AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಆತ್ಮದ ಜತೆ ಮಾತನಾಡಿದ್ದೇನೆ ಎಂದು ವಿಡಿಯೋ ಹಂಚಿಕೊಂಡ ವ್ಯಕ್ತಿಗೆ ಅಭಿಮಾನಿಗಳ ಛೀಮಾರಿ

ನಿಮ್ಮ ಮಕ್ಕಳಿಗೆ ಏನಾದರೂ ಸಂದೇಶವಿದೆಯೇ ಎಂದು ಚಾರ್ಲಿ ಕೇಳಿದ್ದಾರೆ. ಇದಕ್ಕೆ ಸ್ಪೀಕರ್​ನಿಂದ ‘ಐ ಲವ್​ ದೆಮ್​’ ಎನ್ನುವ ಉತ್ತರ ಬಂದಿದೆ. ಪುನೀತ್​ ಸಾವಿನ ನಂತರದಲ್ಲಿ ಈ ರೀತಿ ಮಾಡಿರುವುದು ಅನೇಕರಿಗೆ ಬೇಸರ ತರಿಸಿದೆ.

ಪುನೀತ್​ ಆತ್ಮದ ಜತೆ ಮಾತನಾಡಿದ್ದೇನೆ ಎಂದು ವಿಡಿಯೋ ಹಂಚಿಕೊಂಡ ವ್ಯಕ್ತಿಗೆ ಅಭಿಮಾನಿಗಳ ಛೀಮಾರಿ
ಚಾರ್ಲಿ-ಪುನೀತ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Nov 08, 2021 | 1:43 PM

Share

ಯಾರಾದರೂ ಸೆಲೆಬ್ರಿಟಿಗಳು ಮೃತಪಟ್ಟಾಗ ಅದರ ಲಾಭ ಪಡೆಯೋಕೆ ಕೆಲವರು ಮುಂದಾಗುತ್ತಾರೆ. ಪುನೀತ್​ ರಾಜ್​ಕುಮಾರ್​ ಮೃತಪಟ್ಟಾಗಲೂ ಕೆಲವರು ಇದೇ ರೀತಿಯ ಕೆಲಸಕ್ಕೆ ಕೈ ಹಾಕಿದ್ದಾರೆ. ಈ ಮೊದಲು ಕೆಲ ಡೈಗ್ನಾಸ್​​ ಕೇಂದ್ರಗಳು ಪುನೀತ್​ ಹೃದಯಾಘಾತದಿಂದ ಮೃತಪಟ್ಟಿದ್ದ ಸುದ್ದಿಯನ್ನೇ ಜಾಹೀರಾತಿನ ರೀತಿಯಲ್ಲಿ ಬಳಕೆ ಮಾಡಿಕೊಂಡಿದ್ದರು. ಈಗ ಪುನೀತ್​ ಆತ್ಮದ ಜತೆ ಮಾತನಾಡಿದ್ದೇನೆ ಎಂದು ವ್ಯಕ್ತಿಯೋರ್ವ ವಿಡಿಯೋ ಮಾಡಿ ಪೋಸ್ಟ್​ ಮಾಡಿದ್ದಾರೆ. ಇದಕ್ಕೆ ಪುನೀತ್​ ಅಭಿಮಾನಿಗಳು ಬಾಯಿಗೆ ಬಂದಂತೆ ಉಗಿದಿದ್ದಾರೆ.

ಚಾರ್ಲಿ ಚಿಟ್ಟೆಂಡೆನ್​ ಹೆಸರಿನ ವಿದೇಶಿಗ ಈ ಬಗ್ಗೆ ಯೂಟ್ಯೂಬ್​​ನಲ್ಲಿ ವಿಡಿಯೋ ಪೋಸ್ಟ್​ ಮಾಡಿದ್ದಾರೆ. ಈ ವಿಡಿಯೋದಲ್ಲಿ ಎದುರು ಭಾಗದಲ್ಲಿ  ಸ್ಪೀಕರ್​ ಮಾದರಿಯ ವಸ್ತು ಒಂದನ್ನು ಚಾರ್ಲಿ ಇಟ್ಟುಕೊಂಡಿದ್ದಾರೆ. ಕೈಯಲ್ಲಿ ಒಂದು ನೋಟ್ಸ್​ ಹಿಡಿದು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರಿಸುತ್ತಿರುವುದು ಪುನೀತ್​ ಆತ್ಮ ಎಂದು ಅವರು ಹೇಳಿಕೊಂಡಿದ್ದಾರೆ.

ನಿಮ್ಮ ಮಕ್ಕಳಿಗೆ ಏನಾದರೂ ಸಂದೇಶವಿದೆಯೇ ಎಂದು ಚಾರ್ಲಿ ಕೇಳಿದ್ದಾರೆ. ಇದಕ್ಕೆ ಸ್ಪೀಕರ್​ನಿಂದ ‘ಐ ಲವ್​ ದೆಮ್​’ ಎನ್ನುವ ಉತ್ತರ ಬಂದಿದೆ. ಪುನೀತ್​ ಸಾವಿನ ನಂತರದಲ್ಲಿ ಈ ರೀತಿ ಮಾಡಿರುವುದು ಅನೇಕರಿಗೆ ಬೇಸರ ತರಿಸಿದೆ. ಅಲ್ಲದೆ, ಪುನೀತ್​ ಅಭಿಮಾನಿಗಳು ಚಾರ್ಲಿಗೆ ಕಮೆಂಟ್​ ಸೆಕ್ಷನ್​ನಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ‘ನೀವು ಚೆನ್ನಾಗಿ ನಟಿಸುತ್ತೀರಿ ಎಂಬುದು ಗೊತ್ತಿದೆ. ಮತ್ತೆ ಅದನ್ನು ಸಾಬೀತು ಮಾಡಬೇಕೆಂದಿಲ್ಲ’ ಎಂದು ಟೀಕಿಸಿದ್ದಾರೆ.

ಇನ್ನೂ ಕೆಲವರು ಇದನ್ನು ನಂಬಿದ್ದಾರೆ. ಈ ವಿಡಿಯೋದಲ್ಲಿ ಸ್ಪೀಕರ್​ನಿಂದ ಹೊರ ಬಂದ ಮಾತು ಸ್ಪಷ್ಟವಾಗಿಲ್ಲ. ಈ ಕಾರಣಕ್ಕೆ ಕೆಲವರು ವಿಡಿಯೋವನ್ನು ಮತ್ತೆ ಮಾಡಿ. ಮಾತು ಸರಿಯಾಗಿ ಕೇಳಿಸುತ್ತಿಲ್ಲ ಎನ್ನುವ ಬೇಡಿಕೆ ಇಟ್ಟಿದ್ದಾರೆ. ಮಿಸ್​ ಯು ಅಪ್ಪು ಎಂದು ಕಮೆಂಟ್​ ಮಾಡಿದ್ದಾರೆ. ಈ ವಿಡಿಯೋ ಅಸಲಿಯೋ ಅಥವಾ ನಕಲಿಯೋ ಎಂಬುದು ಇನ್ನೂ ದೃಢವಾಗಿಲ್ಲ.

ಸುಶಾಂತ್​ ಸಿಂಗ್​ ರಜಪೂತ್, ಸಿದ್ದಾರ್ಥ್​ ಶುಕ್ಲಾ​ ನಿಧನದ ನಂತರ ಸ್ಟೀವ್​ ಹಫ್ ಸುಶಾಂತ್ ಆತ್ಮದ ಜೊತೆ ಮಾತನಾಡಿದ್ದ ವಿಡಿಯೋವನ್ನು ಬಿಡುಗಡೆ ಮಾಡಿದ್ದರು. ಆದರೆ, ಪುನೀತ್​ ರಾಜ್​ಕುಮಾರ್​ ಬಗ್ಗೆ ಅವರು ಯಾವುದೇ ವಿಡಿಯೋ ಬಿಡುಗಡೆ ಮಾಡಿಲ್ಲ.

ಇದನ್ನೂ ಓದಿ: ಅಪ್ಪು ಮೇಲೆ ಜನರಿಟ್ಟ ಅಭಿಮಾನಕ್ಕೆ ಸಾಟಿ ಇಲ್ಲ; ಪುನೀತ್​ ಸಮಾಧಿ ಬಳಿ ಜನಸಾಗರ ಇನ್ನೂ ಕಮ್ಮಿ ಆಗಿಲ್ಲ

ಅಪ್ಪು ಪುಣ್ಯ ಸ್ಮರಣೆಗೆ ಹೇಗಿದೆ ಸಮಾಧಿ ಅಲಂಕಾರ? ವಿವಿಧ ಹೂವುಗಳಿಂದ ಪುನೀತ್​ಗೆ ನಮನ

Published On - 1:43 pm, Mon, 8 November 21

ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ
ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ