AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandeep Roy: ಹಿರಿಯ ನಟ ಮನ್​ದೀಪ್​ ರಾಯ್​ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

Mandeep Roy Heart Attack: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮನ್​ದೀಪ್​ ರಾಯ್​ ಅವರನ್ನು ದಾಖಲಿಸಲಾಗಿದೆ. ಅವರ ಚಿಕಿತ್ಸೆಗೆ ಆರ್ಥಿಕ ನೆರವಿನ ಅನಿವಾರ್ಯತೆ ಇದೆ.

Mandeep Roy: ಹಿರಿಯ ನಟ ಮನ್​ದೀಪ್​ ರಾಯ್​ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
ಮನ್​ದೀಪ್​ ರಾಯ್
TV9 Web
| Edited By: |

Updated on:Dec 05, 2022 | 4:14 PM

Share

ಕನ್ನಡ ಚಿತ್ರರಂಗದ ಹಿರಿಯ ನಟ ಮನ್​ದೀಪ್​ ರಾಯ್​ (Mandeep Roy) ಅವರಿಗೆ ಹೃದಯಾಘಾತ ಸಂಭವಿಸಿದೆ. ಮೂರು ದಿನಗಳ ಹಿಂದೆ ಹಾರ್ಟ್​ ಅಟ್ಯಾಕ್​ (Heart Attack) ಆಗಿದ್ದು, ಅವರನ್ನು ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಶೀಘ್ರದಲ್ಲೇ ಮನ್​ದೀಪ್​ ರಾಯ್​ ಅವರ ಹೆಲ್ತ್​ ಅಪ್​ಡೇಟ್​ (Mandeep Roy Health Update) ಸಿಗಲಿದೆ. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಆದರೆ ಇಂದು ಅವರ ಚಿಕಿತ್ಸೆಗೆ ಹಣಕಾಸಿನ ತೊಂದರೆ ಉಂಟಾಗಿದೆ. ಆರ್ಥಿಕ ನೆರವಿನ ಅವಶ್ಯಕತೆ ಇದೆ ಎಂಬುದು ತಿಳಿದುಬಂದಿದೆ. ಮನ್​ದೀಪ್​ ರಾಯ್​ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಮನ್​ದೀಪ್​ ರಾಯ್​ ಅವರು ಸಲ್ಲಿಸಿದ ಸೇವೆ ಅಪಾರ. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ನೂರಾರು ಹಾಸ್ಯ ಪಾತ್ರಗಳ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಅನಂತ್​ ನಾಗ್​, ಶಂಕರ್​ ನಾಗ್​, ಡಾ. ರಾಜ್​ಕುಮಾರ್​ ಸೇರಿದಂತೆ ಅನೇಕ ದಿಗ್ಗಜ ನಟರ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ಖ್ಯಾತಿ ಅವರಿಗಿದೆ.

ಮಿಂಚಿನ ಓಟ, ಬಾಡದ ಹೂವು, ಆಕಸ್ಮಿಕ, ಅಗ್ನಿ ಐಪಿಎಸ್​, ದೀಪಾವಳಿ, ಅಯ್ಯ, ಅಪೂರ್ವ ಸಂಗಮ, ಪ್ರೀತ್ಸೋದ್​ ತಪ್ಪಾ, ಏಳು ಸುತ್ತಿನ ಕೋಟೆ, ಗಜಪತಿ ಗರ್ವಭಂಗ, ಆಸೆಗೊಬ್ಬ ಮೀಸೆಗೊಬ್ಬ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಮನ್​ದೀಪ್​ ರಾಯ್​ ನಟಿಸಿದ್ದಾರೆ. ಅವರ ನಟನೆಯನ್ನು ಕಂಡು ಸಿನಿಪ್ರಿಯರು ಕಳೆದ ನಾಲ್ಕು ದಶಕಗಳಿಂದಲೂ ಎಂಜಾಯ್​ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
ಜಿಮ್ ಮಾಡುತ್ತಿದ್ದ ವೇಳೆ ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
Image
Pradeep Patwardhan: ಹೃದಯಾಘಾತದಿಂದ ನಟ ಪ್ರದೀಪ್​ ಪಟವರ್ಧನ್​ ನಿಧನ; ಸಂತಾಪ ಸೂಚಿಸಿದ ಮಹಾರಾಷ್ಟ್ರ ಸಿಎಂ
Image
Hemalatha Death: ಗುಬ್ಬಿ ವೀರಣ್ಣ ಪುತ್ರಿ, ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಲತಾ ಹೃದಯಾಘಾತದಿಂದ ನಿಧನ
Image
Surekha Death: ಕನ್ನಡ ಚಿತ್ರರಂಗದ ಹಿರಿಯ ನಟಿ ಸುರೇಖಾ ಹೃದಯಾಘಾತದಿಂದ ನಿಧನ

ಮನ್​ದೀಪ್​ ರಾಯ್​ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಗತ್ಯ ಇರುವ ಎಲ್ಲ ರೀತಿಯ ಪರೀಕ್ಷೆಯನ್ನು ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:04 pm, Mon, 5 December 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ