ್ನೂ ಓದಿ:

‘ಮಾಫಿಯಾ’ ಚಿತ್ರಕ್ಕಾಗಿ ಗೆಟಪ್​ ಬದಲಿಸಿ ಕ್ಯಾನ್ಸರ್​ ಪೀಡಿತರಿಗೆ ಕೂದಲು ದಾನ ಮಾಡಿದ ಪ್ರಜ್ವಲ್​ ದೇವರಾಜ್​

ಕೋಟಿ ರಾಮು ಹುಟ್ಟುಹಬ್ಬ; ಕಣ್ಣೀರು ತುಂಬಿಕೊಂಡು ಭಾವುಕ ಪತ್ರ ಬರೆದ ನಟಿ ಮಾಲಾಶ್ರೀ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ