Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ ಬಿ. ಶೆಟ್ಟಿ ನಟನೆಯ ಮೊದಲ ಮಲಯಾಳಂ ಸಿನಿಮಾ ಅನೌನ್ಸ್​; ವೆಲ್ಕಮ್ ಎಂದ ಮಮ್ಮೂಟಿ

‘ಗರುಡ ಗಮನ ವೃಷಭ ವಾಹನ’ ಸಿನಿಮಾದಲ್ಲಿ ರುದ್ರಾವತಾರ ತೋರಿದ್ದರು. ಈಗ ‘ಟರ್ಬೋ’ ಸಿನಿಮಾದಲ್ಲಿ ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.  

ರಾಜ್ ಬಿ. ಶೆಟ್ಟಿ ನಟನೆಯ ಮೊದಲ ಮಲಯಾಳಂ ಸಿನಿಮಾ ಅನೌನ್ಸ್​; ವೆಲ್ಕಮ್ ಎಂದ ಮಮ್ಮೂಟಿ
ಟರ್ಬೋ
Follow us
ರಾಜೇಶ್ ದುಗ್ಗುಮನೆ
|

Updated on: Nov 22, 2023 | 7:00 PM

ನಟ ಮಮ್ಮೂಟಿ ಅವರು ಮಲಯಾಳಂನಲ್ಲಿ ಸಖತ್ ಫೇಮಸ್. ಅವರು ‘ಟರ್ಬೋ’ ಸಿನಿಮಾದಲ್ಲಿ (Turbo Movie) ನಟಿಸುತ್ತಿದ್ದಾರೆ. ಈಗ ಈ ಚಿತ್ರಕ್ಕೆ ಕನ್ನಡದ ಜನಪ್ರಿಯ ನಟ ರಾಜ್ ಬಿ. ಶೆಟ್ಟಿ ಸೇರ್ಪಡೆ ಆಗಿದ್ದಾರೆ. ಮಮ್ಮೂಟಿ ಅವರೇ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅವರ ಕಡೆಯಿಂದಲೇ ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ‘ರಾಜ್ ಬಿ. ಶೆಟ್ಟಿ ಅವರಿಗೆ ಸ್ವಾಗತ’ ಎಂದು ಬರೆಯಲಾಗಿದೆ.

‘ಅಪಾರ ಟ್ಯಾಲೆಂಟೆಂಡ್ ನಟ ರಾಜ್ ಬಿ ಶೆಟ್ಟಿ ಅವರಿಗೆ ಟರ್ಬೋ ಚಿತ್ರಕ್ಕೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ ಮಮ್ಮೂಟಿ. ರಾಜ್ ಬಿ ಶೆಟ್ಟಿ ಅವರು ‘ಒಂದು ಮೊಟ್ಟೆಯ ಕಥೆ’ ಸಿನಿಮಾ ಮೂಲಕ ಜನಪ್ರಿಯತೆ ಪಡೆದರು. ಇದಾದ ಬಳಿಕ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ, ನಿರ್ದೇಶಿಸಿದ್ದಾರೆ. ಈಗ ಪರಭಾಷೆಯವರೂ ಅವರ ಟ್ಯಾಲೆಂಟ್​ನ ಗುರುತಿಸಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಅವರ ನಟನೆಯ ‘ಟೋಬಿ’ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆಯಿತು. ಅವರು ನಟಿಸಿ, ನಿರ್ದೇಶಿಸಿರುವ ‘ಸ್ವಾತಿ ಮುತ್ತಿನ ಮಳೆಹನಿಯೇ’ ಈ ವಾರ ರಿಲೀಸ್ ಆಗುತ್ತಿದೆ.

‘ಟರ್ಬೋ’ ಸಿನಿಮಾ ವೈಶಾಖ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ವೈಶಾಖ್ ಹಾಗೂ ಮಮ್ಮೂಟಿ ಜೊತೆ ಅವರು ‘ಪೊಕಿರಿ ರಾಜ’ ಹಾಗೂ ‘ಮಧುರ ರಾಜ’ ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಈ ಸಿನಿಮಾ ಆ್ಯಕ್ಷನ್ ಕಾಮಿಡಿ ಶೈಲಿಯಲ್ಲಿ ಮೂಡಿಬರುತ್ತಿದೆ.

ರಾಜ್ ಬಿ. ಶೆಟ್ಟಿ ಅವರಿಗೆ ಕನ್ನಡದಲ್ಲಿ ಸಾಕಷ್ಟು ಬೇಡಿಕೆ ಇದೆ. ಕಾಮಿಡಿ ಸಿನಿಮಾಗಳ ಮೂಲಕ ಜನರ ಎದುರು ಬಂದ ಅವರು ಆ ಬಳಿಕ ‘ಗರುಡ ಗಮನ ವೃಷಭ ವಾಹನ’ ಸಿನಿಮಾದಲ್ಲಿ ರುದ್ರಾವತಾರ ತೋರಿದ್ದರು. ಈಗ ‘ಟರ್ಬೋ’ ಸಿನಿಮಾದಲ್ಲಿ ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಇದನ್ನೂ ಓದಿ: ಸಿನಿಮಾಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಹೆಸರಿಟ್ಟಿದ್ದೇಕೆ? ವಿವರಿಸಿದ್ದಾರೆ ರಾಜ್ ಬಿ ಶೆಟ್ಟಿ

2018ರಲ್ಲಿ ಈ ಮೊದಲು ‘ಟರ್ಬೋ ಪೀಟರ್’ ಸಿನಿಮಾ ಅನೌನ್ಸ್ ಆಗಿತ್ತು. ಈ ಚಿತ್ರದಲ್ಲಿ ಜಯಸೂರ್ಯ ನಟಿಸಬೇಕಿತ್ತು. ಆದರೆ, ಈ ಸಿನಿಮಾ ಫೈನಲ್ ಆಗಿತ್ತು. ಆ ಚಿತ್ರಕ್ಕೂ ಈಗಿನ ‘ಟರ್ಬೋ’ಗೂ ಯಾವುದೇ ಸಂಬಂಧ ಇಲ್ಲ ಎಂದು ತಂಡ ಹೇಳಿದೆ. ‘ಟರ್ಬೋ’ ಚಿತ್ರವನ್ನು ದುಲ್ಕರ್ ಸಲ್ಮಾನ್ ಪ್ರೊಡಕ್ಷನ್ ಹೌಸ್ ಹಂಚಿಕೆ ಮಾಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್