AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಸ್ಸಿಗೆ ನೆಮ್ಮದಿಯೇ ಇಲ್ಲ’; ಥಿಯೇಟರ್ ಮುಂದೆ ದೈವಾರಾಧನೆ ಅನುಕರಣೆ ಮಾಡಿದ್ದವನ ಕ್ಷಮೆ

Kantara Chapter 1: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆದ ದಿನ ವ್ಯಕ್ತಿಯೊಬ್ಬನ ವಿಡಿಯೋ ಒಂದು ಸಹ ವೈರಲ್ ಆಗಿತ್ತು. ಸಿನಿಮಾ ಬಿಡುಗಡೆ ಆದ ದಿನ ಚಿತ್ರಮಂದಿರದ ಮುಂದೆ ವ್ಯಕ್ತಿಯೊಬ್ಬ ಮೈಮೇಲೆ ದೆವ್ವ ಬಂದವನಂತೆ ಹುಚ್ಚನಂತೆ ಆಡಿದ್ದ. ಆ ವಿಡಿಯೋ ವೈರಲ್ ಆಗಿತ್ತು. ಈಗ ಆ ವ್ಯಕ್ತಿ ಕ್ಷಮೆ ಕೇಳಿದ್ದಾನೆ.

ಮನಸ್ಸಿಗೆ ನೆಮ್ಮದಿಯೇ ಇಲ್ಲ’; ಥಿಯೇಟರ್ ಮುಂದೆ ದೈವಾರಾಧನೆ ಅನುಕರಣೆ ಮಾಡಿದ್ದವನ ಕ್ಷಮೆ
Kantara (7)
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 07, 2025 | 11:37 AM

Share

ಕಾಂತಾರ’ (Kantara) ಹಾಗೂ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಕಂಡ ಬಳಿಕ ದೈವದ ವಿಷಯವು ಹೆಚ್ಚು ಬೆಳಕಿಗೆ ಬಂತು. ಕರಾವಳಿ ಭಾಗದ ಜನತೆಯ ಆಚರಣೆ ದೈವಾರಾಧನೆ ಮೇಲೆ ಈ ಸಿನಿಮಾಗಳು ಬೆಳಕು ಚೆಲ್ಲುವ ರೀತಿಯಲ್ಲಿ ಇದೆ. ಆದರೆ, ಈ ಸಿನಿಮಾ ರಿಲೀಸ್ ಆದ ಬಳಿಕ ಕೆಲವರು ಇದನ್ನು ಅನುಕರಣೆ ಮಾಡಲು ಹೋಗಿದ್ದನ್ನು ನೀವು ಕಾಣಬಹುದು. ಇದು ಸರಿ ಅಲ್ಲ ಎಂದು ಅನೇಕರು ಹೇಳುತ್ತಾ ಬರುತ್ತಿದ್ದಾರೆ. ಈಗ ಇದೇ ರೀತಿ ಮಾಡಿದ ವ್ಯಕ್ತಿಯೋರ್ವ ಕ್ಷಮೆ ಕೇಳಿದ್ದಾನೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ಬಿಡುಗಡೆ ಕಂಡಿತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತು. ಈ ಸಿನಿಮಾ ರಿಲೀಸ್ ಆದ ಬಳಿಕ ವ್ಯಕ್ತಿಯೊಬ್ಬನು ಥಿಯೇಟರ್​ನ ಹೊರ ಭಾಗದಲ್ಲಿ ದೈವ ಬಂದಂತೆ ಆಡಿದ್ದನು ಮತ್ತು ಈ ವಿಡಿಯೋ ವೈರಲ್ ಆಗಿತ್ತು. ‘ರಿಷಬ್ ಅವರಲ್ಲಿ ದೇವರನ್ನು ನೋಡಿದೆ’ ಎಂದೆಲ್ಲ ಆತ ಹೇಳಿಕೊಂಡಿದ್ದ.

ಈ ವಿಡಿಯೋ ವೈರಲ್ ಆದ ಬಳಿಕ ಅನೇಕರು ವಿರೋಧ ಹೊರ ಹಾಕಿದ್ದರು. ಈ ರೀತಿ ಮಾಡೋದು ಸರಿ ಅಲ್ಲ ಎಂದು ಕೆಲವರು ಹೇಳಿದ್ದರು. ಇದು ದೈವಕ್ಕೆ ಮಾಡುವ ಅವಮಾನ ಎಂಬ ಮಾತುಗಳು ಕೂಡ ಕೇಳಿ ಬಂದವು. ಈಗ ಈ ವಿಚಾರದಲ್ಲಿ ಆ ವ್ಯಕ್ತಿ ಕ್ಷಮೆ ಕೇಳಿದ್ದಾನೆ. ಕಳೆದ ಕೆಲವು ದಿನಗಳಿಂದ ಮನಸ್ಸಿಗೆ ನೆಮ್ಮದಿ ಇಲ್ಲದಂತೆ ಆಗಿದೆ ಎಂದು ಕೋರಿರುವ ಆತನು, ಈ ರೀತಿ ಯಾರೂ ಮಾಡಲು ಹೋಗಬೇಡಿ ಎಂದು ಕೋರಿದ್ದಾನೆ. ‘ನನ್ನ ಹೆಸರು ವೆಂಕಟ್ ಎಂದು. ಇತ್ತೀಚೆಗೆ ವೈರಲ್ ಆದ ವಿಡಿಯೋ ನೋಡಿರ್ತೀರಿ. ಅದು ಉದ್ದೇಶ ಪೂರ್ವಕವಾಗಿ ಮಾಡಿಲ್ಲ. ರಿಷಬ್ ಶೆಟ್ಟಿ, ಕಾಂತಾರ ಟೀಮ್​ಗೆ ನನ್ನ ಕ್ಷಮೆ ಇರಲಿ. ಮಂಗಳೂರು ಜನತೆಗೆ, ತುಳು ನಾಡಿನ ಜನತೆಗೆ ಕ್ಷಮೆ ಇರಲಿ. ಪ್ಲೀಸ್ ಈ ರೀತಿ ಮಾಡಬೇಡಿ. ಈ ಘಟನೆ ಆದಾಗಿನಿಂದ ನೆಮ್ಮದಿ-ಶಾಂತಿ ಇಲ್ಲ. ನನ್ನನ್ನು ಕ್ಷಮಿಸಿ’ ಎಂದು ಆತನ ಕೋರಿಕೊಂಡಿದ್ದಾನೆ.

ದೈವಾರಾಧನೆ ಮಾಡಲು ಅದರದ್ದೇ ಆದ ಪದ್ದತಿ ಇರುತ್ತದೆ. ಅದನ್ನು ಈ ರೀತಿ ಮಾಡುವುದು ಆ ಆಚರಣೆಗೆ ಮಾಡುವ ಅವಮಾನವೇ ಆಗಿರುತ್ತದೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ಕರಾವಳಿ ಸಂಸ್ಕೃತಿ ವಿಶ್ವ ಮಟ್ಟಕ್ಕೆ ಹರಡಿದೆ ಅನ್ನೋದು ವಿಶೇಷ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ