AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​-ರಾಧಿಕಾ ಪಂಡಿತ್​ ಚಿತ್ರರಂಗದ ಬೆಸ್ಟ್​ ಕಪಲ್​; ಮನಃಪೂರ್ವಕವಾಗಿ ಹೊಗಳಿದ ಪರಭಾಷಾ ನಟಿ

ನಟಿ ರಾಧಿಕಾ ಪಂಡಿತ್​ ಹಾಗೂ ಯಶ್​ ದಂಪತಿ ಸ್ಯಾಂಡಲ್​ವುಡ್​ನ ಖ್ಯಾತ ಸೆಲೆಬ್ರಿಟಿ ಜೋಡಿಗಳ ಪೈಕಿ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಇವರ ನಿಶ್ಚಿತಾರ್ಥ ನೆರವೇರಿ ಆಗಸ್ಟ್​ 12ಕ್ಕೆ ಐದು ವರ್ಷ ತುಂಬಿದೆ.

ಯಶ್​-ರಾಧಿಕಾ ಪಂಡಿತ್​ ಚಿತ್ರರಂಗದ ಬೆಸ್ಟ್​ ಕಪಲ್​; ಮನಃಪೂರ್ವಕವಾಗಿ ಹೊಗಳಿದ ಪರಭಾಷಾ ನಟಿ
ಯಶ್​-ರಾಧಿಕಾ ಪಂಡಿತ್​ ಚಿತ್ರರಂಗದ ಬೆಸ್ಟ್​ ಕಪಲ್​; ಮನಃಪೂರ್ವಕವಾಗಿ ಹೊಗಳಿದ ಪರಭಾಷಾ ನಟಿ
TV9 Web
| Edited By: |

Updated on: Aug 13, 2021 | 7:43 PM

Share

ಯಶ್​-ರಾಧಿಕಾ ಪಂಡಿತ್​ ದಂಪತಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇವರನ್ನು ನಟ-ನಟಿಯಾಗಿ ಇಷ್ಟಪಡುವವರು ಒಂದಷ್ಟು ಜನರಾದರೆ, ಮಾದರಿ ದಂಪತಿ ಎನ್ನುವ ಕಾರಣಕ್ಕೆ ಅನೇಕರಿಗೆ ಇವರು ಇಷ್ಟವಾಗುತ್ತಾರೆ. ಈಗ ಪರಭಾಷಾ ನಟಿ ಮಾಳವಿಕಾ ಮೋಹನನ್​ ಅವರು ಈ ದಂಪತಿಯನ್ನು ಮನಃಪೂರ್ವಕವಾಗಿ ಹೊಗಳಿದ್ದಾರೆ.

ನಟಿ ರಾಧಿಕಾ ಪಂಡಿತ್​ ಹಾಗೂ ಯಶ್​ ದಂಪತಿ ಸ್ಯಾಂಡಲ್​ವುಡ್​ನ ಖ್ಯಾತ ಸೆಲೆಬ್ರಿಟಿ ಜೋಡಿಗಳ ಪೈಕಿ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಇವರ ನಿಶ್ಚಿತಾರ್ಥ ನೆರವೇರಿ ಆಗಸ್ಟ್​ 12ಕ್ಕೆ ಐದು ವರ್ಷ ತುಂಬಿದೆ. ಈ ಮಧುರ ಕ್ಷಣವನ್ನು ರಾಧಿಕಾ ಪಂಡಿತ್​ ನೆನೆದಿದ್ದರು. ಸಾಮಾಜಿಕ ಜಾಲತಾಣದಲ್ಲಿ ಅವರು ವಿಶೇಷ ವಿಡಿಯೋ ಕೂಡ ಹಂಚಿಕೊಂಡಿದ್ದರು. ಇದಕ್ಕೆ ‘ಅದ್ಭುತ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡು ಇಂದು 5 ವರ್ಷಗಳಾಗಿವೆ. ನನಗೆ ಆ ದಿನ ಇನ್ನೂ ನೆನಪಿದೆ. ಆ ಪರಿಪೂರ್ಣ ದಿನವನ್ನು ಮತ್ತೆ ಮೆಲುಕು ಹಾಕಲು ಈ ವಿಡಿಯೋವನ್ನು ಶೇರ್ ಮಾಡಿದ್ದೇನೆ’ ಎಂದು ರಾಧಿಕಾ ಪಂಡಿತ್​ ಬರೆದುಕೊಂಡಿದ್ದರು. ಇದೆ ರೀತಿಯ ಮತ್ತೊಂದು ಪೋಸ್ಟ್​ ಅನ್ನು ರಾಧಿಕಾ ಹಂಚಿಕೊಂಡಿದ್ದರು.

ಈ ಪೋಸ್ಟ್​ಗೆ ಮಾಳವಿಕಾ ಕಮೆಂಟ್​ ಮಾಡಿದ್ದಾರೆ. ‘ಇಂಡಸ್ಟ್ರಿಯ ಅತ್ಯುತ್ತಮ ಕಪಲ್​’ ಎಂದು ಕಮೆಂಟ್​ ಮಾಡಿರುವ ಮಾಳವಿಕಾ ಹೃದಯದ ಎಮೋಜಿ ಹಾಕಿದ್ದಾರೆ. ಇದು ಅನೇಕರಿಗೆ ಇಷ್ಟವಾಗಿದೆ.

2013ರಲ್ಲಿ ತೆರೆಗೆ ಬಂದ ಮಲಯಾಳಂನ ‘ಪಟ್ಟಮ್​ ಪೋಲೆ’ ಸಿನಿಮಾ ಮೂಲಕ ಮಾಳವಿಕಾ ಬಣ್ಣದ ಬದುಕು ಆರಂಭಿಸಿದರು. 2016ರಲ್ಲಿ ತೆರೆಗೆ ಬಂದ ‘ನಾನು ಮತ್ತು ವರಲಕ್ಷ್ಮೀ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಇದು ಅವರ ಮೊದಲ ಮತ್ತು ಕೊನೆಯ ಕನ್ನಡ ಸಿನಿಮಾ. ಇದಾದ ನಂತರದಲ್ಲಿ ಸಾಕಷ್ಟು ತಮಿಳು ಚಿತ್ರಗಳಲ್ಲಿ ಮಾಳವಿಕಾ ನಟಿಸಿದ್ದಾರೆ.

ರಾಧಿಕಾ ಪಂಡಿತ್​ ನಟನೆಯಿಂದ ದೂರ ಉಳಿದಿದ್ದಾರೆ. ಆಗೊಂದು ಈಗೊಂದು ಪೋಸ್ಟ್​ ಹಾಕುವ ಮೂಲಕ ಅಭಿಮಾನಿಗಳ ಜತೆ ರಾಧಿಕಾ ಪಂಡಿತ್​ ಸಂಪರ್ಕದಲ್ಲಿದ್ದಾರೆ. ಇನ್ನು, ರಾಧಿಕಾ ಕೊನೆಯದಾಗಿ ಕಾಣಿಸಿಕೊಂಡಿದ್ದು 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮಿ ಪುರಾಣ’ ಚಿತ್ರದಲ್ಲಿ. ಈ ಸಿನಿಮಾ ತೆರೆಗೆ ಬಂದ ನಂತರದಲ್ಲಿ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಇನ್ನು, ಯಶ್​ ‘ಕೆಜಿಎಫ್​ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಸಂಜಯ್​ ದತ್​ ಅಧೀರನಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ  ರಿಲೀಸ್​ ದಿನಾಂಕ ಕೊವಿಡ್​ ಎರಡನೆ ಅಲೆ ಕಾರಣದಿಂದ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ: ರಾಧಿಕಾ ಪಂಡಿತ್​-ಯಶ್​ ನಿಶ್ಚಿತಾರ್ಥಕ್ಕೆ ಐದು ವರ್ಷ; ವಿಶೇಷ ವಿಡಿಯೋ ಹಂಚಿಕೊಂಡ ನಟಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ