AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಆತ್ಮದ ಜತೆ ಮಾತನಾಡಿದ್ದೇನೆ ಎಂದು ವಿಡಿಯೋ ಹಂಚಿಕೊಂಡ ವ್ಯಕ್ತಿಗೆ ಅಭಿಮಾನಿಗಳ ಛೀಮಾರಿ

ನಿಮ್ಮ ಮಕ್ಕಳಿಗೆ ಏನಾದರೂ ಸಂದೇಶವಿದೆಯೇ ಎಂದು ಚಾರ್ಲಿ ಕೇಳಿದ್ದಾರೆ. ಇದಕ್ಕೆ ಸ್ಪೀಕರ್​ನಿಂದ ‘ಐ ಲವ್​ ದೆಮ್​’ ಎನ್ನುವ ಉತ್ತರ ಬಂದಿದೆ. ಪುನೀತ್​ ಸಾವಿನ ನಂತರದಲ್ಲಿ ಈ ರೀತಿ ಮಾಡಿರುವುದು ಅನೇಕರಿಗೆ ಬೇಸರ ತರಿಸಿದೆ.

ಪುನೀತ್​ ಆತ್ಮದ ಜತೆ ಮಾತನಾಡಿದ್ದೇನೆ ಎಂದು ವಿಡಿಯೋ ಹಂಚಿಕೊಂಡ ವ್ಯಕ್ತಿಗೆ ಅಭಿಮಾನಿಗಳ ಛೀಮಾರಿ
ಚಾರ್ಲಿ-ಪುನೀತ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Nov 08, 2021 | 1:43 PM

Share

ಯಾರಾದರೂ ಸೆಲೆಬ್ರಿಟಿಗಳು ಮೃತಪಟ್ಟಾಗ ಅದರ ಲಾಭ ಪಡೆಯೋಕೆ ಕೆಲವರು ಮುಂದಾಗುತ್ತಾರೆ. ಪುನೀತ್​ ರಾಜ್​ಕುಮಾರ್​ ಮೃತಪಟ್ಟಾಗಲೂ ಕೆಲವರು ಇದೇ ರೀತಿಯ ಕೆಲಸಕ್ಕೆ ಕೈ ಹಾಕಿದ್ದಾರೆ. ಈ ಮೊದಲು ಕೆಲ ಡೈಗ್ನಾಸ್​​ ಕೇಂದ್ರಗಳು ಪುನೀತ್​ ಹೃದಯಾಘಾತದಿಂದ ಮೃತಪಟ್ಟಿದ್ದ ಸುದ್ದಿಯನ್ನೇ ಜಾಹೀರಾತಿನ ರೀತಿಯಲ್ಲಿ ಬಳಕೆ ಮಾಡಿಕೊಂಡಿದ್ದರು. ಈಗ ಪುನೀತ್​ ಆತ್ಮದ ಜತೆ ಮಾತನಾಡಿದ್ದೇನೆ ಎಂದು ವ್ಯಕ್ತಿಯೋರ್ವ ವಿಡಿಯೋ ಮಾಡಿ ಪೋಸ್ಟ್​ ಮಾಡಿದ್ದಾರೆ. ಇದಕ್ಕೆ ಪುನೀತ್​ ಅಭಿಮಾನಿಗಳು ಬಾಯಿಗೆ ಬಂದಂತೆ ಉಗಿದಿದ್ದಾರೆ.

ಚಾರ್ಲಿ ಚಿಟ್ಟೆಂಡೆನ್​ ಹೆಸರಿನ ವಿದೇಶಿಗ ಈ ಬಗ್ಗೆ ಯೂಟ್ಯೂಬ್​​ನಲ್ಲಿ ವಿಡಿಯೋ ಪೋಸ್ಟ್​ ಮಾಡಿದ್ದಾರೆ. ಈ ವಿಡಿಯೋದಲ್ಲಿ ಎದುರು ಭಾಗದಲ್ಲಿ  ಸ್ಪೀಕರ್​ ಮಾದರಿಯ ವಸ್ತು ಒಂದನ್ನು ಚಾರ್ಲಿ ಇಟ್ಟುಕೊಂಡಿದ್ದಾರೆ. ಕೈಯಲ್ಲಿ ಒಂದು ನೋಟ್ಸ್​ ಹಿಡಿದು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರಿಸುತ್ತಿರುವುದು ಪುನೀತ್​ ಆತ್ಮ ಎಂದು ಅವರು ಹೇಳಿಕೊಂಡಿದ್ದಾರೆ.

ನಿಮ್ಮ ಮಕ್ಕಳಿಗೆ ಏನಾದರೂ ಸಂದೇಶವಿದೆಯೇ ಎಂದು ಚಾರ್ಲಿ ಕೇಳಿದ್ದಾರೆ. ಇದಕ್ಕೆ ಸ್ಪೀಕರ್​ನಿಂದ ‘ಐ ಲವ್​ ದೆಮ್​’ ಎನ್ನುವ ಉತ್ತರ ಬಂದಿದೆ. ಪುನೀತ್​ ಸಾವಿನ ನಂತರದಲ್ಲಿ ಈ ರೀತಿ ಮಾಡಿರುವುದು ಅನೇಕರಿಗೆ ಬೇಸರ ತರಿಸಿದೆ. ಅಲ್ಲದೆ, ಪುನೀತ್​ ಅಭಿಮಾನಿಗಳು ಚಾರ್ಲಿಗೆ ಕಮೆಂಟ್​ ಸೆಕ್ಷನ್​ನಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ‘ನೀವು ಚೆನ್ನಾಗಿ ನಟಿಸುತ್ತೀರಿ ಎಂಬುದು ಗೊತ್ತಿದೆ. ಮತ್ತೆ ಅದನ್ನು ಸಾಬೀತು ಮಾಡಬೇಕೆಂದಿಲ್ಲ’ ಎಂದು ಟೀಕಿಸಿದ್ದಾರೆ.

ಇನ್ನೂ ಕೆಲವರು ಇದನ್ನು ನಂಬಿದ್ದಾರೆ. ಈ ವಿಡಿಯೋದಲ್ಲಿ ಸ್ಪೀಕರ್​ನಿಂದ ಹೊರ ಬಂದ ಮಾತು ಸ್ಪಷ್ಟವಾಗಿಲ್ಲ. ಈ ಕಾರಣಕ್ಕೆ ಕೆಲವರು ವಿಡಿಯೋವನ್ನು ಮತ್ತೆ ಮಾಡಿ. ಮಾತು ಸರಿಯಾಗಿ ಕೇಳಿಸುತ್ತಿಲ್ಲ ಎನ್ನುವ ಬೇಡಿಕೆ ಇಟ್ಟಿದ್ದಾರೆ. ಮಿಸ್​ ಯು ಅಪ್ಪು ಎಂದು ಕಮೆಂಟ್​ ಮಾಡಿದ್ದಾರೆ. ಈ ವಿಡಿಯೋ ಅಸಲಿಯೋ ಅಥವಾ ನಕಲಿಯೋ ಎಂಬುದು ಇನ್ನೂ ದೃಢವಾಗಿಲ್ಲ.

ಸುಶಾಂತ್​ ಸಿಂಗ್​ ರಜಪೂತ್, ಸಿದ್ದಾರ್ಥ್​ ಶುಕ್ಲಾ​ ನಿಧನದ ನಂತರ ಸ್ಟೀವ್​ ಹಫ್ ಸುಶಾಂತ್ ಆತ್ಮದ ಜೊತೆ ಮಾತನಾಡಿದ್ದ ವಿಡಿಯೋವನ್ನು ಬಿಡುಗಡೆ ಮಾಡಿದ್ದರು. ಆದರೆ, ಪುನೀತ್​ ರಾಜ್​ಕುಮಾರ್​ ಬಗ್ಗೆ ಅವರು ಯಾವುದೇ ವಿಡಿಯೋ ಬಿಡುಗಡೆ ಮಾಡಿಲ್ಲ.

ಇದನ್ನೂ ಓದಿ: ಅಪ್ಪು ಮೇಲೆ ಜನರಿಟ್ಟ ಅಭಿಮಾನಕ್ಕೆ ಸಾಟಿ ಇಲ್ಲ; ಪುನೀತ್​ ಸಮಾಧಿ ಬಳಿ ಜನಸಾಗರ ಇನ್ನೂ ಕಮ್ಮಿ ಆಗಿಲ್ಲ

ಅಪ್ಪು ಪುಣ್ಯ ಸ್ಮರಣೆಗೆ ಹೇಗಿದೆ ಸಮಾಧಿ ಅಲಂಕಾರ? ವಿವಿಧ ಹೂವುಗಳಿಂದ ಪುನೀತ್​ಗೆ ನಮನ

Published On - 1:43 pm, Mon, 8 November 21

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ