AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದಗಳಲ್ಲೇ ಆಟ ಆಡೋ ಕವಿ; ಯೋಗರಾಜ್ ಭಟ್ ಬರೆದ ಈ ಹಾಡುಗಳನ್ನು ಮಿಸ್ ಮಾಡದೆ ಕೇಳಿ

ಯೋಗರಾಜ್ ಭಟ್ ನಿರ್ದೇಶನದ ‘ಮನದ ಕಡಲು’ ಚಿತ್ರವು ಮಾರ್ಚ್ 28 ರಂದು ಬಿಡುಗಡೆಯಾಗುತ್ತಿದೆ. ಸುಮುಖ, ರಾಶಿಕಾ ಶೆಟ್ಟಿ ಮತ್ತು ಅಂಜಲಿ ಅನೀಶ್ ನಟಿಸಿದ್ದಾರೆ. ಯೋಗರಾಜ್ ಭಟ್ ಅವರ ಸಂಗೀತ ಸಾಹಿತ್ಯಕ್ಕೆ ಚಿತ್ರ ವಿಶೇಷ ಖ್ಯಾತಿ ಪಡೆದಿದೆ. ‘ಮುಂಗಾರು ಮಳೆ’, ‘ಗಾಳಿಪಟ’ಮತ್ತು ಇತರ ಚಿತ್ರಗಳಲ್ಲಿನ ಅವರ ಹಾಡುಗಳು ಅತ್ಯಂತ ಜನಪ್ರಿಯವಾಗಿವೆ.

ಪದಗಳಲ್ಲೇ ಆಟ ಆಡೋ ಕವಿ; ಯೋಗರಾಜ್ ಭಟ್ ಬರೆದ ಈ ಹಾಡುಗಳನ್ನು ಮಿಸ್ ಮಾಡದೆ ಕೇಳಿ
ಯೋಗರಾಜ್ ಭಟ್
ರಾಜೇಶ್ ದುಗ್ಗುಮನೆ
|

Updated on:Mar 27, 2025 | 12:53 PM

Share

ಯೋಗರಾಜ್ ಭಟ್ (Yogaraj Bhat) ಅವರ ನಿರ್ದೇಶನದಲ್ಲಿ ‘ಮನದ ಕಡಲು’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಮಾರ್ಚ್ 28ರಂದು ಸಿನಿಮಾ ರಾಜ್ಯಾದ್ಯಂತ ತೆರೆ ಕಾಣಲಿದೆ. ಸುಮುಖ, ರಾಶಿಕಾ ಶೆಟ್ಟಿ, ಅಂಜಲಿ ಅನೀಶ್ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ಲಾಂಚ್​ಗೆ ಯಶ್ ಬಂದು ಬೆಂಬಲ ಸೂಚಿಸಿದ್ದರು ಅನ್ನೋದು ವಿಶೇಷ. ಯೋಗರಾಜ್ ಭಟ್ ಅವರು ಒಳ್ಳೆಯ ನಿರ್ದೇಶಕ ಮಾತ್ರವಲ್ಲ, ಒಳ್ಳೆಯ ಗೀತ ಸಾಹಿತಿ ಕೂಡ ಹೌದು. ಅವರ ಬರಹದಲ್ಲಿ ಒಳ್ಳೊಳ್ಳೆಯ ಹಾಡುಗಳು ಮೂಡಿ ಬಂದಿವೆ.

ಯೋಗರಾಜ್ ಭಟ್ ಬರೆಯುವ ಹಾಡುಗಳು ಸಖತ್ ಭಿನ್ನ. ಅವರು ಶಬ್ದಗಳಲ್ಲೇ ಆಟ ಆಡುತ್ತಾರೆ. ಈ ಹಾಡುಗಳು ಕೇಳುಗರಿಗೆ ಇಂಪು ಕೊಡುತ್ತದೆ. ತಮ್ಮ ಸಿನಿಮಾಗಳ ಜೊತೆ ಇತರ ಸಿನಿಮಾಗಳಿಗೂ ಅವರು ಸಾಹಿತ್ಯ ಬರೆದಿದ್ದಾರೆ. ಅವರ ಈ ಹಾಡುಗಳನ್ನು ಮಿಸ್ ಮಾಡದೆ ಕೇಳಿ.

ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದು ‘ಮಣಿ’ ಸಿನಿಮಾಗೆ. ಈ ಚಿತ್ರಕ್ಕೆ ಎರಡು ಹಾಡನ್ನು ಬರೆದರು. ಆ ಬಳಿಕ ‘ಮುಂಗಾರು ಮಳೆ’ ಚಿತ್ರದ ‘ಮುಂಗಾರು ಮಳೆಯೇ, ಏನು ನಿನ್ನ ಹನಿಗಳ ಲೀಲೆ’ ಎಂದು ಹಾಡನ್ನು ಬರೆದು ಎಲ್ಲರ ಹೃದಯವನ್ನೂ ಭಾವನೆಗಳಲ್ಲಿ ಒದ್ದೆ ಮಾಡಿದ್ದರು ಅವರು. ಆ ಬಳಿಕ ‘ಗಾಳಿಪಟ’ ಚಿತ್ರದ ‘ನದೀಮ್ ಧೀಮ್ ತನ..’, ‘ಒಂದೇ ಸಮನೆ ನಿಟ್ಟುಸಿರು..’ ಹಾಡುಗಳನ್ನು ಅವರು ಬರೆದರು.

ಇದನ್ನೂ ಓದಿ
Image
ರಾಮ್ ಚರಣ್ ಹೊಸ ಚಿತ್ರದ ಟೈಟಲ್ ರಿವೀಲ್; ಮತ್ತೆ ಮಾಸ್ ಲುಕ್​
Image
ಗೆದ್ದಿದ್ದು ಕಡಿಮೆ ಸಿನಿಮಾ ಆದರೂ ರಾಮ್ ಚರಣ್ ಆಸ್ತಿ 1,300 ಕೋಟಿ ರೂಪಾಯಿ
Image
ಐಶ್ವರ್ಯಾ ಕಾರು ಅಪಘಾತಕ್ಕೆ ಒಳಗಾಗಿದ್ದು ಹೇಗೆ? ವಿಡಿಯೋ ವೈರಲ್
Image
ಸಲ್ಮಾನ್ ಖಾನ್ ಸಿನಿಮಾದಲ್ಲಿ ಕಂತೆ ಕಂತೆ ನಕಲಿ ನೋಟು ಬಳಕೆ; ಇಲ್ಲಿದೆ ಸಾಕ್ಷಿ

‘ಕಣ್ಣ ಹನಿಯೊಂದಿಗೆ’, ‘ನಾ ನಗುವ ಮೊದಲೇನೆ’, ‘ನಾನು ಮನಸಾರೆ’, ‘ಯಾರೆಗೆ ಹೇಳೋಣಾ ನಮ್ಮ ಪ್ರಾಬ್ಲಂ’, ‘ಮಾಯಾವಿ ಮಾಯಾವಿ’ ರೀತಿಯ ಹಾಡುಗಳನ್ನು ಯೋಗರಾಜ್ ಭಟ್ ಬರೆದಿದ್ದಾರೆ. ಅವರು ‘ಡ್ರಾಮ’ ಚಿತ್ರದಲ್ಲಿ ಬರೆದ ‘ಬೊಂಬೆ ಆಡ್ಸೋನು..’ ಹಾಡು ಎವರ್​ಗ್ರೀನ್ ಎನಿಸಿಕೊಂಡಿದೆ. ಇದರ ಸಾಹಿತ್ಯಕ್ಕೆ ಕೇಳುಗರು ಫಿದಾ ಆಗಿದ್ದಾರೆ.

ಇದನ್ನೂ ಓದಿ: ರಾಧಿಕಾನ ಕೇರ್ ಮಾಡೋ ರೀತಿಗೆ ಯಶ್​ನ ಜಂಟಲ್​​ಮನ್ ಎಂದು ಕರೆದ ಬಾಲಿವುಡ್ ಮಂದಿ

ಯೋಗರಾಜ್ ಭಟ್ ಅವರ, ‘ಖಾಲಿ ಕ್ವಾಟರ್ ಹಾಂಗೆ ಲೈಫು’, ‘ಫೋನು ಇಲ್ಲಾ..’, ‘ಒಪನ್ ದಿ ಬಾಟಲ್..’, ‘ಹಾಲು ಕುಡಿದ ಮಕ್ಕಳೇ ಬದುಕಲ್ಲ’, ‘ನಾ ಮನೆಗ್ ಹೋಗೋದಿಲ್ಲ’ ರೀತಿಯ ಎಣ್ಣೆ ಹಾಡುಗಳನ್ನು ಅವರು ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:52 pm, Thu, 27 March 25

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ?
ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ?
ಸಕಲೇಶಪುರದಲ್ಲಿ ಕರುಗಳನ್ನು ಬೆನ್ನಟ್ಟಿದ ಆನೆ ಮರಿ
ಸಕಲೇಶಪುರದಲ್ಲಿ ಕರುಗಳನ್ನು ಬೆನ್ನಟ್ಟಿದ ಆನೆ ಮರಿ
ಅಪ್ರಾಪ್ತನಿಗೆ ಸಿಗರೇಟ್ ಸೇದಿಸಿ,ಬ್ಲಾಕ್‌ಮೇಲ್ ಮಾಡಿ 120 ಗ್ರಾಂ ಚಿನ್ನ ದರೋಡ
ಅಪ್ರಾಪ್ತನಿಗೆ ಸಿಗರೇಟ್ ಸೇದಿಸಿ,ಬ್ಲಾಕ್‌ಮೇಲ್ ಮಾಡಿ 120 ಗ್ರಾಂ ಚಿನ್ನ ದರೋಡ
ಶಾಲಾ ಕಟ್ಟಡದಿಂದ ಬಿದ್ದು 15 ವರ್ಷದ ಬಾಲಕ ಸಾವು
ಶಾಲಾ ಕಟ್ಟಡದಿಂದ ಬಿದ್ದು 15 ವರ್ಷದ ಬಾಲಕ ಸಾವು
ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಶ್ರೇಷ್ಠ ಮಾನದಂಡ: ಪ್ರಧಾನಿ ಮೋದಿ
ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಶ್ರೇಷ್ಠ ಮಾನದಂಡ: ಪ್ರಧಾನಿ ಮೋದಿ
ಅಧ್ಯಕ್ಷರಾಗಿ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಗೆ ಹರಿಪ್ರಸಾದ್ ಭೇಟಿ
ಅಧ್ಯಕ್ಷರಾಗಿ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಗೆ ಹರಿಪ್ರಸಾದ್ ಭೇಟಿ
ಪ್ರಧಾನಿ ಮೋದಿ ಒಳಿತಿಗಾಗಿ ಮುನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಅಶೋಕ್​
ಪ್ರಧಾನಿ ಮೋದಿ ಒಳಿತಿಗಾಗಿ ಮುನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಅಶೋಕ್​
ಮೋದಿ ಪ್ರಧಾನಿಯಾಗಿ 12 ವರ್ಷ: ಬೆಂಗಳೂರಿನಲ್ಲಿ ಸೋಮಣ್ಣ ವಿಶೇಷ ಪೂಜೆ
ಮೋದಿ ಪ್ರಧಾನಿಯಾಗಿ 12 ವರ್ಷ: ಬೆಂಗಳೂರಿನಲ್ಲಿ ಸೋಮಣ್ಣ ವಿಶೇಷ ಪೂಜೆ
ಗ್ಯಾಸ್ ಕಟರ್ ಬಳಸಿ ಎಟಿಎಂ ದರೋಡೆಗೆತ್ನಿಸಿದ ಖದೀಮರು! ಆಮೇಲಾಗಿದ್ದೇ ಬೇರೆ
ಗ್ಯಾಸ್ ಕಟರ್ ಬಳಸಿ ಎಟಿಎಂ ದರೋಡೆಗೆತ್ನಿಸಿದ ಖದೀಮರು! ಆಮೇಲಾಗಿದ್ದೇ ಬೇರೆ
ಒಂದೇ ಓವರ್​ನಲ್ಲಿ 3 ವಿಕೆಟ್​: ಟೀಮ್ ಇಂಡಿಯಾಗೆ ರೋಚಕ ಜಯ
ಒಂದೇ ಓವರ್​ನಲ್ಲಿ 3 ವಿಕೆಟ್​: ಟೀಮ್ ಇಂಡಿಯಾಗೆ ರೋಚಕ ಜಯ