AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​-ರಾಧಿಕಾ ಪಂಡಿತ್​ ಚಿತ್ರರಂಗದ ಬೆಸ್ಟ್​ ಕಪಲ್​; ಮನಃಪೂರ್ವಕವಾಗಿ ಹೊಗಳಿದ ಪರಭಾಷಾ ನಟಿ

ನಟಿ ರಾಧಿಕಾ ಪಂಡಿತ್​ ಹಾಗೂ ಯಶ್​ ದಂಪತಿ ಸ್ಯಾಂಡಲ್​ವುಡ್​ನ ಖ್ಯಾತ ಸೆಲೆಬ್ರಿಟಿ ಜೋಡಿಗಳ ಪೈಕಿ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಇವರ ನಿಶ್ಚಿತಾರ್ಥ ನೆರವೇರಿ ಆಗಸ್ಟ್​ 12ಕ್ಕೆ ಐದು ವರ್ಷ ತುಂಬಿದೆ.

ಯಶ್​-ರಾಧಿಕಾ ಪಂಡಿತ್​ ಚಿತ್ರರಂಗದ ಬೆಸ್ಟ್​ ಕಪಲ್​; ಮನಃಪೂರ್ವಕವಾಗಿ ಹೊಗಳಿದ ಪರಭಾಷಾ ನಟಿ
ಯಶ್​-ರಾಧಿಕಾ ಪಂಡಿತ್​ ಚಿತ್ರರಂಗದ ಬೆಸ್ಟ್​ ಕಪಲ್​; ಮನಃಪೂರ್ವಕವಾಗಿ ಹೊಗಳಿದ ಪರಭಾಷಾ ನಟಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 13, 2021 | 7:43 PM

Share

ಯಶ್​-ರಾಧಿಕಾ ಪಂಡಿತ್​ ದಂಪತಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇವರನ್ನು ನಟ-ನಟಿಯಾಗಿ ಇಷ್ಟಪಡುವವರು ಒಂದಷ್ಟು ಜನರಾದರೆ, ಮಾದರಿ ದಂಪತಿ ಎನ್ನುವ ಕಾರಣಕ್ಕೆ ಅನೇಕರಿಗೆ ಇವರು ಇಷ್ಟವಾಗುತ್ತಾರೆ. ಈಗ ಪರಭಾಷಾ ನಟಿ ಮಾಳವಿಕಾ ಮೋಹನನ್​ ಅವರು ಈ ದಂಪತಿಯನ್ನು ಮನಃಪೂರ್ವಕವಾಗಿ ಹೊಗಳಿದ್ದಾರೆ.

ನಟಿ ರಾಧಿಕಾ ಪಂಡಿತ್​ ಹಾಗೂ ಯಶ್​ ದಂಪತಿ ಸ್ಯಾಂಡಲ್​ವುಡ್​ನ ಖ್ಯಾತ ಸೆಲೆಬ್ರಿಟಿ ಜೋಡಿಗಳ ಪೈಕಿ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಇವರ ನಿಶ್ಚಿತಾರ್ಥ ನೆರವೇರಿ ಆಗಸ್ಟ್​ 12ಕ್ಕೆ ಐದು ವರ್ಷ ತುಂಬಿದೆ. ಈ ಮಧುರ ಕ್ಷಣವನ್ನು ರಾಧಿಕಾ ಪಂಡಿತ್​ ನೆನೆದಿದ್ದರು. ಸಾಮಾಜಿಕ ಜಾಲತಾಣದಲ್ಲಿ ಅವರು ವಿಶೇಷ ವಿಡಿಯೋ ಕೂಡ ಹಂಚಿಕೊಂಡಿದ್ದರು. ಇದಕ್ಕೆ ‘ಅದ್ಭುತ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡು ಇಂದು 5 ವರ್ಷಗಳಾಗಿವೆ. ನನಗೆ ಆ ದಿನ ಇನ್ನೂ ನೆನಪಿದೆ. ಆ ಪರಿಪೂರ್ಣ ದಿನವನ್ನು ಮತ್ತೆ ಮೆಲುಕು ಹಾಕಲು ಈ ವಿಡಿಯೋವನ್ನು ಶೇರ್ ಮಾಡಿದ್ದೇನೆ’ ಎಂದು ರಾಧಿಕಾ ಪಂಡಿತ್​ ಬರೆದುಕೊಂಡಿದ್ದರು. ಇದೆ ರೀತಿಯ ಮತ್ತೊಂದು ಪೋಸ್ಟ್​ ಅನ್ನು ರಾಧಿಕಾ ಹಂಚಿಕೊಂಡಿದ್ದರು.

ಈ ಪೋಸ್ಟ್​ಗೆ ಮಾಳವಿಕಾ ಕಮೆಂಟ್​ ಮಾಡಿದ್ದಾರೆ. ‘ಇಂಡಸ್ಟ್ರಿಯ ಅತ್ಯುತ್ತಮ ಕಪಲ್​’ ಎಂದು ಕಮೆಂಟ್​ ಮಾಡಿರುವ ಮಾಳವಿಕಾ ಹೃದಯದ ಎಮೋಜಿ ಹಾಕಿದ್ದಾರೆ. ಇದು ಅನೇಕರಿಗೆ ಇಷ್ಟವಾಗಿದೆ.

2013ರಲ್ಲಿ ತೆರೆಗೆ ಬಂದ ಮಲಯಾಳಂನ ‘ಪಟ್ಟಮ್​ ಪೋಲೆ’ ಸಿನಿಮಾ ಮೂಲಕ ಮಾಳವಿಕಾ ಬಣ್ಣದ ಬದುಕು ಆರಂಭಿಸಿದರು. 2016ರಲ್ಲಿ ತೆರೆಗೆ ಬಂದ ‘ನಾನು ಮತ್ತು ವರಲಕ್ಷ್ಮೀ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಇದು ಅವರ ಮೊದಲ ಮತ್ತು ಕೊನೆಯ ಕನ್ನಡ ಸಿನಿಮಾ. ಇದಾದ ನಂತರದಲ್ಲಿ ಸಾಕಷ್ಟು ತಮಿಳು ಚಿತ್ರಗಳಲ್ಲಿ ಮಾಳವಿಕಾ ನಟಿಸಿದ್ದಾರೆ.

ರಾಧಿಕಾ ಪಂಡಿತ್​ ನಟನೆಯಿಂದ ದೂರ ಉಳಿದಿದ್ದಾರೆ. ಆಗೊಂದು ಈಗೊಂದು ಪೋಸ್ಟ್​ ಹಾಕುವ ಮೂಲಕ ಅಭಿಮಾನಿಗಳ ಜತೆ ರಾಧಿಕಾ ಪಂಡಿತ್​ ಸಂಪರ್ಕದಲ್ಲಿದ್ದಾರೆ. ಇನ್ನು, ರಾಧಿಕಾ ಕೊನೆಯದಾಗಿ ಕಾಣಿಸಿಕೊಂಡಿದ್ದು 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮಿ ಪುರಾಣ’ ಚಿತ್ರದಲ್ಲಿ. ಈ ಸಿನಿಮಾ ತೆರೆಗೆ ಬಂದ ನಂತರದಲ್ಲಿ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಇನ್ನು, ಯಶ್​ ‘ಕೆಜಿಎಫ್​ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಸಂಜಯ್​ ದತ್​ ಅಧೀರನಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ  ರಿಲೀಸ್​ ದಿನಾಂಕ ಕೊವಿಡ್​ ಎರಡನೆ ಅಲೆ ಕಾರಣದಿಂದ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ: ರಾಧಿಕಾ ಪಂಡಿತ್​-ಯಶ್​ ನಿಶ್ಚಿತಾರ್ಥಕ್ಕೆ ಐದು ವರ್ಷ; ವಿಶೇಷ ವಿಡಿಯೋ ಹಂಚಿಕೊಂಡ ನಟಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ