AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಸ್ಸಿಗೆ ನೆಮ್ಮದಿಯೇ ಇಲ್ಲ’; ಥಿಯೇಟರ್ ಮುಂದೆ ದೈವಾರಾಧನೆ ಅನುಕರಣೆ ಮಾಡಿದ್ದವನ ಕ್ಷಮೆ

Kantara Chapter 1: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆದ ದಿನ ವ್ಯಕ್ತಿಯೊಬ್ಬನ ವಿಡಿಯೋ ಒಂದು ಸಹ ವೈರಲ್ ಆಗಿತ್ತು. ಸಿನಿಮಾ ಬಿಡುಗಡೆ ಆದ ದಿನ ಚಿತ್ರಮಂದಿರದ ಮುಂದೆ ವ್ಯಕ್ತಿಯೊಬ್ಬ ಮೈಮೇಲೆ ದೆವ್ವ ಬಂದವನಂತೆ ಹುಚ್ಚನಂತೆ ಆಡಿದ್ದ. ಆ ವಿಡಿಯೋ ವೈರಲ್ ಆಗಿತ್ತು. ಈಗ ಆ ವ್ಯಕ್ತಿ ಕ್ಷಮೆ ಕೇಳಿದ್ದಾನೆ.

ಮನಸ್ಸಿಗೆ ನೆಮ್ಮದಿಯೇ ಇಲ್ಲ’; ಥಿಯೇಟರ್ ಮುಂದೆ ದೈವಾರಾಧನೆ ಅನುಕರಣೆ ಮಾಡಿದ್ದವನ ಕ್ಷಮೆ
Kantara (7)
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 07, 2025 | 11:37 AM

Share

ಕಾಂತಾರ’ (Kantara) ಹಾಗೂ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಕಂಡ ಬಳಿಕ ದೈವದ ವಿಷಯವು ಹೆಚ್ಚು ಬೆಳಕಿಗೆ ಬಂತು. ಕರಾವಳಿ ಭಾಗದ ಜನತೆಯ ಆಚರಣೆ ದೈವಾರಾಧನೆ ಮೇಲೆ ಈ ಸಿನಿಮಾಗಳು ಬೆಳಕು ಚೆಲ್ಲುವ ರೀತಿಯಲ್ಲಿ ಇದೆ. ಆದರೆ, ಈ ಸಿನಿಮಾ ರಿಲೀಸ್ ಆದ ಬಳಿಕ ಕೆಲವರು ಇದನ್ನು ಅನುಕರಣೆ ಮಾಡಲು ಹೋಗಿದ್ದನ್ನು ನೀವು ಕಾಣಬಹುದು. ಇದು ಸರಿ ಅಲ್ಲ ಎಂದು ಅನೇಕರು ಹೇಳುತ್ತಾ ಬರುತ್ತಿದ್ದಾರೆ. ಈಗ ಇದೇ ರೀತಿ ಮಾಡಿದ ವ್ಯಕ್ತಿಯೋರ್ವ ಕ್ಷಮೆ ಕೇಳಿದ್ದಾನೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ಬಿಡುಗಡೆ ಕಂಡಿತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತು. ಈ ಸಿನಿಮಾ ರಿಲೀಸ್ ಆದ ಬಳಿಕ ವ್ಯಕ್ತಿಯೊಬ್ಬನು ಥಿಯೇಟರ್​ನ ಹೊರ ಭಾಗದಲ್ಲಿ ದೈವ ಬಂದಂತೆ ಆಡಿದ್ದನು ಮತ್ತು ಈ ವಿಡಿಯೋ ವೈರಲ್ ಆಗಿತ್ತು. ‘ರಿಷಬ್ ಅವರಲ್ಲಿ ದೇವರನ್ನು ನೋಡಿದೆ’ ಎಂದೆಲ್ಲ ಆತ ಹೇಳಿಕೊಂಡಿದ್ದ.

ಈ ವಿಡಿಯೋ ವೈರಲ್ ಆದ ಬಳಿಕ ಅನೇಕರು ವಿರೋಧ ಹೊರ ಹಾಕಿದ್ದರು. ಈ ರೀತಿ ಮಾಡೋದು ಸರಿ ಅಲ್ಲ ಎಂದು ಕೆಲವರು ಹೇಳಿದ್ದರು. ಇದು ದೈವಕ್ಕೆ ಮಾಡುವ ಅವಮಾನ ಎಂಬ ಮಾತುಗಳು ಕೂಡ ಕೇಳಿ ಬಂದವು. ಈಗ ಈ ವಿಚಾರದಲ್ಲಿ ಆ ವ್ಯಕ್ತಿ ಕ್ಷಮೆ ಕೇಳಿದ್ದಾನೆ. ಕಳೆದ ಕೆಲವು ದಿನಗಳಿಂದ ಮನಸ್ಸಿಗೆ ನೆಮ್ಮದಿ ಇಲ್ಲದಂತೆ ಆಗಿದೆ ಎಂದು ಕೋರಿರುವ ಆತನು, ಈ ರೀತಿ ಯಾರೂ ಮಾಡಲು ಹೋಗಬೇಡಿ ಎಂದು ಕೋರಿದ್ದಾನೆ. ‘ನನ್ನ ಹೆಸರು ವೆಂಕಟ್ ಎಂದು. ಇತ್ತೀಚೆಗೆ ವೈರಲ್ ಆದ ವಿಡಿಯೋ ನೋಡಿರ್ತೀರಿ. ಅದು ಉದ್ದೇಶ ಪೂರ್ವಕವಾಗಿ ಮಾಡಿಲ್ಲ. ರಿಷಬ್ ಶೆಟ್ಟಿ, ಕಾಂತಾರ ಟೀಮ್​ಗೆ ನನ್ನ ಕ್ಷಮೆ ಇರಲಿ. ಮಂಗಳೂರು ಜನತೆಗೆ, ತುಳು ನಾಡಿನ ಜನತೆಗೆ ಕ್ಷಮೆ ಇರಲಿ. ಪ್ಲೀಸ್ ಈ ರೀತಿ ಮಾಡಬೇಡಿ. ಈ ಘಟನೆ ಆದಾಗಿನಿಂದ ನೆಮ್ಮದಿ-ಶಾಂತಿ ಇಲ್ಲ. ನನ್ನನ್ನು ಕ್ಷಮಿಸಿ’ ಎಂದು ಆತನ ಕೋರಿಕೊಂಡಿದ್ದಾನೆ.

ದೈವಾರಾಧನೆ ಮಾಡಲು ಅದರದ್ದೇ ಆದ ಪದ್ದತಿ ಇರುತ್ತದೆ. ಅದನ್ನು ಈ ರೀತಿ ಮಾಡುವುದು ಆ ಆಚರಣೆಗೆ ಮಾಡುವ ಅವಮಾನವೇ ಆಗಿರುತ್ತದೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ಕರಾವಳಿ ಸಂಸ್ಕೃತಿ ವಿಶ್ವ ಮಟ್ಟಕ್ಕೆ ಹರಡಿದೆ ಅನ್ನೋದು ವಿಶೇಷ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​