AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಸ್ಸಿಗೆ ನೆಮ್ಮದಿಯೇ ಇಲ್ಲ’; ಥಿಯೇಟರ್ ಮುಂದೆ ದೈವಾರಾಧನೆ ಅನುಕರಣೆ ಮಾಡಿದ್ದವನ ಕ್ಷಮೆ

Kantara Chapter 1: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆದ ದಿನ ವ್ಯಕ್ತಿಯೊಬ್ಬನ ವಿಡಿಯೋ ಒಂದು ಸಹ ವೈರಲ್ ಆಗಿತ್ತು. ಸಿನಿಮಾ ಬಿಡುಗಡೆ ಆದ ದಿನ ಚಿತ್ರಮಂದಿರದ ಮುಂದೆ ವ್ಯಕ್ತಿಯೊಬ್ಬ ಮೈಮೇಲೆ ದೆವ್ವ ಬಂದವನಂತೆ ಹುಚ್ಚನಂತೆ ಆಡಿದ್ದ. ಆ ವಿಡಿಯೋ ವೈರಲ್ ಆಗಿತ್ತು. ಈಗ ಆ ವ್ಯಕ್ತಿ ಕ್ಷಮೆ ಕೇಳಿದ್ದಾನೆ.

ಮನಸ್ಸಿಗೆ ನೆಮ್ಮದಿಯೇ ಇಲ್ಲ’; ಥಿಯೇಟರ್ ಮುಂದೆ ದೈವಾರಾಧನೆ ಅನುಕರಣೆ ಮಾಡಿದ್ದವನ ಕ್ಷಮೆ
Kantara (7)
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 07, 2025 | 11:37 AM

Share

ಕಾಂತಾರ’ (Kantara) ಹಾಗೂ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಕಂಡ ಬಳಿಕ ದೈವದ ವಿಷಯವು ಹೆಚ್ಚು ಬೆಳಕಿಗೆ ಬಂತು. ಕರಾವಳಿ ಭಾಗದ ಜನತೆಯ ಆಚರಣೆ ದೈವಾರಾಧನೆ ಮೇಲೆ ಈ ಸಿನಿಮಾಗಳು ಬೆಳಕು ಚೆಲ್ಲುವ ರೀತಿಯಲ್ಲಿ ಇದೆ. ಆದರೆ, ಈ ಸಿನಿಮಾ ರಿಲೀಸ್ ಆದ ಬಳಿಕ ಕೆಲವರು ಇದನ್ನು ಅನುಕರಣೆ ಮಾಡಲು ಹೋಗಿದ್ದನ್ನು ನೀವು ಕಾಣಬಹುದು. ಇದು ಸರಿ ಅಲ್ಲ ಎಂದು ಅನೇಕರು ಹೇಳುತ್ತಾ ಬರುತ್ತಿದ್ದಾರೆ. ಈಗ ಇದೇ ರೀತಿ ಮಾಡಿದ ವ್ಯಕ್ತಿಯೋರ್ವ ಕ್ಷಮೆ ಕೇಳಿದ್ದಾನೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ಬಿಡುಗಡೆ ಕಂಡಿತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತು. ಈ ಸಿನಿಮಾ ರಿಲೀಸ್ ಆದ ಬಳಿಕ ವ್ಯಕ್ತಿಯೊಬ್ಬನು ಥಿಯೇಟರ್​ನ ಹೊರ ಭಾಗದಲ್ಲಿ ದೈವ ಬಂದಂತೆ ಆಡಿದ್ದನು ಮತ್ತು ಈ ವಿಡಿಯೋ ವೈರಲ್ ಆಗಿತ್ತು. ‘ರಿಷಬ್ ಅವರಲ್ಲಿ ದೇವರನ್ನು ನೋಡಿದೆ’ ಎಂದೆಲ್ಲ ಆತ ಹೇಳಿಕೊಂಡಿದ್ದ.

ಈ ವಿಡಿಯೋ ವೈರಲ್ ಆದ ಬಳಿಕ ಅನೇಕರು ವಿರೋಧ ಹೊರ ಹಾಕಿದ್ದರು. ಈ ರೀತಿ ಮಾಡೋದು ಸರಿ ಅಲ್ಲ ಎಂದು ಕೆಲವರು ಹೇಳಿದ್ದರು. ಇದು ದೈವಕ್ಕೆ ಮಾಡುವ ಅವಮಾನ ಎಂಬ ಮಾತುಗಳು ಕೂಡ ಕೇಳಿ ಬಂದವು. ಈಗ ಈ ವಿಚಾರದಲ್ಲಿ ಆ ವ್ಯಕ್ತಿ ಕ್ಷಮೆ ಕೇಳಿದ್ದಾನೆ. ಕಳೆದ ಕೆಲವು ದಿನಗಳಿಂದ ಮನಸ್ಸಿಗೆ ನೆಮ್ಮದಿ ಇಲ್ಲದಂತೆ ಆಗಿದೆ ಎಂದು ಕೋರಿರುವ ಆತನು, ಈ ರೀತಿ ಯಾರೂ ಮಾಡಲು ಹೋಗಬೇಡಿ ಎಂದು ಕೋರಿದ್ದಾನೆ. ‘ನನ್ನ ಹೆಸರು ವೆಂಕಟ್ ಎಂದು. ಇತ್ತೀಚೆಗೆ ವೈರಲ್ ಆದ ವಿಡಿಯೋ ನೋಡಿರ್ತೀರಿ. ಅದು ಉದ್ದೇಶ ಪೂರ್ವಕವಾಗಿ ಮಾಡಿಲ್ಲ. ರಿಷಬ್ ಶೆಟ್ಟಿ, ಕಾಂತಾರ ಟೀಮ್​ಗೆ ನನ್ನ ಕ್ಷಮೆ ಇರಲಿ. ಮಂಗಳೂರು ಜನತೆಗೆ, ತುಳು ನಾಡಿನ ಜನತೆಗೆ ಕ್ಷಮೆ ಇರಲಿ. ಪ್ಲೀಸ್ ಈ ರೀತಿ ಮಾಡಬೇಡಿ. ಈ ಘಟನೆ ಆದಾಗಿನಿಂದ ನೆಮ್ಮದಿ-ಶಾಂತಿ ಇಲ್ಲ. ನನ್ನನ್ನು ಕ್ಷಮಿಸಿ’ ಎಂದು ಆತನ ಕೋರಿಕೊಂಡಿದ್ದಾನೆ.

ದೈವಾರಾಧನೆ ಮಾಡಲು ಅದರದ್ದೇ ಆದ ಪದ್ದತಿ ಇರುತ್ತದೆ. ಅದನ್ನು ಈ ರೀತಿ ಮಾಡುವುದು ಆ ಆಚರಣೆಗೆ ಮಾಡುವ ಅವಮಾನವೇ ಆಗಿರುತ್ತದೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ಕರಾವಳಿ ಸಂಸ್ಕೃತಿ ವಿಶ್ವ ಮಟ್ಟಕ್ಕೆ ಹರಡಿದೆ ಅನ್ನೋದು ವಿಶೇಷ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ