AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುಂಗಾರು ಮಳೆ’ ತಂಡದ ‘ಮನದ ಕಡಲು’ ಸಿನಿಮಾ ಹಾಡು ಬಿಡುಗಡೆ

Manada Kadalu: ಯೋಗರಾಜ್ ಭಟ್ ನಿರ್ದೇಶಿಸಿ, ಇ ಕೃಷ್ಣಪ್ಪ ನಿರ್ಮಾಣ ಮಾಡಿದ್ದ ‘ಮುಂಗಾರು ಮಳೆ’ ಸಿನಿಮಾ ಬಿಡುಗಡೆ ಆಗಿ ಹದಿನೆಂಟು ವರ್ಷಗಳಾಗಿವೆ. ಇದೀಗ ಇ ಕೃಷ್ಣಪ್ಪ ಮತ್ತು ಯೋಗರಾಜ್ ಭಟ್ ಮತ್ತೆ ಒಂದಾಗಿದ್ದು, ‘ಮನದು ಕಡಲು’ ಹೆಸರಿನ ಸಿನಿಮಾ ನಿರ್ಮಿಸುತ್ತಿದ್ದಾರೆ. ಈ ಸಿನಿಮಾದ ಹೊಸ ಹಾಡೊಂದು ಇದೀಗ ಬಿಡುಗಡೆ ಆಗಿದೆ.

‘ಮುಂಗಾರು ಮಳೆ’ ತಂಡದ ‘ಮನದ ಕಡಲು’ ಸಿನಿಮಾ ಹಾಡು ಬಿಡುಗಡೆ
Manada Kadalu
ಮಂಜುನಾಥ ಸಿ.
|

Updated on: Dec 31, 2024 | 5:50 PM

Share

‘ಮುಂಗಾರು ಮಳೆ’ ಸಿನಿಮಾ ಕನ್ನಡ ಚಿತ್ರರಂಗದ ದಿಕ್ಕು ಬದಲಾಯಿಸಿದ ಸಿನಿಮಾ. ಈಗ ‘ಕೆಜಿಎಫ್ 2’, ‘ಕಾಂತಾರ’ ಸಿನಿಮಾಗಳು ಹೇಗೋ ಒಂದು ಹಂತಕ್ಕೆ ಇವುಗಳಿಗಿಂತಲೂ ಹೆಚ್ಚಿನ ಪ್ರಭಾವನ್ನು ‘ಮುಂಗಾರು ಮಳೆ’ ಸಿನಿಮಾ ಬೀರಿತ್ತು. ಇದೀಗ ಈ ಸಿನಿಮಾ ಬಿಡುಗಡೆ ಆಗಿ ಹದಿನೆಂಟು ವರ್ಷಗಳಾಗಿದೆ. ‘ಮುಂಗಾರು ಮಳೆ’ ಸಿನಿಮಾದ ಬಳಿಕ ಅದರ ನಿರ್ಮಾಪಕರಾದ ಇ ಕೃಷ್ಣಪ್ಪ ಅವರು ಮತ್ತೊಮ್ಮೆ ಯೋಗರಾಜ್ ಭಟ್ ಜೊತೆ ಕೈ ಜೋಡಿಸಿರಲಿಲ್ಲ. ಆದರೆ ಈಗ ಇದೇ ಜೋಡಿ ಹದಿನೆಂಟು ವರ್ಷದ ಬಳಿಕ ಮತ್ತೊಮ್ಮೆ ಒಂದಾಗಿದ್ದಾರೆ.

‘ಮುಂಗಾರು ಮಳೆ’ ನಿರ್ಮಾಣ ಮಾಡಿದ್ದ ಇಕೆ ಎಂಟರ್ಟೈನ್​ಮೆಂಟ್​ ನಿರ್ಮಾಣದ ಹೊಸ ಸಿನಿಮಾ ಅನ್ನು ಯೋಗರಾಜ್ ಭಟ್ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ‘ಮನದ ಕಡಲು’ ಎಂದು ಹೆಸರಿಟ್ಟಿದ್ದು, ‘ಮುಂಗಾರು ಮಳೆ’ ಬಿಡುಗಡೆ ಆಗಿ ಹದಿನೆಂಟು ವರ್ಷ ಆಗಿರುವ ಕಾರಣ ‘ಮನದ ಕಡಲು’ ಸಿನಿಮಾದ ಸುಮಧುರ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ.

‘ಮುಂಗಾರು ಮಳೆ’ ಸಿನಿಮಾ ಬಿಡುಗಡೆ ಆಗಿ ಡಿಸೆಂಬರ್​ಗೆ ಹದಿನೆಂಟು ವರ್ಷವಾಗಿದೆ. ‘ಮುಂಗಾರು ಮಳೆ’ ಬಿಡುಗಡೆಯಾದ ದಿನವೇ ‘ಮನದ ಕಡಲು’ ಸಿನಿಮಾಕ್ಕಾಗಿ ಯೋಗರಾಜ್ ಭಟ್ ಸಾಹಿತ್ಯ ರಚಿಸಿ, ವಿ.ಹರಿಕೃಷ್ಣ ಸಂಗೀತ ನೀಡಿರುವ ‘ಹೂ ದುಂಬಿಯ ಕಥೆಯ’ ಎಂಬ ಸುಂದರ ಹಾಡು ಬಿಡುಗಡೆ ಆಗಿದೆ. ಸಂಜಿತ್ ಹೆಗ್ಡೆ ಈ ಸುಮಧುರ ಹಾಡಿಗೆ ಧನಿಯಾಗಿದ್ದಾರೆ. ‘ಮನದ ಕಡಲು’ ಸಿನಿಮಾದ ಮೊದಲ ಹಾಡು ಇದ್ದಾಗಿದ್ದು,‌ ವಿ ಹರಿಕೃಷ್ಣ ಅವರು ಹಾಡನ್ನು ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ:ಅಂದು ‘ಮುಂಗಾರು ಮಳೆ’, ಇಂದು ‘ಮನದ ಕಡಲು’: ಯೋಗರಾಜ್ ಭಟ್-ಇ. ಕೃಷ್ಣಪ್ಪ ಹೊಸ ಸಿನಿಮಾ

ನಿರ್ದೇಶಕ ಯೋಗರಾಜ್ ಭಟ್ ಮಾತನಾಡಿ, ‘ಮನದ ಕಡಲು’ ಸಿನಿಮಾದ ಈ ಹಾಡು ಹುಟ್ಟಿದ್ದು ನಿರ್ಮಾಪಕರ ತೋಟದ ಮನೆಯಲ್ಲಿ. ಕಂಪೋಸ್ ಆಗಿದ್ದು‌ ನನ್ನ‌ ಆಫೀಸ್​ನ ಮೇಲಿರುವ ಸ್ಟುಡಿಯೋದಲ್ಲಿ. ಹರಿಕೃಷ್ಣ ಅವರ ಸಂಗೀತ ಸಂಯೋಜನೆಯಲ್ಲಿ ಸಂಚಿತ್ ಹೆಗ್ಡೆ ಗಾಯನದಲ್ಲಿ ಮುರಳಿ ನೃತ್ಯ ಸಂಯೋಜನೆಯಲ್ಲಿ ‘ಹೂ ದುಂಬಿಯ ಕಥೆಯ’ ಹಾಡು ಮೂಡಿಬಂದಿದೆ.‌ ಸುಮುಖ ಹಾಗು ರಾಶಿಕಾ ಶೆಟ್ಟಿ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ ಎಂದರು.

‘ಹದಿನೆಂಟು ವರ್ಷಗಳ ನಂತರ ಯೋಗರಾಜ್ ಭಟ್ ಅವರ ಜೊತೆ ಮತ್ತೆ ಚಿತ್ರ ಮಾಡುತ್ತಿದ್ದೇನೆ. ಆದರೆ ನಿಮ್ಮ ಜೊತೆ ಸಿನಿಮಾ ಮಾಡುವುದಾದರೆ ಹೊಸ ನಾಯಕನೇ ಇರಬೇಕು ಅಂದಿದೆ. ಹೊಸ ಪ್ರತಿಭೆ ಸುಮುಖ ನಾಯಕನಾಗಿ, ರಾಶಿಕಾ ಹಾಗೂ ಅಂಜಲಿ ನಾಯಕಿಯರಾಗಿ ನಟಿಸಿದ್ದಾರೆ. ಯಾವುದೇ ಕೊರತೆ ಬಾರದ ಹಾಗೆ ಒಂದೊಳ್ಳೆ ಸಿನಿಮಾ‌ ಮಾಡಿದ್ದೀನಿ. ಮುಂದಿನದ್ದು ಪ್ರೇಕ್ಷಕರಿಗೆ ಬಿಟ್ಟಿದ್ದು. ಇಂದು ಬಿಡುಗಡೆ ಆಗಿರುವ ಹಾಡು ಚೆನ್ನಾಗಿದೆ ಎಂದರು ನಿರ್ಮಾಪಕ ಇ.ಕೃಷ್ಣಪ್ಪ.

‘ಸಿನಿಮಾವನ್ನು ತುಂಬಾ ಪ್ರೀತಿಸುವ ತಂಡದ ಜೊತೆಗೆ ಕೆಲಸ ಮಾಡಿದ್ದು ತುಂಬಾ ಖುಷಿಯಾಗಿದೆ ಎಂದು ಮಾತನಾಡಿದ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ, ಯೋಗರಾಜ್ ಭಟ್ ಅವರು ಬರೆದಿರುವ ಹಾಡನ್ನು ಸಂಜಿತ್ ಸುಶ್ರಾವ್ಯವಾಗಿ ಹಾಡಿದ್ದಾರೆ. ತೆರೆಯ ಮೇಲೂ ಹಾಡು ಬಹಳ ಚೆನ್ನಾಗಿ ಬಂದಿದೆ ಎಂದರು. ಯೋಗರಾಜ್ ಭಟ್ ಬರೆದಿರುವ, ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಹಾಡಲು ಬಹಳ ಖುಷಿಯಾಗಿದೆ ಎಂದು ತಿಳಿಸಿದ ಗಾಯಕ ಸಂಜಿತ್ ಹೆಗ್ಡೆ, ತಾವೇ ಹಾಡಿರುವ ಹಾಡಿನ‌ ನಾಲ್ಕು ಸಾಲುಗಳನ್ನು ವೇದಿಕೆಯ ಮೇಲೂ ಹಾಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್
37 ಎಸೆತಗಳಲ್ಲಿ ಶತಕ: ಟಿಮ್ ಡೇವಿಡ್ ಆರ್ಭಟದ ವಿಡಿಯೋ ಇಲ್ಲಿದೆ
37 ಎಸೆತಗಳಲ್ಲಿ ಶತಕ: ಟಿಮ್ ಡೇವಿಡ್ ಆರ್ಭಟದ ವಿಡಿಯೋ ಇಲ್ಲಿದೆ
ಶುಕ್ರವಾರ ರಾತ್ರಿ ಅಂಗಡಿ ಮುಚ್ಚುವ ವೇಳೆ ನುಗ್ಗಿದ ದರೋಡೆಕೋರರು
ಶುಕ್ರವಾರ ರಾತ್ರಿ ಅಂಗಡಿ ಮುಚ್ಚುವ ವೇಳೆ ನುಗ್ಗಿದ ದರೋಡೆಕೋರರು
ಧ್ಯಾನ ಮಾಡುವುದರಿಂದ ಮಾನಸಿಕ ಯಾತನೆ ಕಡಿಮೆಯಾಗುತ್ತದೆ: ಹಸೀನಾ
ಧ್ಯಾನ ಮಾಡುವುದರಿಂದ ಮಾನಸಿಕ ಯಾತನೆ ಕಡಿಮೆಯಾಗುತ್ತದೆ: ಹಸೀನಾ
‘ಡೆವಿಲ್’ ಸಿನಿಮಾ ಶೂಟ್​ ಮುಗಿಸಿ ಬೆಂಗಳೂರಿಗೆ ಮರಳಿದ ದರ್ಶನ್
‘ಡೆವಿಲ್’ ಸಿನಿಮಾ ಶೂಟ್​ ಮುಗಿಸಿ ಬೆಂಗಳೂರಿಗೆ ಮರಳಿದ ದರ್ಶನ್