AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಆತ್ಮದ ಜತೆ ಮಾತನಾಡಿದ್ದೇನೆ ಎಂದು ವಿಡಿಯೋ ಹಂಚಿಕೊಂಡ ವ್ಯಕ್ತಿಗೆ ಅಭಿಮಾನಿಗಳ ಛೀಮಾರಿ

ನಿಮ್ಮ ಮಕ್ಕಳಿಗೆ ಏನಾದರೂ ಸಂದೇಶವಿದೆಯೇ ಎಂದು ಚಾರ್ಲಿ ಕೇಳಿದ್ದಾರೆ. ಇದಕ್ಕೆ ಸ್ಪೀಕರ್​ನಿಂದ ‘ಐ ಲವ್​ ದೆಮ್​’ ಎನ್ನುವ ಉತ್ತರ ಬಂದಿದೆ. ಪುನೀತ್​ ಸಾವಿನ ನಂತರದಲ್ಲಿ ಈ ರೀತಿ ಮಾಡಿರುವುದು ಅನೇಕರಿಗೆ ಬೇಸರ ತರಿಸಿದೆ.

ಪುನೀತ್​ ಆತ್ಮದ ಜತೆ ಮಾತನಾಡಿದ್ದೇನೆ ಎಂದು ವಿಡಿಯೋ ಹಂಚಿಕೊಂಡ ವ್ಯಕ್ತಿಗೆ ಅಭಿಮಾನಿಗಳ ಛೀಮಾರಿ
ಚಾರ್ಲಿ-ಪುನೀತ್​
TV9 Web
| Edited By: |

Updated on:Nov 08, 2021 | 1:43 PM

Share

ಯಾರಾದರೂ ಸೆಲೆಬ್ರಿಟಿಗಳು ಮೃತಪಟ್ಟಾಗ ಅದರ ಲಾಭ ಪಡೆಯೋಕೆ ಕೆಲವರು ಮುಂದಾಗುತ್ತಾರೆ. ಪುನೀತ್​ ರಾಜ್​ಕುಮಾರ್​ ಮೃತಪಟ್ಟಾಗಲೂ ಕೆಲವರು ಇದೇ ರೀತಿಯ ಕೆಲಸಕ್ಕೆ ಕೈ ಹಾಕಿದ್ದಾರೆ. ಈ ಮೊದಲು ಕೆಲ ಡೈಗ್ನಾಸ್​​ ಕೇಂದ್ರಗಳು ಪುನೀತ್​ ಹೃದಯಾಘಾತದಿಂದ ಮೃತಪಟ್ಟಿದ್ದ ಸುದ್ದಿಯನ್ನೇ ಜಾಹೀರಾತಿನ ರೀತಿಯಲ್ಲಿ ಬಳಕೆ ಮಾಡಿಕೊಂಡಿದ್ದರು. ಈಗ ಪುನೀತ್​ ಆತ್ಮದ ಜತೆ ಮಾತನಾಡಿದ್ದೇನೆ ಎಂದು ವ್ಯಕ್ತಿಯೋರ್ವ ವಿಡಿಯೋ ಮಾಡಿ ಪೋಸ್ಟ್​ ಮಾಡಿದ್ದಾರೆ. ಇದಕ್ಕೆ ಪುನೀತ್​ ಅಭಿಮಾನಿಗಳು ಬಾಯಿಗೆ ಬಂದಂತೆ ಉಗಿದಿದ್ದಾರೆ.

ಚಾರ್ಲಿ ಚಿಟ್ಟೆಂಡೆನ್​ ಹೆಸರಿನ ವಿದೇಶಿಗ ಈ ಬಗ್ಗೆ ಯೂಟ್ಯೂಬ್​​ನಲ್ಲಿ ವಿಡಿಯೋ ಪೋಸ್ಟ್​ ಮಾಡಿದ್ದಾರೆ. ಈ ವಿಡಿಯೋದಲ್ಲಿ ಎದುರು ಭಾಗದಲ್ಲಿ  ಸ್ಪೀಕರ್​ ಮಾದರಿಯ ವಸ್ತು ಒಂದನ್ನು ಚಾರ್ಲಿ ಇಟ್ಟುಕೊಂಡಿದ್ದಾರೆ. ಕೈಯಲ್ಲಿ ಒಂದು ನೋಟ್ಸ್​ ಹಿಡಿದು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರಿಸುತ್ತಿರುವುದು ಪುನೀತ್​ ಆತ್ಮ ಎಂದು ಅವರು ಹೇಳಿಕೊಂಡಿದ್ದಾರೆ.

ನಿಮ್ಮ ಮಕ್ಕಳಿಗೆ ಏನಾದರೂ ಸಂದೇಶವಿದೆಯೇ ಎಂದು ಚಾರ್ಲಿ ಕೇಳಿದ್ದಾರೆ. ಇದಕ್ಕೆ ಸ್ಪೀಕರ್​ನಿಂದ ‘ಐ ಲವ್​ ದೆಮ್​’ ಎನ್ನುವ ಉತ್ತರ ಬಂದಿದೆ. ಪುನೀತ್​ ಸಾವಿನ ನಂತರದಲ್ಲಿ ಈ ರೀತಿ ಮಾಡಿರುವುದು ಅನೇಕರಿಗೆ ಬೇಸರ ತರಿಸಿದೆ. ಅಲ್ಲದೆ, ಪುನೀತ್​ ಅಭಿಮಾನಿಗಳು ಚಾರ್ಲಿಗೆ ಕಮೆಂಟ್​ ಸೆಕ್ಷನ್​ನಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ‘ನೀವು ಚೆನ್ನಾಗಿ ನಟಿಸುತ್ತೀರಿ ಎಂಬುದು ಗೊತ್ತಿದೆ. ಮತ್ತೆ ಅದನ್ನು ಸಾಬೀತು ಮಾಡಬೇಕೆಂದಿಲ್ಲ’ ಎಂದು ಟೀಕಿಸಿದ್ದಾರೆ.

ಇನ್ನೂ ಕೆಲವರು ಇದನ್ನು ನಂಬಿದ್ದಾರೆ. ಈ ವಿಡಿಯೋದಲ್ಲಿ ಸ್ಪೀಕರ್​ನಿಂದ ಹೊರ ಬಂದ ಮಾತು ಸ್ಪಷ್ಟವಾಗಿಲ್ಲ. ಈ ಕಾರಣಕ್ಕೆ ಕೆಲವರು ವಿಡಿಯೋವನ್ನು ಮತ್ತೆ ಮಾಡಿ. ಮಾತು ಸರಿಯಾಗಿ ಕೇಳಿಸುತ್ತಿಲ್ಲ ಎನ್ನುವ ಬೇಡಿಕೆ ಇಟ್ಟಿದ್ದಾರೆ. ಮಿಸ್​ ಯು ಅಪ್ಪು ಎಂದು ಕಮೆಂಟ್​ ಮಾಡಿದ್ದಾರೆ. ಈ ವಿಡಿಯೋ ಅಸಲಿಯೋ ಅಥವಾ ನಕಲಿಯೋ ಎಂಬುದು ಇನ್ನೂ ದೃಢವಾಗಿಲ್ಲ.

ಸುಶಾಂತ್​ ಸಿಂಗ್​ ರಜಪೂತ್, ಸಿದ್ದಾರ್ಥ್​ ಶುಕ್ಲಾ​ ನಿಧನದ ನಂತರ ಸ್ಟೀವ್​ ಹಫ್ ಸುಶಾಂತ್ ಆತ್ಮದ ಜೊತೆ ಮಾತನಾಡಿದ್ದ ವಿಡಿಯೋವನ್ನು ಬಿಡುಗಡೆ ಮಾಡಿದ್ದರು. ಆದರೆ, ಪುನೀತ್​ ರಾಜ್​ಕುಮಾರ್​ ಬಗ್ಗೆ ಅವರು ಯಾವುದೇ ವಿಡಿಯೋ ಬಿಡುಗಡೆ ಮಾಡಿಲ್ಲ.

ಇದನ್ನೂ ಓದಿ: ಅಪ್ಪು ಮೇಲೆ ಜನರಿಟ್ಟ ಅಭಿಮಾನಕ್ಕೆ ಸಾಟಿ ಇಲ್ಲ; ಪುನೀತ್​ ಸಮಾಧಿ ಬಳಿ ಜನಸಾಗರ ಇನ್ನೂ ಕಮ್ಮಿ ಆಗಿಲ್ಲ

ಅಪ್ಪು ಪುಣ್ಯ ಸ್ಮರಣೆಗೆ ಹೇಗಿದೆ ಸಮಾಧಿ ಅಲಂಕಾರ? ವಿವಿಧ ಹೂವುಗಳಿಂದ ಪುನೀತ್​ಗೆ ನಮನ

Published On - 1:43 pm, Mon, 8 November 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?